Homeಮುಖಪುಟಬ್ಯಾಲೆಟ್‌ ಪೇಪರ್‌ ಮತದಾನ | ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಬ್ಯಾಲೆಟ್‌ ಪೇಪರ್‌ ಮತದಾನ | ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ದೇಶದ ಚುನಾವಣೆಗಳನ್ನು ಮತ್ತೆ ಬ್ಯಾಲೆಟ್ ಪೇಪರ್ ಮೂಲಕ ನಡೆಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. “ನೀವು ಚುನಾವಣೆಯಲ್ಲಿ ಗೆದ್ದಾಗ ಇವಿಎಂಗಳನ್ನು (ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್) ಟ್ಯಾಂಪರ್ ಮಾಡುವುದಿಲ್ಲ. ನೀವು ಚುನಾವಣೆಯಲ್ಲಿ ಸೋತಾಗ, ಇವಿಎಂಗಳನ್ನು ಟ್ಯಾಂಪರ್ ಮಾಡಲಾಗುತ್ತದೆಯೆ” ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಪಿ.ಬಿ. ವರಾಳೆ ಅವರ ಪೀಠವು ಟೀಕಿಸಿದೆ. ಬ್ಯಾಲೆಟ್‌ ಪೇಪರ್‌ ಮತದಾನ

ಬ್ಯಾಲೆಟ್ ಪೇಪರ್ ಮತದಾನದ ಹೊರತಾಗಿ, ಮತದಾನದ ಸಮಯದಲ್ಲಿ ಮತದಾರರಿಗೆ ಹಣ, ಮದ್ಯ ಅಥವಾ ಇತರ ವಸ್ತು ಪ್ರಚೋದನೆಗಳನ್ನು ವಿತರಿಸಿದ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಕನಿಷ್ಠ ಐದು ವರ್ಷಗಳವರೆಗೆ ಅಭ್ಯರ್ಥಿಗಳನ್ನು ಅನರ್ಹಗೊಳಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ಸೇರಿದಂತೆ ಹಲವಾರು ನಿರ್ದೇಶನಗಳನ್ನು ಮನವಿಯಲ್ಲಿ ಕೋರಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಿಐಎಲ್ ಸಲ್ಲಿಸಿದ್ದೇನೆ ಎಂದು ಅರ್ಜಿದಾರ ಕೆ.ಎ. ಪೌಲ್ ಹೇಳಿದಾಗ, ಪೀಠವು, “ನಿಮ್ಮ ಬಳಿ ಆಸಕ್ತಿದಾಯಕ ಪಿಐಎಲ್‌ಗಳಿವೆ. ಈ ಅದ್ಭುತ ವಿಚಾರಗಳನ್ನು ನೀವು ಹೇಗೆ ಪಡೆಯುತ್ತೀರಿ?” ಎಂದು ಕೇಳಿತು. ಅರ್ಜಿದಾರರು ಮೂರು ಲಕ್ಷಕ್ಕೂ ಹೆಚ್ಚು ಅನಾಥರು ಮತ್ತು 40 ಲಕ್ಷ ವಿಧವೆಯರನ್ನು ರಕ್ಷಿಸಿದ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ.

“ನೀವು ಈ ರಾಜಕೀಯ ಕ್ಷೇತ್ರಕ್ಕೆ ಏಕೆ ಬರುತ್ತಿದ್ದೀರಿ? ನಿಮ್ಮ ಕೆಲಸದ ಕ್ಷೇತ್ರವು ತುಂಬಾ ವಿಭಿನ್ನವಾಗಿದೆ,” ಎಂದು ಪೀಠವು ಮರುಪ್ರಶ್ನೆ ಹಾಕಿದೆ.

ಪೌಲ್ ಅವರು 150 ಕ್ಕೂ ಹೆಚ್ಚು ದೇಶಗಳಿಗೆ ಹೋಗಿದ್ದಾರೆ ಎಂಬುವುದನ್ನು ಬಹಿರಂಗಪಡಿಸಿದ ನಂತರ, ಪ್ರತಿಯೊಂದು ರಾಷ್ಟ್ರಗಳು ಬ್ಯಾಲೆಟ್ ಪೇಪರ್ ಮೂಲಕ ಮತದಾನವನ್ನು ಮಾಡಲಾಗುತ್ತವೆಯೆ ಅಥವಾ ಎಲೆಕ್ಟ್ರಾನಿಕ್ ಮತದಾನವನ್ನು ಬಳಸುತ್ತವೆಯೇ ಎಂದು ಪೀಠವು ಅವರನ್ನು ಕೇಳಿತು. ಇದಕ್ಕೆ ಉತ್ತರಿಸಿದ ಅವರು, ವಿದೇಶಿ ರಾಷ್ಟ್ರಗಳು ಬ್ಯಾಲೆಟ್ ಪೇಪರ್ ಮತದಾನವನ್ನು ಅಳವಡಿಸಿಕೊಂಡಿದ್ದು, ಭಾರತವೂ ಇದನ್ನು ಅನುಸರಿಸಬೇಕು ಎಂದು ಅರ್ಜಿದಾರರು ಹೇಳಿದ್ದಾರೆ. ಬ್ಯಾಲೆಟ್‌ ಪೇಪರ್‌ ಮತದಾನ

