Homeಅಂಕಣಗಳುಮಹಿಳೆಯರ ಈ ಮಹತ್ವದ ಆಂದೋಲನದ ಜೊತೆ ನಾನಿದ್ದೇನೆ

ಮಹಿಳೆಯರ ಈ ಮಹತ್ವದ ಆಂದೋಲನದ ಜೊತೆ ನಾನಿದ್ದೇನೆ

- Advertisement -
- Advertisement -

| ಎಚ್.ಎಸ್. ದೊರೆಸ್ವಾಮಿ |

ಮದ್ಯ ನಿಷೇಧ ಆಂದೋಲನ – ಕರ್ನಾಟಕ ಸಂಸ್ಥೆಯ ಸ್ವರ್ಣಾ ಭಟ್, ವಿದ್ಯಾ ಪಾಟೀಲ್, ಅಭಯ್ ಇವರುಗಳ ನೇತೃತ್ವದಲ್ಲಿ 100 ಆಯ್ದ ಮಹಿಳೆಯರು ನವೆಂಬರ್ 7ನೇ ತಾರೀಖು ಬೆಂಗಳೂರು ನಗರ ರೈಲ್ವೆ ನಿಲ್ದಾಣದಲ್ಲಿ ಬಂದು ಇಳಿದರು. ರಾಯಚೂರು, ಬಳ್ಳಾರಿ, ಬಾಗಲಕೋಟೆ, ಧಾರವಾಡ, ಬೀದರ್, ಕಲಬುರ್ಗಿ, ಗದಗ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳ ಮಹಿಳೆಯರು ಹೋರಾಟದಲ್ಲಿ ಭಾಗವಹಿಸಲು ಬಂದಿದ್ದರು. ಪೊಲೀಸ್ ಅಧಿಕಾರಿಗಳನ್ನು 4-6 ದಿನಗಳ ಹಿಂದೆಯೇ ಕಂಡ ಮಹಿಳೆಯರು ಈ ಹೋರಾಟಕ್ಕೆ ಸ್ಥಳ ಒದಗಿಸಲು ಅರ್ಜಿ ಸಲ್ಲಿಸಿದ್ದರೂ, ಸ್ಥಳ ನಿಗದಿ ಮಾಡಿರಲಿಲ್ಲ. ಹೋರಾಟಗಾರ್ತಿ ಮಹಿಳೆಯರನ್ನು ಪೊಲೀಸರು ತಡೆದರು. ಆದ್ದರಿಂದ ಹೋರಾಟಗಾರರು ಬೆಂಗಳೂರು ನಗರ ರೈಲ್ವೆ ನಿಲ್ದಾಣದ ಹೊರಗೆ, ಆರ್.ಎಂ.ಎಸ್. ಕಚೇರಿಯ ಮುಂಭಾಗದಲ್ಲಿರುವ ಫುಟ್‍ಬಾತ್ ಮೇಲೆ ಕುಳಿತರು. ಪೊಲೀಸರು ‘ನಿಮ್ಮ ಪ್ರತಿಭಟನೆಗೆ ಅವಕಾಶ ಕೊಡುವುದಿಲ್ಲ. ನಿಮ್ಮೂರುಗಳಿಗೆ ಹೋಗಿ’ ಎಂದರು.

ಪ್ರಜಾಪ್ರಭುತ್ವ ನಮಗೆ ಕೆಲವು ಹಕ್ಕುಗಳನ್ನು ಕೊಟ್ಟಿದೆ. ಶಾಂತಿಯುತವಾಗಿ ಪ್ರತಿಭಟನೆ ಮಾಡುವುದು ಅದರಲ್ಲಿ ಒಂದು ಎಂದು ಹೋರಾಟಗಾರ್ತಿ ನಾಯಕಿ ಸ್ವರ್ಣಾ ಭಟ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಈ ಮಧ್ಯೆ ರೈಲ್ವೆ ಪೊಲೀಸರು ಇಲ್ಲಿ ಪ್ರತಿಭಟನೆ ಮಾಡಲು ನಾವು ಬಿಡುವುದಿಲ್ಲ. ನೀವು ಇಲ್ಲಿಂದ ಹೊರಟುಹೋಗಿ ಎಂದು ಧಮ್ಕಿ ಹಾಕಿದರು. ಲಾಠಿ ಹಿಡಿದು ಪೊಲೀಸರು ಸಿದ್ಧರಾಗಿದ್ದರು. ಅಶ್ರುವಾಯು ವಾಹನವನ್ನೂ ತಂದು ನಿಲ್ಲಿಸಿದ್ದರು.

