Homeಕರ್ನಾಟಕಸಾಂಸ್ಕೃತಿಕವಾಗಿ ಕ್ರಿಯಾಶೀಲವಾದ ವಿಜಯನಗರ ಪ್ರದೇಶಕ್ಕೆ ರಂಗಾಯಣಕ್ಕಾಗಿ ಕಲಾವಿದರಿಂದ ಒತ್ತಾಯ..‌

ಸಾಂಸ್ಕೃತಿಕವಾಗಿ ಕ್ರಿಯಾಶೀಲವಾದ ವಿಜಯನಗರ ಪ್ರದೇಶಕ್ಕೆ ರಂಗಾಯಣಕ್ಕಾಗಿ ಕಲಾವಿದರಿಂದ ಒತ್ತಾಯ..‌

- Advertisement -
- Advertisement -

ವಿಜಯನಗರ ಸಾಮ್ರಾಜ್ಯ ಎನ್ನುವುದು ಕನ್ನಡ ನಾಡಿನ ಕಲೆ, ಸಂಸ್ಕೃತಿ, ಸಾಹಿತ್ಯ ಭಾಷೆಗೆ ಸಂಬಂಧಿಸಿ ಮತ್ತೆ ಮತ್ತೆ ಪ್ರಸ್ತಾಪವಾಗುವ ಇತಿಹಾಸವುಳ್ಳ ನಾಡಾಗಿದೆ. ಈ ಮಧ್ಯಕರ್ನಾಟಕದ ತುದಿಯಲ್ಲಿರುವ ಈ ವಿಜಯನಗರಕ್ಕೊಂದು (ಹಂಪಿ) ರಂಗಾಯಣ ಅವಶ್ಯಕತೆಯಿದೆ.

“ಹಂಪಿಯ ಸುತ್ತಮುತ್ತಲಿನ ದೊಡ್ಡಾಟದಲ್ಲಿ ಹಾಡುತ್ತಿದ್ದ ಧಾಟಿಗಳು ಹಾಡಿನ‌ಮಟ್ಟುಗಳ ಪ್ರಭಾವ ಆರಂಭದ ತೆಲಗು ಸಿನಿಮಾಗಳ ಮೇಲೆ ಸಾಕಷ್ಟು ಪ್ರಮಾಣದಲ್ಲಿ ಆಗಿತ್ತು..” ಎಂಬ ಮಾತನ್ನು ನನ್ನ ಗುರುಗಳಾದ ಬಸವರಾಜ ಮಲಶೆಟ್ಟರ್ ಸರ್ ಆಗಾಗ ಹೇಳುತ್ತಿದ್ದರು. ಅಲ್ಲದೆ ವಿಜಯನಗರದಲ್ಲಿಯೇ ಮೊಟ್ಟಮೊದಲು ಯಕ್ಕಲಗಾಣ ಪ್ರದರ್ಶನ ಆಗುತ್ತಿತ್ತು ಎಂಬ ಮಾತನ್ನು ನೆನಪಿಸುತ್ತಿದ್ದರು. ಮತ್ತೂ ಇಂದಿನ ಯಕ್ಷಗಾನ ಕಲಾಪ್ರಕಾರವನ್ನು ಇದೇ ಸಾಮ್ರಾಜ್ಯದ ಕೂಚಿಪುಡಿ ಗ್ರಾಮದ ಸಿದ್ಧೇಂದ್ರ ಯತಿಗಳು ಉಡುಪಿ ಸೀಮೆಗೆ ಕೊಂಡೊಯ್ದು ಯಕ್ಷಗಾನ ರೂಪಿಸಿದರೆಂಬ ಬಗ್ಗೆಯೂ ಇತಿಹಾಸ ಹೇಳುತ್ತದೆ.

ಮಹಾದೇವ ಹಡಪದ

ಈ ಸೀಮೆಯ ದರೋಜಿಯ ಬುರ್ರಕತೆ, ಗೊಂದಲಿಗರ ಹಾಡು, ಕೊಟ್ಟೂರಿನ ಗೊಂಬೇಯಾಟ, ಹಳ್ಳಿಹಳ್ಳಿಗಳಲ್ಲಿ ನಡೆಯುವ ಆಹೋರಾತ್ರಿಯ ಬಯಲಾಟಗಳು ಸಾಕಷ್ಟು ಪ್ರಮಾಣದಲ್ಲಿ ನಾಟಕ ಕಂಪನಿಗಳ ಹುಟ್ಟಿಗೂ ಕಾರಣವಾಗಿವೆ. ಗರುಡ ಸದಾಶಿವರಾಯರು, ಜೋಳದರಾಶಿ ದೊಡ್ಡನಗೌಡರು, ಹಣ್ಣಿ ವೀರಭದ್ರಪ್ಪ, ದುರ್ಗಾದಾಸರು ಬಳ್ಳಾರಿ ರಾಘವಾಚಾರರು ಹೀಗೆ ಸಾಲುಸಾಲು ವೃತ್ತಿರಂಗಭೂಮಿಯ ಮೇರುನಟರು ಇದೇ ಸೀಮೆಯವರು. ಇನ್ನು ನಾಟಕದ ನಟನಟಿಯರಿಗೇ ಹೆಸರಾದ ಊರುಗಳೂ ಈ ಸೀಮೆಯಲ್ಲಿವೆ.

