Homeಕರ್ನಾಟಕಸಾಂಸ್ಕೃತಿಕವಾಗಿ ಕ್ರಿಯಾಶೀಲವಾದ ವಿಜಯನಗರ ಪ್ರದೇಶಕ್ಕೆ ರಂಗಾಯಣಕ್ಕಾಗಿ ಕಲಾವಿದರಿಂದ ಒತ್ತಾಯ..‌

ಸಾಂಸ್ಕೃತಿಕವಾಗಿ ಕ್ರಿಯಾಶೀಲವಾದ ವಿಜಯನಗರ ಪ್ರದೇಶಕ್ಕೆ ರಂಗಾಯಣಕ್ಕಾಗಿ ಕಲಾವಿದರಿಂದ ಒತ್ತಾಯ..‌

- Advertisement -
- Advertisement -

ವಿಜಯನಗರ ಸಾಮ್ರಾಜ್ಯ ಎನ್ನುವುದು ಕನ್ನಡ ನಾಡಿನ ಕಲೆ, ಸಂಸ್ಕೃತಿ, ಸಾಹಿತ್ಯ ಭಾಷೆಗೆ ಸಂಬಂಧಿಸಿ ಮತ್ತೆ ಮತ್ತೆ ಪ್ರಸ್ತಾಪವಾಗುವ ಇತಿಹಾಸವುಳ್ಳ ನಾಡಾಗಿದೆ. ಈ ಮಧ್ಯಕರ್ನಾಟಕದ ತುದಿಯಲ್ಲಿರುವ ಈ ವಿಜಯನಗರಕ್ಕೊಂದು (ಹಂಪಿ) ರಂಗಾಯಣ ಅವಶ್ಯಕತೆಯಿದೆ.

“ಹಂಪಿಯ ಸುತ್ತಮುತ್ತಲಿನ ದೊಡ್ಡಾಟದಲ್ಲಿ ಹಾಡುತ್ತಿದ್ದ ಧಾಟಿಗಳು ಹಾಡಿನ‌ಮಟ್ಟುಗಳ ಪ್ರಭಾವ ಆರಂಭದ ತೆಲಗು ಸಿನಿಮಾಗಳ ಮೇಲೆ ಸಾಕಷ್ಟು ಪ್ರಮಾಣದಲ್ಲಿ ಆಗಿತ್ತು..” ಎಂಬ ಮಾತನ್ನು ನನ್ನ ಗುರುಗಳಾದ ಬಸವರಾಜ ಮಲಶೆಟ್ಟರ್ ಸರ್ ಆಗಾಗ ಹೇಳುತ್ತಿದ್ದರು. ಅಲ್ಲದೆ ವಿಜಯನಗರದಲ್ಲಿಯೇ ಮೊಟ್ಟಮೊದಲು ಯಕ್ಕಲಗಾಣ ಪ್ರದರ್ಶನ ಆಗುತ್ತಿತ್ತು ಎಂಬ ಮಾತನ್ನು ನೆನಪಿಸುತ್ತಿದ್ದರು. ಮತ್ತೂ ಇಂದಿನ ಯಕ್ಷಗಾನ ಕಲಾಪ್ರಕಾರವನ್ನು ಇದೇ ಸಾಮ್ರಾಜ್ಯದ ಕೂಚಿಪುಡಿ ಗ್ರಾಮದ ಸಿದ್ಧೇಂದ್ರ ಯತಿಗಳು ಉಡುಪಿ ಸೀಮೆಗೆ ಕೊಂಡೊಯ್ದು ಯಕ್ಷಗಾನ ರೂಪಿಸಿದರೆಂಬ ಬಗ್ಗೆಯೂ ಇತಿಹಾಸ ಹೇಳುತ್ತದೆ.

ಮಹಾದೇವ ಹಡಪದ

ಈ ಸೀಮೆಯ ದರೋಜಿಯ ಬುರ್ರಕತೆ, ಗೊಂದಲಿಗರ ಹಾಡು, ಕೊಟ್ಟೂರಿನ ಗೊಂಬೇಯಾಟ, ಹಳ್ಳಿಹಳ್ಳಿಗಳಲ್ಲಿ ನಡೆಯುವ ಆಹೋರಾತ್ರಿಯ ಬಯಲಾಟಗಳು ಸಾಕಷ್ಟು ಪ್ರಮಾಣದಲ್ಲಿ ನಾಟಕ ಕಂಪನಿಗಳ ಹುಟ್ಟಿಗೂ ಕಾರಣವಾಗಿವೆ. ಗರುಡ ಸದಾಶಿವರಾಯರು, ಜೋಳದರಾಶಿ ದೊಡ್ಡನಗೌಡರು, ಹಣ್ಣಿ ವೀರಭದ್ರಪ್ಪ, ದುರ್ಗಾದಾಸರು ಬಳ್ಳಾರಿ ರಾಘವಾಚಾರರು ಹೀಗೆ ಸಾಲುಸಾಲು ವೃತ್ತಿರಂಗಭೂಮಿಯ ಮೇರುನಟರು ಇದೇ ಸೀಮೆಯವರು. ಇನ್ನು ನಾಟಕದ ನಟನಟಿಯರಿಗೇ ಹೆಸರಾದ ಊರುಗಳೂ ಈ ಸೀಮೆಯಲ್ಲಿವೆ.