ಈ ವೇಳೆಗೆ ಹೋರಾಟಗಾರರನ್ನು ಕೂಡಿಕೊಳ್ಳಲು ನಾನು ಮತ್ತು ಬಾಬು ಹೋದೆವು. ಹೋರಾಟಗಾರ ಮಿತ್ರ ಅಭಯ್ ಪರಿಸ್ಥಿತಿಯನ್ನು ವಿವರವಾಗಿ ಹೇಳಿದರು. ಪೊಲೀಸ್ ಅಧಿಕಾರಿಗಳು ನಾವು ಹೋರಾಟ ಮಾಡಲು ಸ್ಥಳ ನಿಗದಿ ಮಾಡಿಕೊಟ್ಟಿಲ್ಲ. ಅರ್ಜಿ ಕೊಟ್ಟು 4 ದಿನಗಳಾಗಿವೆ. ನಿಮಗೆ ಜಾಗ ಗೊತ್ತು ಮಾಡಿಲ್ಲ. ನೀವು ನಿಮ್ಮ ಊರುಗಳಿಗೆ ಹಿಂದಿರುಗಿ ಎನ್ನುತ್ತಿದ್ದಾರೆ. ನಾವು ಹೋರಾಟ ಮಾಡಲು ಬಂದವರು. ಅದಕ್ಕೆ ಸ್ಥಳ ಗೊತ್ತು ಮಾಡಿಕೊಡುವುದು ಪೊಲೀಸ್ ಅಧಿಕಾರಿಗಳ ಜವಾಬ್ದಾರಿ. ಅವರು ನಿರ್ಲಕ್ಷ್ಯ ತೋರಿದ್ದಾರೆ. ನಾವು ರೈಲ್ವೆ ಆವರಣದಲ್ಲೇ ಕುಳಿತು ಪ್ರತಿಭಟನೆ ಮಾಡುತ್ತೇವೆ. ಮುಖ್ಯಮಂತ್ರಿಗಳು ನಮ್ಮನ್ನು ಕರೆಸಿಕೊಂಡು ನಮ್ಮ ಅಹವಾಲನ್ನು ಕೇಳುವವರೆಗೂ ನಾವು ಈ ಸ್ಥಳ ಬಿಟ್ಟು ಹೋಗುವುದಿಲ್ಲ. ರೈಲ್ವೆ ಪೊಲೀಸರು ನಮ್ಮನ್ನೆಲ್ಲ ಬಂಧಿಸುವುದಾದರೆ ಬಂಧಿಸಲಿ’ ಎಂದು ನಾನು ಸಲಹೆ ಮಾಡಿದೆ.

ಸತ್ಯಾಗ್ರಹಿಗಳು ನನ್ನ ನಿಲುವನ್ನು ಅನುಮೋದಿಸಿದರು.

ಪೊಲೀಸರಿಗೆ ನಮ್ಮ ನಿಲುವು ಅಚಲ ಎಂದು ಮನವರಿಕೆಯಾಗಿ ಪೊಲೀಸರು ಪೆಚ್ಚಾದರು. ಅವರು ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಅವರಿಗೆ ವಿಚಾರ ತಿಳಿಸಿದರು. ಅವರು ‘ಹೋರಾಟದ ಪ್ರತಿನಿಧಿಗಳು ಮಾತುಕತೆಗೆ ಬನ್ನಿ. ದೊರೆಸ್ವಾಮಿಯವರನ್ನು ಕರೆತರಬೇಕಾಗಿಲ್ಲ’ ಎಂಬ ಸಂದೇಶ ಕಳಿಸಿದರು. ದೊರೆಸ್ವಾಮಿಯವರನ್ನು ಹೊರತು ಮಾಡಿ ನಿಯೋಗ ಬರಲು ನಾವು ತಯಾರಿಲ್ಲ’ ಎಂದರು ಹೋರಾಟಗಾರ ನೇತಾರರು.

