Homeಮುಖಪುಟನ್ಯಾಯಾಲಯದಲ್ಲೇ ಮತ ಎಣಿಕೆ, ನ್ಯಾಯಾಧೀಶರಿಂದಲೇ ಫಲಿತಾಂಶ ಘೋಷಣೆ: ಹೊಸ ಇತಿಹಾಸ ಬರೆದ ಸುಪ್ರೀಂ ಕೋರ್ಟ್

ನ್ಯಾಯಾಲಯದಲ್ಲೇ ಮತ ಎಣಿಕೆ, ನ್ಯಾಯಾಧೀಶರಿಂದಲೇ ಫಲಿತಾಂಶ ಘೋಷಣೆ: ಹೊಸ ಇತಿಹಾಸ ಬರೆದ ಸುಪ್ರೀಂ ಕೋರ್ಟ್

- Advertisement -
- Advertisement -

ಚಂಡೀಗಢ ಮೇಯರ್ ಚುನಾವಣೆಯ ಮತ ಎಣಿಕೆಗೆ ಸಾಕ್ಷಿಯಾಗಿದ್ದಲ್ಲದೆ, ಫಲಿತಾಂಶವನ್ನೂ ಘೋಷಿಸುವ ಮೂಲಕ ಸುಪ್ರೀಂ ಕೋರ್ಟ್‌ ಇಂದು (ಫೆ.20) ಹೊಸ ಇತಿಹಾಸ ನಿರ್ಮಿಸಿದೆ.

ಇಂದು ಬೆಳಗ್ಗೆ ಮತಪತ್ರಗಳನ್ನು ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ ಪೀಠ, ಎಂಟು ಮತಪತ್ರಗಳನ್ನು ವಿರೂಪಗೊಳಿಸಿ ಅಮಾನ್ಯಗೊಳಿಸಿದ ಚುನಾವಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿತು. ನಂತರದ ಪ್ರಕ್ರಿಯೆಯನ್ನು ಚುನಾವಣಾ ಆಯೋಗಕ್ಕೆ ನೀಡಲು ನಿರಾಕರಿಸಿತು. ಹೊಸದಾಗಿ ಚುನಾವಣೆ ನಡೆಸುವಂತೆ ಕೋರಿದ್ದ ಬಿಜೆಪಿಯ ಮನವಿಯನ್ನೂ ತಿರಸ್ಕರಿಸಿತು.

“ಚಂಡೀಗಢದಲ್ಲಿ ನಡೆದಂತಹ ಕುತಂತ್ರಗಳಿಂದ ಪ್ರಜಾಪ್ರಭುತ್ವ ಪ್ರಕ್ರಿಯೆಯು ನಿಷ್ಪ್ರಯೋಜಕವಾಗದಂತೆ ನೋಡಿಕೊಳ್ಳುವುದು ನ್ಯಾಯಾಲಯದ ಕರ್ತವ್ಯ. ಇಂತಹ ವಿರಳ ಸನ್ನಿವೇಶಗಳಲ್ಲಿ ನ್ಯಾಯಾಲಯವು ಮಧ್ಯಪ್ರವೇಶಿಸಿ, ಮೂಲಭೂತ ಪ್ರಜಾಸತ್ತಾತ್ಮಕ ಜನಮತವನ್ನು ಖಾತರಿಗೊಳಿಸಬೇಕಿದೆ” ಎಂದು ನ್ಯಾಯಾಧೀಶರು ಹೇಳಿದರು.

ಮತ ಎಣಿಕೆಯ ಬಳಿಕ ಅರ್ಜಿದಾರ ಎಎಪಿಯ ಕುಲದೀಪ್ ಕುಮಾರ್ ಚಂಡೀಗಢ ಮುನ್ಸಿಪಲ್ ಕಾರ್ಪೋರೇಷನ್‌ನ ಮೇಯರ್‌ ಹುದ್ದೆಗೆ ಮಾನ್ಯವಾಗಿ ಚುನಾಯಿತರಾಗಿದ್ದಾರೆ ಎಂದು ನ್ಯಾಯಾಧೀಶರು ಘೋಷಿಸಿದರು.

