HomeUncategorizedಇವಿಯಂ ವಿರೋಧಿಸಿ ಏಕಾಂಗಿಯಾಗಿ 3 ತಿಂಗಳಿಂದ ರಾಷ್ಟ್ರ ಸುತ್ತುತ್ತಿರುವ ದೇಶಪ್ರೇಮಿ ಕರ್ನಾಟಕಕ್ಕೆ: ವಿಡಿಯೋ ನೋಡಿ

ಇವಿಯಂ ವಿರೋಧಿಸಿ ಏಕಾಂಗಿಯಾಗಿ 3 ತಿಂಗಳಿಂದ ರಾಷ್ಟ್ರ ಸುತ್ತುತ್ತಿರುವ ದೇಶಪ್ರೇಮಿ ಕರ್ನಾಟಕಕ್ಕೆ: ವಿಡಿಯೋ ನೋಡಿ

ಉತ್ತರಖಂಡದಿಂದ ಹೊರಟು ಜೈಪುರ, ಮುಂಬೈ ಮಾರ್ಗವಾಗಿ ಚನ್ನೈಗೆ ಬಂದು ಇಲ್ಲಿಂದ ಕಲ್ಕತ್ತ ಮಾರ್ಗವಾಗಿ ದೆಹಲಿ ತಲುಪುವುದು ಸುಲಭದ ಮಾತಲ್ಲ. ಆದರೂ ಅವರಲ್ಲಿ ಆ ಜೋಶ್ ಮತ್ತು ಉತ್ಸಾಹ ಕಾಣುತ್ತಿದೆ.

- Advertisement -
- Advertisement -

ಇವಿಎಂ ಬ್ಯಾನ್ ಮಾಡಬೇಕು ಮತ್ತು ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಬೇಕೆಂದು ಹಲವು ಹೋರಾಟಗಳು ದೇಶಾದ್ಯಂತ ನಡೆಯುತ್ತಿವೆ. ಅವುಗಳ ಸಾಲಿಗೆ ಇಲ್ಲೊಂದು ವಿಭಿನ್ನ ಪ್ರಯತ್ನವೂ ಸೇರ್ಪಡೆಯಾಗಿ ದೇಶದ ಗಮನ ಸೆಳೆಯುತ್ತಿದೆ. ಅದು ಕೂಡ ಏಕಾಂಗಿ ಹೋರಾಟ.

ಉತ್ತರಖಂಡದ ರುದ್ರಪುರ್ ದ ನಿವಾಸಿಯಾದ ಓಂಕಾರ್‌ ಸಿಂಗ್‌ ದಿಲಾನ್‌ ಎಂಬುವವರು ಇವಿಎಂ ಬ್ಯಾನ್ ಮಾಡಬೇಕು ಮತ್ತು ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಬೇಕೆಂಬ ಘೋಷಣೆಯ ಬ್ಯಾನರ್ ಅನ್ನು ಚಿಕ್ಕ ಬಂಡಿಗೆ ಅಂಟಿಸಿ ಬೆನ್ನಿಗೆ ಕಟ್ಟಿಕೊಂಡು ದೇಶ ಸುತ್ತುತ್ತಿದ್ದಾರೆ. ಅವರ ಬಂಡಿಗೆ ಎರಡು ಭಾರತದ ತ್ರಿವರ್ಣ ಧ್ವಜವನ್ನು ಕಟ್ಟಿ ಹಾರಿಸುವುದು ವಿಶೇಷವಾಗಿದೆ.

ಆಗಸ್ಟ್‌ 15ರಂದು ಉತ್ತರಖಂಡದಿಂದ ಹೊರಟ ಅವರು ನವೆಂಬರ್‌ 13 ರಂದು ಚನ್ನೈಗೆ ಹೋಗುವ ಮಾರ್ಗವಾಗಿ ಕರ್ನಾಟಕದ ಬೆಳಗಾವಿಗೆ ಬಂದಿದ್ದಾರೆ. ಕರ್ನಾಟಕದಲ್ಲಿ ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತರು ಅವರನ್ನು ಸ್ವಾಗತಿಸಿ ಅವರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ವಿಡಿಯೋ ನೋಡಿ

 

