Homeಮುಖಪುಟಇವಿಎಂ ವಿರೋಧಿಸಿ 100 ದಿನದಲ್ಲಿ 3000 ಕಿ.ಮೀ ನಡೆದ ಓಂಕಾರ್ ಸಿಂಗ್ ಬೆಂಗಳೂರಿಗೆ ಆಗಮನ

ಇವಿಎಂ ವಿರೋಧಿಸಿ 100 ದಿನದಲ್ಲಿ 3000 ಕಿ.ಮೀ ನಡೆದ ಓಂಕಾರ್ ಸಿಂಗ್ ಬೆಂಗಳೂರಿಗೆ ಆಗಮನ

ಅವರು ಮಧ್ಯಾಹ್ನ 3:30ಕ್ಕೆ ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಚನ್ನೈ ಕಡೆ ತಮ್ಮ ಪಾದಾಯಾತ್ರೆ ಮುಂದುವರೆಸಲಿದ್ದಾರೆ

- Advertisement -
- Advertisement -

‘ಇವಿಎಂ ಹಟಾವೋ; ದೇಶ್‌ ಬಚಾವೋ’ ಎಂಬ ಆಗ್ರಹದೊಂದಿಗೆ ಉತ್ತರಾಖಂಡ್ ರಾಜ್ಯದ ರುದ್ರಪುರದಿಂದ ಪಾದಯಾತ್ರೆ ಮೂಲಕ ಹೊರಟಿರುವ ಸಾಮಾಜಿಕ ಕಾರ್ಯಕರ್ತ ಓಂಕಾರ್‌ ಸಿಂಗ್‌ ದಿಲ್ಹಾನ್‌ ಗುರುವಾರ ಬೆಂಗಳೂರಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: ಇವಿಯಂ ವಿರೋಧಿಸಿ ರಾಷ್ಟ್ರ ಸುತ್ತುವ ವಿಭಿನ್ನ ಮತ್ತು ಏಕಾಂಗಿ ಹೋರಾಟವೊಂದು ಇಲ್ಲಿದೆ ನೋಡಿ

ಸುಮಾರು 6500 ಕಿ.ಮೀ. ಪಾದಯಾತ್ರೆ ಹಮ್ಮಿಕೊಂಡಿರುವ ಸಿಂಗ್ ಅವರು ಈಗಾಗಲೇ 103 ದಿನಗಳನ್ನು ಪೂರೈಸಿ 3000 ಕಿ.ಮೀ. ದೂರ ಕ್ರಮಿಸಿ ಜನರಲ್ಲಿ ಇವಿಎಂ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದ್ದಾರೆ.

ಆಗಸ್ಟ್ 18ರಂದು ಉತ್ತರಾಖಂಡ್ ರಾಜ್ಯದ ರುದ್ರಪುರದಿಂದ ಪಾದಯಾತ್ರೆ ಆರಂಭಿಸಿರುವ ಅವರು, ಈಗಾಗಲೇ ಉತ್ತರಾಖಂಡ, ದೆಹಲಿ, ಉತ್ತರ ಪ್ರದೇಶ, ಗುಜರಾತ, ರಾಜಸ್ತಾನ, ಮಹಾರಾಷ್ಟ್ರ  ರಾಜ್ಯಗಳಲ್ಲಿ ಕ್ರಮಿಸಿ ಇದೀಗ ಕರ್ನಾಟಕದ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನಲ್ಲಿ ಇವಿಎಂ ಬಗ್ಗೆ ಜಾಗೃತಿ ಮೂಡಿಸಿ ಇಲ್ಲಿಂದ ತಮಿಳುನಾಡು, ಆಂಧ್ರಪ್ರದೇಶ, ಒಡಿಸ್ಸಾ, ಅಸ್ಸಾಂ, ಪಶ್ಚಿಮಬಂಗಾಳ, ಬಿಹಾರ, ಉತ್ತರಾಖಂಡ ಮೂಲಕ
ದೆಹಲಿಗೆ ತೆರಳಿ ಅಲ್ಲಿ ತಮ್ಮ ಪಾದಯಾತ್ರೆ ಮುಕ್ತಾಯಗೊಳಿಸಲಿದ್ದಾರೆ.

ಬೆಂಗಳೂರಿನ ಹಲವು ಪ್ರಮುಖ ಬೀದಿಗಳಲ್ಲಿ ಸುತ್ತಾಡುತ್ತಾ ಅರಿವು ಮೂಡಿಸಲಿರುವ ಅವರು ಮಧ್ಯಾಹ್ನ 3:30ಕ್ಕೆ ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಚನ್ನೈ ಕಡೆ ತಮ್ಮ ಪಾದಾಯಾತ್ರೆ ಮುಂದುವರೆಸಲಿದ್ದಾರೆ. ಪ್ರಜ್ಞಾವಂತರೆಲ್ಲರೂ ಅವರ ಏಕಾಂಗಿ ಹೋರಾಟಕ್ಕೆ ಬೆಂಬಲೂ ಸೂಚಿಸುತ್ತಿದ್ದೇವೆ ಎಂದು ಸಾಮಾಜಿಕ ಕಾರ್ಯಕರ್ತ ತನ್ವೀರ್‌ರವರು ತಿಳಿಸಿದ್ದಾರೆ.

