HomeUncategorizedಇವಿಯಂ ವಿರೋಧಿಸಿ ಏಕಾಂಗಿಯಾಗಿ 3 ತಿಂಗಳಿಂದ ರಾಷ್ಟ್ರ ಸುತ್ತುತ್ತಿರುವ ದೇಶಪ್ರೇಮಿ ಕರ್ನಾಟಕಕ್ಕೆ: ವಿಡಿಯೋ ನೋಡಿ

ಇವಿಯಂ ವಿರೋಧಿಸಿ ಏಕಾಂಗಿಯಾಗಿ 3 ತಿಂಗಳಿಂದ ರಾಷ್ಟ್ರ ಸುತ್ತುತ್ತಿರುವ ದೇಶಪ್ರೇಮಿ ಕರ್ನಾಟಕಕ್ಕೆ: ವಿಡಿಯೋ ನೋಡಿ

ಉತ್ತರಖಂಡದಿಂದ ಹೊರಟು ಜೈಪುರ, ಮುಂಬೈ ಮಾರ್ಗವಾಗಿ ಚನ್ನೈಗೆ ಬಂದು ಇಲ್ಲಿಂದ ಕಲ್ಕತ್ತ ಮಾರ್ಗವಾಗಿ ದೆಹಲಿ ತಲುಪುವುದು ಸುಲಭದ ಮಾತಲ್ಲ. ಆದರೂ ಅವರಲ್ಲಿ ಆ ಜೋಶ್ ಮತ್ತು ಉತ್ಸಾಹ ಕಾಣುತ್ತಿದೆ.

- Advertisement -
- Advertisement -

ಇವಿಎಂ ಬ್ಯಾನ್ ಮಾಡಬೇಕು ಮತ್ತು ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಬೇಕೆಂದು ಹಲವು ಹೋರಾಟಗಳು ದೇಶಾದ್ಯಂತ ನಡೆಯುತ್ತಿವೆ. ಅವುಗಳ ಸಾಲಿಗೆ ಇಲ್ಲೊಂದು ವಿಭಿನ್ನ ಪ್ರಯತ್ನವೂ ಸೇರ್ಪಡೆಯಾಗಿ ದೇಶದ ಗಮನ ಸೆಳೆಯುತ್ತಿದೆ. ಅದು ಕೂಡ ಏಕಾಂಗಿ ಹೋರಾಟ.

ಉತ್ತರಖಂಡದ ರುದ್ರಪುರ್ ದ ನಿವಾಸಿಯಾದ ಓಂಕಾರ್‌ ಸಿಂಗ್‌ ದಿಲಾನ್‌ ಎಂಬುವವರು ಇವಿಎಂ ಬ್ಯಾನ್ ಮಾಡಬೇಕು ಮತ್ತು ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಬೇಕೆಂಬ ಘೋಷಣೆಯ ಬ್ಯಾನರ್ ಅನ್ನು ಚಿಕ್ಕ ಬಂಡಿಗೆ ಅಂಟಿಸಿ ಬೆನ್ನಿಗೆ ಕಟ್ಟಿಕೊಂಡು ದೇಶ ಸುತ್ತುತ್ತಿದ್ದಾರೆ. ಅವರ ಬಂಡಿಗೆ ಎರಡು ಭಾರತದ ತ್ರಿವರ್ಣ ಧ್ವಜವನ್ನು ಕಟ್ಟಿ ಹಾರಿಸುವುದು ವಿಶೇಷವಾಗಿದೆ.

ಆಗಸ್ಟ್‌ 15ರಂದು ಉತ್ತರಖಂಡದಿಂದ ಹೊರಟ ಅವರು ನವೆಂಬರ್‌ 13 ರಂದು ಚನ್ನೈಗೆ ಹೋಗುವ ಮಾರ್ಗವಾಗಿ ಕರ್ನಾಟಕದ ಬೆಳಗಾವಿಗೆ ಬಂದಿದ್ದಾರೆ. ಕರ್ನಾಟಕದಲ್ಲಿ ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತರು ಅವರನ್ನು ಸ್ವಾಗತಿಸಿ ಅವರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ವಿಡಿಯೋ ನೋಡಿ

 

