Homeಮುಖಪುಟಅಕ್ಷಯ್ ಕುಮಾರ್ ನಟನೆಯ 'ಲಕ್ಷ್ಮಿ' ಚಿತ್ರ ಬ್ಯಾನ್? ಹಿಂದೂಗಳ ಭಾವನೆಗೆ ಧಕ್ಕೆ ಎಂದ ಲಕ್ಷ್ಮಿ 'ಭಕ್ತರು'

ಅಕ್ಷಯ್ ಕುಮಾರ್ ನಟನೆಯ ‘ಲಕ್ಷ್ಮಿ’ ಚಿತ್ರ ಬ್ಯಾನ್? ಹಿಂದೂಗಳ ಭಾವನೆಗೆ ಧಕ್ಕೆ ಎಂದ ಲಕ್ಷ್ಮಿ ‘ಭಕ್ತರು’

'ತಮಿಳಿನ ಕಾಂಚನಾ ಚಿತ್ರದ ಬಾಲಿವುಡ್ ರೀಮೆಕ್ ಚಿತ್ರ 'ಲಕ್ಷ್ಮಿ', ಲವ್ ಜಿಹಾದ್‌ಗೆ ಬೆಂಬಲ ನಿಡುತ್ತದೆ ಮತ್ತು ಹಿಂದೂಗಳ ಭಾವನೆಗೆ ಧಕ್ಕೆ ತರುತ್ತದೆ' ಹಾಗಾಗಿ ಇದನ್ನು ಬ್ಯಾನ್ ಮಾಡಬೇಕು ಎಂದು ಹಲವರು ಒತ್ತಾಯಿಸುತ್ತಿದ್ದಾರೆ.

- Advertisement -
- Advertisement -

ಅಕ್ಷಯ್ ಕುಮಾರ್ ನಟನೆಯ ಬಹುನಿರೀಕ್ಷಿತ ಬಾಲಿವುಡ್ ಚಿತ್ರ ‘ಲಕ್ಷ್ಮಿ’ ಚಲನಚಿತ್ರವನ್ನು ಬ್ಯಾನ್ ಮಾಡಬೇಕೆಂದು ಟ್ವಿಟ್ಟರ್‌ನಲ್ಲಿ ಹಲವರು ಒತ್ತಾಯಿಸುತ್ತಿದ್ದಾರೆ. #Ban_Laxmmi_Movie ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದೆ. ಈ ಹಿಂದೆ ಚಿತ್ರದ ಶೀರ್ಷಿಕೆಯಿಂದ ಮನನೊಂದ ಲಕ್ಷ್ಮಿ ಭಕ್ತರು ಈ ಅಭಿಯಾನವನ್ನು ಹುಟ್ಟುಹಾಕಿದ್ದರು.

ಈ ಚಿತ್ರವು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡುತ್ತದೆ ಎಂಬ ಕಾರಣಕ್ಕೆ ಬ್ಯಾನ್ ಮಾಡಬೇಕು ಎಂಬು ಕೂಗು ಕೇಳಿಬರುತ್ತಿದೆ. ಈ ಚಿತ್ರ ಇದೇ ನವೆಂಬರ್ 9 ರಂದು ಬಿಡುಗಡೆಯಾಗುತ್ತಿದೆ.

 

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ಅರ್ಚನಾ ಘಾನ್ವತ್ ಎಂಬುವವರು ಟ್ವೀಟ್ ಮಾಡಿ, “#LaxmmiBomb ಅನ್ನು ಸ್ವೀಕರಿಸಲಾಗುವುದಿಲ್ಲ! ಅಥವಾ ದೇವತೆ “# ಲಕ್ಷ್ಮಿ” ಹೆಸರು ಸ್ವೀಕಾರಾರ್ಹವಲ್ಲ !!. ಈ ಚಿತ್ರವನ್ನು ಬ್ಯಾನ್ ಮಾಡಿ. ಇದು ಹಿಂದೂಗಳ ಭಾವನೆಗೆ ಧಕ್ಕೆಯುಂಟುಮಾಡುತ್ತದೆ ಮತ್ತು ಇದು ಲವ್ ಜಿಹಾದ್‌ ಅನ್ನು ಬೆಂಬಲಿಸುತ್ತದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು, “ಈ ಚಿತ್ರವು ತಮಿಳು ಆವೃತ್ತಿಯಲ್ಲಿ ‘ಕಾಂಚನಾ’, ನಾಯಕ-ರಾಘವ, ನಾಯಕಿ-ಪ್ರಿಯಾ ಆಗಿದ್ದಾರೆ. ಆದರೆ ಹಿಂದಿಯಲ್ಲಿ ನಾಯಕ-ಆಸಿಫ್, ನಾಯಕಿ-ಪ್ರಿಯಾ ಎಂದು ಬದಲಾಗಿದೆ. ಇದು ಕಾಕತಾಳೀಯವಲ್ಲ. ಇದು ಲವ್ ಜಿಹಾದ್‌ ಅನ್ನು ಪ್ರಚಾರ ಮಾಡುವ ಸ್ಪಷ್ಟ ಗುರಿಯನ್ನು ಹೊಂದಿದೆ. ಹಾಗಾಗಿ ಈ ಚಿತ್ರವನ್ನು ಬ್ಯಾನ್ ಮಾಡಿ ಎಂದು ಎಲ್ಲಾ ಹಿಂದೂಗಳಲ್ಲಿಯೂ ನಾನು ಮನವಿ ಮಾಡಿಕೊಳ್ಳುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ಸಖ ವೀರ್ ಎಂಬುವವರು ಟ್ವೀಟ್ ಮಾಡಿ, “ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ‘ಲಕ್ಷ್ಮಿ’ ಚಿತ್ರದ ವಿರುದ್ಧ ಮುಂಬೈನಲ್ಲಿ ದೂರು ದಾಖಲಿಸಲಾಗಿದೆ. ಈಗ ಹಿಂದೂಗಳು ಸಾಂವಿಧಾನಿಕವಾಗಿ ಇದನ್ನು ವಿರೋಧಿಸಲಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಈ ಹಿಂದೆಯೂ ಈ ಚಿತ್ರದ ಟೈಟಲ್‌ ಅನ್ನು ಬದಲಾಯಿಸಬೇಕು ಎಂದು ಹಲವರು ಒತ್ತಾಯಿಸಿದ್ದರು. ಇದಕ್ಕೆ ಮಣಿದ ಚಿತ್ರ ತಂಡ ‘ಲಕ್ಷ್ಮಿ ಬಾಂಬ್’ ಟೈಟಲ್‌ನಲ್ಲಿ ಬಾಂಬ್ ಅನ್ನು ಸಿಡಿಸಿ ಬರೀ ‘ಲಕ್ಷ್ಮಿ’ ಎಂದು ಮರುನಾಮಕರಣ ಮಾಡಿಕೊಂಡಿತ್ತು. ಇದೀಗ ಈ ಚಿತ್ರಕ್ಕೆ ಮತ್ತೊಂದು ಕಂಟಕ ಎದುರಾಗಿದೆ.