ಬೆಂಗಳೂರಿಗೆ ಆಗಮಿಸಿದ ದಿಲ್ಹಾನ್ ಅವರನ್ನು ಸಾಮಾಜಿಕ ಕಾರ್ಯಕರ್ತರು, ಎನ್‌ಜಿಒಗಳು, ಮಾನವ ಹಕ್ಕುಗಳ ಕಾರ್ಯಕರ್ತರು ಸ್ವಾಗತಿಸಿ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ಸಿಂಗ್, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿದ್ಯುನ್ಮಾನ ಮತಯಂತ್ರ (ಇವಿಎಂ) ಸರಿ ಹೊಂದುವುದಿಲ್ಲ. ದೊಡ್ಡ ದೊಡ್ಡ ಶ್ರೀಮಂತ ಹಾಗೂ ಮುಂದುವರಿದ ರಾಷ್ಟ್ರಗಳೇ ಈಗ ಇವಿಎಂ ಕೈಬಿಟ್ಟು ಹಳೆಯ ಪದ್ಧತಿಗೆ ಮರಳಿವೆ. ಆದ್ದರಿಂದ ನಮ್ಮ ದೇಶದಲ್ಲಿ ಇವಿಎಂ ಕೈಬಿಡಬೇಕು ಎಂದು ಚುನಾವಣಾ ಆಯೋಗವನ್ನು ಒತ್ತಾಯಿಸಿದರು.

ಇದನ್ನೂ ಓದಿ: ಇವಿಯಂ ವಿರೋಧಿಸಿ ಏಕಾಂಗಿಯಾಗಿ 3 ತಿಂಗಳಿಂದ ರಾಷ್ಟ್ರ ಸುತ್ತುತ್ತಿರುವ ದೇಶಪ್ರೇಮಿ ಕರ್ನಾಟಕಕ್ಕೆ: ವಿಡಿಯೋ ನೋಡಿ

ಈ ಹಿಂದೆ ಬ್ಯಾಲೆಟ್‌ ವೊಟಿಂಗ್‌ ವ್ಯವಸ್ಥೆ  ದೇಶದಲ್ಲಿ ಜಾರಿಯಲ್ಲಿತ್ತು. ಆಗ ಜನರಿಗೆ ಯಾವುದೇ ಸಂಶಯವಿರುತ್ತಿರಲಿಲ್ಲ. ಅದರಲ್ಲಿ ಅಕ್ರಮವೆಸಗಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಇವಿಎಂನಲ್ಲಿ ಅಕ್ರಮವೆಸಗಲು ಸಾಧ್ಯವಿದೆ ಎಂಬುದು ಹಲವು ತಜ್ಞರ ಅಭಿಪ್ರಾಯವಾಗಿದೆ. ಆದ್ದರಿಂದ ಜನರ ಸಂಶಯ ನಿವಾರಣೆಗಾಗಿ ಹಳೆಯ ಪದ್ಧತಿಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಮೋದಿ ನೇತೃತ್ವದ ಎನ್‌ಡಿಯ ಸರ್ಕಾರದಲ್ಲಿ ಯಾವುದೇ ಜನಪರ ಕೆಲಸಗಳು ಆಗದೇ ಇದಿದ್ದರೂ ಇವಿಎಂ ದುರ್ಬಳಕೆಯಿಂದ ಬಿಜೆಪಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆದು, ಅಧಿಕಾರಕ್ಕೆ ಬರುವಂತೆ ಆಯಿತು. ವಿದ್ಯುನ್ಮಾನ ಮತಯಂತ್ರ ಬೇಡವೆಂದು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ, ಸುಬ್ರಮಣಿಯನ್‌ ಸ್ವಾಮಿ ಅವರೇ ಆಕ್ಷೇಪ ಎತ್ತಿದ್ದರು. ಆದರೆ ಈಗ ಈ ಬಗ್ಗೆ  ಮೌನವಹಿಸಿದ್ದಾರೆ ಎಂದು ಅವರು ದೂರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವಿಎಂಗೆ ಬಳಸುವ ಬ್ಯಾಟರಿಗಳು ಹಳತಾದಂತೆ ಇವುಗಳನ್ನು ಡಿಸ್ಪೋಸ್ ಮಾಡಿದಾಗ ಪರಿಸರದ ಮೇಲೆ ಅಪಾರ ಹಾನಿಯಾಗುತ್ತದೆ.
    ಇಸಿ ನಿಯಮದಂತೆ ಒಂದು ರಾಜ್ಯದಲ್ಲಿ ಒಂದು ಸಾರಿ ಎಲೆಕ್ಷನ್ ಗೆ ಬಳಸಿದ ತರುವಾಯ ಅವನ್ನು ಮತ್ತದೇ ರಾಜ್ಯದಲ್ಲಿ ಬಳಸುವಂತಿಲ್ಲ. ಇವುಗಳ ಸಾಗಣೆಗೆ ಅಪಾರ ದುಡಿಮೆ,ಹಣ ಪೋಲಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...