Homeಕರ್ನಾಟಕಸಾಂಸ್ಕೃತಿಕವಾಗಿ ಕ್ರಿಯಾಶೀಲವಾದ ವಿಜಯನಗರ ಪ್ರದೇಶಕ್ಕೆ ರಂಗಾಯಣಕ್ಕಾಗಿ ಕಲಾವಿದರಿಂದ ಒತ್ತಾಯ..‌

ಸಾಂಸ್ಕೃತಿಕವಾಗಿ ಕ್ರಿಯಾಶೀಲವಾದ ವಿಜಯನಗರ ಪ್ರದೇಶಕ್ಕೆ ರಂಗಾಯಣಕ್ಕಾಗಿ ಕಲಾವಿದರಿಂದ ಒತ್ತಾಯ..‌

- Advertisement -
- Advertisement -

ವಿಜಯನಗರ ಸಾಮ್ರಾಜ್ಯ ಎನ್ನುವುದು ಕನ್ನಡ ನಾಡಿನ ಕಲೆ, ಸಂಸ್ಕೃತಿ, ಸಾಹಿತ್ಯ ಭಾಷೆಗೆ ಸಂಬಂಧಿಸಿ ಮತ್ತೆ ಮತ್ತೆ ಪ್ರಸ್ತಾಪವಾಗುವ ಇತಿಹಾಸವುಳ್ಳ ನಾಡಾಗಿದೆ. ಈ ಮಧ್ಯಕರ್ನಾಟಕದ ತುದಿಯಲ್ಲಿರುವ ಈ ವಿಜಯನಗರಕ್ಕೊಂದು (ಹಂಪಿ) ರಂಗಾಯಣ ಅವಶ್ಯಕತೆಯಿದೆ.

“ಹಂಪಿಯ ಸುತ್ತಮುತ್ತಲಿನ ದೊಡ್ಡಾಟದಲ್ಲಿ ಹಾಡುತ್ತಿದ್ದ ಧಾಟಿಗಳು ಹಾಡಿನ‌ಮಟ್ಟುಗಳ ಪ್ರಭಾವ ಆರಂಭದ ತೆಲಗು ಸಿನಿಮಾಗಳ ಮೇಲೆ ಸಾಕಷ್ಟು ಪ್ರಮಾಣದಲ್ಲಿ ಆಗಿತ್ತು..” ಎಂಬ ಮಾತನ್ನು ನನ್ನ ಗುರುಗಳಾದ ಬಸವರಾಜ ಮಲಶೆಟ್ಟರ್ ಸರ್ ಆಗಾಗ ಹೇಳುತ್ತಿದ್ದರು. ಅಲ್ಲದೆ ವಿಜಯನಗರದಲ್ಲಿಯೇ ಮೊಟ್ಟಮೊದಲು ಯಕ್ಕಲಗಾಣ ಪ್ರದರ್ಶನ ಆಗುತ್ತಿತ್ತು ಎಂಬ ಮಾತನ್ನು ನೆನಪಿಸುತ್ತಿದ್ದರು. ಮತ್ತೂ ಇಂದಿನ ಯಕ್ಷಗಾನ ಕಲಾಪ್ರಕಾರವನ್ನು ಇದೇ ಸಾಮ್ರಾಜ್ಯದ ಕೂಚಿಪುಡಿ ಗ್ರಾಮದ ಸಿದ್ಧೇಂದ್ರ ಯತಿಗಳು ಉಡುಪಿ ಸೀಮೆಗೆ ಕೊಂಡೊಯ್ದು ಯಕ್ಷಗಾನ ರೂಪಿಸಿದರೆಂಬ ಬಗ್ಗೆಯೂ ಇತಿಹಾಸ ಹೇಳುತ್ತದೆ.

ಮಹಾದೇವ ಹಡಪದ

ಈ ಸೀಮೆಯ ದರೋಜಿಯ ಬುರ್ರಕತೆ, ಗೊಂದಲಿಗರ ಹಾಡು, ಕೊಟ್ಟೂರಿನ ಗೊಂಬೇಯಾಟ, ಹಳ್ಳಿಹಳ್ಳಿಗಳಲ್ಲಿ ನಡೆಯುವ ಆಹೋರಾತ್ರಿಯ ಬಯಲಾಟಗಳು ಸಾಕಷ್ಟು ಪ್ರಮಾಣದಲ್ಲಿ ನಾಟಕ ಕಂಪನಿಗಳ ಹುಟ್ಟಿಗೂ ಕಾರಣವಾಗಿವೆ. ಗರುಡ ಸದಾಶಿವರಾಯರು, ಜೋಳದರಾಶಿ ದೊಡ್ಡನಗೌಡರು, ಹಣ್ಣಿ ವೀರಭದ್ರಪ್ಪ, ದುರ್ಗಾದಾಸರು ಬಳ್ಳಾರಿ ರಾಘವಾಚಾರರು ಹೀಗೆ ಸಾಲುಸಾಲು ವೃತ್ತಿರಂಗಭೂಮಿಯ ಮೇರುನಟರು ಇದೇ ಸೀಮೆಯವರು. ಇನ್ನು ನಾಟಕದ ನಟನಟಿಯರಿಗೇ ಹೆಸರಾದ ಊರುಗಳೂ ಈ ಸೀಮೆಯಲ್ಲಿವೆ.