ಮರಿಯಮ್ಮನಹಳ್ಳಿ, ಹೂವಿನಹಡಗಲಿ, ಬಳ್ಳಾರಿಗಳಲ್ಲಿ ಅಸಂಖ್ಯಾತ ಕಲಾವಿದರಿದ್ದಾರೆ. ರಾಜಕಾರಣದಲ್ಲಿದ್ದೂ ನಾಟಕರಂಗದೊಂದಿಗೆ ನಂಟನ್ನಿಟ್ಟುಕೊಂಡು ನಟರಾಗಿ, ನಿರ್ದೇಶಕರಾಗಿ, ಸಂಘಟಕರಾಗಿ ಈ ನಾಡಿನ ಗೃಹಮಂತ್ರಿಗಳೂ ಆಗಿದ್ದ ದಿ. ಎಂ.ಪಿ. ಪ್ರಕಾಶ ಅವರು ಇದೇ ನಾಡಿನ ಸಾಂಸ್ಕೃತಿಕ ಲೋಕದಲ್ಲಿ ಹಂಪಿ ಉತ್ಸವ ಆರಂಭಿಸುವ ಮೂಲಕ ಉತ್ಸವಗಳದ್ದೊಂದು ಪರಂಪರೆಯನ್ನೇ ಆರಂಭಿಸಿದ್ದರು. ಅದಕ್ಕೂ ಮಿಗಿಲಾಗಿ ಕನ್ನಡ ಭಾಷೆಗೆ ಸೀಮಿತವಾದ ವಿಶ್ವವಿದ್ಯಾಲಯವೂ ಹಂಪಿಯಲ್ಲಿಯೇ ಇದೆ.

ಇಷ್ಟೆಲ್ಲ ಕನ್ನಡ ನಾಡಿಗೆ ಕೊಡುಗೆ ಕೊಟ್ಟಿರುವ ಈ ಸೀಮೆಯಲ್ಲೊಂದು ಸಾಂಸ್ಕೃತಿಕ ಕೇಂದ್ರದ ಅಗತ್ಯವಿದೆ.
ಈ ಭಾಗಕ್ಕೆ ಸಂಬಂಧಿಸಿದ ರಂಗಾಯಣವು ದೂರದ ಕಲಬುರ್ಗಿಯಲ್ಲಿದ್ದು ಅದು ಯಾವ ರೀತಿಯಲ್ಲೂ ಬಳ್ಳಾರಿ-ಕೊಪ್ಪಳ ರಾಯಚೂರು ಜಿಲ್ಲೆಗಳನ್ನು ಪರಿಗಣಿಸಿ ಸ್ವತಂತ್ರವಾದ ಕಾರ್ಯಕ್ರಮ ರೂಪಿಸಿದ್ದ ದಾಖಲೆ ಇಲ್ಲ. ಅಲ್ಲದೆ ಇತ್ತ ಧಾರವಾಡ ರಂಗಾಯಣವೂ, ಶಿವಮೊಗ್ಗ ರಂಗಾಯಣಗಳೂ ಸಮಾನ ದೂರದಲ್ಲಿವೆ.

ಕರ್ನಾಟಕದ ಮೇರು ವೃತ್ತಿಕಲಾವಿದರು, ದೊಡ್ಡಾಟ ಕಲಾವಿದರು, ಹೆಸರಾಂತ ಸಾಹಿತಿಗಳಿರುವ, ಸಾಕಷ್ಟು ನಾಟಕ ಕಂಪನಿಗಳ ಹುಟ್ಟಿಗೂ ಕಾರಣವಾಗಿರುವ ಮತ್ತು ವಂಶಪಾರಂಪರ್ಯವಾಗಿ ಕೆಲವು ಕುಟುಂಬಗಳು ಈಗಲೂ ಕಲಾಪ್ರಕಾರಗಳನ್ನು ಈ ಭಾಗದಲ್ಲಿ ಪೋಷಿಸಿಕೊಂಡು ಬಂದಿವೆ. ಈ ಎಲ್ಲ ಹಿನ್ನೆಲೆ ಈ ಸೀಮೆಗಿದ್ದರೂ ಸಾಂಸ್ಕೃತಿಕವಾದ ಅಧ್ಯಯನಕ್ಕೊಂದು ರಂಗಾಯಣ ಇಲ್ಲದಿರುವುದು ಬೇಸರದ ಸಂಗತಿ. ಇಂಥ ನಾಡನ್ನು ಕಡೆಗಣಿಸಿ ದೂರದೂರದಲ್ಲಿ ರಂಗಾಯಣ ಸ್ಥಾಪಿಸಿದ್ದು ಸ್ಥಳಿಯವಾಗಿ ಸಾಂಸ್ಕೃತಿಕ ಲೋಕಕ್ಕೆ ಅಡಚಣೆಯಾಗಿದೆ.

ದಯಮಾಡಿ ಸರಕಾರವು ಈ ಭಾಗದ ರಂಗಭೂಮಿಗೆ ಜೀವ ಕೊಡಲು ಹಂಪಿಯನ್ನು ಕೇಂದ್ರವಾಗಿಸಿಕೊಂಡು ಒಂದು ರಂಗಾಯಣವನ್ನು ಸ್ಥಾಪಿಸಿದರೆ ಈ ಗಡಿನಾಡ ಭಾಗದಲ್ಲಿ ರಂಗಚಟುವಟಿಕೆಗಳ ಜೊತೆಗೆ ಸಾಂಸ್ಕೃತಿಕವಾದ ವಾತಾವರಣ ಕಟ್ಟಲು ಹೆಚ್ಚು ಉಪಯೋಗವಾಗುತ್ತದೆ.

ಮಹಾದೇವ ಹಡಪದ, ರಂಗ ನಿರ್ದೇಶಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....