ನಾನು ಬಹಳ ಹೊತ್ತು ಅಲ್ಲಿ ಕೂಡಲು ಸಾಧ್ಯವಿಲ್ಲ; ಮನೆಗೆ ಹೊರಟು ಹೋಗುತ್ತೇನೆ ಎಂದು ಉಪಮುಖ್ಯಮಂತ್ರಿಗಳು ಭಾವಿಸಿದ್ದರು. ಆದರೆ, ನಾನು ತೀರ್ಮಾನ ಮಾಡಿದ್ದೆ. ಇದನ್ನು ತಿಳಿದ ಉಪಮುಖ್ಯಮಂತ್ರಿಗಳು ‘ಈಗ ಬರುತ್ತೇನೆ, ಇಷ್ಟರಲ್ಲೇ ಬರುತ್ತೇನೆ’ ಎಂದು ಹೇಳುತ್ತಾ ಕಾಲ ಕಳೆದರು.

ಹೊಸಕೋಟೆಯ ಹೋರಾಟ ಮಿತ್ರ ‘ನಮ್ಮನ್ನು ಪೊಲೀಸರು ಅರೆಸ್ಟ್ ಮಾಡಲು ತೀರ್ಮಾನಿಸಿದ್ದರು. ಎರಡು ಕೆಎಸ್‍ಆರ್‍ಟಿಸಿ ಬಸ್‍ಗಳನ್ನೂ ಕರೆಸಿದ್ದರು. ನೀವು ಬರುವುದು ಸ್ವಲ್ಪ ತಡವಾಗಿದ್ದರೆ ನಮ್ಮನ್ನೆಲ್ಲ ಅರೆಸ್ಟ್ ಮಾಡಿ ಬಸ್ಸುಗಳಲ್ಲಿ ಕರೆದುಕೊಂಡು ಹೊರಟು ಹೋಗುತ್ತಿದ್ದರು. ನೀವು ಬಂದಿರಿ. ಪೊಲೀಸರ ಆಲೋಚನೆ ಬದಲಾಯಿತು ಎಂದು ಹೇಳಿದರು. ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣರವರು ಕೊನೆಗೂ 8 ಗಂಟೆಗೆ ರೈಲ್ವೆ ನಿಲ್ದಾಣದ ಆವರಣಕ್ಕೆ ಬಂದರು. ಹೋರಾಟಗಾರ್ತಿ ವಿದ್ಯಾ ಪಾಟೀಲ್ ಮಾತನಾಡಿ ‘ನಾವು ಈಗ ಪೂರ್ಣ ಮದ್ಯ ಪ್ರತಿಬಂಧ ಕೇಳಲು ಬಂದಿಲ್ಲ. ಹಂತಹಂತವಾಗಿ ಮದ್ಯ ನಿಷೇಧ ಮಾಡಿ’ ಎಂದು ವಿನಂತಿಸಿಕೊಂಡು ‘ಈ ಕೆಲವು ಕ್ರಮಗಳನ್ನು ಕೂಡಲೇ ಕೈಗೊಳ್ಳಿ ಎಂದು ಮುಖ್ಯಮಂತ್ರಿಯವರನ್ನು ಪ್ರಾರ್ಥಿಸಲು ಬಂದಿದ್ದೇವೆ. ಕೂಡಲೇ ನಿಯೋಗದ ಭೇಟಿಗೆ ಅವಕಾಶ ಮಾಡಿಕೊಡಿ’ ಎಂದು ಪ್ರಾರ್ಥಿಸಿದರು.

