Homeಮುಖಪುಟಇವಿಎಂ ವಿರೋಧಿಸಿ 100 ದಿನದಲ್ಲಿ 3000 ಕಿ.ಮೀ ನಡೆದ ಓಂಕಾರ್ ಸಿಂಗ್ ಬೆಂಗಳೂರಿಗೆ ಆಗಮನ

ಇವಿಎಂ ವಿರೋಧಿಸಿ 100 ದಿನದಲ್ಲಿ 3000 ಕಿ.ಮೀ ನಡೆದ ಓಂಕಾರ್ ಸಿಂಗ್ ಬೆಂಗಳೂರಿಗೆ ಆಗಮನ

ಅವರು ಮಧ್ಯಾಹ್ನ 3:30ಕ್ಕೆ ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಚನ್ನೈ ಕಡೆ ತಮ್ಮ ಪಾದಾಯಾತ್ರೆ ಮುಂದುವರೆಸಲಿದ್ದಾರೆ

- Advertisement -
- Advertisement -

‘ಇವಿಎಂ ಹಟಾವೋ; ದೇಶ್‌ ಬಚಾವೋ’ ಎಂಬ ಆಗ್ರಹದೊಂದಿಗೆ ಉತ್ತರಾಖಂಡ್ ರಾಜ್ಯದ ರುದ್ರಪುರದಿಂದ ಪಾದಯಾತ್ರೆ ಮೂಲಕ ಹೊರಟಿರುವ ಸಾಮಾಜಿಕ ಕಾರ್ಯಕರ್ತ ಓಂಕಾರ್‌ ಸಿಂಗ್‌ ದಿಲ್ಹಾನ್‌ ಗುರುವಾರ ಬೆಂಗಳೂರಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: ಇವಿಯಂ ವಿರೋಧಿಸಿ ರಾಷ್ಟ್ರ ಸುತ್ತುವ ವಿಭಿನ್ನ ಮತ್ತು ಏಕಾಂಗಿ ಹೋರಾಟವೊಂದು ಇಲ್ಲಿದೆ ನೋಡಿ

ಸುಮಾರು 6500 ಕಿ.ಮೀ. ಪಾದಯಾತ್ರೆ ಹಮ್ಮಿಕೊಂಡಿರುವ ಸಿಂಗ್ ಅವರು ಈಗಾಗಲೇ 103 ದಿನಗಳನ್ನು ಪೂರೈಸಿ 3000 ಕಿ.ಮೀ. ದೂರ ಕ್ರಮಿಸಿ ಜನರಲ್ಲಿ ಇವಿಎಂ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದ್ದಾರೆ.

ಆಗಸ್ಟ್ 18ರಂದು ಉತ್ತರಾಖಂಡ್ ರಾಜ್ಯದ ರುದ್ರಪುರದಿಂದ ಪಾದಯಾತ್ರೆ ಆರಂಭಿಸಿರುವ ಅವರು, ಈಗಾಗಲೇ ಉತ್ತರಾಖಂಡ, ದೆಹಲಿ, ಉತ್ತರ ಪ್ರದೇಶ, ಗುಜರಾತ, ರಾಜಸ್ತಾನ, ಮಹಾರಾಷ್ಟ್ರ  ರಾಜ್ಯಗಳಲ್ಲಿ ಕ್ರಮಿಸಿ ಇದೀಗ ಕರ್ನಾಟಕದ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನಲ್ಲಿ ಇವಿಎಂ ಬಗ್ಗೆ ಜಾಗೃತಿ ಮೂಡಿಸಿ ಇಲ್ಲಿಂದ ತಮಿಳುನಾಡು, ಆಂಧ್ರಪ್ರದೇಶ, ಒಡಿಸ್ಸಾ, ಅಸ್ಸಾಂ, ಪಶ್ಚಿಮಬಂಗಾಳ, ಬಿಹಾರ, ಉತ್ತರಾಖಂಡ ಮೂಲಕ
ದೆಹಲಿಗೆ ತೆರಳಿ ಅಲ್ಲಿ ತಮ್ಮ ಪಾದಯಾತ್ರೆ ಮುಕ್ತಾಯಗೊಳಿಸಲಿದ್ದಾರೆ.

ಬೆಂಗಳೂರಿನ ಹಲವು ಪ್ರಮುಖ ಬೀದಿಗಳಲ್ಲಿ ಸುತ್ತಾಡುತ್ತಾ ಅರಿವು ಮೂಡಿಸಲಿರುವ ಅವರು ಮಧ್ಯಾಹ್ನ 3:30ಕ್ಕೆ ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಚನ್ನೈ ಕಡೆ ತಮ್ಮ ಪಾದಾಯಾತ್ರೆ ಮುಂದುವರೆಸಲಿದ್ದಾರೆ. ಪ್ರಜ್ಞಾವಂತರೆಲ್ಲರೂ ಅವರ ಏಕಾಂಗಿ ಹೋರಾಟಕ್ಕೆ ಬೆಂಬಲೂ ಸೂಚಿಸುತ್ತಿದ್ದೇವೆ ಎಂದು ಸಾಮಾಜಿಕ ಕಾರ್ಯಕರ್ತ ತನ್ವೀರ್‌ರವರು ತಿಳಿಸಿದ್ದಾರೆ.

