Homeಮುಖಪುಟಬ್ಯಾಲೆಟ್‌ ಪೇಪರ್‌ ಮತದಾನ | ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಬ್ಯಾಲೆಟ್‌ ಪೇಪರ್‌ ಮತದಾನ | ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ದೇಶದ ಚುನಾವಣೆಗಳನ್ನು ಮತ್ತೆ ಬ್ಯಾಲೆಟ್ ಪೇಪರ್ ಮೂಲಕ ನಡೆಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. “ನೀವು ಚುನಾವಣೆಯಲ್ಲಿ ಗೆದ್ದಾಗ ಇವಿಎಂಗಳನ್ನು (ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್) ಟ್ಯಾಂಪರ್ ಮಾಡುವುದಿಲ್ಲ. ನೀವು ಚುನಾವಣೆಯಲ್ಲಿ ಸೋತಾಗ, ಇವಿಎಂಗಳನ್ನು ಟ್ಯಾಂಪರ್ ಮಾಡಲಾಗುತ್ತದೆಯೆ” ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಪಿ.ಬಿ. ವರಾಳೆ ಅವರ ಪೀಠವು ಟೀಕಿಸಿದೆ. ಬ್ಯಾಲೆಟ್‌ ಪೇಪರ್‌ ಮತದಾನ

ಬ್ಯಾಲೆಟ್ ಪೇಪರ್ ಮತದಾನದ ಹೊರತಾಗಿ, ಮತದಾನದ ಸಮಯದಲ್ಲಿ ಮತದಾರರಿಗೆ ಹಣ, ಮದ್ಯ ಅಥವಾ ಇತರ ವಸ್ತು ಪ್ರಚೋದನೆಗಳನ್ನು ವಿತರಿಸಿದ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಕನಿಷ್ಠ ಐದು ವರ್ಷಗಳವರೆಗೆ ಅಭ್ಯರ್ಥಿಗಳನ್ನು ಅನರ್ಹಗೊಳಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ಸೇರಿದಂತೆ ಹಲವಾರು ನಿರ್ದೇಶನಗಳನ್ನು ಮನವಿಯಲ್ಲಿ ಕೋರಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಿಐಎಲ್ ಸಲ್ಲಿಸಿದ್ದೇನೆ ಎಂದು ಅರ್ಜಿದಾರ ಕೆ.ಎ. ಪೌಲ್ ಹೇಳಿದಾಗ, ಪೀಠವು, “ನಿಮ್ಮ ಬಳಿ ಆಸಕ್ತಿದಾಯಕ ಪಿಐಎಲ್‌ಗಳಿವೆ. ಈ ಅದ್ಭುತ ವಿಚಾರಗಳನ್ನು ನೀವು ಹೇಗೆ ಪಡೆಯುತ್ತೀರಿ?” ಎಂದು ಕೇಳಿತು. ಅರ್ಜಿದಾರರು ಮೂರು ಲಕ್ಷಕ್ಕೂ ಹೆಚ್ಚು ಅನಾಥರು ಮತ್ತು 40 ಲಕ್ಷ ವಿಧವೆಯರನ್ನು ರಕ್ಷಿಸಿದ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ.

“ನೀವು ಈ ರಾಜಕೀಯ ಕ್ಷೇತ್ರಕ್ಕೆ ಏಕೆ ಬರುತ್ತಿದ್ದೀರಿ? ನಿಮ್ಮ ಕೆಲಸದ ಕ್ಷೇತ್ರವು ತುಂಬಾ ವಿಭಿನ್ನವಾಗಿದೆ,” ಎಂದು ಪೀಠವು ಮರುಪ್ರಶ್ನೆ ಹಾಕಿದೆ.

ಪೌಲ್ ಅವರು 150 ಕ್ಕೂ ಹೆಚ್ಚು ದೇಶಗಳಿಗೆ ಹೋಗಿದ್ದಾರೆ ಎಂಬುವುದನ್ನು ಬಹಿರಂಗಪಡಿಸಿದ ನಂತರ, ಪ್ರತಿಯೊಂದು ರಾಷ್ಟ್ರಗಳು ಬ್ಯಾಲೆಟ್ ಪೇಪರ್ ಮೂಲಕ ಮತದಾನವನ್ನು ಮಾಡಲಾಗುತ್ತವೆಯೆ ಅಥವಾ ಎಲೆಕ್ಟ್ರಾನಿಕ್ ಮತದಾನವನ್ನು ಬಳಸುತ್ತವೆಯೇ ಎಂದು ಪೀಠವು ಅವರನ್ನು ಕೇಳಿತು. ಇದಕ್ಕೆ ಉತ್ತರಿಸಿದ ಅವರು, ವಿದೇಶಿ ರಾಷ್ಟ್ರಗಳು ಬ್ಯಾಲೆಟ್ ಪೇಪರ್ ಮತದಾನವನ್ನು ಅಳವಡಿಸಿಕೊಂಡಿದ್ದು, ಭಾರತವೂ ಇದನ್ನು ಅನುಸರಿಸಬೇಕು ಎಂದು ಅರ್ಜಿದಾರರು ಹೇಳಿದ್ದಾರೆ. ಬ್ಯಾಲೆಟ್‌ ಪೇಪರ್‌ ಮತದಾನ