ಮದ್ಯ ನಿಷೇಧ ಆಂದೋಲನದವರು ಮುಂಚೆಯೇ ಅವರಿಗೆ ಕಳಿಸಿದ್ದ ಪತ್ರ ಇಂತಿದೆ:

ಮುಖ್ಯಮಂತ್ರಿಗಳಾದ ಶ್ರೀ ಯಡಿಯೂರಪ್ಪನವರಿಗೆ:

ಮಹಿಳಾ ನೇತೃತ್ವದ ಮದ್ಯ ನಿಷೇಧ ಆಂದೋಲನ ಕರ್ನಾಟಕ, ಸುಮಾರು ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧವಾಗಬೇಕೆಂಬ ಹಕ್ಕೊತ್ತಾಯವನ್ನಿಟ್ಟುಕೊಂಡು ಹೋರಾಟ ನಡೆಸುತ್ತಿದೆ. ಆರು ತಿಂಗಳ ಹಿಂದೆ 3000 ಮಹಿಳೆಯರು ಪಾದಯಾತ್ರೆ ಮೂಲಕ ಸರ್ಕಾರಕ್ಕೆ ತಮ್ಮ ಬೇಡಿಕೆಗಳನ್ನು ಮುಟ್ಟಿಸಿದರೂ ಮಹಿಳೆಯರಿಗೆ ಕಿಂಚಿತ್ತೂ ಗೌರವ ನೀಡಲಿಲ್ಲ, ಧ್ವನಿಗೆ ಕಿವಿಗೊಡಲಿಲ್ಲ.

ಹಾಗಾಗಿ ಈಗ ಮಹಿಳೆಯರು ನವೆಂಬರ್ 7ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ನಡೆಸಬೇಕೆಂದು ತೀರ್ಮಾನಿಸಿದ್ದಾರೆ. ಈಗ ಈ ಚಳವಳಿ ಕೇವಲ ರಾಜ್ಯದ ಚಳವಳಿಯಾಗಿ ಉಳಿಯದೆ ರಾಷ್ಟ್ರ ಮಟ್ಟದ ಚಿಂತಕರೂ ಈ ಹೋರಾಟವನ್ನು ಬೆಂಬಲಿಸಿ ಭಾಗವಹಿಸಲಿದ್ದಾರೆ.

ಗಾಂಧಿ ಜಯಂತಿಯ 150ನೇ ವರ್ಷಾಚರಣೆ ಸಂದರ್ಭದಲ್ಲಿ ಅವರ ಮದ್ಯ ನಿಷೇಧದ ಕನಸನ್ನು ನನಸು ಮಾಡಿ ಕರ್ನಾಟಕ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ಮಾಡಬೇಕೆಂಬುದೇ ಈ ಮಹಿಳೆಯರ ಬೇಡಿಕೆ.
ನವೆಂಬರ್ 7ರಿಂದ ಈ ಕೆಳಗಿನ ಬೇಡಿಕೆಗಳನ್ನು ಮುಂದಿಷ್ಟು ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.

1. ಸಂವಿಧಾನದ 73ನೇ ತಿದ್ದುಪಡಿಯ ಆಶಯವನ್ನು ಅನುಷ್ಠಾನಗೊಳಿಸುವುದು (ಗ್ರಾಮಗಳ ಭವಿಷ್ಯವನ್ನು ನಿರ್ಧರಿಸುವ ಅಧಿಕಾರವನ್ನ ಗ್ರಾಮ ಸಭೆಗೆ ನೀಡುವುದು)
ಉದಾ: ಗ್ರಾಮ ಪಂಚಾಯತಿಗಳು ಗ್ರಾಮ ಸಭೆಯ ಮೂಲಕ ಪಂಚಾಯತಿ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳು ಇರಬಾರದೆಂದು ನಿರ್ಧಾರ ತೆಗೆದುಕೊಳ್ಳಬಹುದು. (ಕಾನೂನು ಬಾಹಿರ, ಖಾಸಗಿ ಅಥವಾ ಸರ್ಕಾರಿ ಮಳಿಗೆಗಳಾಗಿರಬಹುದು) ಈಗಾಗಲೇ ಗ್ರಾಮಸಭೆಗಳಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಗ್ರಾಮ ಪಂಚಾಯತಿಗಳಲ್ಲಿ ತಕ್ಷಣ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಬೇಕು.

