Homeಮುಖಪುಟಇವಿಎಂ ವಿರೋಧಿಸಿ 100 ದಿನದಲ್ಲಿ 3000 ಕಿ.ಮೀ ನಡೆದ ಓಂಕಾರ್ ಸಿಂಗ್ ಬೆಂಗಳೂರಿಗೆ ಆಗಮನ

ಇವಿಎಂ ವಿರೋಧಿಸಿ 100 ದಿನದಲ್ಲಿ 3000 ಕಿ.ಮೀ ನಡೆದ ಓಂಕಾರ್ ಸಿಂಗ್ ಬೆಂಗಳೂರಿಗೆ ಆಗಮನ

ಅವರು ಮಧ್ಯಾಹ್ನ 3:30ಕ್ಕೆ ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಚನ್ನೈ ಕಡೆ ತಮ್ಮ ಪಾದಾಯಾತ್ರೆ ಮುಂದುವರೆಸಲಿದ್ದಾರೆ

- Advertisement -
- Advertisement -

‘ಇವಿಎಂ ಹಟಾವೋ; ದೇಶ್‌ ಬಚಾವೋ’ ಎಂಬ ಆಗ್ರಹದೊಂದಿಗೆ ಉತ್ತರಾಖಂಡ್ ರಾಜ್ಯದ ರುದ್ರಪುರದಿಂದ ಪಾದಯಾತ್ರೆ ಮೂಲಕ ಹೊರಟಿರುವ ಸಾಮಾಜಿಕ ಕಾರ್ಯಕರ್ತ ಓಂಕಾರ್‌ ಸಿಂಗ್‌ ದಿಲ್ಹಾನ್‌ ಗುರುವಾರ ಬೆಂಗಳೂರಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: ಇವಿಯಂ ವಿರೋಧಿಸಿ ರಾಷ್ಟ್ರ ಸುತ್ತುವ ವಿಭಿನ್ನ ಮತ್ತು ಏಕಾಂಗಿ ಹೋರಾಟವೊಂದು ಇಲ್ಲಿದೆ ನೋಡಿ

ಸುಮಾರು 6500 ಕಿ.ಮೀ. ಪಾದಯಾತ್ರೆ ಹಮ್ಮಿಕೊಂಡಿರುವ ಸಿಂಗ್ ಅವರು ಈಗಾಗಲೇ 103 ದಿನಗಳನ್ನು ಪೂರೈಸಿ 3000 ಕಿ.ಮೀ. ದೂರ ಕ್ರಮಿಸಿ ಜನರಲ್ಲಿ ಇವಿಎಂ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದ್ದಾರೆ.

ಆಗಸ್ಟ್ 18ರಂದು ಉತ್ತರಾಖಂಡ್ ರಾಜ್ಯದ ರುದ್ರಪುರದಿಂದ ಪಾದಯಾತ್ರೆ ಆರಂಭಿಸಿರುವ ಅವರು, ಈಗಾಗಲೇ ಉತ್ತರಾಖಂಡ, ದೆಹಲಿ, ಉತ್ತರ ಪ್ರದೇಶ, ಗುಜರಾತ, ರಾಜಸ್ತಾನ, ಮಹಾರಾಷ್ಟ್ರ  ರಾಜ್ಯಗಳಲ್ಲಿ ಕ್ರಮಿಸಿ ಇದೀಗ ಕರ್ನಾಟಕದ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನಲ್ಲಿ ಇವಿಎಂ ಬಗ್ಗೆ ಜಾಗೃತಿ ಮೂಡಿಸಿ ಇಲ್ಲಿಂದ ತಮಿಳುನಾಡು, ಆಂಧ್ರಪ್ರದೇಶ, ಒಡಿಸ್ಸಾ, ಅಸ್ಸಾಂ, ಪಶ್ಚಿಮಬಂಗಾಳ, ಬಿಹಾರ, ಉತ್ತರಾಖಂಡ ಮೂಲಕ
ದೆಹಲಿಗೆ ತೆರಳಿ ಅಲ್ಲಿ ತಮ್ಮ ಪಾದಯಾತ್ರೆ ಮುಕ್ತಾಯಗೊಳಿಸಲಿದ್ದಾರೆ.

ಬೆಂಗಳೂರಿನ ಹಲವು ಪ್ರಮುಖ ಬೀದಿಗಳಲ್ಲಿ ಸುತ್ತಾಡುತ್ತಾ ಅರಿವು ಮೂಡಿಸಲಿರುವ ಅವರು ಮಧ್ಯಾಹ್ನ 3:30ಕ್ಕೆ ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಚನ್ನೈ ಕಡೆ ತಮ್ಮ ಪಾದಾಯಾತ್ರೆ ಮುಂದುವರೆಸಲಿದ್ದಾರೆ. ಪ್ರಜ್ಞಾವಂತರೆಲ್ಲರೂ ಅವರ ಏಕಾಂಗಿ ಹೋರಾಟಕ್ಕೆ ಬೆಂಬಲೂ ಸೂಚಿಸುತ್ತಿದ್ದೇವೆ ಎಂದು ಸಾಮಾಜಿಕ ಕಾರ್ಯಕರ್ತ ತನ್ವೀರ್‌ರವರು ತಿಳಿಸಿದ್ದಾರೆ.