ಬೆಂಗಳೂರಿಗೆ ಆಗಮಿಸಿದ ದಿಲ್ಹಾನ್ ಅವರನ್ನು ಸಾಮಾಜಿಕ ಕಾರ್ಯಕರ್ತರು, ಎನ್‌ಜಿಒಗಳು, ಮಾನವ ಹಕ್ಕುಗಳ ಕಾರ್ಯಕರ್ತರು ಸ್ವಾಗತಿಸಿ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ಸಿಂಗ್, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿದ್ಯುನ್ಮಾನ ಮತಯಂತ್ರ (ಇವಿಎಂ) ಸರಿ ಹೊಂದುವುದಿಲ್ಲ. ದೊಡ್ಡ ದೊಡ್ಡ ಶ್ರೀಮಂತ ಹಾಗೂ ಮುಂದುವರಿದ ರಾಷ್ಟ್ರಗಳೇ ಈಗ ಇವಿಎಂ ಕೈಬಿಟ್ಟು ಹಳೆಯ ಪದ್ಧತಿಗೆ ಮರಳಿವೆ. ಆದ್ದರಿಂದ ನಮ್ಮ ದೇಶದಲ್ಲಿ ಇವಿಎಂ ಕೈಬಿಡಬೇಕು ಎಂದು ಚುನಾವಣಾ ಆಯೋಗವನ್ನು ಒತ್ತಾಯಿಸಿದರು.

ಇದನ್ನೂ ಓದಿ: ಇವಿಯಂ ವಿರೋಧಿಸಿ ಏಕಾಂಗಿಯಾಗಿ 3 ತಿಂಗಳಿಂದ ರಾಷ್ಟ್ರ ಸುತ್ತುತ್ತಿರುವ ದೇಶಪ್ರೇಮಿ ಕರ್ನಾಟಕಕ್ಕೆ: ವಿಡಿಯೋ ನೋಡಿ

ಈ ಹಿಂದೆ ಬ್ಯಾಲೆಟ್‌ ವೊಟಿಂಗ್‌ ವ್ಯವಸ್ಥೆ  ದೇಶದಲ್ಲಿ ಜಾರಿಯಲ್ಲಿತ್ತು. ಆಗ ಜನರಿಗೆ ಯಾವುದೇ ಸಂಶಯವಿರುತ್ತಿರಲಿಲ್ಲ. ಅದರಲ್ಲಿ ಅಕ್ರಮವೆಸಗಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಇವಿಎಂನಲ್ಲಿ ಅಕ್ರಮವೆಸಗಲು ಸಾಧ್ಯವಿದೆ ಎಂಬುದು ಹಲವು ತಜ್ಞರ ಅಭಿಪ್ರಾಯವಾಗಿದೆ. ಆದ್ದರಿಂದ ಜನರ ಸಂಶಯ ನಿವಾರಣೆಗಾಗಿ ಹಳೆಯ ಪದ್ಧತಿಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಮೋದಿ ನೇತೃತ್ವದ ಎನ್‌ಡಿಯ ಸರ್ಕಾರದಲ್ಲಿ ಯಾವುದೇ ಜನಪರ ಕೆಲಸಗಳು ಆಗದೇ ಇದಿದ್ದರೂ ಇವಿಎಂ ದುರ್ಬಳಕೆಯಿಂದ ಬಿಜೆಪಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆದು, ಅಧಿಕಾರಕ್ಕೆ ಬರುವಂತೆ ಆಯಿತು. ವಿದ್ಯುನ್ಮಾನ ಮತಯಂತ್ರ ಬೇಡವೆಂದು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ, ಸುಬ್ರಮಣಿಯನ್‌ ಸ್ವಾಮಿ ಅವರೇ ಆಕ್ಷೇಪ ಎತ್ತಿದ್ದರು. ಆದರೆ ಈಗ ಈ ಬಗ್ಗೆ  ಮೌನವಹಿಸಿದ್ದಾರೆ ಎಂದು ಅವರು ದೂರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವಿಎಂಗೆ ಬಳಸುವ ಬ್ಯಾಟರಿಗಳು ಹಳತಾದಂತೆ ಇವುಗಳನ್ನು ಡಿಸ್ಪೋಸ್ ಮಾಡಿದಾಗ ಪರಿಸರದ ಮೇಲೆ ಅಪಾರ ಹಾನಿಯಾಗುತ್ತದೆ.
    ಇಸಿ ನಿಯಮದಂತೆ ಒಂದು ರಾಜ್ಯದಲ್ಲಿ ಒಂದು ಸಾರಿ ಎಲೆಕ್ಷನ್ ಗೆ ಬಳಸಿದ ತರುವಾಯ ಅವನ್ನು ಮತ್ತದೇ ರಾಜ್ಯದಲ್ಲಿ ಬಳಸುವಂತಿಲ್ಲ. ಇವುಗಳ ಸಾಗಣೆಗೆ ಅಪಾರ ದುಡಿಮೆ,ಹಣ ಪೋಲಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...