2. ರಾಜ್ಯಗಳಲ್ಲಿ ಮದ್ಯ ಸೇವನೆ ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತದ ಸಂವಿಧಾನದ ಅನುಚ್ಛೇದ 47ರಲ್ಲಿ ರಾಜ್ಯಗಳಿಗೆ ನೀಡಲಾದ ನಿರ್ದೇಶನದಂತೆ ಮದ್ಯ ಮುಕ್ತ ಕರ್ನಾಟಕ ನೀತಿಯತ್ತ ಸಾಗುವ ಸಲುವಾಗಿ ಮೂರು ತಿಂಗಳೊಳಗೆ ಸಮಿತಿ ರಚಿಸಿ ಸರ್ಕಾರದ ನೀತಿಯನ್ನು ಜಾರಿಗೊಳಿಸಬೇಕು.
ವಾಸ್ತವದಲ್ಲಿ ಸರ್ಕಾರಗಳು ಹೆಚ್ಚು ಹೆಚ್ಚು ಜನರನ್ನು ಕುಡುಕರನ್ನಾಗಿ ಮಾಡುತ್ತಿವೆ. ಜೊತೆಗೆ ಯುವ ಪೀಳಿಗೆಯನ್ನು ಶ್ರಮಜೀವಿಗಳನ್ನಾಗಿ ಮಾಡುವ ಬದಲು ಕುಟುಂಬಕ್ಕೆ ಮತ್ತು ಸಮಾಜಕ್ಕೆ ಹೊರೆಯಾಗುವಂತೆ ಮಾಡುತ್ತಿವೆ. ಕರ್ನಾಟಕದಲ್ಲಿ ಈಗಾಗಲೇ ಅಬಕಾರಿ ಇಲಾಖೆಗಳಿಗೆ ಸರ್ಕಾರ ಗುರಿ ನಿಗದಿ ಪಡಿಸುವುದನ್ನು ನೋಡಿದ್ದೇವೆ. ಎಂಟು ವರ್ಷದಲ್ಲಿ ಅಬಕಾರಿ ಆದಾಯ ರೂ.9000 ಕೋಟಿಯಿಂದ ರೂ.20000 ಕೋಟಿಗೆ ಏರಿರುವುದೇ ಇದಕ್ಕೆ ನಿದರ್ಶನ.

3. ಕರ್ನಾಟಕದ ಎಲ್ಲ ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವಾಗುತ್ತಿರುವುದನ್ನು ತಕ್ಷಣವೇ ನಿಲ್ಲಿಸಬೇಕು. ಕಿರಾಣಿ, ಬೀಡಾ ಅಂಗಡಿ, ಹೋಟೆಲ್, ಮನೆಮನೆಗಳಲ್ಲಿ ಮದ್ಯ ಮಾರಾಟವಾಗುತ್ತಿದೆ. ಹಾಗಾಗಿ ಎಲ್ಲಾ ಜಾತಿಯವರನ್ನೊಳಗೊಂಡ ಶೇ.75ರಷ್ಟು ಮಹಿಳೆಯರು ಇರುವ ಏಳು ಸದಸ್ಯರನ್ನು ಒಳಗೊಂಡ ಸಾಮಾಜಿಕ ನ್ಯಾಯ ಸಮಿತಿಯನ್ನು ಪ್ರತಿ ಹಳ್ಳಿಯಲ್ಲಿ ರಚಿಸಬೇಕು. ಈ ಸಮಿತಿ ಅಕ್ರಮ ಮದ್ಯ ಮಾರಾಟದ ಮೇಲೆ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ನೀಡಿ ಸಶಕ್ತಗೊಳಿಸಬೇಕು.

