Homeಮುಖಪುಟಇವಿಎಂ ವಿರೋಧಿಸಿ 100 ದಿನದಲ್ಲಿ 3000 ಕಿ.ಮೀ ನಡೆದ ಓಂಕಾರ್ ಸಿಂಗ್ ಬೆಂಗಳೂರಿಗೆ ಆಗಮನ

ಇವಿಎಂ ವಿರೋಧಿಸಿ 100 ದಿನದಲ್ಲಿ 3000 ಕಿ.ಮೀ ನಡೆದ ಓಂಕಾರ್ ಸಿಂಗ್ ಬೆಂಗಳೂರಿಗೆ ಆಗಮನ

ಅವರು ಮಧ್ಯಾಹ್ನ 3:30ಕ್ಕೆ ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಚನ್ನೈ ಕಡೆ ತಮ್ಮ ಪಾದಾಯಾತ್ರೆ ಮುಂದುವರೆಸಲಿದ್ದಾರೆ

- Advertisement -
- Advertisement -

‘ಇವಿಎಂ ಹಟಾವೋ; ದೇಶ್‌ ಬಚಾವೋ’ ಎಂಬ ಆಗ್ರಹದೊಂದಿಗೆ ಉತ್ತರಾಖಂಡ್ ರಾಜ್ಯದ ರುದ್ರಪುರದಿಂದ ಪಾದಯಾತ್ರೆ ಮೂಲಕ ಹೊರಟಿರುವ ಸಾಮಾಜಿಕ ಕಾರ್ಯಕರ್ತ ಓಂಕಾರ್‌ ಸಿಂಗ್‌ ದಿಲ್ಹಾನ್‌ ಗುರುವಾರ ಬೆಂಗಳೂರಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: ಇವಿಯಂ ವಿರೋಧಿಸಿ ರಾಷ್ಟ್ರ ಸುತ್ತುವ ವಿಭಿನ್ನ ಮತ್ತು ಏಕಾಂಗಿ ಹೋರಾಟವೊಂದು ಇಲ್ಲಿದೆ ನೋಡಿ

ಸುಮಾರು 6500 ಕಿ.ಮೀ. ಪಾದಯಾತ್ರೆ ಹಮ್ಮಿಕೊಂಡಿರುವ ಸಿಂಗ್ ಅವರು ಈಗಾಗಲೇ 103 ದಿನಗಳನ್ನು ಪೂರೈಸಿ 3000 ಕಿ.ಮೀ. ದೂರ ಕ್ರಮಿಸಿ ಜನರಲ್ಲಿ ಇವಿಎಂ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದ್ದಾರೆ.

ಆಗಸ್ಟ್ 18ರಂದು ಉತ್ತರಾಖಂಡ್ ರಾಜ್ಯದ ರುದ್ರಪುರದಿಂದ ಪಾದಯಾತ್ರೆ ಆರಂಭಿಸಿರುವ ಅವರು, ಈಗಾಗಲೇ ಉತ್ತರಾಖಂಡ, ದೆಹಲಿ, ಉತ್ತರ ಪ್ರದೇಶ, ಗುಜರಾತ, ರಾಜಸ್ತಾನ, ಮಹಾರಾಷ್ಟ್ರ  ರಾಜ್ಯಗಳಲ್ಲಿ ಕ್ರಮಿಸಿ ಇದೀಗ ಕರ್ನಾಟಕದ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನಲ್ಲಿ ಇವಿಎಂ ಬಗ್ಗೆ ಜಾಗೃತಿ ಮೂಡಿಸಿ ಇಲ್ಲಿಂದ ತಮಿಳುನಾಡು, ಆಂಧ್ರಪ್ರದೇಶ, ಒಡಿಸ್ಸಾ, ಅಸ್ಸಾಂ, ಪಶ್ಚಿಮಬಂಗಾಳ, ಬಿಹಾರ, ಉತ್ತರಾಖಂಡ ಮೂಲಕ
ದೆಹಲಿಗೆ ತೆರಳಿ ಅಲ್ಲಿ ತಮ್ಮ ಪಾದಯಾತ್ರೆ ಮುಕ್ತಾಯಗೊಳಿಸಲಿದ್ದಾರೆ.

ಬೆಂಗಳೂರಿನ ಹಲವು ಪ್ರಮುಖ ಬೀದಿಗಳಲ್ಲಿ ಸುತ್ತಾಡುತ್ತಾ ಅರಿವು ಮೂಡಿಸಲಿರುವ ಅವರು ಮಧ್ಯಾಹ್ನ 3:30ಕ್ಕೆ ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಚನ್ನೈ ಕಡೆ ತಮ್ಮ ಪಾದಾಯಾತ್ರೆ ಮುಂದುವರೆಸಲಿದ್ದಾರೆ. ಪ್ರಜ್ಞಾವಂತರೆಲ್ಲರೂ ಅವರ ಏಕಾಂಗಿ ಹೋರಾಟಕ್ಕೆ ಬೆಂಬಲೂ ಸೂಚಿಸುತ್ತಿದ್ದೇವೆ ಎಂದು ಸಾಮಾಜಿಕ ಕಾರ್ಯಕರ್ತ ತನ್ವೀರ್‌ರವರು ತಿಳಿಸಿದ್ದಾರೆ.

