Homeಅಂಕಣಗಳುಮಹಿಳೆಯರ ಈ ಮಹತ್ವದ ಆಂದೋಲನದ ಜೊತೆ ನಾನಿದ್ದೇನೆ

ಮಹಿಳೆಯರ ಈ ಮಹತ್ವದ ಆಂದೋಲನದ ಜೊತೆ ನಾನಿದ್ದೇನೆ

- Advertisement -
- Advertisement -

| ಎಚ್.ಎಸ್. ದೊರೆಸ್ವಾಮಿ |

ಮದ್ಯ ನಿಷೇಧ ಆಂದೋಲನ – ಕರ್ನಾಟಕ ಸಂಸ್ಥೆಯ ಸ್ವರ್ಣಾ ಭಟ್, ವಿದ್ಯಾ ಪಾಟೀಲ್, ಅಭಯ್ ಇವರುಗಳ ನೇತೃತ್ವದಲ್ಲಿ 100 ಆಯ್ದ ಮಹಿಳೆಯರು ನವೆಂಬರ್ 7ನೇ ತಾರೀಖು ಬೆಂಗಳೂರು ನಗರ ರೈಲ್ವೆ ನಿಲ್ದಾಣದಲ್ಲಿ ಬಂದು ಇಳಿದರು. ರಾಯಚೂರು, ಬಳ್ಳಾರಿ, ಬಾಗಲಕೋಟೆ, ಧಾರವಾಡ, ಬೀದರ್, ಕಲಬುರ್ಗಿ, ಗದಗ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳ ಮಹಿಳೆಯರು ಹೋರಾಟದಲ್ಲಿ ಭಾಗವಹಿಸಲು ಬಂದಿದ್ದರು. ಪೊಲೀಸ್ ಅಧಿಕಾರಿಗಳನ್ನು 4-6 ದಿನಗಳ ಹಿಂದೆಯೇ ಕಂಡ ಮಹಿಳೆಯರು ಈ ಹೋರಾಟಕ್ಕೆ ಸ್ಥಳ ಒದಗಿಸಲು ಅರ್ಜಿ ಸಲ್ಲಿಸಿದ್ದರೂ, ಸ್ಥಳ ನಿಗದಿ ಮಾಡಿರಲಿಲ್ಲ. ಹೋರಾಟಗಾರ್ತಿ ಮಹಿಳೆಯರನ್ನು ಪೊಲೀಸರು ತಡೆದರು. ಆದ್ದರಿಂದ ಹೋರಾಟಗಾರರು ಬೆಂಗಳೂರು ನಗರ ರೈಲ್ವೆ ನಿಲ್ದಾಣದ ಹೊರಗೆ, ಆರ್.ಎಂ.ಎಸ್. ಕಚೇರಿಯ ಮುಂಭಾಗದಲ್ಲಿರುವ ಫುಟ್‍ಬಾತ್ ಮೇಲೆ ಕುಳಿತರು. ಪೊಲೀಸರು ‘ನಿಮ್ಮ ಪ್ರತಿಭಟನೆಗೆ ಅವಕಾಶ ಕೊಡುವುದಿಲ್ಲ. ನಿಮ್ಮೂರುಗಳಿಗೆ ಹೋಗಿ’ ಎಂದರು.

ಪ್ರಜಾಪ್ರಭುತ್ವ ನಮಗೆ ಕೆಲವು ಹಕ್ಕುಗಳನ್ನು ಕೊಟ್ಟಿದೆ. ಶಾಂತಿಯುತವಾಗಿ ಪ್ರತಿಭಟನೆ ಮಾಡುವುದು ಅದರಲ್ಲಿ ಒಂದು ಎಂದು ಹೋರಾಟಗಾರ್ತಿ ನಾಯಕಿ ಸ್ವರ್ಣಾ ಭಟ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಈ ಮಧ್ಯೆ ರೈಲ್ವೆ ಪೊಲೀಸರು ಇಲ್ಲಿ ಪ್ರತಿಭಟನೆ ಮಾಡಲು ನಾವು ಬಿಡುವುದಿಲ್ಲ. ನೀವು ಇಲ್ಲಿಂದ ಹೊರಟುಹೋಗಿ ಎಂದು ಧಮ್ಕಿ ಹಾಕಿದರು. ಲಾಠಿ ಹಿಡಿದು ಪೊಲೀಸರು ಸಿದ್ಧರಾಗಿದ್ದರು. ಅಶ್ರುವಾಯು ವಾಹನವನ್ನೂ ತಂದು ನಿಲ್ಲಿಸಿದ್ದರು.

