Homeಮುಖಪುಟಬ್ಯಾಲೆಟ್‌ ಪೇಪರ್‌ ಮತದಾನ | ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಬ್ಯಾಲೆಟ್‌ ಪೇಪರ್‌ ಮತದಾನ | ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ದೇಶದ ಚುನಾವಣೆಗಳನ್ನು ಮತ್ತೆ ಬ್ಯಾಲೆಟ್ ಪೇಪರ್ ಮೂಲಕ ನಡೆಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. “ನೀವು ಚುನಾವಣೆಯಲ್ಲಿ ಗೆದ್ದಾಗ ಇವಿಎಂಗಳನ್ನು (ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್) ಟ್ಯಾಂಪರ್ ಮಾಡುವುದಿಲ್ಲ. ನೀವು ಚುನಾವಣೆಯಲ್ಲಿ ಸೋತಾಗ, ಇವಿಎಂಗಳನ್ನು ಟ್ಯಾಂಪರ್ ಮಾಡಲಾಗುತ್ತದೆಯೆ” ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಪಿ.ಬಿ. ವರಾಳೆ ಅವರ ಪೀಠವು ಟೀಕಿಸಿದೆ. ಬ್ಯಾಲೆಟ್‌ ಪೇಪರ್‌ ಮತದಾನ

ಬ್ಯಾಲೆಟ್ ಪೇಪರ್ ಮತದಾನದ ಹೊರತಾಗಿ, ಮತದಾನದ ಸಮಯದಲ್ಲಿ ಮತದಾರರಿಗೆ ಹಣ, ಮದ್ಯ ಅಥವಾ ಇತರ ವಸ್ತು ಪ್ರಚೋದನೆಗಳನ್ನು ವಿತರಿಸಿದ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಕನಿಷ್ಠ ಐದು ವರ್ಷಗಳವರೆಗೆ ಅಭ್ಯರ್ಥಿಗಳನ್ನು ಅನರ್ಹಗೊಳಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ಸೇರಿದಂತೆ ಹಲವಾರು ನಿರ್ದೇಶನಗಳನ್ನು ಮನವಿಯಲ್ಲಿ ಕೋರಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಿಐಎಲ್ ಸಲ್ಲಿಸಿದ್ದೇನೆ ಎಂದು ಅರ್ಜಿದಾರ ಕೆ.ಎ. ಪೌಲ್ ಹೇಳಿದಾಗ, ಪೀಠವು, “ನಿಮ್ಮ ಬಳಿ ಆಸಕ್ತಿದಾಯಕ ಪಿಐಎಲ್‌ಗಳಿವೆ. ಈ ಅದ್ಭುತ ವಿಚಾರಗಳನ್ನು ನೀವು ಹೇಗೆ ಪಡೆಯುತ್ತೀರಿ?” ಎಂದು ಕೇಳಿತು. ಅರ್ಜಿದಾರರು ಮೂರು ಲಕ್ಷಕ್ಕೂ ಹೆಚ್ಚು ಅನಾಥರು ಮತ್ತು 40 ಲಕ್ಷ ವಿಧವೆಯರನ್ನು ರಕ್ಷಿಸಿದ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ.

“ನೀವು ಈ ರಾಜಕೀಯ ಕ್ಷೇತ್ರಕ್ಕೆ ಏಕೆ ಬರುತ್ತಿದ್ದೀರಿ? ನಿಮ್ಮ ಕೆಲಸದ ಕ್ಷೇತ್ರವು ತುಂಬಾ ವಿಭಿನ್ನವಾಗಿದೆ,” ಎಂದು ಪೀಠವು ಮರುಪ್ರಶ್ನೆ ಹಾಕಿದೆ.

ಪೌಲ್ ಅವರು 150 ಕ್ಕೂ ಹೆಚ್ಚು ದೇಶಗಳಿಗೆ ಹೋಗಿದ್ದಾರೆ ಎಂಬುವುದನ್ನು ಬಹಿರಂಗಪಡಿಸಿದ ನಂತರ, ಪ್ರತಿಯೊಂದು ರಾಷ್ಟ್ರಗಳು ಬ್ಯಾಲೆಟ್ ಪೇಪರ್ ಮೂಲಕ ಮತದಾನವನ್ನು ಮಾಡಲಾಗುತ್ತವೆಯೆ ಅಥವಾ ಎಲೆಕ್ಟ್ರಾನಿಕ್ ಮತದಾನವನ್ನು ಬಳಸುತ್ತವೆಯೇ ಎಂದು ಪೀಠವು ಅವರನ್ನು ಕೇಳಿತು. ಇದಕ್ಕೆ ಉತ್ತರಿಸಿದ ಅವರು, ವಿದೇಶಿ ರಾಷ್ಟ್ರಗಳು ಬ್ಯಾಲೆಟ್ ಪೇಪರ್ ಮತದಾನವನ್ನು ಅಳವಡಿಸಿಕೊಂಡಿದ್ದು, ಭಾರತವೂ ಇದನ್ನು ಅನುಸರಿಸಬೇಕು ಎಂದು ಅರ್ಜಿದಾರರು ಹೇಳಿದ್ದಾರೆ. ಬ್ಯಾಲೆಟ್‌ ಪೇಪರ್‌ ಮತದಾನ

