Homeಮುಖಪುಟಇವಿಎಂ ವಿರೋಧಿಸಿ 100 ದಿನದಲ್ಲಿ 3000 ಕಿ.ಮೀ ನಡೆದ ಓಂಕಾರ್ ಸಿಂಗ್ ಬೆಂಗಳೂರಿಗೆ ಆಗಮನ

ಇವಿಎಂ ವಿರೋಧಿಸಿ 100 ದಿನದಲ್ಲಿ 3000 ಕಿ.ಮೀ ನಡೆದ ಓಂಕಾರ್ ಸಿಂಗ್ ಬೆಂಗಳೂರಿಗೆ ಆಗಮನ

ಅವರು ಮಧ್ಯಾಹ್ನ 3:30ಕ್ಕೆ ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಚನ್ನೈ ಕಡೆ ತಮ್ಮ ಪಾದಾಯಾತ್ರೆ ಮುಂದುವರೆಸಲಿದ್ದಾರೆ

- Advertisement -
- Advertisement -

‘ಇವಿಎಂ ಹಟಾವೋ; ದೇಶ್‌ ಬಚಾವೋ’ ಎಂಬ ಆಗ್ರಹದೊಂದಿಗೆ ಉತ್ತರಾಖಂಡ್ ರಾಜ್ಯದ ರುದ್ರಪುರದಿಂದ ಪಾದಯಾತ್ರೆ ಮೂಲಕ ಹೊರಟಿರುವ ಸಾಮಾಜಿಕ ಕಾರ್ಯಕರ್ತ ಓಂಕಾರ್‌ ಸಿಂಗ್‌ ದಿಲ್ಹಾನ್‌ ಗುರುವಾರ ಬೆಂಗಳೂರಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: ಇವಿಯಂ ವಿರೋಧಿಸಿ ರಾಷ್ಟ್ರ ಸುತ್ತುವ ವಿಭಿನ್ನ ಮತ್ತು ಏಕಾಂಗಿ ಹೋರಾಟವೊಂದು ಇಲ್ಲಿದೆ ನೋಡಿ

ಸುಮಾರು 6500 ಕಿ.ಮೀ. ಪಾದಯಾತ್ರೆ ಹಮ್ಮಿಕೊಂಡಿರುವ ಸಿಂಗ್ ಅವರು ಈಗಾಗಲೇ 103 ದಿನಗಳನ್ನು ಪೂರೈಸಿ 3000 ಕಿ.ಮೀ. ದೂರ ಕ್ರಮಿಸಿ ಜನರಲ್ಲಿ ಇವಿಎಂ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದ್ದಾರೆ.

ಆಗಸ್ಟ್ 18ರಂದು ಉತ್ತರಾಖಂಡ್ ರಾಜ್ಯದ ರುದ್ರಪುರದಿಂದ ಪಾದಯಾತ್ರೆ ಆರಂಭಿಸಿರುವ ಅವರು, ಈಗಾಗಲೇ ಉತ್ತರಾಖಂಡ, ದೆಹಲಿ, ಉತ್ತರ ಪ್ರದೇಶ, ಗುಜರಾತ, ರಾಜಸ್ತಾನ, ಮಹಾರಾಷ್ಟ್ರ  ರಾಜ್ಯಗಳಲ್ಲಿ ಕ್ರಮಿಸಿ ಇದೀಗ ಕರ್ನಾಟಕದ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನಲ್ಲಿ ಇವಿಎಂ ಬಗ್ಗೆ ಜಾಗೃತಿ ಮೂಡಿಸಿ ಇಲ್ಲಿಂದ ತಮಿಳುನಾಡು, ಆಂಧ್ರಪ್ರದೇಶ, ಒಡಿಸ್ಸಾ, ಅಸ್ಸಾಂ, ಪಶ್ಚಿಮಬಂಗಾಳ, ಬಿಹಾರ, ಉತ್ತರಾಖಂಡ ಮೂಲಕ
ದೆಹಲಿಗೆ ತೆರಳಿ ಅಲ್ಲಿ ತಮ್ಮ ಪಾದಯಾತ್ರೆ ಮುಕ್ತಾಯಗೊಳಿಸಲಿದ್ದಾರೆ.

ಬೆಂಗಳೂರಿನ ಹಲವು ಪ್ರಮುಖ ಬೀದಿಗಳಲ್ಲಿ ಸುತ್ತಾಡುತ್ತಾ ಅರಿವು ಮೂಡಿಸಲಿರುವ ಅವರು ಮಧ್ಯಾಹ್ನ 3:30ಕ್ಕೆ ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಚನ್ನೈ ಕಡೆ ತಮ್ಮ ಪಾದಾಯಾತ್ರೆ ಮುಂದುವರೆಸಲಿದ್ದಾರೆ. ಪ್ರಜ್ಞಾವಂತರೆಲ್ಲರೂ ಅವರ ಏಕಾಂಗಿ ಹೋರಾಟಕ್ಕೆ ಬೆಂಬಲೂ ಸೂಚಿಸುತ್ತಿದ್ದೇವೆ ಎಂದು ಸಾಮಾಜಿಕ ಕಾರ್ಯಕರ್ತ ತನ್ವೀರ್‌ರವರು ತಿಳಿಸಿದ್ದಾರೆ.

