Homeಮುಖಪುಟಇವಿಎಂ ವಿರೋಧಿಸಿ 100 ದಿನದಲ್ಲಿ 3000 ಕಿ.ಮೀ ನಡೆದ ಓಂಕಾರ್ ಸಿಂಗ್ ಬೆಂಗಳೂರಿಗೆ ಆಗಮನ

ಇವಿಎಂ ವಿರೋಧಿಸಿ 100 ದಿನದಲ್ಲಿ 3000 ಕಿ.ಮೀ ನಡೆದ ಓಂಕಾರ್ ಸಿಂಗ್ ಬೆಂಗಳೂರಿಗೆ ಆಗಮನ

ಅವರು ಮಧ್ಯಾಹ್ನ 3:30ಕ್ಕೆ ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಚನ್ನೈ ಕಡೆ ತಮ್ಮ ಪಾದಾಯಾತ್ರೆ ಮುಂದುವರೆಸಲಿದ್ದಾರೆ

- Advertisement -
- Advertisement -

‘ಇವಿಎಂ ಹಟಾವೋ; ದೇಶ್‌ ಬಚಾವೋ’ ಎಂಬ ಆಗ್ರಹದೊಂದಿಗೆ ಉತ್ತರಾಖಂಡ್ ರಾಜ್ಯದ ರುದ್ರಪುರದಿಂದ ಪಾದಯಾತ್ರೆ ಮೂಲಕ ಹೊರಟಿರುವ ಸಾಮಾಜಿಕ ಕಾರ್ಯಕರ್ತ ಓಂಕಾರ್‌ ಸಿಂಗ್‌ ದಿಲ್ಹಾನ್‌ ಗುರುವಾರ ಬೆಂಗಳೂರಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: ಇವಿಯಂ ವಿರೋಧಿಸಿ ರಾಷ್ಟ್ರ ಸುತ್ತುವ ವಿಭಿನ್ನ ಮತ್ತು ಏಕಾಂಗಿ ಹೋರಾಟವೊಂದು ಇಲ್ಲಿದೆ ನೋಡಿ

ಸುಮಾರು 6500 ಕಿ.ಮೀ. ಪಾದಯಾತ್ರೆ ಹಮ್ಮಿಕೊಂಡಿರುವ ಸಿಂಗ್ ಅವರು ಈಗಾಗಲೇ 103 ದಿನಗಳನ್ನು ಪೂರೈಸಿ 3000 ಕಿ.ಮೀ. ದೂರ ಕ್ರಮಿಸಿ ಜನರಲ್ಲಿ ಇವಿಎಂ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದ್ದಾರೆ.

ಆಗಸ್ಟ್ 18ರಂದು ಉತ್ತರಾಖಂಡ್ ರಾಜ್ಯದ ರುದ್ರಪುರದಿಂದ ಪಾದಯಾತ್ರೆ ಆರಂಭಿಸಿರುವ ಅವರು, ಈಗಾಗಲೇ ಉತ್ತರಾಖಂಡ, ದೆಹಲಿ, ಉತ್ತರ ಪ್ರದೇಶ, ಗುಜರಾತ, ರಾಜಸ್ತಾನ, ಮಹಾರಾಷ್ಟ್ರ  ರಾಜ್ಯಗಳಲ್ಲಿ ಕ್ರಮಿಸಿ ಇದೀಗ ಕರ್ನಾಟಕದ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನಲ್ಲಿ ಇವಿಎಂ ಬಗ್ಗೆ ಜಾಗೃತಿ ಮೂಡಿಸಿ ಇಲ್ಲಿಂದ ತಮಿಳುನಾಡು, ಆಂಧ್ರಪ್ರದೇಶ, ಒಡಿಸ್ಸಾ, ಅಸ್ಸಾಂ, ಪಶ್ಚಿಮಬಂಗಾಳ, ಬಿಹಾರ, ಉತ್ತರಾಖಂಡ ಮೂಲಕ
ದೆಹಲಿಗೆ ತೆರಳಿ ಅಲ್ಲಿ ತಮ್ಮ ಪಾದಯಾತ್ರೆ ಮುಕ್ತಾಯಗೊಳಿಸಲಿದ್ದಾರೆ.

ಬೆಂಗಳೂರಿನ ಹಲವು ಪ್ರಮುಖ ಬೀದಿಗಳಲ್ಲಿ ಸುತ್ತಾಡುತ್ತಾ ಅರಿವು ಮೂಡಿಸಲಿರುವ ಅವರು ಮಧ್ಯಾಹ್ನ 3:30ಕ್ಕೆ ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಚನ್ನೈ ಕಡೆ ತಮ್ಮ ಪಾದಾಯಾತ್ರೆ ಮುಂದುವರೆಸಲಿದ್ದಾರೆ. ಪ್ರಜ್ಞಾವಂತರೆಲ್ಲರೂ ಅವರ ಏಕಾಂಗಿ ಹೋರಾಟಕ್ಕೆ ಬೆಂಬಲೂ ಸೂಚಿಸುತ್ತಿದ್ದೇವೆ ಎಂದು ಸಾಮಾಜಿಕ ಕಾರ್ಯಕರ್ತ ತನ್ವೀರ್‌ರವರು ತಿಳಿಸಿದ್ದಾರೆ.

