Homeಮುಖಪುಟನ್ಯಾಯಾಲಯದಲ್ಲೇ ಮತ ಎಣಿಕೆ, ನ್ಯಾಯಾಧೀಶರಿಂದಲೇ ಫಲಿತಾಂಶ ಘೋಷಣೆ: ಹೊಸ ಇತಿಹಾಸ ಬರೆದ ಸುಪ್ರೀಂ ಕೋರ್ಟ್

ನ್ಯಾಯಾಲಯದಲ್ಲೇ ಮತ ಎಣಿಕೆ, ನ್ಯಾಯಾಧೀಶರಿಂದಲೇ ಫಲಿತಾಂಶ ಘೋಷಣೆ: ಹೊಸ ಇತಿಹಾಸ ಬರೆದ ಸುಪ್ರೀಂ ಕೋರ್ಟ್

- Advertisement -
- Advertisement -

ಚಂಡೀಗಢ ಮೇಯರ್ ಚುನಾವಣೆಯ ಮತ ಎಣಿಕೆಗೆ ಸಾಕ್ಷಿಯಾಗಿದ್ದಲ್ಲದೆ, ಫಲಿತಾಂಶವನ್ನೂ ಘೋಷಿಸುವ ಮೂಲಕ ಸುಪ್ರೀಂ ಕೋರ್ಟ್‌ ಇಂದು (ಫೆ.20) ಹೊಸ ಇತಿಹಾಸ ನಿರ್ಮಿಸಿದೆ.

ಇಂದು ಬೆಳಗ್ಗೆ ಮತಪತ್ರಗಳನ್ನು ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ ಪೀಠ, ಎಂಟು ಮತಪತ್ರಗಳನ್ನು ವಿರೂಪಗೊಳಿಸಿ ಅಮಾನ್ಯಗೊಳಿಸಿದ ಚುನಾವಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿತು. ನಂತರದ ಪ್ರಕ್ರಿಯೆಯನ್ನು ಚುನಾವಣಾ ಆಯೋಗಕ್ಕೆ ನೀಡಲು ನಿರಾಕರಿಸಿತು. ಹೊಸದಾಗಿ ಚುನಾವಣೆ ನಡೆಸುವಂತೆ ಕೋರಿದ್ದ ಬಿಜೆಪಿಯ ಮನವಿಯನ್ನೂ ತಿರಸ್ಕರಿಸಿತು.

“ಚಂಡೀಗಢದಲ್ಲಿ ನಡೆದಂತಹ ಕುತಂತ್ರಗಳಿಂದ ಪ್ರಜಾಪ್ರಭುತ್ವ ಪ್ರಕ್ರಿಯೆಯು ನಿಷ್ಪ್ರಯೋಜಕವಾಗದಂತೆ ನೋಡಿಕೊಳ್ಳುವುದು ನ್ಯಾಯಾಲಯದ ಕರ್ತವ್ಯ. ಇಂತಹ ವಿರಳ ಸನ್ನಿವೇಶಗಳಲ್ಲಿ ನ್ಯಾಯಾಲಯವು ಮಧ್ಯಪ್ರವೇಶಿಸಿ, ಮೂಲಭೂತ ಪ್ರಜಾಸತ್ತಾತ್ಮಕ ಜನಮತವನ್ನು ಖಾತರಿಗೊಳಿಸಬೇಕಿದೆ” ಎಂದು ನ್ಯಾಯಾಧೀಶರು ಹೇಳಿದರು.

ಮತ ಎಣಿಕೆಯ ಬಳಿಕ ಅರ್ಜಿದಾರ ಎಎಪಿಯ ಕುಲದೀಪ್ ಕುಮಾರ್ ಚಂಡೀಗಢ ಮುನ್ಸಿಪಲ್ ಕಾರ್ಪೋರೇಷನ್‌ನ ಮೇಯರ್‌ ಹುದ್ದೆಗೆ ಮಾನ್ಯವಾಗಿ ಚುನಾಯಿತರಾಗಿದ್ದಾರೆ ಎಂದು ನ್ಯಾಯಾಧೀಶರು ಘೋಷಿಸಿದರು.

