Homeಕರ್ನಾಟಕಸಾಂಸ್ಕೃತಿಕವಾಗಿ ಕ್ರಿಯಾಶೀಲವಾದ ವಿಜಯನಗರ ಪ್ರದೇಶಕ್ಕೆ ರಂಗಾಯಣಕ್ಕಾಗಿ ಕಲಾವಿದರಿಂದ ಒತ್ತಾಯ..‌

ಸಾಂಸ್ಕೃತಿಕವಾಗಿ ಕ್ರಿಯಾಶೀಲವಾದ ವಿಜಯನಗರ ಪ್ರದೇಶಕ್ಕೆ ರಂಗಾಯಣಕ್ಕಾಗಿ ಕಲಾವಿದರಿಂದ ಒತ್ತಾಯ..‌

- Advertisement -
- Advertisement -

ವಿಜಯನಗರ ಸಾಮ್ರಾಜ್ಯ ಎನ್ನುವುದು ಕನ್ನಡ ನಾಡಿನ ಕಲೆ, ಸಂಸ್ಕೃತಿ, ಸಾಹಿತ್ಯ ಭಾಷೆಗೆ ಸಂಬಂಧಿಸಿ ಮತ್ತೆ ಮತ್ತೆ ಪ್ರಸ್ತಾಪವಾಗುವ ಇತಿಹಾಸವುಳ್ಳ ನಾಡಾಗಿದೆ. ಈ ಮಧ್ಯಕರ್ನಾಟಕದ ತುದಿಯಲ್ಲಿರುವ ಈ ವಿಜಯನಗರಕ್ಕೊಂದು (ಹಂಪಿ) ರಂಗಾಯಣ ಅವಶ್ಯಕತೆಯಿದೆ.

“ಹಂಪಿಯ ಸುತ್ತಮುತ್ತಲಿನ ದೊಡ್ಡಾಟದಲ್ಲಿ ಹಾಡುತ್ತಿದ್ದ ಧಾಟಿಗಳು ಹಾಡಿನ‌ಮಟ್ಟುಗಳ ಪ್ರಭಾವ ಆರಂಭದ ತೆಲಗು ಸಿನಿಮಾಗಳ ಮೇಲೆ ಸಾಕಷ್ಟು ಪ್ರಮಾಣದಲ್ಲಿ ಆಗಿತ್ತು..” ಎಂಬ ಮಾತನ್ನು ನನ್ನ ಗುರುಗಳಾದ ಬಸವರಾಜ ಮಲಶೆಟ್ಟರ್ ಸರ್ ಆಗಾಗ ಹೇಳುತ್ತಿದ್ದರು. ಅಲ್ಲದೆ ವಿಜಯನಗರದಲ್ಲಿಯೇ ಮೊಟ್ಟಮೊದಲು ಯಕ್ಕಲಗಾಣ ಪ್ರದರ್ಶನ ಆಗುತ್ತಿತ್ತು ಎಂಬ ಮಾತನ್ನು ನೆನಪಿಸುತ್ತಿದ್ದರು. ಮತ್ತೂ ಇಂದಿನ ಯಕ್ಷಗಾನ ಕಲಾಪ್ರಕಾರವನ್ನು ಇದೇ ಸಾಮ್ರಾಜ್ಯದ ಕೂಚಿಪುಡಿ ಗ್ರಾಮದ ಸಿದ್ಧೇಂದ್ರ ಯತಿಗಳು ಉಡುಪಿ ಸೀಮೆಗೆ ಕೊಂಡೊಯ್ದು ಯಕ್ಷಗಾನ ರೂಪಿಸಿದರೆಂಬ ಬಗ್ಗೆಯೂ ಇತಿಹಾಸ ಹೇಳುತ್ತದೆ.

ಮಹಾದೇವ ಹಡಪದ

ಈ ಸೀಮೆಯ ದರೋಜಿಯ ಬುರ್ರಕತೆ, ಗೊಂದಲಿಗರ ಹಾಡು, ಕೊಟ್ಟೂರಿನ ಗೊಂಬೇಯಾಟ, ಹಳ್ಳಿಹಳ್ಳಿಗಳಲ್ಲಿ ನಡೆಯುವ ಆಹೋರಾತ್ರಿಯ ಬಯಲಾಟಗಳು ಸಾಕಷ್ಟು ಪ್ರಮಾಣದಲ್ಲಿ ನಾಟಕ ಕಂಪನಿಗಳ ಹುಟ್ಟಿಗೂ ಕಾರಣವಾಗಿವೆ. ಗರುಡ ಸದಾಶಿವರಾಯರು, ಜೋಳದರಾಶಿ ದೊಡ್ಡನಗೌಡರು, ಹಣ್ಣಿ ವೀರಭದ್ರಪ್ಪ, ದುರ್ಗಾದಾಸರು ಬಳ್ಳಾರಿ ರಾಘವಾಚಾರರು ಹೀಗೆ ಸಾಲುಸಾಲು ವೃತ್ತಿರಂಗಭೂಮಿಯ ಮೇರುನಟರು ಇದೇ ಸೀಮೆಯವರು. ಇನ್ನು ನಾಟಕದ ನಟನಟಿಯರಿಗೇ ಹೆಸರಾದ ಊರುಗಳೂ ಈ ಸೀಮೆಯಲ್ಲಿವೆ.