ನಾನು ರುದ್ರಪುರದಿಂದ ಬರುತ್ತಿದ್ದೇನೆ. ಜೈಪುರ ಮತ್ತು ಮುಂಬೈ ಮೂಲ ಪ್ರಯಾಣ ಮಾಡಿ ಇಲ್ಲಿಗೆ ಬಂದಿದ್ದೇನೆ.  ಚನ್ನೈ-ಕಲ್ಕತ್ತಾ ಮುಗಿಸಿ ದೆಹಲಿಗೆ ತಲುಪುತ್ತೇನೆ. ಇವಿಎಂ ಬ್ಯಾನ್ ಮಾಡಬೇಕು ಮತ್ತು ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಬೇಕೆಂದು ನನ್ನ ಹಕ್ಕೊತ್ತಾಯ. ಮುಂದುವರಿದ ಬಹಳಷ್ಟು ದೇಶಗಳು ಬ್ಯಾಲೆಟ್‌ ಪೇಪರ್‌ನಲ್ಲಿ ಚುನಾವಣೆ ನಡೆಸುತ್ತವೆ. ಇವಿಯಂನಿಂದ ಚುನಾವಣಾ ಅಕ್ರಮ ನಡೆದು ಪ್ರಜಾಪ್ರಭುತ್ವ ಹಾಳಾಗುತ್ತಿದೆ. ಹಾಗಾಗಿ ಪ್ರಜಾಪ್ರಭುತ್ವ ರಕ್ಷಿಸಲು ನಾನು ಈ ಯಾತ್ರಾ ಹೋರಾಟ ಕೈಗೊಂಡಿದ್ದೇನೆ ಎನ್ನುತ್ತಾರೆ.

ಇದು ಅದಾನಿ ಮತ್ತು ಅಂಬಾನಿಯವರ ಗುಲಾಮಿ ಸರ್ಕಾರವಾಗಿದೆ. ಅವರಿಗಾಗಿ ಕೆಲಸ ಮಾಡುತ್ತಾರೆ. ಮೋದಿಯವರು ಜನರ ಓಟಿನಿಂದ ಗೆದ್ದಿಲ್ಲ. ಹಾಗಾಗಿ ಅವರು ಜನರಿಗಾಗಿ ಕೆಲಸ ಮಾಡುತ್ತಿಲ್ಲ. ಹಿಟ್ಲರ್ ಶಾಹಿ ಆಡಳಿತ ನಡೆಸುತ್ತಿದ್ದಾರೆ. ಇದರಿಂದ ದೇಶ ಹಾಳಾಗುತ್ತಿದೆ ಎಂದಿದ್ದಾರೆ. ಯುವಜನರು ಮೋದಿಗೆ ಓಟು ಹಾಕಿದ್ದಾರೆ. ಇನ್ನು ಅವರು ಪಕೋಡಾ ಮಾರಬೇಕಷ್ಟೆ ಎಂದು ಚಟಾಕಿ ಹಾರಿಸಿದ್ದಾರೆ.

ಅವರಿಗೆ ಹೋದಲೆಲ್ಲಾ ಜನ ಬೆಂಬಲ ನೀಡಿದ್ದಾರೆ ಮಾತ್ರವಲ್ಲ ಅವರಿಗೆ ಊಟ ವಸತಿ ನೀಡಿ ಸಹಕರಿಸುತ್ತಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ.

ಉತ್ತರಖಂಡದಿಂದ ಹೊರಟು ಜೈಪುರ, ಮುಂಬೈ ಮಾರ್ಗವಾಗಿ ಚನ್ನೈಗೆ ಬಂದು ಇಲ್ಲಿಂದ ಕಲ್ಕತ್ತ ಮಾರ್ಗವಾಗಿ ದೆಹಲಿ ತಲುಪುವುದು ಸುಲಭದ ಮಾತಲ್ಲ. ಆದರೂ ಅವರಲ್ಲಿ ಆ ಜೋಶ್ ಮತ್ತು ಉತ್ಸಾಹ ಕಾಣುತ್ತಿದೆ. ಈಗಾಗಲೇ ಮೂರು ತಿಂಗಳು ಪೂರೈಸಿದ್ದಾರೆ. ನೋಡೋಣ ಮುಂದೆ ಏನಾಗುತ್ತದೆ ಎಂದು…
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...