Homeಮುಖಪುಟನ್ಯಾಯಾಲಯದಲ್ಲೇ ಮತ ಎಣಿಕೆ, ನ್ಯಾಯಾಧೀಶರಿಂದಲೇ ಫಲಿತಾಂಶ ಘೋಷಣೆ: ಹೊಸ ಇತಿಹಾಸ ಬರೆದ ಸುಪ್ರೀಂ ಕೋರ್ಟ್

ನ್ಯಾಯಾಲಯದಲ್ಲೇ ಮತ ಎಣಿಕೆ, ನ್ಯಾಯಾಧೀಶರಿಂದಲೇ ಫಲಿತಾಂಶ ಘೋಷಣೆ: ಹೊಸ ಇತಿಹಾಸ ಬರೆದ ಸುಪ್ರೀಂ ಕೋರ್ಟ್

- Advertisement -
- Advertisement -

ಚಂಡೀಗಢ ಮೇಯರ್ ಚುನಾವಣೆಯ ಮತ ಎಣಿಕೆಗೆ ಸಾಕ್ಷಿಯಾಗಿದ್ದಲ್ಲದೆ, ಫಲಿತಾಂಶವನ್ನೂ ಘೋಷಿಸುವ ಮೂಲಕ ಸುಪ್ರೀಂ ಕೋರ್ಟ್‌ ಇಂದು (ಫೆ.20) ಹೊಸ ಇತಿಹಾಸ ನಿರ್ಮಿಸಿದೆ.

ಇಂದು ಬೆಳಗ್ಗೆ ಮತಪತ್ರಗಳನ್ನು ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ ಪೀಠ, ಎಂಟು ಮತಪತ್ರಗಳನ್ನು ವಿರೂಪಗೊಳಿಸಿ ಅಮಾನ್ಯಗೊಳಿಸಿದ ಚುನಾವಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿತು. ನಂತರದ ಪ್ರಕ್ರಿಯೆಯನ್ನು ಚುನಾವಣಾ ಆಯೋಗಕ್ಕೆ ನೀಡಲು ನಿರಾಕರಿಸಿತು. ಹೊಸದಾಗಿ ಚುನಾವಣೆ ನಡೆಸುವಂತೆ ಕೋರಿದ್ದ ಬಿಜೆಪಿಯ ಮನವಿಯನ್ನೂ ತಿರಸ್ಕರಿಸಿತು.

“ಚಂಡೀಗಢದಲ್ಲಿ ನಡೆದಂತಹ ಕುತಂತ್ರಗಳಿಂದ ಪ್ರಜಾಪ್ರಭುತ್ವ ಪ್ರಕ್ರಿಯೆಯು ನಿಷ್ಪ್ರಯೋಜಕವಾಗದಂತೆ ನೋಡಿಕೊಳ್ಳುವುದು ನ್ಯಾಯಾಲಯದ ಕರ್ತವ್ಯ. ಇಂತಹ ವಿರಳ ಸನ್ನಿವೇಶಗಳಲ್ಲಿ ನ್ಯಾಯಾಲಯವು ಮಧ್ಯಪ್ರವೇಶಿಸಿ, ಮೂಲಭೂತ ಪ್ರಜಾಸತ್ತಾತ್ಮಕ ಜನಮತವನ್ನು ಖಾತರಿಗೊಳಿಸಬೇಕಿದೆ” ಎಂದು ನ್ಯಾಯಾಧೀಶರು ಹೇಳಿದರು.

ಮತ ಎಣಿಕೆಯ ಬಳಿಕ ಅರ್ಜಿದಾರ ಎಎಪಿಯ ಕುಲದೀಪ್ ಕುಮಾರ್ ಚಂಡೀಗಢ ಮುನ್ಸಿಪಲ್ ಕಾರ್ಪೋರೇಷನ್‌ನ ಮೇಯರ್‌ ಹುದ್ದೆಗೆ ಮಾನ್ಯವಾಗಿ ಚುನಾಯಿತರಾಗಿದ್ದಾರೆ ಎಂದು ನ್ಯಾಯಾಧೀಶರು ಘೋಷಿಸಿದರು.

