HomeUncategorizedಇವಿಯಂ ವಿರೋಧಿಸಿ ಏಕಾಂಗಿಯಾಗಿ 3 ತಿಂಗಳಿಂದ ರಾಷ್ಟ್ರ ಸುತ್ತುತ್ತಿರುವ ದೇಶಪ್ರೇಮಿ ಕರ್ನಾಟಕಕ್ಕೆ: ವಿಡಿಯೋ ನೋಡಿ

ಇವಿಯಂ ವಿರೋಧಿಸಿ ಏಕಾಂಗಿಯಾಗಿ 3 ತಿಂಗಳಿಂದ ರಾಷ್ಟ್ರ ಸುತ್ತುತ್ತಿರುವ ದೇಶಪ್ರೇಮಿ ಕರ್ನಾಟಕಕ್ಕೆ: ವಿಡಿಯೋ ನೋಡಿ

ಉತ್ತರಖಂಡದಿಂದ ಹೊರಟು ಜೈಪುರ, ಮುಂಬೈ ಮಾರ್ಗವಾಗಿ ಚನ್ನೈಗೆ ಬಂದು ಇಲ್ಲಿಂದ ಕಲ್ಕತ್ತ ಮಾರ್ಗವಾಗಿ ದೆಹಲಿ ತಲುಪುವುದು ಸುಲಭದ ಮಾತಲ್ಲ. ಆದರೂ ಅವರಲ್ಲಿ ಆ ಜೋಶ್ ಮತ್ತು ಉತ್ಸಾಹ ಕಾಣುತ್ತಿದೆ.

- Advertisement -
- Advertisement -

ಇವಿಎಂ ಬ್ಯಾನ್ ಮಾಡಬೇಕು ಮತ್ತು ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಬೇಕೆಂದು ಹಲವು ಹೋರಾಟಗಳು ದೇಶಾದ್ಯಂತ ನಡೆಯುತ್ತಿವೆ. ಅವುಗಳ ಸಾಲಿಗೆ ಇಲ್ಲೊಂದು ವಿಭಿನ್ನ ಪ್ರಯತ್ನವೂ ಸೇರ್ಪಡೆಯಾಗಿ ದೇಶದ ಗಮನ ಸೆಳೆಯುತ್ತಿದೆ. ಅದು ಕೂಡ ಏಕಾಂಗಿ ಹೋರಾಟ.

ಉತ್ತರಖಂಡದ ರುದ್ರಪುರ್ ದ ನಿವಾಸಿಯಾದ ಓಂಕಾರ್‌ ಸಿಂಗ್‌ ದಿಲಾನ್‌ ಎಂಬುವವರು ಇವಿಎಂ ಬ್ಯಾನ್ ಮಾಡಬೇಕು ಮತ್ತು ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಬೇಕೆಂಬ ಘೋಷಣೆಯ ಬ್ಯಾನರ್ ಅನ್ನು ಚಿಕ್ಕ ಬಂಡಿಗೆ ಅಂಟಿಸಿ ಬೆನ್ನಿಗೆ ಕಟ್ಟಿಕೊಂಡು ದೇಶ ಸುತ್ತುತ್ತಿದ್ದಾರೆ. ಅವರ ಬಂಡಿಗೆ ಎರಡು ಭಾರತದ ತ್ರಿವರ್ಣ ಧ್ವಜವನ್ನು ಕಟ್ಟಿ ಹಾರಿಸುವುದು ವಿಶೇಷವಾಗಿದೆ.

ಆಗಸ್ಟ್‌ 15ರಂದು ಉತ್ತರಖಂಡದಿಂದ ಹೊರಟ ಅವರು ನವೆಂಬರ್‌ 13 ರಂದು ಚನ್ನೈಗೆ ಹೋಗುವ ಮಾರ್ಗವಾಗಿ ಕರ್ನಾಟಕದ ಬೆಳಗಾವಿಗೆ ಬಂದಿದ್ದಾರೆ. ಕರ್ನಾಟಕದಲ್ಲಿ ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತರು ಅವರನ್ನು ಸ್ವಾಗತಿಸಿ ಅವರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ವಿಡಿಯೋ ನೋಡಿ

 