“ನೀವು ಪ್ರಪಂಚದ ಇತರ ಭಾಗಗಳಿಗಿಂತ ಭಿನ್ನವಾಗಿರಲು ಏಕೆ ಬಯಸುವುದಿಲ್ಲ?” ಎಂದು ಪೀಠ ಕೇಳಿತು. ಅದಕ್ಕೆ ಪ್ರತಿಕ್ರಿಯಿಸಿದ ಪೌಲ್, “ಚುನಾವನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಈ ವರ್ಷ (2024) ಜೂನ್‌ನಲ್ಲಿ ಚುನಾವಣಾ ಆಯೋಗವು 9,000 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿರುವುದಾಗಿ ಘೋಷಿಸಿದೆ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, “ಆದರೆ ನೀವು ಇಲ್ಲಿ ಹೇಳುತ್ತಿರುವ ನಿಮ್ಮ ಪರಿಹಾರವನ್ನು ಅದು ಹೇಗೆ ಪ್ರಸ್ತುತವಾಗಿಸುತ್ತದೆ? ನೀವು ಬ್ಯಾಲೆಟ್‌ ಪೇಪರ್‌ ಮತದಾನ ನಡೆದರೆ ಭ್ರಷ್ಟಾಚಾರ ನಡೆಯುವುದಿಲ್ಲವೇ” ಎಂದು ಪೀಠ ಪ್ರಶ್ನಿಸಿತು.

“ಟೆಸ್ಲಾದ ಸಿಇಒ ಮತ್ತು ಸಹ-ಸಂಸ್ಥಾಪಕ ಎಲೋನ್ ಮಸ್ಕ್ ಅವರು ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಬಹುದು ಎಂದು ಹೇಳಿದ್ದಾರೆ. ಆಂಧ್ರಪ್ರದೇಶದ ಪ್ರಸ್ತುತ ಮುಖ್ಯಮಂತ್ರಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ಇವಿಎಂಗಳನ್ನು ಟ್ಯಾಂಪರ್‌ ಮಾಡಬಹುದು ಎಂದು ಹೇಳಿದ್ದರು” ಎಂದು ಪೌಲ್ ಕೋರ್ಟ್‌ಗೆ ಹೇಳಿದ್ದಾರೆ.

“ಚಂದ್ರಬಾಬು ನಾಯ್ಡು ಸೋತಾಗ ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಬಹುದು ಎಂದು ಹೇಳಿದ್ದರು. ಈಗ ಈ ಬಾರಿ ಜಗನ್ ಮೋಹನ್ ರೆಡ್ಡಿ ಸೋತರು. ಹಾಗಾಗಿ ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಬಹುದು ಎಂದು ಹೇಳಿದ್ದಾರೆ” ಎಂದು ಪೀಠ ಹೇಳಿತು.

ಚುನಾವಣೆಯಲ್ಲಿ ಹಣ ಹಂಚುವುದು ಎಲ್ಲರಿಗೂ ತಿಳಿದಿದೆ ಎಂದು ಅರ್ಜಿದಾರರು ಹೇಳಿದಾಗ, ಪೀಠವು, “ನಾವು ಯಾವುದೇ ಚುನಾವಣೆಗೆ ಹಣವನ್ನು ಪಡೆದಿಲ್ಲ” ಎಂದು ಹೇಳಿದೆ.

ಚುನಾವಣಾ ಪ್ರಚಾರದ ಸಮಯದಲ್ಲಿ ಹಣ ಮತ್ತು ಮದ್ಯದ ಬಳಕೆಯನ್ನು ನಿಯಂತ್ರಿಸಲು ಮತ್ತು ಅಂತಹ ಅಭ್ಯಾಸಗಳನ್ನು ಕಾನೂನಿನಡಿಯಲ್ಲಿ ನಿಷೇಧಿಸಲಾಗಿದೆ ಮತ್ತು ಶಿಕ್ಷಾರ್ಹವಾಗಿದೆ. ಇದನ್ನು ಖಚಿತಪಡಿಸಿಕೊಳ್ಳಲು ಸಮಗ್ರ ಚೌಕಟ್ಟನ್ನು ರೂಪಿಸುವುದು ತನ್ನ ಮನವಿಯ ಮತ್ತೊಂದು ಆಗ್ರಹವಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ

ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...