“ನೀವು ಪ್ರಪಂಚದ ಇತರ ಭಾಗಗಳಿಗಿಂತ ಭಿನ್ನವಾಗಿರಲು ಏಕೆ ಬಯಸುವುದಿಲ್ಲ?” ಎಂದು ಪೀಠ ಕೇಳಿತು. ಅದಕ್ಕೆ ಪ್ರತಿಕ್ರಿಯಿಸಿದ ಪೌಲ್, “ಚುನಾವನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಈ ವರ್ಷ (2024) ಜೂನ್‌ನಲ್ಲಿ ಚುನಾವಣಾ ಆಯೋಗವು 9,000 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿರುವುದಾಗಿ ಘೋಷಿಸಿದೆ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, “ಆದರೆ ನೀವು ಇಲ್ಲಿ ಹೇಳುತ್ತಿರುವ ನಿಮ್ಮ ಪರಿಹಾರವನ್ನು ಅದು ಹೇಗೆ ಪ್ರಸ್ತುತವಾಗಿಸುತ್ತದೆ? ನೀವು ಬ್ಯಾಲೆಟ್‌ ಪೇಪರ್‌ ಮತದಾನ ನಡೆದರೆ ಭ್ರಷ್ಟಾಚಾರ ನಡೆಯುವುದಿಲ್ಲವೇ” ಎಂದು ಪೀಠ ಪ್ರಶ್ನಿಸಿತು.

“ಟೆಸ್ಲಾದ ಸಿಇಒ ಮತ್ತು ಸಹ-ಸಂಸ್ಥಾಪಕ ಎಲೋನ್ ಮಸ್ಕ್ ಅವರು ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಬಹುದು ಎಂದು ಹೇಳಿದ್ದಾರೆ. ಆಂಧ್ರಪ್ರದೇಶದ ಪ್ರಸ್ತುತ ಮುಖ್ಯಮಂತ್ರಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ಇವಿಎಂಗಳನ್ನು ಟ್ಯಾಂಪರ್‌ ಮಾಡಬಹುದು ಎಂದು ಹೇಳಿದ್ದರು” ಎಂದು ಪೌಲ್ ಕೋರ್ಟ್‌ಗೆ ಹೇಳಿದ್ದಾರೆ.

“ಚಂದ್ರಬಾಬು ನಾಯ್ಡು ಸೋತಾಗ ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಬಹುದು ಎಂದು ಹೇಳಿದ್ದರು. ಈಗ ಈ ಬಾರಿ ಜಗನ್ ಮೋಹನ್ ರೆಡ್ಡಿ ಸೋತರು. ಹಾಗಾಗಿ ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಬಹುದು ಎಂದು ಹೇಳಿದ್ದಾರೆ” ಎಂದು ಪೀಠ ಹೇಳಿತು.

ಚುನಾವಣೆಯಲ್ಲಿ ಹಣ ಹಂಚುವುದು ಎಲ್ಲರಿಗೂ ತಿಳಿದಿದೆ ಎಂದು ಅರ್ಜಿದಾರರು ಹೇಳಿದಾಗ, ಪೀಠವು, “ನಾವು ಯಾವುದೇ ಚುನಾವಣೆಗೆ ಹಣವನ್ನು ಪಡೆದಿಲ್ಲ” ಎಂದು ಹೇಳಿದೆ.

ಚುನಾವಣಾ ಪ್ರಚಾರದ ಸಮಯದಲ್ಲಿ ಹಣ ಮತ್ತು ಮದ್ಯದ ಬಳಕೆಯನ್ನು ನಿಯಂತ್ರಿಸಲು ಮತ್ತು ಅಂತಹ ಅಭ್ಯಾಸಗಳನ್ನು ಕಾನೂನಿನಡಿಯಲ್ಲಿ ನಿಷೇಧಿಸಲಾಗಿದೆ ಮತ್ತು ಶಿಕ್ಷಾರ್ಹವಾಗಿದೆ. ಇದನ್ನು ಖಚಿತಪಡಿಸಿಕೊಳ್ಳಲು ಸಮಗ್ರ ಚೌಕಟ್ಟನ್ನು ರೂಪಿಸುವುದು ತನ್ನ ಮನವಿಯ ಮತ್ತೊಂದು ಆಗ್ರಹವಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ

ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...