“ನೀವು ಪ್ರಪಂಚದ ಇತರ ಭಾಗಗಳಿಗಿಂತ ಭಿನ್ನವಾಗಿರಲು ಏಕೆ ಬಯಸುವುದಿಲ್ಲ?” ಎಂದು ಪೀಠ ಕೇಳಿತು. ಅದಕ್ಕೆ ಪ್ರತಿಕ್ರಿಯಿಸಿದ ಪೌಲ್, “ಚುನಾವನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಈ ವರ್ಷ (2024) ಜೂನ್‌ನಲ್ಲಿ ಚುನಾವಣಾ ಆಯೋಗವು 9,000 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿರುವುದಾಗಿ ಘೋಷಿಸಿದೆ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, “ಆದರೆ ನೀವು ಇಲ್ಲಿ ಹೇಳುತ್ತಿರುವ ನಿಮ್ಮ ಪರಿಹಾರವನ್ನು ಅದು ಹೇಗೆ ಪ್ರಸ್ತುತವಾಗಿಸುತ್ತದೆ? ನೀವು ಬ್ಯಾಲೆಟ್‌ ಪೇಪರ್‌ ಮತದಾನ ನಡೆದರೆ ಭ್ರಷ್ಟಾಚಾರ ನಡೆಯುವುದಿಲ್ಲವೇ” ಎಂದು ಪೀಠ ಪ್ರಶ್ನಿಸಿತು.

“ಟೆಸ್ಲಾದ ಸಿಇಒ ಮತ್ತು ಸಹ-ಸಂಸ್ಥಾಪಕ ಎಲೋನ್ ಮಸ್ಕ್ ಅವರು ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಬಹುದು ಎಂದು ಹೇಳಿದ್ದಾರೆ. ಆಂಧ್ರಪ್ರದೇಶದ ಪ್ರಸ್ತುತ ಮುಖ್ಯಮಂತ್ರಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ಇವಿಎಂಗಳನ್ನು ಟ್ಯಾಂಪರ್‌ ಮಾಡಬಹುದು ಎಂದು ಹೇಳಿದ್ದರು” ಎಂದು ಪೌಲ್ ಕೋರ್ಟ್‌ಗೆ ಹೇಳಿದ್ದಾರೆ.

“ಚಂದ್ರಬಾಬು ನಾಯ್ಡು ಸೋತಾಗ ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಬಹುದು ಎಂದು ಹೇಳಿದ್ದರು. ಈಗ ಈ ಬಾರಿ ಜಗನ್ ಮೋಹನ್ ರೆಡ್ಡಿ ಸೋತರು. ಹಾಗಾಗಿ ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಬಹುದು ಎಂದು ಹೇಳಿದ್ದಾರೆ” ಎಂದು ಪೀಠ ಹೇಳಿತು.

ಚುನಾವಣೆಯಲ್ಲಿ ಹಣ ಹಂಚುವುದು ಎಲ್ಲರಿಗೂ ತಿಳಿದಿದೆ ಎಂದು ಅರ್ಜಿದಾರರು ಹೇಳಿದಾಗ, ಪೀಠವು, “ನಾವು ಯಾವುದೇ ಚುನಾವಣೆಗೆ ಹಣವನ್ನು ಪಡೆದಿಲ್ಲ” ಎಂದು ಹೇಳಿದೆ.

ಚುನಾವಣಾ ಪ್ರಚಾರದ ಸಮಯದಲ್ಲಿ ಹಣ ಮತ್ತು ಮದ್ಯದ ಬಳಕೆಯನ್ನು ನಿಯಂತ್ರಿಸಲು ಮತ್ತು ಅಂತಹ ಅಭ್ಯಾಸಗಳನ್ನು ಕಾನೂನಿನಡಿಯಲ್ಲಿ ನಿಷೇಧಿಸಲಾಗಿದೆ ಮತ್ತು ಶಿಕ್ಷಾರ್ಹವಾಗಿದೆ. ಇದನ್ನು ಖಚಿತಪಡಿಸಿಕೊಳ್ಳಲು ಸಮಗ್ರ ಚೌಕಟ್ಟನ್ನು ರೂಪಿಸುವುದು ತನ್ನ ಮನವಿಯ ಮತ್ತೊಂದು ಆಗ್ರಹವಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ

ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...