ಬೆಂಗಳೂರಿಗೆ ಆಗಮಿಸಿದ ದಿಲ್ಹಾನ್ ಅವರನ್ನು ಸಾಮಾಜಿಕ ಕಾರ್ಯಕರ್ತರು, ಎನ್‌ಜಿಒಗಳು, ಮಾನವ ಹಕ್ಕುಗಳ ಕಾರ್ಯಕರ್ತರು ಸ್ವಾಗತಿಸಿ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ಸಿಂಗ್, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿದ್ಯುನ್ಮಾನ ಮತಯಂತ್ರ (ಇವಿಎಂ) ಸರಿ ಹೊಂದುವುದಿಲ್ಲ. ದೊಡ್ಡ ದೊಡ್ಡ ಶ್ರೀಮಂತ ಹಾಗೂ ಮುಂದುವರಿದ ರಾಷ್ಟ್ರಗಳೇ ಈಗ ಇವಿಎಂ ಕೈಬಿಟ್ಟು ಹಳೆಯ ಪದ್ಧತಿಗೆ ಮರಳಿವೆ. ಆದ್ದರಿಂದ ನಮ್ಮ ದೇಶದಲ್ಲಿ ಇವಿಎಂ ಕೈಬಿಡಬೇಕು ಎಂದು ಚುನಾವಣಾ ಆಯೋಗವನ್ನು ಒತ್ತಾಯಿಸಿದರು.

ಇದನ್ನೂ ಓದಿ: ಇವಿಯಂ ವಿರೋಧಿಸಿ ಏಕಾಂಗಿಯಾಗಿ 3 ತಿಂಗಳಿಂದ ರಾಷ್ಟ್ರ ಸುತ್ತುತ್ತಿರುವ ದೇಶಪ್ರೇಮಿ ಕರ್ನಾಟಕಕ್ಕೆ: ವಿಡಿಯೋ ನೋಡಿ

ಈ ಹಿಂದೆ ಬ್ಯಾಲೆಟ್‌ ವೊಟಿಂಗ್‌ ವ್ಯವಸ್ಥೆ  ದೇಶದಲ್ಲಿ ಜಾರಿಯಲ್ಲಿತ್ತು. ಆಗ ಜನರಿಗೆ ಯಾವುದೇ ಸಂಶಯವಿರುತ್ತಿರಲಿಲ್ಲ. ಅದರಲ್ಲಿ ಅಕ್ರಮವೆಸಗಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಇವಿಎಂನಲ್ಲಿ ಅಕ್ರಮವೆಸಗಲು ಸಾಧ್ಯವಿದೆ ಎಂಬುದು ಹಲವು ತಜ್ಞರ ಅಭಿಪ್ರಾಯವಾಗಿದೆ. ಆದ್ದರಿಂದ ಜನರ ಸಂಶಯ ನಿವಾರಣೆಗಾಗಿ ಹಳೆಯ ಪದ್ಧತಿಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಮೋದಿ ನೇತೃತ್ವದ ಎನ್‌ಡಿಯ ಸರ್ಕಾರದಲ್ಲಿ ಯಾವುದೇ ಜನಪರ ಕೆಲಸಗಳು ಆಗದೇ ಇದಿದ್ದರೂ ಇವಿಎಂ ದುರ್ಬಳಕೆಯಿಂದ ಬಿಜೆಪಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆದು, ಅಧಿಕಾರಕ್ಕೆ ಬರುವಂತೆ ಆಯಿತು. ವಿದ್ಯುನ್ಮಾನ ಮತಯಂತ್ರ ಬೇಡವೆಂದು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ, ಸುಬ್ರಮಣಿಯನ್‌ ಸ್ವಾಮಿ ಅವರೇ ಆಕ್ಷೇಪ ಎತ್ತಿದ್ದರು. ಆದರೆ ಈಗ ಈ ಬಗ್ಗೆ  ಮೌನವಹಿಸಿದ್ದಾರೆ ಎಂದು ಅವರು ದೂರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವಿಎಂಗೆ ಬಳಸುವ ಬ್ಯಾಟರಿಗಳು ಹಳತಾದಂತೆ ಇವುಗಳನ್ನು ಡಿಸ್ಪೋಸ್ ಮಾಡಿದಾಗ ಪರಿಸರದ ಮೇಲೆ ಅಪಾರ ಹಾನಿಯಾಗುತ್ತದೆ.
    ಇಸಿ ನಿಯಮದಂತೆ ಒಂದು ರಾಜ್ಯದಲ್ಲಿ ಒಂದು ಸಾರಿ ಎಲೆಕ್ಷನ್ ಗೆ ಬಳಸಿದ ತರುವಾಯ ಅವನ್ನು ಮತ್ತದೇ ರಾಜ್ಯದಲ್ಲಿ ಬಳಸುವಂತಿಲ್ಲ. ಇವುಗಳ ಸಾಗಣೆಗೆ ಅಪಾರ ದುಡಿಮೆ,ಹಣ ಪೋಲಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...