ಬೆಂಗಳೂರಿಗೆ ಆಗಮಿಸಿದ ದಿಲ್ಹಾನ್ ಅವರನ್ನು ಸಾಮಾಜಿಕ ಕಾರ್ಯಕರ್ತರು, ಎನ್‌ಜಿಒಗಳು, ಮಾನವ ಹಕ್ಕುಗಳ ಕಾರ್ಯಕರ್ತರು ಸ್ವಾಗತಿಸಿ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ಸಿಂಗ್, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿದ್ಯುನ್ಮಾನ ಮತಯಂತ್ರ (ಇವಿಎಂ) ಸರಿ ಹೊಂದುವುದಿಲ್ಲ. ದೊಡ್ಡ ದೊಡ್ಡ ಶ್ರೀಮಂತ ಹಾಗೂ ಮುಂದುವರಿದ ರಾಷ್ಟ್ರಗಳೇ ಈಗ ಇವಿಎಂ ಕೈಬಿಟ್ಟು ಹಳೆಯ ಪದ್ಧತಿಗೆ ಮರಳಿವೆ. ಆದ್ದರಿಂದ ನಮ್ಮ ದೇಶದಲ್ಲಿ ಇವಿಎಂ ಕೈಬಿಡಬೇಕು ಎಂದು ಚುನಾವಣಾ ಆಯೋಗವನ್ನು ಒತ್ತಾಯಿಸಿದರು.

ಇದನ್ನೂ ಓದಿ: ಇವಿಯಂ ವಿರೋಧಿಸಿ ಏಕಾಂಗಿಯಾಗಿ 3 ತಿಂಗಳಿಂದ ರಾಷ್ಟ್ರ ಸುತ್ತುತ್ತಿರುವ ದೇಶಪ್ರೇಮಿ ಕರ್ನಾಟಕಕ್ಕೆ: ವಿಡಿಯೋ ನೋಡಿ

ಈ ಹಿಂದೆ ಬ್ಯಾಲೆಟ್‌ ವೊಟಿಂಗ್‌ ವ್ಯವಸ್ಥೆ  ದೇಶದಲ್ಲಿ ಜಾರಿಯಲ್ಲಿತ್ತು. ಆಗ ಜನರಿಗೆ ಯಾವುದೇ ಸಂಶಯವಿರುತ್ತಿರಲಿಲ್ಲ. ಅದರಲ್ಲಿ ಅಕ್ರಮವೆಸಗಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಇವಿಎಂನಲ್ಲಿ ಅಕ್ರಮವೆಸಗಲು ಸಾಧ್ಯವಿದೆ ಎಂಬುದು ಹಲವು ತಜ್ಞರ ಅಭಿಪ್ರಾಯವಾಗಿದೆ. ಆದ್ದರಿಂದ ಜನರ ಸಂಶಯ ನಿವಾರಣೆಗಾಗಿ ಹಳೆಯ ಪದ್ಧತಿಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಮೋದಿ ನೇತೃತ್ವದ ಎನ್‌ಡಿಯ ಸರ್ಕಾರದಲ್ಲಿ ಯಾವುದೇ ಜನಪರ ಕೆಲಸಗಳು ಆಗದೇ ಇದಿದ್ದರೂ ಇವಿಎಂ ದುರ್ಬಳಕೆಯಿಂದ ಬಿಜೆಪಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆದು, ಅಧಿಕಾರಕ್ಕೆ ಬರುವಂತೆ ಆಯಿತು. ವಿದ್ಯುನ್ಮಾನ ಮತಯಂತ್ರ ಬೇಡವೆಂದು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ, ಸುಬ್ರಮಣಿಯನ್‌ ಸ್ವಾಮಿ ಅವರೇ ಆಕ್ಷೇಪ ಎತ್ತಿದ್ದರು. ಆದರೆ ಈಗ ಈ ಬಗ್ಗೆ  ಮೌನವಹಿಸಿದ್ದಾರೆ ಎಂದು ಅವರು ದೂರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವಿಎಂಗೆ ಬಳಸುವ ಬ್ಯಾಟರಿಗಳು ಹಳತಾದಂತೆ ಇವುಗಳನ್ನು ಡಿಸ್ಪೋಸ್ ಮಾಡಿದಾಗ ಪರಿಸರದ ಮೇಲೆ ಅಪಾರ ಹಾನಿಯಾಗುತ್ತದೆ.
    ಇಸಿ ನಿಯಮದಂತೆ ಒಂದು ರಾಜ್ಯದಲ್ಲಿ ಒಂದು ಸಾರಿ ಎಲೆಕ್ಷನ್ ಗೆ ಬಳಸಿದ ತರುವಾಯ ಅವನ್ನು ಮತ್ತದೇ ರಾಜ್ಯದಲ್ಲಿ ಬಳಸುವಂತಿಲ್ಲ. ಇವುಗಳ ಸಾಗಣೆಗೆ ಅಪಾರ ದುಡಿಮೆ,ಹಣ ಪೋಲಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...