Homeಕರ್ನಾಟಕಸಾಂಸ್ಕೃತಿಕವಾಗಿ ಕ್ರಿಯಾಶೀಲವಾದ ವಿಜಯನಗರ ಪ್ರದೇಶಕ್ಕೆ ರಂಗಾಯಣಕ್ಕಾಗಿ ಕಲಾವಿದರಿಂದ ಒತ್ತಾಯ..‌

ಸಾಂಸ್ಕೃತಿಕವಾಗಿ ಕ್ರಿಯಾಶೀಲವಾದ ವಿಜಯನಗರ ಪ್ರದೇಶಕ್ಕೆ ರಂಗಾಯಣಕ್ಕಾಗಿ ಕಲಾವಿದರಿಂದ ಒತ್ತಾಯ..‌

- Advertisement -
- Advertisement -

ವಿಜಯನಗರ ಸಾಮ್ರಾಜ್ಯ ಎನ್ನುವುದು ಕನ್ನಡ ನಾಡಿನ ಕಲೆ, ಸಂಸ್ಕೃತಿ, ಸಾಹಿತ್ಯ ಭಾಷೆಗೆ ಸಂಬಂಧಿಸಿ ಮತ್ತೆ ಮತ್ತೆ ಪ್ರಸ್ತಾಪವಾಗುವ ಇತಿಹಾಸವುಳ್ಳ ನಾಡಾಗಿದೆ. ಈ ಮಧ್ಯಕರ್ನಾಟಕದ ತುದಿಯಲ್ಲಿರುವ ಈ ವಿಜಯನಗರಕ್ಕೊಂದು (ಹಂಪಿ) ರಂಗಾಯಣ ಅವಶ್ಯಕತೆಯಿದೆ.

“ಹಂಪಿಯ ಸುತ್ತಮುತ್ತಲಿನ ದೊಡ್ಡಾಟದಲ್ಲಿ ಹಾಡುತ್ತಿದ್ದ ಧಾಟಿಗಳು ಹಾಡಿನ‌ಮಟ್ಟುಗಳ ಪ್ರಭಾವ ಆರಂಭದ ತೆಲಗು ಸಿನಿಮಾಗಳ ಮೇಲೆ ಸಾಕಷ್ಟು ಪ್ರಮಾಣದಲ್ಲಿ ಆಗಿತ್ತು..” ಎಂಬ ಮಾತನ್ನು ನನ್ನ ಗುರುಗಳಾದ ಬಸವರಾಜ ಮಲಶೆಟ್ಟರ್ ಸರ್ ಆಗಾಗ ಹೇಳುತ್ತಿದ್ದರು. ಅಲ್ಲದೆ ವಿಜಯನಗರದಲ್ಲಿಯೇ ಮೊಟ್ಟಮೊದಲು ಯಕ್ಕಲಗಾಣ ಪ್ರದರ್ಶನ ಆಗುತ್ತಿತ್ತು ಎಂಬ ಮಾತನ್ನು ನೆನಪಿಸುತ್ತಿದ್ದರು. ಮತ್ತೂ ಇಂದಿನ ಯಕ್ಷಗಾನ ಕಲಾಪ್ರಕಾರವನ್ನು ಇದೇ ಸಾಮ್ರಾಜ್ಯದ ಕೂಚಿಪುಡಿ ಗ್ರಾಮದ ಸಿದ್ಧೇಂದ್ರ ಯತಿಗಳು ಉಡುಪಿ ಸೀಮೆಗೆ ಕೊಂಡೊಯ್ದು ಯಕ್ಷಗಾನ ರೂಪಿಸಿದರೆಂಬ ಬಗ್ಗೆಯೂ ಇತಿಹಾಸ ಹೇಳುತ್ತದೆ.

ಮಹಾದೇವ ಹಡಪದ

ಈ ಸೀಮೆಯ ದರೋಜಿಯ ಬುರ್ರಕತೆ, ಗೊಂದಲಿಗರ ಹಾಡು, ಕೊಟ್ಟೂರಿನ ಗೊಂಬೇಯಾಟ, ಹಳ್ಳಿಹಳ್ಳಿಗಳಲ್ಲಿ ನಡೆಯುವ ಆಹೋರಾತ್ರಿಯ ಬಯಲಾಟಗಳು ಸಾಕಷ್ಟು ಪ್ರಮಾಣದಲ್ಲಿ ನಾಟಕ ಕಂಪನಿಗಳ ಹುಟ್ಟಿಗೂ ಕಾರಣವಾಗಿವೆ. ಗರುಡ ಸದಾಶಿವರಾಯರು, ಜೋಳದರಾಶಿ ದೊಡ್ಡನಗೌಡರು, ಹಣ್ಣಿ ವೀರಭದ್ರಪ್ಪ, ದುರ್ಗಾದಾಸರು ಬಳ್ಳಾರಿ ರಾಘವಾಚಾರರು ಹೀಗೆ ಸಾಲುಸಾಲು ವೃತ್ತಿರಂಗಭೂಮಿಯ ಮೇರುನಟರು ಇದೇ ಸೀಮೆಯವರು. ಇನ್ನು ನಾಟಕದ ನಟನಟಿಯರಿಗೇ ಹೆಸರಾದ ಊರುಗಳೂ ಈ ಸೀಮೆಯಲ್ಲಿವೆ.