ಬೆಂಗಳೂರಿಗೆ ಆಗಮಿಸಿದ ದಿಲ್ಹಾನ್ ಅವರನ್ನು ಸಾಮಾಜಿಕ ಕಾರ್ಯಕರ್ತರು, ಎನ್‌ಜಿಒಗಳು, ಮಾನವ ಹಕ್ಕುಗಳ ಕಾರ್ಯಕರ್ತರು ಸ್ವಾಗತಿಸಿ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ಸಿಂಗ್, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿದ್ಯುನ್ಮಾನ ಮತಯಂತ್ರ (ಇವಿಎಂ) ಸರಿ ಹೊಂದುವುದಿಲ್ಲ. ದೊಡ್ಡ ದೊಡ್ಡ ಶ್ರೀಮಂತ ಹಾಗೂ ಮುಂದುವರಿದ ರಾಷ್ಟ್ರಗಳೇ ಈಗ ಇವಿಎಂ ಕೈಬಿಟ್ಟು ಹಳೆಯ ಪದ್ಧತಿಗೆ ಮರಳಿವೆ. ಆದ್ದರಿಂದ ನಮ್ಮ ದೇಶದಲ್ಲಿ ಇವಿಎಂ ಕೈಬಿಡಬೇಕು ಎಂದು ಚುನಾವಣಾ ಆಯೋಗವನ್ನು ಒತ್ತಾಯಿಸಿದರು.

ಇದನ್ನೂ ಓದಿ: ಇವಿಯಂ ವಿರೋಧಿಸಿ ಏಕಾಂಗಿಯಾಗಿ 3 ತಿಂಗಳಿಂದ ರಾಷ್ಟ್ರ ಸುತ್ತುತ್ತಿರುವ ದೇಶಪ್ರೇಮಿ ಕರ್ನಾಟಕಕ್ಕೆ: ವಿಡಿಯೋ ನೋಡಿ

ಈ ಹಿಂದೆ ಬ್ಯಾಲೆಟ್‌ ವೊಟಿಂಗ್‌ ವ್ಯವಸ್ಥೆ  ದೇಶದಲ್ಲಿ ಜಾರಿಯಲ್ಲಿತ್ತು. ಆಗ ಜನರಿಗೆ ಯಾವುದೇ ಸಂಶಯವಿರುತ್ತಿರಲಿಲ್ಲ. ಅದರಲ್ಲಿ ಅಕ್ರಮವೆಸಗಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಇವಿಎಂನಲ್ಲಿ ಅಕ್ರಮವೆಸಗಲು ಸಾಧ್ಯವಿದೆ ಎಂಬುದು ಹಲವು ತಜ್ಞರ ಅಭಿಪ್ರಾಯವಾಗಿದೆ. ಆದ್ದರಿಂದ ಜನರ ಸಂಶಯ ನಿವಾರಣೆಗಾಗಿ ಹಳೆಯ ಪದ್ಧತಿಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಮೋದಿ ನೇತೃತ್ವದ ಎನ್‌ಡಿಯ ಸರ್ಕಾರದಲ್ಲಿ ಯಾವುದೇ ಜನಪರ ಕೆಲಸಗಳು ಆಗದೇ ಇದಿದ್ದರೂ ಇವಿಎಂ ದುರ್ಬಳಕೆಯಿಂದ ಬಿಜೆಪಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆದು, ಅಧಿಕಾರಕ್ಕೆ ಬರುವಂತೆ ಆಯಿತು. ವಿದ್ಯುನ್ಮಾನ ಮತಯಂತ್ರ ಬೇಡವೆಂದು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ, ಸುಬ್ರಮಣಿಯನ್‌ ಸ್ವಾಮಿ ಅವರೇ ಆಕ್ಷೇಪ ಎತ್ತಿದ್ದರು. ಆದರೆ ಈಗ ಈ ಬಗ್ಗೆ  ಮೌನವಹಿಸಿದ್ದಾರೆ ಎಂದು ಅವರು ದೂರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವಿಎಂಗೆ ಬಳಸುವ ಬ್ಯಾಟರಿಗಳು ಹಳತಾದಂತೆ ಇವುಗಳನ್ನು ಡಿಸ್ಪೋಸ್ ಮಾಡಿದಾಗ ಪರಿಸರದ ಮೇಲೆ ಅಪಾರ ಹಾನಿಯಾಗುತ್ತದೆ.
    ಇಸಿ ನಿಯಮದಂತೆ ಒಂದು ರಾಜ್ಯದಲ್ಲಿ ಒಂದು ಸಾರಿ ಎಲೆಕ್ಷನ್ ಗೆ ಬಳಸಿದ ತರುವಾಯ ಅವನ್ನು ಮತ್ತದೇ ರಾಜ್ಯದಲ್ಲಿ ಬಳಸುವಂತಿಲ್ಲ. ಇವುಗಳ ಸಾಗಣೆಗೆ ಅಪಾರ ದುಡಿಮೆ,ಹಣ ಪೋಲಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...