ಈ ವೇಳೆಗೆ ಹೋರಾಟಗಾರರನ್ನು ಕೂಡಿಕೊಳ್ಳಲು ನಾನು ಮತ್ತು ಬಾಬು ಹೋದೆವು. ಹೋರಾಟಗಾರ ಮಿತ್ರ ಅಭಯ್ ಪರಿಸ್ಥಿತಿಯನ್ನು ವಿವರವಾಗಿ ಹೇಳಿದರು. ಪೊಲೀಸ್ ಅಧಿಕಾರಿಗಳು ನಾವು ಹೋರಾಟ ಮಾಡಲು ಸ್ಥಳ ನಿಗದಿ ಮಾಡಿಕೊಟ್ಟಿಲ್ಲ. ಅರ್ಜಿ ಕೊಟ್ಟು 4 ದಿನಗಳಾಗಿವೆ. ನಿಮಗೆ ಜಾಗ ಗೊತ್ತು ಮಾಡಿಲ್ಲ. ನೀವು ನಿಮ್ಮ ಊರುಗಳಿಗೆ ಹಿಂದಿರುಗಿ ಎನ್ನುತ್ತಿದ್ದಾರೆ. ನಾವು ಹೋರಾಟ ಮಾಡಲು ಬಂದವರು. ಅದಕ್ಕೆ ಸ್ಥಳ ಗೊತ್ತು ಮಾಡಿಕೊಡುವುದು ಪೊಲೀಸ್ ಅಧಿಕಾರಿಗಳ ಜವಾಬ್ದಾರಿ. ಅವರು ನಿರ್ಲಕ್ಷ್ಯ ತೋರಿದ್ದಾರೆ. ನಾವು ರೈಲ್ವೆ ಆವರಣದಲ್ಲೇ ಕುಳಿತು ಪ್ರತಿಭಟನೆ ಮಾಡುತ್ತೇವೆ. ಮುಖ್ಯಮಂತ್ರಿಗಳು ನಮ್ಮನ್ನು ಕರೆಸಿಕೊಂಡು ನಮ್ಮ ಅಹವಾಲನ್ನು ಕೇಳುವವರೆಗೂ ನಾವು ಈ ಸ್ಥಳ ಬಿಟ್ಟು ಹೋಗುವುದಿಲ್ಲ. ರೈಲ್ವೆ ಪೊಲೀಸರು ನಮ್ಮನ್ನೆಲ್ಲ ಬಂಧಿಸುವುದಾದರೆ ಬಂಧಿಸಲಿ’ ಎಂದು ನಾನು ಸಲಹೆ ಮಾಡಿದೆ.

ಸತ್ಯಾಗ್ರಹಿಗಳು ನನ್ನ ನಿಲುವನ್ನು ಅನುಮೋದಿಸಿದರು.

ಪೊಲೀಸರಿಗೆ ನಮ್ಮ ನಿಲುವು ಅಚಲ ಎಂದು ಮನವರಿಕೆಯಾಗಿ ಪೊಲೀಸರು ಪೆಚ್ಚಾದರು. ಅವರು ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಅವರಿಗೆ ವಿಚಾರ ತಿಳಿಸಿದರು. ಅವರು ‘ಹೋರಾಟದ ಪ್ರತಿನಿಧಿಗಳು ಮಾತುಕತೆಗೆ ಬನ್ನಿ. ದೊರೆಸ್ವಾಮಿಯವರನ್ನು ಕರೆತರಬೇಕಾಗಿಲ್ಲ’ ಎಂಬ ಸಂದೇಶ ಕಳಿಸಿದರು. ದೊರೆಸ್ವಾಮಿಯವರನ್ನು ಹೊರತು ಮಾಡಿ ನಿಯೋಗ ಬರಲು ನಾವು ತಯಾರಿಲ್ಲ’ ಎಂದರು ಹೋರಾಟಗಾರ ನೇತಾರರು.