ಮರಿಯಮ್ಮನಹಳ್ಳಿ, ಹೂವಿನಹಡಗಲಿ, ಬಳ್ಳಾರಿಗಳಲ್ಲಿ ಅಸಂಖ್ಯಾತ ಕಲಾವಿದರಿದ್ದಾರೆ. ರಾಜಕಾರಣದಲ್ಲಿದ್ದೂ ನಾಟಕರಂಗದೊಂದಿಗೆ ನಂಟನ್ನಿಟ್ಟುಕೊಂಡು ನಟರಾಗಿ, ನಿರ್ದೇಶಕರಾಗಿ, ಸಂಘಟಕರಾಗಿ ಈ ನಾಡಿನ ಗೃಹಮಂತ್ರಿಗಳೂ ಆಗಿದ್ದ ದಿ. ಎಂ.ಪಿ. ಪ್ರಕಾಶ ಅವರು ಇದೇ ನಾಡಿನ ಸಾಂಸ್ಕೃತಿಕ ಲೋಕದಲ್ಲಿ ಹಂಪಿ ಉತ್ಸವ ಆರಂಭಿಸುವ ಮೂಲಕ ಉತ್ಸವಗಳದ್ದೊಂದು ಪರಂಪರೆಯನ್ನೇ ಆರಂಭಿಸಿದ್ದರು. ಅದಕ್ಕೂ ಮಿಗಿಲಾಗಿ ಕನ್ನಡ ಭಾಷೆಗೆ ಸೀಮಿತವಾದ ವಿಶ್ವವಿದ್ಯಾಲಯವೂ ಹಂಪಿಯಲ್ಲಿಯೇ ಇದೆ.

ಇಷ್ಟೆಲ್ಲ ಕನ್ನಡ ನಾಡಿಗೆ ಕೊಡುಗೆ ಕೊಟ್ಟಿರುವ ಈ ಸೀಮೆಯಲ್ಲೊಂದು ಸಾಂಸ್ಕೃತಿಕ ಕೇಂದ್ರದ ಅಗತ್ಯವಿದೆ.
ಈ ಭಾಗಕ್ಕೆ ಸಂಬಂಧಿಸಿದ ರಂಗಾಯಣವು ದೂರದ ಕಲಬುರ್ಗಿಯಲ್ಲಿದ್ದು ಅದು ಯಾವ ರೀತಿಯಲ್ಲೂ ಬಳ್ಳಾರಿ-ಕೊಪ್ಪಳ ರಾಯಚೂರು ಜಿಲ್ಲೆಗಳನ್ನು ಪರಿಗಣಿಸಿ ಸ್ವತಂತ್ರವಾದ ಕಾರ್ಯಕ್ರಮ ರೂಪಿಸಿದ್ದ ದಾಖಲೆ ಇಲ್ಲ. ಅಲ್ಲದೆ ಇತ್ತ ಧಾರವಾಡ ರಂಗಾಯಣವೂ, ಶಿವಮೊಗ್ಗ ರಂಗಾಯಣಗಳೂ ಸಮಾನ ದೂರದಲ್ಲಿವೆ.

ಕರ್ನಾಟಕದ ಮೇರು ವೃತ್ತಿಕಲಾವಿದರು, ದೊಡ್ಡಾಟ ಕಲಾವಿದರು, ಹೆಸರಾಂತ ಸಾಹಿತಿಗಳಿರುವ, ಸಾಕಷ್ಟು ನಾಟಕ ಕಂಪನಿಗಳ ಹುಟ್ಟಿಗೂ ಕಾರಣವಾಗಿರುವ ಮತ್ತು ವಂಶಪಾರಂಪರ್ಯವಾಗಿ ಕೆಲವು ಕುಟುಂಬಗಳು ಈಗಲೂ ಕಲಾಪ್ರಕಾರಗಳನ್ನು ಈ ಭಾಗದಲ್ಲಿ ಪೋಷಿಸಿಕೊಂಡು ಬಂದಿವೆ. ಈ ಎಲ್ಲ ಹಿನ್ನೆಲೆ ಈ ಸೀಮೆಗಿದ್ದರೂ ಸಾಂಸ್ಕೃತಿಕವಾದ ಅಧ್ಯಯನಕ್ಕೊಂದು ರಂಗಾಯಣ ಇಲ್ಲದಿರುವುದು ಬೇಸರದ ಸಂಗತಿ. ಇಂಥ ನಾಡನ್ನು ಕಡೆಗಣಿಸಿ ದೂರದೂರದಲ್ಲಿ ರಂಗಾಯಣ ಸ್ಥಾಪಿಸಿದ್ದು ಸ್ಥಳಿಯವಾಗಿ ಸಾಂಸ್ಕೃತಿಕ ಲೋಕಕ್ಕೆ ಅಡಚಣೆಯಾಗಿದೆ.

ದಯಮಾಡಿ ಸರಕಾರವು ಈ ಭಾಗದ ರಂಗಭೂಮಿಗೆ ಜೀವ ಕೊಡಲು ಹಂಪಿಯನ್ನು ಕೇಂದ್ರವಾಗಿಸಿಕೊಂಡು ಒಂದು ರಂಗಾಯಣವನ್ನು ಸ್ಥಾಪಿಸಿದರೆ ಈ ಗಡಿನಾಡ ಭಾಗದಲ್ಲಿ ರಂಗಚಟುವಟಿಕೆಗಳ ಜೊತೆಗೆ ಸಾಂಸ್ಕೃತಿಕವಾದ ವಾತಾವರಣ ಕಟ್ಟಲು ಹೆಚ್ಚು ಉಪಯೋಗವಾಗುತ್ತದೆ.

ಮಹಾದೇವ ಹಡಪದ, ರಂಗ ನಿರ್ದೇಶಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...