ಮರಿಯಮ್ಮನಹಳ್ಳಿ, ಹೂವಿನಹಡಗಲಿ, ಬಳ್ಳಾರಿಗಳಲ್ಲಿ ಅಸಂಖ್ಯಾತ ಕಲಾವಿದರಿದ್ದಾರೆ. ರಾಜಕಾರಣದಲ್ಲಿದ್ದೂ ನಾಟಕರಂಗದೊಂದಿಗೆ ನಂಟನ್ನಿಟ್ಟುಕೊಂಡು ನಟರಾಗಿ, ನಿರ್ದೇಶಕರಾಗಿ, ಸಂಘಟಕರಾಗಿ ಈ ನಾಡಿನ ಗೃಹಮಂತ್ರಿಗಳೂ ಆಗಿದ್ದ ದಿ. ಎಂ.ಪಿ. ಪ್ರಕಾಶ ಅವರು ಇದೇ ನಾಡಿನ ಸಾಂಸ್ಕೃತಿಕ ಲೋಕದಲ್ಲಿ ಹಂಪಿ ಉತ್ಸವ ಆರಂಭಿಸುವ ಮೂಲಕ ಉತ್ಸವಗಳದ್ದೊಂದು ಪರಂಪರೆಯನ್ನೇ ಆರಂಭಿಸಿದ್ದರು. ಅದಕ್ಕೂ ಮಿಗಿಲಾಗಿ ಕನ್ನಡ ಭಾಷೆಗೆ ಸೀಮಿತವಾದ ವಿಶ್ವವಿದ್ಯಾಲಯವೂ ಹಂಪಿಯಲ್ಲಿಯೇ ಇದೆ.

ಇಷ್ಟೆಲ್ಲ ಕನ್ನಡ ನಾಡಿಗೆ ಕೊಡುಗೆ ಕೊಟ್ಟಿರುವ ಈ ಸೀಮೆಯಲ್ಲೊಂದು ಸಾಂಸ್ಕೃತಿಕ ಕೇಂದ್ರದ ಅಗತ್ಯವಿದೆ.
ಈ ಭಾಗಕ್ಕೆ ಸಂಬಂಧಿಸಿದ ರಂಗಾಯಣವು ದೂರದ ಕಲಬುರ್ಗಿಯಲ್ಲಿದ್ದು ಅದು ಯಾವ ರೀತಿಯಲ್ಲೂ ಬಳ್ಳಾರಿ-ಕೊಪ್ಪಳ ರಾಯಚೂರು ಜಿಲ್ಲೆಗಳನ್ನು ಪರಿಗಣಿಸಿ ಸ್ವತಂತ್ರವಾದ ಕಾರ್ಯಕ್ರಮ ರೂಪಿಸಿದ್ದ ದಾಖಲೆ ಇಲ್ಲ. ಅಲ್ಲದೆ ಇತ್ತ ಧಾರವಾಡ ರಂಗಾಯಣವೂ, ಶಿವಮೊಗ್ಗ ರಂಗಾಯಣಗಳೂ ಸಮಾನ ದೂರದಲ್ಲಿವೆ.

ಕರ್ನಾಟಕದ ಮೇರು ವೃತ್ತಿಕಲಾವಿದರು, ದೊಡ್ಡಾಟ ಕಲಾವಿದರು, ಹೆಸರಾಂತ ಸಾಹಿತಿಗಳಿರುವ, ಸಾಕಷ್ಟು ನಾಟಕ ಕಂಪನಿಗಳ ಹುಟ್ಟಿಗೂ ಕಾರಣವಾಗಿರುವ ಮತ್ತು ವಂಶಪಾರಂಪರ್ಯವಾಗಿ ಕೆಲವು ಕುಟುಂಬಗಳು ಈಗಲೂ ಕಲಾಪ್ರಕಾರಗಳನ್ನು ಈ ಭಾಗದಲ್ಲಿ ಪೋಷಿಸಿಕೊಂಡು ಬಂದಿವೆ. ಈ ಎಲ್ಲ ಹಿನ್ನೆಲೆ ಈ ಸೀಮೆಗಿದ್ದರೂ ಸಾಂಸ್ಕೃತಿಕವಾದ ಅಧ್ಯಯನಕ್ಕೊಂದು ರಂಗಾಯಣ ಇಲ್ಲದಿರುವುದು ಬೇಸರದ ಸಂಗತಿ. ಇಂಥ ನಾಡನ್ನು ಕಡೆಗಣಿಸಿ ದೂರದೂರದಲ್ಲಿ ರಂಗಾಯಣ ಸ್ಥಾಪಿಸಿದ್ದು ಸ್ಥಳಿಯವಾಗಿ ಸಾಂಸ್ಕೃತಿಕ ಲೋಕಕ್ಕೆ ಅಡಚಣೆಯಾಗಿದೆ.

ದಯಮಾಡಿ ಸರಕಾರವು ಈ ಭಾಗದ ರಂಗಭೂಮಿಗೆ ಜೀವ ಕೊಡಲು ಹಂಪಿಯನ್ನು ಕೇಂದ್ರವಾಗಿಸಿಕೊಂಡು ಒಂದು ರಂಗಾಯಣವನ್ನು ಸ್ಥಾಪಿಸಿದರೆ ಈ ಗಡಿನಾಡ ಭಾಗದಲ್ಲಿ ರಂಗಚಟುವಟಿಕೆಗಳ ಜೊತೆಗೆ ಸಾಂಸ್ಕೃತಿಕವಾದ ವಾತಾವರಣ ಕಟ್ಟಲು ಹೆಚ್ಚು ಉಪಯೋಗವಾಗುತ್ತದೆ.

ಮಹಾದೇವ ಹಡಪದ, ರಂಗ ನಿರ್ದೇಶಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...