ನಾನು ಬಹಳ ಹೊತ್ತು ಅಲ್ಲಿ ಕೂಡಲು ಸಾಧ್ಯವಿಲ್ಲ; ಮನೆಗೆ ಹೊರಟು ಹೋಗುತ್ತೇನೆ ಎಂದು ಉಪಮುಖ್ಯಮಂತ್ರಿಗಳು ಭಾವಿಸಿದ್ದರು. ಆದರೆ, ನಾನು ತೀರ್ಮಾನ ಮಾಡಿದ್ದೆ. ಇದನ್ನು ತಿಳಿದ ಉಪಮುಖ್ಯಮಂತ್ರಿಗಳು ‘ಈಗ ಬರುತ್ತೇನೆ, ಇಷ್ಟರಲ್ಲೇ ಬರುತ್ತೇನೆ’ ಎಂದು ಹೇಳುತ್ತಾ ಕಾಲ ಕಳೆದರು.

ಹೊಸಕೋಟೆಯ ಹೋರಾಟ ಮಿತ್ರ ‘ನಮ್ಮನ್ನು ಪೊಲೀಸರು ಅರೆಸ್ಟ್ ಮಾಡಲು ತೀರ್ಮಾನಿಸಿದ್ದರು. ಎರಡು ಕೆಎಸ್‍ಆರ್‍ಟಿಸಿ ಬಸ್‍ಗಳನ್ನೂ ಕರೆಸಿದ್ದರು. ನೀವು ಬರುವುದು ಸ್ವಲ್ಪ ತಡವಾಗಿದ್ದರೆ ನಮ್ಮನ್ನೆಲ್ಲ ಅರೆಸ್ಟ್ ಮಾಡಿ ಬಸ್ಸುಗಳಲ್ಲಿ ಕರೆದುಕೊಂಡು ಹೊರಟು ಹೋಗುತ್ತಿದ್ದರು. ನೀವು ಬಂದಿರಿ. ಪೊಲೀಸರ ಆಲೋಚನೆ ಬದಲಾಯಿತು ಎಂದು ಹೇಳಿದರು. ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣರವರು ಕೊನೆಗೂ 8 ಗಂಟೆಗೆ ರೈಲ್ವೆ ನಿಲ್ದಾಣದ ಆವರಣಕ್ಕೆ ಬಂದರು. ಹೋರಾಟಗಾರ್ತಿ ವಿದ್ಯಾ ಪಾಟೀಲ್ ಮಾತನಾಡಿ ‘ನಾವು ಈಗ ಪೂರ್ಣ ಮದ್ಯ ಪ್ರತಿಬಂಧ ಕೇಳಲು ಬಂದಿಲ್ಲ. ಹಂತಹಂತವಾಗಿ ಮದ್ಯ ನಿಷೇಧ ಮಾಡಿ’ ಎಂದು ವಿನಂತಿಸಿಕೊಂಡು ‘ಈ ಕೆಲವು ಕ್ರಮಗಳನ್ನು ಕೂಡಲೇ ಕೈಗೊಳ್ಳಿ ಎಂದು ಮುಖ್ಯಮಂತ್ರಿಯವರನ್ನು ಪ್ರಾರ್ಥಿಸಲು ಬಂದಿದ್ದೇವೆ. ಕೂಡಲೇ ನಿಯೋಗದ ಭೇಟಿಗೆ ಅವಕಾಶ ಮಾಡಿಕೊಡಿ’ ಎಂದು ಪ್ರಾರ್ಥಿಸಿದರು.