ಬೆಂಗಳೂರಿಗೆ ಆಗಮಿಸಿದ ದಿಲ್ಹಾನ್ ಅವರನ್ನು ಸಾಮಾಜಿಕ ಕಾರ್ಯಕರ್ತರು, ಎನ್‌ಜಿಒಗಳು, ಮಾನವ ಹಕ್ಕುಗಳ ಕಾರ್ಯಕರ್ತರು ಸ್ವಾಗತಿಸಿ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ಸಿಂಗ್, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿದ್ಯುನ್ಮಾನ ಮತಯಂತ್ರ (ಇವಿಎಂ) ಸರಿ ಹೊಂದುವುದಿಲ್ಲ. ದೊಡ್ಡ ದೊಡ್ಡ ಶ್ರೀಮಂತ ಹಾಗೂ ಮುಂದುವರಿದ ರಾಷ್ಟ್ರಗಳೇ ಈಗ ಇವಿಎಂ ಕೈಬಿಟ್ಟು ಹಳೆಯ ಪದ್ಧತಿಗೆ ಮರಳಿವೆ. ಆದ್ದರಿಂದ ನಮ್ಮ ದೇಶದಲ್ಲಿ ಇವಿಎಂ ಕೈಬಿಡಬೇಕು ಎಂದು ಚುನಾವಣಾ ಆಯೋಗವನ್ನು ಒತ್ತಾಯಿಸಿದರು.

ಇದನ್ನೂ ಓದಿ: ಇವಿಯಂ ವಿರೋಧಿಸಿ ಏಕಾಂಗಿಯಾಗಿ 3 ತಿಂಗಳಿಂದ ರಾಷ್ಟ್ರ ಸುತ್ತುತ್ತಿರುವ ದೇಶಪ್ರೇಮಿ ಕರ್ನಾಟಕಕ್ಕೆ: ವಿಡಿಯೋ ನೋಡಿ

ಈ ಹಿಂದೆ ಬ್ಯಾಲೆಟ್‌ ವೊಟಿಂಗ್‌ ವ್ಯವಸ್ಥೆ  ದೇಶದಲ್ಲಿ ಜಾರಿಯಲ್ಲಿತ್ತು. ಆಗ ಜನರಿಗೆ ಯಾವುದೇ ಸಂಶಯವಿರುತ್ತಿರಲಿಲ್ಲ. ಅದರಲ್ಲಿ ಅಕ್ರಮವೆಸಗಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಇವಿಎಂನಲ್ಲಿ ಅಕ್ರಮವೆಸಗಲು ಸಾಧ್ಯವಿದೆ ಎಂಬುದು ಹಲವು ತಜ್ಞರ ಅಭಿಪ್ರಾಯವಾಗಿದೆ. ಆದ್ದರಿಂದ ಜನರ ಸಂಶಯ ನಿವಾರಣೆಗಾಗಿ ಹಳೆಯ ಪದ್ಧತಿಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಮೋದಿ ನೇತೃತ್ವದ ಎನ್‌ಡಿಯ ಸರ್ಕಾರದಲ್ಲಿ ಯಾವುದೇ ಜನಪರ ಕೆಲಸಗಳು ಆಗದೇ ಇದಿದ್ದರೂ ಇವಿಎಂ ದುರ್ಬಳಕೆಯಿಂದ ಬಿಜೆಪಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆದು, ಅಧಿಕಾರಕ್ಕೆ ಬರುವಂತೆ ಆಯಿತು. ವಿದ್ಯುನ್ಮಾನ ಮತಯಂತ್ರ ಬೇಡವೆಂದು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ, ಸುಬ್ರಮಣಿಯನ್‌ ಸ್ವಾಮಿ ಅವರೇ ಆಕ್ಷೇಪ ಎತ್ತಿದ್ದರು. ಆದರೆ ಈಗ ಈ ಬಗ್ಗೆ  ಮೌನವಹಿಸಿದ್ದಾರೆ ಎಂದು ಅವರು ದೂರಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಇವಿಎಂಗೆ ಬಳಸುವ ಬ್ಯಾಟರಿಗಳು ಹಳತಾದಂತೆ ಇವುಗಳನ್ನು ಡಿಸ್ಪೋಸ್ ಮಾಡಿದಾಗ ಪರಿಸರದ ಮೇಲೆ ಅಪಾರ ಹಾನಿಯಾಗುತ್ತದೆ.
    ಇಸಿ ನಿಯಮದಂತೆ ಒಂದು ರಾಜ್ಯದಲ್ಲಿ ಒಂದು ಸಾರಿ ಎಲೆಕ್ಷನ್ ಗೆ ಬಳಸಿದ ತರುವಾಯ ಅವನ್ನು ಮತ್ತದೇ ರಾಜ್ಯದಲ್ಲಿ ಬಳಸುವಂತಿಲ್ಲ. ಇವುಗಳ ಸಾಗಣೆಗೆ ಅಪಾರ ದುಡಿಮೆ,ಹಣ ಪೋಲಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು

0
ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್‌ಐಟಿ ತಂಡ, ಇಂದು (ಮೇ 4) ಹಾಸನದ ಹೆಚ್‌.ಡಿ ರೇವಣ್ಣ ಅವರ ನಿವಾಸದಲ್ಲಿ ಮಹಜರು ನಡೆಸಿದೆ. ಡಿವೈಎಸ್‌ಪಿ...