ಉದಾ: ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿರುವ ಗ್ರಾಮ ಪಂಚಾಯಿತಿಗಳು, ಅಬಕಾರಿ ಇಲಾಖೆ, ಮತ್ತು ಮಾರಾಟ ಮಾಡುತ್ತಿರುವ ಜನರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ನೀಡಬೇಕು. ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಜನರಿಗೆ ಸರ್ಕಾರಿ ಯೋಜನೆಗಳನ್ನು/ಸೌಲಭ್ಯಗಳನ್ನು ರದ್ದುಗೊಳಿಸುವ ಹಾಗೂ ದಂಡ ವಿಧಿಸುವ ಅಧಿಕಾರ ಇತ್ಯಾದಿ. ಈ ರೀತಿಯ ಆದೇಶವನ್ನು ತಕ್ಷಣ ಜಾರಿಗೊಳಿಸಬೇಕು.

4. ಕುಡಿತದಿಂದ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ತಕ್ಷಣವೇ ಪರಿಹಾರ ನೀಡಬೇಕು.
ಈ ಬೇಡಿಕೆಗಳನ್ನು ಅವರಿಗೆ ಸಲ್ಲಿಸಲಾಯಿತು ಮತ್ತು ಸಂಕಷ್ಟಕ್ಕೊಳಗಾದ ಕುಟುಂಬಗಳ ಪಟ್ಟಿ ತಯಾರು ಮಾಡಲು ನಮ್ಮ ಹೋರಾಟಗಾರರಿಗೆ ತಿಳಿಸಿದ್ದೇವೆ

ಇವೆಲ್ಲವನ್ನೂ ಉಪಮುಖ್ಯಮಂತ್ರಿಗಳು ಕೇಳಿಸಿಕೊಂಡರು. 10ನೇ ತಾರೀಖಿನೊಳಗೆ ಮುಖ್ಯಮಂತ್ರಿಗಳ ಭೇಟಿಗೆ ನಿಯೋಗಕ್ಕೆ ಅವಕಾಶ ಮಾಡಿಕೊಡುವುದಾಗಿ ಅವರು ಆಶ್ವಾಸನೆ ನೀಡಿದ್ದರಿಂದ ಹೋರಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಹೋರಾಟ ಸಮಿತಿ ತೀರ್ಮಾನಿಸಿತು. ಈ ತೀರ್ಮಾನ ತೆಗೆದುಕೊಳ್ಳುವ ಮೊದಲು ಮಾತನಾಡಿದ ನಾನು ‘ಮುಖ್ಯಮಂತ್ರಿಗಳ ಭೇಟಿಗೆ 10ನೇ ತಾರೀಕಿನೊಳಗೆ ಅವಕಾಶ ಸಿಗದಿದ್ದರೆ, ಚಳವಳಿಯನ್ನು ಮತ್ತೆ ಆರಂಭಿಸುವುದು ಅನಿವಾರ್ಯವಾಗುತ್ತದೆ. ಮುಖ್ಯಮಂತ್ರಿಯವರ ಭೇಟಿಯಾದ ಮೇಲೆ ಈ ಕನಿಷ್ಠ ಕಾರ್ಯಾಚರಣೆಯನ್ನು ಸರ್ಕಾರ ನಿರ್ವಹಿಸಲಿಲ್ಲವಾದರೆ ಆಗಲೂ ಚಳವಳಿ ಆರಂಭಿಸಲಾಗುವುದು’ ಎಂದು ಘೋಷಿಸಿದೆ.

ಈ ಹೋರಾಟಕ್ಕೆ ರಾಜ್ಯದ ಜನರು ಬೆಂಬಲವಾಗಿ ನಿಲ್ಲಬೇಕು. ರಾಜ್ಯದ ಮಹತ್ವದ ಹೋರಾಟಗಳಲ್ಲಿ ಇದೂ ಒಂದು ಎಂಬುದು ನನ್ನ ಭಾವನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...