ಮದ್ಯ ನಿಷೇಧ ಆಂದೋಲನದವರು ಮುಂಚೆಯೇ ಅವರಿಗೆ ಕಳಿಸಿದ್ದ ಪತ್ರ ಇಂತಿದೆ:

ಮುಖ್ಯಮಂತ್ರಿಗಳಾದ ಶ್ರೀ ಯಡಿಯೂರಪ್ಪನವರಿಗೆ:

ಮಹಿಳಾ ನೇತೃತ್ವದ ಮದ್ಯ ನಿಷೇಧ ಆಂದೋಲನ ಕರ್ನಾಟಕ, ಸುಮಾರು ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧವಾಗಬೇಕೆಂಬ ಹಕ್ಕೊತ್ತಾಯವನ್ನಿಟ್ಟುಕೊಂಡು ಹೋರಾಟ ನಡೆಸುತ್ತಿದೆ. ಆರು ತಿಂಗಳ ಹಿಂದೆ 3000 ಮಹಿಳೆಯರು ಪಾದಯಾತ್ರೆ ಮೂಲಕ ಸರ್ಕಾರಕ್ಕೆ ತಮ್ಮ ಬೇಡಿಕೆಗಳನ್ನು ಮುಟ್ಟಿಸಿದರೂ ಮಹಿಳೆಯರಿಗೆ ಕಿಂಚಿತ್ತೂ ಗೌರವ ನೀಡಲಿಲ್ಲ, ಧ್ವನಿಗೆ ಕಿವಿಗೊಡಲಿಲ್ಲ.

ಹಾಗಾಗಿ ಈಗ ಮಹಿಳೆಯರು ನವೆಂಬರ್ 7ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ನಡೆಸಬೇಕೆಂದು ತೀರ್ಮಾನಿಸಿದ್ದಾರೆ. ಈಗ ಈ ಚಳವಳಿ ಕೇವಲ ರಾಜ್ಯದ ಚಳವಳಿಯಾಗಿ ಉಳಿಯದೆ ರಾಷ್ಟ್ರ ಮಟ್ಟದ ಚಿಂತಕರೂ ಈ ಹೋರಾಟವನ್ನು ಬೆಂಬಲಿಸಿ ಭಾಗವಹಿಸಲಿದ್ದಾರೆ.

ಗಾಂಧಿ ಜಯಂತಿಯ 150ನೇ ವರ್ಷಾಚರಣೆ ಸಂದರ್ಭದಲ್ಲಿ ಅವರ ಮದ್ಯ ನಿಷೇಧದ ಕನಸನ್ನು ನನಸು ಮಾಡಿ ಕರ್ನಾಟಕ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ಮಾಡಬೇಕೆಂಬುದೇ ಈ ಮಹಿಳೆಯರ ಬೇಡಿಕೆ.
ನವೆಂಬರ್ 7ರಿಂದ ಈ ಕೆಳಗಿನ ಬೇಡಿಕೆಗಳನ್ನು ಮುಂದಿಷ್ಟು ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.

1. ಸಂವಿಧಾನದ 73ನೇ ತಿದ್ದುಪಡಿಯ ಆಶಯವನ್ನು ಅನುಷ್ಠಾನಗೊಳಿಸುವುದು (ಗ್ರಾಮಗಳ ಭವಿಷ್ಯವನ್ನು ನಿರ್ಧರಿಸುವ ಅಧಿಕಾರವನ್ನ ಗ್ರಾಮ ಸಭೆಗೆ ನೀಡುವುದು)
ಉದಾ: ಗ್ರಾಮ ಪಂಚಾಯತಿಗಳು ಗ್ರಾಮ ಸಭೆಯ ಮೂಲಕ ಪಂಚಾಯತಿ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳು ಇರಬಾರದೆಂದು ನಿರ್ಧಾರ ತೆಗೆದುಕೊಳ್ಳಬಹುದು. (ಕಾನೂನು ಬಾಹಿರ, ಖಾಸಗಿ ಅಥವಾ ಸರ್ಕಾರಿ ಮಳಿಗೆಗಳಾಗಿರಬಹುದು) ಈಗಾಗಲೇ ಗ್ರಾಮಸಭೆಗಳಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಗ್ರಾಮ ಪಂಚಾಯತಿಗಳಲ್ಲಿ ತಕ್ಷಣ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಬೇಕು.