ಮರಿಯಮ್ಮನಹಳ್ಳಿ, ಹೂವಿನಹಡಗಲಿ, ಬಳ್ಳಾರಿಗಳಲ್ಲಿ ಅಸಂಖ್ಯಾತ ಕಲಾವಿದರಿದ್ದಾರೆ. ರಾಜಕಾರಣದಲ್ಲಿದ್ದೂ ನಾಟಕರಂಗದೊಂದಿಗೆ ನಂಟನ್ನಿಟ್ಟುಕೊಂಡು ನಟರಾಗಿ, ನಿರ್ದೇಶಕರಾಗಿ, ಸಂಘಟಕರಾಗಿ ಈ ನಾಡಿನ ಗೃಹಮಂತ್ರಿಗಳೂ ಆಗಿದ್ದ ದಿ. ಎಂ.ಪಿ. ಪ್ರಕಾಶ ಅವರು ಇದೇ ನಾಡಿನ ಸಾಂಸ್ಕೃತಿಕ ಲೋಕದಲ್ಲಿ ಹಂಪಿ ಉತ್ಸವ ಆರಂಭಿಸುವ ಮೂಲಕ ಉತ್ಸವಗಳದ್ದೊಂದು ಪರಂಪರೆಯನ್ನೇ ಆರಂಭಿಸಿದ್ದರು. ಅದಕ್ಕೂ ಮಿಗಿಲಾಗಿ ಕನ್ನಡ ಭಾಷೆಗೆ ಸೀಮಿತವಾದ ವಿಶ್ವವಿದ್ಯಾಲಯವೂ ಹಂಪಿಯಲ್ಲಿಯೇ ಇದೆ.

ಇಷ್ಟೆಲ್ಲ ಕನ್ನಡ ನಾಡಿಗೆ ಕೊಡುಗೆ ಕೊಟ್ಟಿರುವ ಈ ಸೀಮೆಯಲ್ಲೊಂದು ಸಾಂಸ್ಕೃತಿಕ ಕೇಂದ್ರದ ಅಗತ್ಯವಿದೆ.
ಈ ಭಾಗಕ್ಕೆ ಸಂಬಂಧಿಸಿದ ರಂಗಾಯಣವು ದೂರದ ಕಲಬುರ್ಗಿಯಲ್ಲಿದ್ದು ಅದು ಯಾವ ರೀತಿಯಲ್ಲೂ ಬಳ್ಳಾರಿ-ಕೊಪ್ಪಳ ರಾಯಚೂರು ಜಿಲ್ಲೆಗಳನ್ನು ಪರಿಗಣಿಸಿ ಸ್ವತಂತ್ರವಾದ ಕಾರ್ಯಕ್ರಮ ರೂಪಿಸಿದ್ದ ದಾಖಲೆ ಇಲ್ಲ. ಅಲ್ಲದೆ ಇತ್ತ ಧಾರವಾಡ ರಂಗಾಯಣವೂ, ಶಿವಮೊಗ್ಗ ರಂಗಾಯಣಗಳೂ ಸಮಾನ ದೂರದಲ್ಲಿವೆ.

ಕರ್ನಾಟಕದ ಮೇರು ವೃತ್ತಿಕಲಾವಿದರು, ದೊಡ್ಡಾಟ ಕಲಾವಿದರು, ಹೆಸರಾಂತ ಸಾಹಿತಿಗಳಿರುವ, ಸಾಕಷ್ಟು ನಾಟಕ ಕಂಪನಿಗಳ ಹುಟ್ಟಿಗೂ ಕಾರಣವಾಗಿರುವ ಮತ್ತು ವಂಶಪಾರಂಪರ್ಯವಾಗಿ ಕೆಲವು ಕುಟುಂಬಗಳು ಈಗಲೂ ಕಲಾಪ್ರಕಾರಗಳನ್ನು ಈ ಭಾಗದಲ್ಲಿ ಪೋಷಿಸಿಕೊಂಡು ಬಂದಿವೆ. ಈ ಎಲ್ಲ ಹಿನ್ನೆಲೆ ಈ ಸೀಮೆಗಿದ್ದರೂ ಸಾಂಸ್ಕೃತಿಕವಾದ ಅಧ್ಯಯನಕ್ಕೊಂದು ರಂಗಾಯಣ ಇಲ್ಲದಿರುವುದು ಬೇಸರದ ಸಂಗತಿ. ಇಂಥ ನಾಡನ್ನು ಕಡೆಗಣಿಸಿ ದೂರದೂರದಲ್ಲಿ ರಂಗಾಯಣ ಸ್ಥಾಪಿಸಿದ್ದು ಸ್ಥಳಿಯವಾಗಿ ಸಾಂಸ್ಕೃತಿಕ ಲೋಕಕ್ಕೆ ಅಡಚಣೆಯಾಗಿದೆ.

ದಯಮಾಡಿ ಸರಕಾರವು ಈ ಭಾಗದ ರಂಗಭೂಮಿಗೆ ಜೀವ ಕೊಡಲು ಹಂಪಿಯನ್ನು ಕೇಂದ್ರವಾಗಿಸಿಕೊಂಡು ಒಂದು ರಂಗಾಯಣವನ್ನು ಸ್ಥಾಪಿಸಿದರೆ ಈ ಗಡಿನಾಡ ಭಾಗದಲ್ಲಿ ರಂಗಚಟುವಟಿಕೆಗಳ ಜೊತೆಗೆ ಸಾಂಸ್ಕೃತಿಕವಾದ ವಾತಾವರಣ ಕಟ್ಟಲು ಹೆಚ್ಚು ಉಪಯೋಗವಾಗುತ್ತದೆ.

ಮಹಾದೇವ ಹಡಪದ, ರಂಗ ನಿರ್ದೇಶಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...