Homeಮುಖಪುಟನ್ಯಾಯಾಲಯದಲ್ಲೇ ಮತ ಎಣಿಕೆ, ನ್ಯಾಯಾಧೀಶರಿಂದಲೇ ಫಲಿತಾಂಶ ಘೋಷಣೆ: ಹೊಸ ಇತಿಹಾಸ ಬರೆದ ಸುಪ್ರೀಂ ಕೋರ್ಟ್

ನ್ಯಾಯಾಲಯದಲ್ಲೇ ಮತ ಎಣಿಕೆ, ನ್ಯಾಯಾಧೀಶರಿಂದಲೇ ಫಲಿತಾಂಶ ಘೋಷಣೆ: ಹೊಸ ಇತಿಹಾಸ ಬರೆದ ಸುಪ್ರೀಂ ಕೋರ್ಟ್

- Advertisement -
- Advertisement -

ಚಂಡೀಗಢ ಮೇಯರ್ ಚುನಾವಣೆಯ ಮತ ಎಣಿಕೆಗೆ ಸಾಕ್ಷಿಯಾಗಿದ್ದಲ್ಲದೆ, ಫಲಿತಾಂಶವನ್ನೂ ಘೋಷಿಸುವ ಮೂಲಕ ಸುಪ್ರೀಂ ಕೋರ್ಟ್‌ ಇಂದು (ಫೆ.20) ಹೊಸ ಇತಿಹಾಸ ನಿರ್ಮಿಸಿದೆ.

ಇಂದು ಬೆಳಗ್ಗೆ ಮತಪತ್ರಗಳನ್ನು ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ ಪೀಠ, ಎಂಟು ಮತಪತ್ರಗಳನ್ನು ವಿರೂಪಗೊಳಿಸಿ ಅಮಾನ್ಯಗೊಳಿಸಿದ ಚುನಾವಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿತು. ನಂತರದ ಪ್ರಕ್ರಿಯೆಯನ್ನು ಚುನಾವಣಾ ಆಯೋಗಕ್ಕೆ ನೀಡಲು ನಿರಾಕರಿಸಿತು. ಹೊಸದಾಗಿ ಚುನಾವಣೆ ನಡೆಸುವಂತೆ ಕೋರಿದ್ದ ಬಿಜೆಪಿಯ ಮನವಿಯನ್ನೂ ತಿರಸ್ಕರಿಸಿತು.

“ಚಂಡೀಗಢದಲ್ಲಿ ನಡೆದಂತಹ ಕುತಂತ್ರಗಳಿಂದ ಪ್ರಜಾಪ್ರಭುತ್ವ ಪ್ರಕ್ರಿಯೆಯು ನಿಷ್ಪ್ರಯೋಜಕವಾಗದಂತೆ ನೋಡಿಕೊಳ್ಳುವುದು ನ್ಯಾಯಾಲಯದ ಕರ್ತವ್ಯ. ಇಂತಹ ವಿರಳ ಸನ್ನಿವೇಶಗಳಲ್ಲಿ ನ್ಯಾಯಾಲಯವು ಮಧ್ಯಪ್ರವೇಶಿಸಿ, ಮೂಲಭೂತ ಪ್ರಜಾಸತ್ತಾತ್ಮಕ ಜನಮತವನ್ನು ಖಾತರಿಗೊಳಿಸಬೇಕಿದೆ” ಎಂದು ನ್ಯಾಯಾಧೀಶರು ಹೇಳಿದರು.

ಮತ ಎಣಿಕೆಯ ಬಳಿಕ ಅರ್ಜಿದಾರ ಎಎಪಿಯ ಕುಲದೀಪ್ ಕುಮಾರ್ ಚಂಡೀಗಢ ಮುನ್ಸಿಪಲ್ ಕಾರ್ಪೋರೇಷನ್‌ನ ಮೇಯರ್‌ ಹುದ್ದೆಗೆ ಮಾನ್ಯವಾಗಿ ಚುನಾಯಿತರಾಗಿದ್ದಾರೆ ಎಂದು ನ್ಯಾಯಾಧೀಶರು ಘೋಷಿಸಿದರು.