ಚುನಾವಣೆಯಲ್ಲಿ ಅಕ್ರಮವೆಸಗಿದ ಬಿಜೆಪಿಯ ಅಲ್ಪ ಸಂಖ್ಯಾತ ಘಟಕದ ಮಾಜಿ ಸದಸ್ಯರೂ ಆಗಿರುವ ಅನಿಲ್ ಮಾಸಿಹ್ ವಿರುದ್ದ ಕ್ರಮ ಕೈಗೊಳ್ಳುವಂತೆ ಮುಖ್ಯನ್ಯಾಯಮೂರ್ತಿ ಸೂಚಿಸಿದರು. 8 ಮತಪತ್ರಗಳು ವಿರೂಪಗೊಂಡಿದ್ದರಿಂದ ಅವುಗಳ ಮೇಲೆ ಗುರುತು ಹಾಕಿದೆ ಎಂದು ನ್ಯಾಯಾಲಯಕ್ಕೆ ಸುಳ್ಳು ಹೇಳಿದ್ದ ಅನಿಲ್ ಮಾಸಿಹ್ ವಿರುದ್ದ ಸಿಆರ್‌ಪಿಸಿ ಸೆಕ್ಷನ್ 340 ಅಡಿಯಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಮುಖ್ಯ ನ್ಯಾಯಮೂರ್ತಿ ಆದೇಶಿಸಿದರು. ಮಾಸಿಹ್ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು? ಎಂದು ಮೂರು ವಾರದೊಳಗೆ ಕಾರಣ ತಿಳಿಸುವಂತೆ ಹೇಳಿದರು.

ನ್ಯಾಯಾಲಯದ ಐತಿಹಾಸಿಕ ತೀರ್ಪಿನಿಂದ ಜನವರಿ 30ರಂದು ಚುನಾವಣಾಧಿಕಾರಿ ನೀಡಿದ್ದ ಫಲಿತಾಂಶ ರದ್ದಾಗಿದೆ. ಅಂದು ಮೇಯರ್ ಆಗಿ ಬಿಜೆಪಿಯ ಮನೋಜ್ ಸೋಂಕರ್ ಆಯ್ಕೆಯಾಗಿರುವುದೂ ರದ್ದುಗೊಂಡಿದೆ. ನ್ಯಾಯಯುತವಾಗಿ ಕಾಂಗ್ರೆಸ್-ಎಎಪಿಯ ಮೈತ್ರಿ ಅಭ್ಯರ್ಥಿ ಕುಲದೀಪ್ ಕುಮಾರ್ ಮೇಯರ್ ಪಟ್ಟಕ್ಕೇರಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ಎಎಪಿಯ ಕುಲದೀಪ್ ಕುಮಾರ್ ಅವರಿಗೆ ನ್ಯಾಯ ಸಿಗಲು ಮುಖ್ಯ ಕಾರಣ ಕಾಂಗ್ರೆಸ್ ಮತ್ತು ಎಎಪಿ ಜಂಟಿಯಾಗಿ ಬಿಡುಗಡೆ ಮಾಡಿದ್ದ ವಿಡಿಯೋ ಆಗಿದೆ. ಅದರಲ್ಲಿ ಚುನಾವಣಾಧಿಕಾರಿ ಅನಿಲ್ ಮಾಸಿಹ್ ಎಎಪಿಯ ಎಂಟು ಸದಸ್ಯರ ಮತ ಪತ್ರಗಳ ಮೇಲೆ ಉದ್ದೇಶಪೂರ್ವಕವಾಗಿ ಮಾರ್ಕ್‌ ಮಾಡಿರುವುದು ಸ್ಪಷ್ಟವಾಗಿ ರೆಕಾರ್ಡ್‌ ಆಗಿತ್ತು.

ನಿನ್ನೆ (ಫೆ.19) ಪ್ರಕರಣ ವಿಚಾರಣೆ ನಡೆಸಿದ್ದ ನ್ಯಾಯಪೀಠ, “ಮತಪತ್ರಗಳ ಮೇಲೆ ಮಾರ್ಕ್‌ ಯಾಕೆ ಮಾಡಿದ್ರಿ? ಸಹಿ ಹಾಕುವುದನ್ನು ಹೊರತು ಬೇರೆ ಮಾರ್ಕ್‌ ಮಾಡಲು ನಿಯಮಗಳ ಪ್ರಕಾರ ನಿಮಗೆ ಎಲ್ಲಿ ಅವಕಾಶವಿದೆ? ಎಂದು ಅನಿಲ್ ಮಾಸಿಹ್‌ಗೆ ಖಾರವಾಗಿ ಕೇಳಿತ್ತು.

ಒಟ್ಟಿನಲ್ಲಿ ಮೊದಲ ಬಾರಿಗೆ ಸುಪ್ರೀಂ ಕೋರ್ಟ್‌ನಲ್ಲೇ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳುವ ಮೂಲಕ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಪ್ರಕರಣವನ್ನು ನ್ಯಾಯಾಲಯ ಅತ್ಯಂತ ಮುತುವರ್ಜಿ ವಹಿಸಿ ತುರ್ತಾಗಿ ವಿಲೇವಾರಿ ಮಾಡಿದೆ.

ಇದನ್ನೂ ಓದಿ: ಎಎಪಿಯ ಕುಲದೀಪ್ ಕುಮಾರ್ ಚಂಡೀಗಢ ಮೇಯರ್: ಸುಪ್ರೀಂ ಕೋರ್ಟ್ ಮಹತ್ವದ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...