ಚುನಾವಣೆಯಲ್ಲಿ ಅಕ್ರಮವೆಸಗಿದ ಬಿಜೆಪಿಯ ಅಲ್ಪ ಸಂಖ್ಯಾತ ಘಟಕದ ಮಾಜಿ ಸದಸ್ಯರೂ ಆಗಿರುವ ಅನಿಲ್ ಮಾಸಿಹ್ ವಿರುದ್ದ ಕ್ರಮ ಕೈಗೊಳ್ಳುವಂತೆ ಮುಖ್ಯನ್ಯಾಯಮೂರ್ತಿ ಸೂಚಿಸಿದರು. 8 ಮತಪತ್ರಗಳು ವಿರೂಪಗೊಂಡಿದ್ದರಿಂದ ಅವುಗಳ ಮೇಲೆ ಗುರುತು ಹಾಕಿದೆ ಎಂದು ನ್ಯಾಯಾಲಯಕ್ಕೆ ಸುಳ್ಳು ಹೇಳಿದ್ದ ಅನಿಲ್ ಮಾಸಿಹ್ ವಿರುದ್ದ ಸಿಆರ್‌ಪಿಸಿ ಸೆಕ್ಷನ್ 340 ಅಡಿಯಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಮುಖ್ಯ ನ್ಯಾಯಮೂರ್ತಿ ಆದೇಶಿಸಿದರು. ಮಾಸಿಹ್ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು? ಎಂದು ಮೂರು ವಾರದೊಳಗೆ ಕಾರಣ ತಿಳಿಸುವಂತೆ ಹೇಳಿದರು.

ನ್ಯಾಯಾಲಯದ ಐತಿಹಾಸಿಕ ತೀರ್ಪಿನಿಂದ ಜನವರಿ 30ರಂದು ಚುನಾವಣಾಧಿಕಾರಿ ನೀಡಿದ್ದ ಫಲಿತಾಂಶ ರದ್ದಾಗಿದೆ. ಅಂದು ಮೇಯರ್ ಆಗಿ ಬಿಜೆಪಿಯ ಮನೋಜ್ ಸೋಂಕರ್ ಆಯ್ಕೆಯಾಗಿರುವುದೂ ರದ್ದುಗೊಂಡಿದೆ. ನ್ಯಾಯಯುತವಾಗಿ ಕಾಂಗ್ರೆಸ್-ಎಎಪಿಯ ಮೈತ್ರಿ ಅಭ್ಯರ್ಥಿ ಕುಲದೀಪ್ ಕುಮಾರ್ ಮೇಯರ್ ಪಟ್ಟಕ್ಕೇರಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ಎಎಪಿಯ ಕುಲದೀಪ್ ಕುಮಾರ್ ಅವರಿಗೆ ನ್ಯಾಯ ಸಿಗಲು ಮುಖ್ಯ ಕಾರಣ ಕಾಂಗ್ರೆಸ್ ಮತ್ತು ಎಎಪಿ ಜಂಟಿಯಾಗಿ ಬಿಡುಗಡೆ ಮಾಡಿದ್ದ ವಿಡಿಯೋ ಆಗಿದೆ. ಅದರಲ್ಲಿ ಚುನಾವಣಾಧಿಕಾರಿ ಅನಿಲ್ ಮಾಸಿಹ್ ಎಎಪಿಯ ಎಂಟು ಸದಸ್ಯರ ಮತ ಪತ್ರಗಳ ಮೇಲೆ ಉದ್ದೇಶಪೂರ್ವಕವಾಗಿ ಮಾರ್ಕ್‌ ಮಾಡಿರುವುದು ಸ್ಪಷ್ಟವಾಗಿ ರೆಕಾರ್ಡ್‌ ಆಗಿತ್ತು.

ನಿನ್ನೆ (ಫೆ.19) ಪ್ರಕರಣ ವಿಚಾರಣೆ ನಡೆಸಿದ್ದ ನ್ಯಾಯಪೀಠ, “ಮತಪತ್ರಗಳ ಮೇಲೆ ಮಾರ್ಕ್‌ ಯಾಕೆ ಮಾಡಿದ್ರಿ? ಸಹಿ ಹಾಕುವುದನ್ನು ಹೊರತು ಬೇರೆ ಮಾರ್ಕ್‌ ಮಾಡಲು ನಿಯಮಗಳ ಪ್ರಕಾರ ನಿಮಗೆ ಎಲ್ಲಿ ಅವಕಾಶವಿದೆ? ಎಂದು ಅನಿಲ್ ಮಾಸಿಹ್‌ಗೆ ಖಾರವಾಗಿ ಕೇಳಿತ್ತು.

ಒಟ್ಟಿನಲ್ಲಿ ಮೊದಲ ಬಾರಿಗೆ ಸುಪ್ರೀಂ ಕೋರ್ಟ್‌ನಲ್ಲೇ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳುವ ಮೂಲಕ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಪ್ರಕರಣವನ್ನು ನ್ಯಾಯಾಲಯ ಅತ್ಯಂತ ಮುತುವರ್ಜಿ ವಹಿಸಿ ತುರ್ತಾಗಿ ವಿಲೇವಾರಿ ಮಾಡಿದೆ.

ಇದನ್ನೂ ಓದಿ: ಎಎಪಿಯ ಕುಲದೀಪ್ ಕುಮಾರ್ ಚಂಡೀಗಢ ಮೇಯರ್: ಸುಪ್ರೀಂ ಕೋರ್ಟ್ ಮಹತ್ವದ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...