ನಾನು ರುದ್ರಪುರದಿಂದ ಬರುತ್ತಿದ್ದೇನೆ. ಜೈಪುರ ಮತ್ತು ಮುಂಬೈ ಮೂಲ ಪ್ರಯಾಣ ಮಾಡಿ ಇಲ್ಲಿಗೆ ಬಂದಿದ್ದೇನೆ.  ಚನ್ನೈ-ಕಲ್ಕತ್ತಾ ಮುಗಿಸಿ ದೆಹಲಿಗೆ ತಲುಪುತ್ತೇನೆ. ಇವಿಎಂ ಬ್ಯಾನ್ ಮಾಡಬೇಕು ಮತ್ತು ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಬೇಕೆಂದು ನನ್ನ ಹಕ್ಕೊತ್ತಾಯ. ಮುಂದುವರಿದ ಬಹಳಷ್ಟು ದೇಶಗಳು ಬ್ಯಾಲೆಟ್‌ ಪೇಪರ್‌ನಲ್ಲಿ ಚುನಾವಣೆ ನಡೆಸುತ್ತವೆ. ಇವಿಯಂನಿಂದ ಚುನಾವಣಾ ಅಕ್ರಮ ನಡೆದು ಪ್ರಜಾಪ್ರಭುತ್ವ ಹಾಳಾಗುತ್ತಿದೆ. ಹಾಗಾಗಿ ಪ್ರಜಾಪ್ರಭುತ್ವ ರಕ್ಷಿಸಲು ನಾನು ಈ ಯಾತ್ರಾ ಹೋರಾಟ ಕೈಗೊಂಡಿದ್ದೇನೆ ಎನ್ನುತ್ತಾರೆ.

ಇದು ಅದಾನಿ ಮತ್ತು ಅಂಬಾನಿಯವರ ಗುಲಾಮಿ ಸರ್ಕಾರವಾಗಿದೆ. ಅವರಿಗಾಗಿ ಕೆಲಸ ಮಾಡುತ್ತಾರೆ. ಮೋದಿಯವರು ಜನರ ಓಟಿನಿಂದ ಗೆದ್ದಿಲ್ಲ. ಹಾಗಾಗಿ ಅವರು ಜನರಿಗಾಗಿ ಕೆಲಸ ಮಾಡುತ್ತಿಲ್ಲ. ಹಿಟ್ಲರ್ ಶಾಹಿ ಆಡಳಿತ ನಡೆಸುತ್ತಿದ್ದಾರೆ. ಇದರಿಂದ ದೇಶ ಹಾಳಾಗುತ್ತಿದೆ ಎಂದಿದ್ದಾರೆ. ಯುವಜನರು ಮೋದಿಗೆ ಓಟು ಹಾಕಿದ್ದಾರೆ. ಇನ್ನು ಅವರು ಪಕೋಡಾ ಮಾರಬೇಕಷ್ಟೆ ಎಂದು ಚಟಾಕಿ ಹಾರಿಸಿದ್ದಾರೆ.

ಅವರಿಗೆ ಹೋದಲೆಲ್ಲಾ ಜನ ಬೆಂಬಲ ನೀಡಿದ್ದಾರೆ ಮಾತ್ರವಲ್ಲ ಅವರಿಗೆ ಊಟ ವಸತಿ ನೀಡಿ ಸಹಕರಿಸುತ್ತಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ.

ಉತ್ತರಖಂಡದಿಂದ ಹೊರಟು ಜೈಪುರ, ಮುಂಬೈ ಮಾರ್ಗವಾಗಿ ಚನ್ನೈಗೆ ಬಂದು ಇಲ್ಲಿಂದ ಕಲ್ಕತ್ತ ಮಾರ್ಗವಾಗಿ ದೆಹಲಿ ತಲುಪುವುದು ಸುಲಭದ ಮಾತಲ್ಲ. ಆದರೂ ಅವರಲ್ಲಿ ಆ ಜೋಶ್ ಮತ್ತು ಉತ್ಸಾಹ ಕಾಣುತ್ತಿದೆ. ಈಗಾಗಲೇ ಮೂರು ತಿಂಗಳು ಪೂರೈಸಿದ್ದಾರೆ. ನೋಡೋಣ ಮುಂದೆ ಏನಾಗುತ್ತದೆ ಎಂದು…
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...