ಮರಿಯಮ್ಮನಹಳ್ಳಿ, ಹೂವಿನಹಡಗಲಿ, ಬಳ್ಳಾರಿಗಳಲ್ಲಿ ಅಸಂಖ್ಯಾತ ಕಲಾವಿದರಿದ್ದಾರೆ. ರಾಜಕಾರಣದಲ್ಲಿದ್ದೂ ನಾಟಕರಂಗದೊಂದಿಗೆ ನಂಟನ್ನಿಟ್ಟುಕೊಂಡು ನಟರಾಗಿ, ನಿರ್ದೇಶಕರಾಗಿ, ಸಂಘಟಕರಾಗಿ ಈ ನಾಡಿನ ಗೃಹಮಂತ್ರಿಗಳೂ ಆಗಿದ್ದ ದಿ. ಎಂ.ಪಿ. ಪ್ರಕಾಶ ಅವರು ಇದೇ ನಾಡಿನ ಸಾಂಸ್ಕೃತಿಕ ಲೋಕದಲ್ಲಿ ಹಂಪಿ ಉತ್ಸವ ಆರಂಭಿಸುವ ಮೂಲಕ ಉತ್ಸವಗಳದ್ದೊಂದು ಪರಂಪರೆಯನ್ನೇ ಆರಂಭಿಸಿದ್ದರು. ಅದಕ್ಕೂ ಮಿಗಿಲಾಗಿ ಕನ್ನಡ ಭಾಷೆಗೆ ಸೀಮಿತವಾದ ವಿಶ್ವವಿದ್ಯಾಲಯವೂ ಹಂಪಿಯಲ್ಲಿಯೇ ಇದೆ.

ಇಷ್ಟೆಲ್ಲ ಕನ್ನಡ ನಾಡಿಗೆ ಕೊಡುಗೆ ಕೊಟ್ಟಿರುವ ಈ ಸೀಮೆಯಲ್ಲೊಂದು ಸಾಂಸ್ಕೃತಿಕ ಕೇಂದ್ರದ ಅಗತ್ಯವಿದೆ.
ಈ ಭಾಗಕ್ಕೆ ಸಂಬಂಧಿಸಿದ ರಂಗಾಯಣವು ದೂರದ ಕಲಬುರ್ಗಿಯಲ್ಲಿದ್ದು ಅದು ಯಾವ ರೀತಿಯಲ್ಲೂ ಬಳ್ಳಾರಿ-ಕೊಪ್ಪಳ ರಾಯಚೂರು ಜಿಲ್ಲೆಗಳನ್ನು ಪರಿಗಣಿಸಿ ಸ್ವತಂತ್ರವಾದ ಕಾರ್ಯಕ್ರಮ ರೂಪಿಸಿದ್ದ ದಾಖಲೆ ಇಲ್ಲ. ಅಲ್ಲದೆ ಇತ್ತ ಧಾರವಾಡ ರಂಗಾಯಣವೂ, ಶಿವಮೊಗ್ಗ ರಂಗಾಯಣಗಳೂ ಸಮಾನ ದೂರದಲ್ಲಿವೆ.

ಕರ್ನಾಟಕದ ಮೇರು ವೃತ್ತಿಕಲಾವಿದರು, ದೊಡ್ಡಾಟ ಕಲಾವಿದರು, ಹೆಸರಾಂತ ಸಾಹಿತಿಗಳಿರುವ, ಸಾಕಷ್ಟು ನಾಟಕ ಕಂಪನಿಗಳ ಹುಟ್ಟಿಗೂ ಕಾರಣವಾಗಿರುವ ಮತ್ತು ವಂಶಪಾರಂಪರ್ಯವಾಗಿ ಕೆಲವು ಕುಟುಂಬಗಳು ಈಗಲೂ ಕಲಾಪ್ರಕಾರಗಳನ್ನು ಈ ಭಾಗದಲ್ಲಿ ಪೋಷಿಸಿಕೊಂಡು ಬಂದಿವೆ. ಈ ಎಲ್ಲ ಹಿನ್ನೆಲೆ ಈ ಸೀಮೆಗಿದ್ದರೂ ಸಾಂಸ್ಕೃತಿಕವಾದ ಅಧ್ಯಯನಕ್ಕೊಂದು ರಂಗಾಯಣ ಇಲ್ಲದಿರುವುದು ಬೇಸರದ ಸಂಗತಿ. ಇಂಥ ನಾಡನ್ನು ಕಡೆಗಣಿಸಿ ದೂರದೂರದಲ್ಲಿ ರಂಗಾಯಣ ಸ್ಥಾಪಿಸಿದ್ದು ಸ್ಥಳಿಯವಾಗಿ ಸಾಂಸ್ಕೃತಿಕ ಲೋಕಕ್ಕೆ ಅಡಚಣೆಯಾಗಿದೆ.

ದಯಮಾಡಿ ಸರಕಾರವು ಈ ಭಾಗದ ರಂಗಭೂಮಿಗೆ ಜೀವ ಕೊಡಲು ಹಂಪಿಯನ್ನು ಕೇಂದ್ರವಾಗಿಸಿಕೊಂಡು ಒಂದು ರಂಗಾಯಣವನ್ನು ಸ್ಥಾಪಿಸಿದರೆ ಈ ಗಡಿನಾಡ ಭಾಗದಲ್ಲಿ ರಂಗಚಟುವಟಿಕೆಗಳ ಜೊತೆಗೆ ಸಾಂಸ್ಕೃತಿಕವಾದ ವಾತಾವರಣ ಕಟ್ಟಲು ಹೆಚ್ಚು ಉಪಯೋಗವಾಗುತ್ತದೆ.

ಮಹಾದೇವ ಹಡಪದ, ರಂಗ ನಿರ್ದೇಶಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...