ಚುನಾವಣೆಯಲ್ಲಿ ಅಕ್ರಮವೆಸಗಿದ ಬಿಜೆಪಿಯ ಅಲ್ಪ ಸಂಖ್ಯಾತ ಘಟಕದ ಮಾಜಿ ಸದಸ್ಯರೂ ಆಗಿರುವ ಅನಿಲ್ ಮಾಸಿಹ್ ವಿರುದ್ದ ಕ್ರಮ ಕೈಗೊಳ್ಳುವಂತೆ ಮುಖ್ಯನ್ಯಾಯಮೂರ್ತಿ ಸೂಚಿಸಿದರು. 8 ಮತಪತ್ರಗಳು ವಿರೂಪಗೊಂಡಿದ್ದರಿಂದ ಅವುಗಳ ಮೇಲೆ ಗುರುತು ಹಾಕಿದೆ ಎಂದು ನ್ಯಾಯಾಲಯಕ್ಕೆ ಸುಳ್ಳು ಹೇಳಿದ್ದ ಅನಿಲ್ ಮಾಸಿಹ್ ವಿರುದ್ದ ಸಿಆರ್‌ಪಿಸಿ ಸೆಕ್ಷನ್ 340 ಅಡಿಯಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಮುಖ್ಯ ನ್ಯಾಯಮೂರ್ತಿ ಆದೇಶಿಸಿದರು. ಮಾಸಿಹ್ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು? ಎಂದು ಮೂರು ವಾರದೊಳಗೆ ಕಾರಣ ತಿಳಿಸುವಂತೆ ಹೇಳಿದರು.

ನ್ಯಾಯಾಲಯದ ಐತಿಹಾಸಿಕ ತೀರ್ಪಿನಿಂದ ಜನವರಿ 30ರಂದು ಚುನಾವಣಾಧಿಕಾರಿ ನೀಡಿದ್ದ ಫಲಿತಾಂಶ ರದ್ದಾಗಿದೆ. ಅಂದು ಮೇಯರ್ ಆಗಿ ಬಿಜೆಪಿಯ ಮನೋಜ್ ಸೋಂಕರ್ ಆಯ್ಕೆಯಾಗಿರುವುದೂ ರದ್ದುಗೊಂಡಿದೆ. ನ್ಯಾಯಯುತವಾಗಿ ಕಾಂಗ್ರೆಸ್-ಎಎಪಿಯ ಮೈತ್ರಿ ಅಭ್ಯರ್ಥಿ ಕುಲದೀಪ್ ಕುಮಾರ್ ಮೇಯರ್ ಪಟ್ಟಕ್ಕೇರಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ಎಎಪಿಯ ಕುಲದೀಪ್ ಕುಮಾರ್ ಅವರಿಗೆ ನ್ಯಾಯ ಸಿಗಲು ಮುಖ್ಯ ಕಾರಣ ಕಾಂಗ್ರೆಸ್ ಮತ್ತು ಎಎಪಿ ಜಂಟಿಯಾಗಿ ಬಿಡುಗಡೆ ಮಾಡಿದ್ದ ವಿಡಿಯೋ ಆಗಿದೆ. ಅದರಲ್ಲಿ ಚುನಾವಣಾಧಿಕಾರಿ ಅನಿಲ್ ಮಾಸಿಹ್ ಎಎಪಿಯ ಎಂಟು ಸದಸ್ಯರ ಮತ ಪತ್ರಗಳ ಮೇಲೆ ಉದ್ದೇಶಪೂರ್ವಕವಾಗಿ ಮಾರ್ಕ್‌ ಮಾಡಿರುವುದು ಸ್ಪಷ್ಟವಾಗಿ ರೆಕಾರ್ಡ್‌ ಆಗಿತ್ತು.

ನಿನ್ನೆ (ಫೆ.19) ಪ್ರಕರಣ ವಿಚಾರಣೆ ನಡೆಸಿದ್ದ ನ್ಯಾಯಪೀಠ, “ಮತಪತ್ರಗಳ ಮೇಲೆ ಮಾರ್ಕ್‌ ಯಾಕೆ ಮಾಡಿದ್ರಿ? ಸಹಿ ಹಾಕುವುದನ್ನು ಹೊರತು ಬೇರೆ ಮಾರ್ಕ್‌ ಮಾಡಲು ನಿಯಮಗಳ ಪ್ರಕಾರ ನಿಮಗೆ ಎಲ್ಲಿ ಅವಕಾಶವಿದೆ? ಎಂದು ಅನಿಲ್ ಮಾಸಿಹ್‌ಗೆ ಖಾರವಾಗಿ ಕೇಳಿತ್ತು.

ಒಟ್ಟಿನಲ್ಲಿ ಮೊದಲ ಬಾರಿಗೆ ಸುಪ್ರೀಂ ಕೋರ್ಟ್‌ನಲ್ಲೇ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳುವ ಮೂಲಕ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಪ್ರಕರಣವನ್ನು ನ್ಯಾಯಾಲಯ ಅತ್ಯಂತ ಮುತುವರ್ಜಿ ವಹಿಸಿ ತುರ್ತಾಗಿ ವಿಲೇವಾರಿ ಮಾಡಿದೆ.

ಇದನ್ನೂ ಓದಿ: ಎಎಪಿಯ ಕುಲದೀಪ್ ಕುಮಾರ್ ಚಂಡೀಗಢ ಮೇಯರ್: ಸುಪ್ರೀಂ ಕೋರ್ಟ್ ಮಹತ್ವದ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...