2. ರಾಜ್ಯಗಳಲ್ಲಿ ಮದ್ಯ ಸೇವನೆ ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತದ ಸಂವಿಧಾನದ ಅನುಚ್ಛೇದ 47ರಲ್ಲಿ ರಾಜ್ಯಗಳಿಗೆ ನೀಡಲಾದ ನಿರ್ದೇಶನದಂತೆ ಮದ್ಯ ಮುಕ್ತ ಕರ್ನಾಟಕ ನೀತಿಯತ್ತ ಸಾಗುವ ಸಲುವಾಗಿ ಮೂರು ತಿಂಗಳೊಳಗೆ ಸಮಿತಿ ರಚಿಸಿ ಸರ್ಕಾರದ ನೀತಿಯನ್ನು ಜಾರಿಗೊಳಿಸಬೇಕು.
ವಾಸ್ತವದಲ್ಲಿ ಸರ್ಕಾರಗಳು ಹೆಚ್ಚು ಹೆಚ್ಚು ಜನರನ್ನು ಕುಡುಕರನ್ನಾಗಿ ಮಾಡುತ್ತಿವೆ. ಜೊತೆಗೆ ಯುವ ಪೀಳಿಗೆಯನ್ನು ಶ್ರಮಜೀವಿಗಳನ್ನಾಗಿ ಮಾಡುವ ಬದಲು ಕುಟುಂಬಕ್ಕೆ ಮತ್ತು ಸಮಾಜಕ್ಕೆ ಹೊರೆಯಾಗುವಂತೆ ಮಾಡುತ್ತಿವೆ. ಕರ್ನಾಟಕದಲ್ಲಿ ಈಗಾಗಲೇ ಅಬಕಾರಿ ಇಲಾಖೆಗಳಿಗೆ ಸರ್ಕಾರ ಗುರಿ ನಿಗದಿ ಪಡಿಸುವುದನ್ನು ನೋಡಿದ್ದೇವೆ. ಎಂಟು ವರ್ಷದಲ್ಲಿ ಅಬಕಾರಿ ಆದಾಯ ರೂ.9000 ಕೋಟಿಯಿಂದ ರೂ.20000 ಕೋಟಿಗೆ ಏರಿರುವುದೇ ಇದಕ್ಕೆ ನಿದರ್ಶನ.

3. ಕರ್ನಾಟಕದ ಎಲ್ಲ ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವಾಗುತ್ತಿರುವುದನ್ನು ತಕ್ಷಣವೇ ನಿಲ್ಲಿಸಬೇಕು. ಕಿರಾಣಿ, ಬೀಡಾ ಅಂಗಡಿ, ಹೋಟೆಲ್, ಮನೆಮನೆಗಳಲ್ಲಿ ಮದ್ಯ ಮಾರಾಟವಾಗುತ್ತಿದೆ. ಹಾಗಾಗಿ ಎಲ್ಲಾ ಜಾತಿಯವರನ್ನೊಳಗೊಂಡ ಶೇ.75ರಷ್ಟು ಮಹಿಳೆಯರು ಇರುವ ಏಳು ಸದಸ್ಯರನ್ನು ಒಳಗೊಂಡ ಸಾಮಾಜಿಕ ನ್ಯಾಯ ಸಮಿತಿಯನ್ನು ಪ್ರತಿ ಹಳ್ಳಿಯಲ್ಲಿ ರಚಿಸಬೇಕು. ಈ ಸಮಿತಿ ಅಕ್ರಮ ಮದ್ಯ ಮಾರಾಟದ ಮೇಲೆ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ನೀಡಿ ಸಶಕ್ತಗೊಳಿಸಬೇಕು.