ಚುನಾವಣೆಯಲ್ಲಿ ಅಕ್ರಮವೆಸಗಿದ ಬಿಜೆಪಿಯ ಅಲ್ಪ ಸಂಖ್ಯಾತ ಘಟಕದ ಮಾಜಿ ಸದಸ್ಯರೂ ಆಗಿರುವ ಅನಿಲ್ ಮಾಸಿಹ್ ವಿರುದ್ದ ಕ್ರಮ ಕೈಗೊಳ್ಳುವಂತೆ ಮುಖ್ಯನ್ಯಾಯಮೂರ್ತಿ ಸೂಚಿಸಿದರು. 8 ಮತಪತ್ರಗಳು ವಿರೂಪಗೊಂಡಿದ್ದರಿಂದ ಅವುಗಳ ಮೇಲೆ ಗುರುತು ಹಾಕಿದೆ ಎಂದು ನ್ಯಾಯಾಲಯಕ್ಕೆ ಸುಳ್ಳು ಹೇಳಿದ್ದ ಅನಿಲ್ ಮಾಸಿಹ್ ವಿರುದ್ದ ಸಿಆರ್‌ಪಿಸಿ ಸೆಕ್ಷನ್ 340 ಅಡಿಯಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಮುಖ್ಯ ನ್ಯಾಯಮೂರ್ತಿ ಆದೇಶಿಸಿದರು. ಮಾಸಿಹ್ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು? ಎಂದು ಮೂರು ವಾರದೊಳಗೆ ಕಾರಣ ತಿಳಿಸುವಂತೆ ಹೇಳಿದರು.

ನ್ಯಾಯಾಲಯದ ಐತಿಹಾಸಿಕ ತೀರ್ಪಿನಿಂದ ಜನವರಿ 30ರಂದು ಚುನಾವಣಾಧಿಕಾರಿ ನೀಡಿದ್ದ ಫಲಿತಾಂಶ ರದ್ದಾಗಿದೆ. ಅಂದು ಮೇಯರ್ ಆಗಿ ಬಿಜೆಪಿಯ ಮನೋಜ್ ಸೋಂಕರ್ ಆಯ್ಕೆಯಾಗಿರುವುದೂ ರದ್ದುಗೊಂಡಿದೆ. ನ್ಯಾಯಯುತವಾಗಿ ಕಾಂಗ್ರೆಸ್-ಎಎಪಿಯ ಮೈತ್ರಿ ಅಭ್ಯರ್ಥಿ ಕುಲದೀಪ್ ಕುಮಾರ್ ಮೇಯರ್ ಪಟ್ಟಕ್ಕೇರಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ಎಎಪಿಯ ಕುಲದೀಪ್ ಕುಮಾರ್ ಅವರಿಗೆ ನ್ಯಾಯ ಸಿಗಲು ಮುಖ್ಯ ಕಾರಣ ಕಾಂಗ್ರೆಸ್ ಮತ್ತು ಎಎಪಿ ಜಂಟಿಯಾಗಿ ಬಿಡುಗಡೆ ಮಾಡಿದ್ದ ವಿಡಿಯೋ ಆಗಿದೆ. ಅದರಲ್ಲಿ ಚುನಾವಣಾಧಿಕಾರಿ ಅನಿಲ್ ಮಾಸಿಹ್ ಎಎಪಿಯ ಎಂಟು ಸದಸ್ಯರ ಮತ ಪತ್ರಗಳ ಮೇಲೆ ಉದ್ದೇಶಪೂರ್ವಕವಾಗಿ ಮಾರ್ಕ್‌ ಮಾಡಿರುವುದು ಸ್ಪಷ್ಟವಾಗಿ ರೆಕಾರ್ಡ್‌ ಆಗಿತ್ತು.

ನಿನ್ನೆ (ಫೆ.19) ಪ್ರಕರಣ ವಿಚಾರಣೆ ನಡೆಸಿದ್ದ ನ್ಯಾಯಪೀಠ, “ಮತಪತ್ರಗಳ ಮೇಲೆ ಮಾರ್ಕ್‌ ಯಾಕೆ ಮಾಡಿದ್ರಿ? ಸಹಿ ಹಾಕುವುದನ್ನು ಹೊರತು ಬೇರೆ ಮಾರ್ಕ್‌ ಮಾಡಲು ನಿಯಮಗಳ ಪ್ರಕಾರ ನಿಮಗೆ ಎಲ್ಲಿ ಅವಕಾಶವಿದೆ? ಎಂದು ಅನಿಲ್ ಮಾಸಿಹ್‌ಗೆ ಖಾರವಾಗಿ ಕೇಳಿತ್ತು.

ಒಟ್ಟಿನಲ್ಲಿ ಮೊದಲ ಬಾರಿಗೆ ಸುಪ್ರೀಂ ಕೋರ್ಟ್‌ನಲ್ಲೇ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳುವ ಮೂಲಕ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಪ್ರಕರಣವನ್ನು ನ್ಯಾಯಾಲಯ ಅತ್ಯಂತ ಮುತುವರ್ಜಿ ವಹಿಸಿ ತುರ್ತಾಗಿ ವಿಲೇವಾರಿ ಮಾಡಿದೆ.

ಇದನ್ನೂ ಓದಿ: ಎಎಪಿಯ ಕುಲದೀಪ್ ಕುಮಾರ್ ಚಂಡೀಗಢ ಮೇಯರ್: ಸುಪ್ರೀಂ ಕೋರ್ಟ್ ಮಹತ್ವದ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...