ನಾನು ರುದ್ರಪುರದಿಂದ ಬರುತ್ತಿದ್ದೇನೆ. ಜೈಪುರ ಮತ್ತು ಮುಂಬೈ ಮೂಲ ಪ್ರಯಾಣ ಮಾಡಿ ಇಲ್ಲಿಗೆ ಬಂದಿದ್ದೇನೆ.  ಚನ್ನೈ-ಕಲ್ಕತ್ತಾ ಮುಗಿಸಿ ದೆಹಲಿಗೆ ತಲುಪುತ್ತೇನೆ. ಇವಿಎಂ ಬ್ಯಾನ್ ಮಾಡಬೇಕು ಮತ್ತು ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಬೇಕೆಂದು ನನ್ನ ಹಕ್ಕೊತ್ತಾಯ. ಮುಂದುವರಿದ ಬಹಳಷ್ಟು ದೇಶಗಳು ಬ್ಯಾಲೆಟ್‌ ಪೇಪರ್‌ನಲ್ಲಿ ಚುನಾವಣೆ ನಡೆಸುತ್ತವೆ. ಇವಿಯಂನಿಂದ ಚುನಾವಣಾ ಅಕ್ರಮ ನಡೆದು ಪ್ರಜಾಪ್ರಭುತ್ವ ಹಾಳಾಗುತ್ತಿದೆ. ಹಾಗಾಗಿ ಪ್ರಜಾಪ್ರಭುತ್ವ ರಕ್ಷಿಸಲು ನಾನು ಈ ಯಾತ್ರಾ ಹೋರಾಟ ಕೈಗೊಂಡಿದ್ದೇನೆ ಎನ್ನುತ್ತಾರೆ.

ಇದು ಅದಾನಿ ಮತ್ತು ಅಂಬಾನಿಯವರ ಗುಲಾಮಿ ಸರ್ಕಾರವಾಗಿದೆ. ಅವರಿಗಾಗಿ ಕೆಲಸ ಮಾಡುತ್ತಾರೆ. ಮೋದಿಯವರು ಜನರ ಓಟಿನಿಂದ ಗೆದ್ದಿಲ್ಲ. ಹಾಗಾಗಿ ಅವರು ಜನರಿಗಾಗಿ ಕೆಲಸ ಮಾಡುತ್ತಿಲ್ಲ. ಹಿಟ್ಲರ್ ಶಾಹಿ ಆಡಳಿತ ನಡೆಸುತ್ತಿದ್ದಾರೆ. ಇದರಿಂದ ದೇಶ ಹಾಳಾಗುತ್ತಿದೆ ಎಂದಿದ್ದಾರೆ. ಯುವಜನರು ಮೋದಿಗೆ ಓಟು ಹಾಕಿದ್ದಾರೆ. ಇನ್ನು ಅವರು ಪಕೋಡಾ ಮಾರಬೇಕಷ್ಟೆ ಎಂದು ಚಟಾಕಿ ಹಾರಿಸಿದ್ದಾರೆ.

ಅವರಿಗೆ ಹೋದಲೆಲ್ಲಾ ಜನ ಬೆಂಬಲ ನೀಡಿದ್ದಾರೆ ಮಾತ್ರವಲ್ಲ ಅವರಿಗೆ ಊಟ ವಸತಿ ನೀಡಿ ಸಹಕರಿಸುತ್ತಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ.

ಉತ್ತರಖಂಡದಿಂದ ಹೊರಟು ಜೈಪುರ, ಮುಂಬೈ ಮಾರ್ಗವಾಗಿ ಚನ್ನೈಗೆ ಬಂದು ಇಲ್ಲಿಂದ ಕಲ್ಕತ್ತ ಮಾರ್ಗವಾಗಿ ದೆಹಲಿ ತಲುಪುವುದು ಸುಲಭದ ಮಾತಲ್ಲ. ಆದರೂ ಅವರಲ್ಲಿ ಆ ಜೋಶ್ ಮತ್ತು ಉತ್ಸಾಹ ಕಾಣುತ್ತಿದೆ. ಈಗಾಗಲೇ ಮೂರು ತಿಂಗಳು ಪೂರೈಸಿದ್ದಾರೆ. ನೋಡೋಣ ಮುಂದೆ ಏನಾಗುತ್ತದೆ ಎಂದು…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...