ಉದಾ: ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿರುವ ಗ್ರಾಮ ಪಂಚಾಯಿತಿಗಳು, ಅಬಕಾರಿ ಇಲಾಖೆ, ಮತ್ತು ಮಾರಾಟ ಮಾಡುತ್ತಿರುವ ಜನರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ನೀಡಬೇಕು. ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಜನರಿಗೆ ಸರ್ಕಾರಿ ಯೋಜನೆಗಳನ್ನು/ಸೌಲಭ್ಯಗಳನ್ನು ರದ್ದುಗೊಳಿಸುವ ಹಾಗೂ ದಂಡ ವಿಧಿಸುವ ಅಧಿಕಾರ ಇತ್ಯಾದಿ. ಈ ರೀತಿಯ ಆದೇಶವನ್ನು ತಕ್ಷಣ ಜಾರಿಗೊಳಿಸಬೇಕು.

4. ಕುಡಿತದಿಂದ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ತಕ್ಷಣವೇ ಪರಿಹಾರ ನೀಡಬೇಕು.
ಈ ಬೇಡಿಕೆಗಳನ್ನು ಅವರಿಗೆ ಸಲ್ಲಿಸಲಾಯಿತು ಮತ್ತು ಸಂಕಷ್ಟಕ್ಕೊಳಗಾದ ಕುಟುಂಬಗಳ ಪಟ್ಟಿ ತಯಾರು ಮಾಡಲು ನಮ್ಮ ಹೋರಾಟಗಾರರಿಗೆ ತಿಳಿಸಿದ್ದೇವೆ

ಇವೆಲ್ಲವನ್ನೂ ಉಪಮುಖ್ಯಮಂತ್ರಿಗಳು ಕೇಳಿಸಿಕೊಂಡರು. 10ನೇ ತಾರೀಖಿನೊಳಗೆ ಮುಖ್ಯಮಂತ್ರಿಗಳ ಭೇಟಿಗೆ ನಿಯೋಗಕ್ಕೆ ಅವಕಾಶ ಮಾಡಿಕೊಡುವುದಾಗಿ ಅವರು ಆಶ್ವಾಸನೆ ನೀಡಿದ್ದರಿಂದ ಹೋರಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಹೋರಾಟ ಸಮಿತಿ ತೀರ್ಮಾನಿಸಿತು. ಈ ತೀರ್ಮಾನ ತೆಗೆದುಕೊಳ್ಳುವ ಮೊದಲು ಮಾತನಾಡಿದ ನಾನು ‘ಮುಖ್ಯಮಂತ್ರಿಗಳ ಭೇಟಿಗೆ 10ನೇ ತಾರೀಕಿನೊಳಗೆ ಅವಕಾಶ ಸಿಗದಿದ್ದರೆ, ಚಳವಳಿಯನ್ನು ಮತ್ತೆ ಆರಂಭಿಸುವುದು ಅನಿವಾರ್ಯವಾಗುತ್ತದೆ. ಮುಖ್ಯಮಂತ್ರಿಯವರ ಭೇಟಿಯಾದ ಮೇಲೆ ಈ ಕನಿಷ್ಠ ಕಾರ್ಯಾಚರಣೆಯನ್ನು ಸರ್ಕಾರ ನಿರ್ವಹಿಸಲಿಲ್ಲವಾದರೆ ಆಗಲೂ ಚಳವಳಿ ಆರಂಭಿಸಲಾಗುವುದು’ ಎಂದು ಘೋಷಿಸಿದೆ.

ಈ ಹೋರಾಟಕ್ಕೆ ರಾಜ್ಯದ ಜನರು ಬೆಂಬಲವಾಗಿ ನಿಲ್ಲಬೇಕು. ರಾಜ್ಯದ ಮಹತ್ವದ ಹೋರಾಟಗಳಲ್ಲಿ ಇದೂ ಒಂದು ಎಂಬುದು ನನ್ನ ಭಾವನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...