ನವೆಂಬರ್ 9 ರಂದು ತೆರೆಗೆ ಬರಲಿರುವ ಚಿತ್ರಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ ವಿರೋಧ ವ್ಯಕ್ತಪಡಿಸಿತ್ತು. ಈ ಚಿತ್ರ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುತ್ತದೆ ಎಂದು ರಾಜ್ಯ ಕಾರ್ಯಕಾರಿ ಅಧ್ಯಕ್ಷ ರಾಜೇಶ್ ಪವಿತ್ರನ್ ಹೇಳಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೂಗಳ ಭಾವನೆಗಳನ್ನು ಈ ಚಿತ್ರ ಅವಮಾನಿಸಿದೆ. ಈ ಚಿತ್ರದಲ್ಲಿ ನಾಯಕನ ಹೆಸರು ಆಸಿಫ್, ನಾಯಕಿಯ ಹೆಸರು ಪ್ರಿಯಾ ಯಾದವ್ ಆಗಿದೆ. ಚಿತ್ರ “ಲವ್ ಜಿಹಾದ್” ಅನ್ನು ಪ್ರಚಾರ ಪಡಿಸುತ್ತದೆ ಹಾಗಾಗಿ ಚಲನಚಿತ್ರವನ್ನು ನಿಷೇಧಿಸುವಂತೆ ಈ ಹಿಂದೆಯೇ ಸರ್ಕಾರಕ್ಕೆ ಕರೆ ನೀಡಿದ್ದರು.

“ಚಲನಚಿತ್ರ ನಿರ್ಮಾಪಕರು ಕೋಮು ಗಲಭೆಗಳನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಲಕ್ಷ್ಮೀ ಬಾಂಬ್ ಎಂಬ ಚಲನಚಿತ್ರವನ್ನು ನಿರ್ಮಿಸುವವರು ಎಂದಾದರೂ ತಸ್ಲೀಮಾ ಬಾಂಬ್ ಎಂಬ ಚಿತ್ರ ಮಾಡಲು ಧೈರ್ಯ ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದರು.

ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರವನ್ನು ಬ್ಯಾನ್ ಮಾಡಬೇಕು ಎನ್ನುವ ಅಭಿಯಾನವನ್ನು ಆರಂಭಿಸಲಾಗಿದೆ. ಈ ಚಿತ್ರವನ್ನು ಒಪ್ಪಿಕೊಂಡಿರುವುದಕ್ಕೆ ಅಕ್ಷಯ್ ಕುಮಾರ್ ವಿರುದ್ಧವೂ ಹಲವರು ತಿರುಗಿಬಿದ್ದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ಇತ್ತೀಚೆಗೆ ಲವ್ ಜಿಹಾದ್ ಎನ್ನುವ ಪದ ಬಹಳಷ್ಟು ಚಾಲ್ತಿಯಲ್ಲಿದ್ದು, ಈ ಹಿಂದೆ ಇದೇ ಕಾರಣ ನೀಡಿ ತನಿಷ್ಕ್ ಜಾಹೀರಾತನ್ನು ನಿಷೇಧಿಸಲಾಗಿತ್ತು.

ಆದರೆ ಕೇಂದ್ರ ಸರ್ಕಾರ ‘ಲವ್ ಜಿಹಾದ್’ ಎಂಬುದು ಎಲ್ಲಿಯೂ ವರದಿಯಾಗಿಲ್ಲ ಎಂದು ಹೇಳಿತ್ತು. ಬಿಜೆಪಿ ಮುಖಂಡ ಮತ್ತು ಗೃಹ ವ್ಯವಹಾರಗಳ ಸಚಿವ ಜಿ. ಕಿಶನ್ ರೆಡ್ಡಿ ಅವರು ‘ಲವ್ ಜಿಹಾದ್ ’ಎಂಬ ಪದವನ್ನು ಈಗಿರುವ ಯಾವುದೇ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ಅಲ್ಲದೇ ಇದುವರೆಗೂ ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ” ಎಂದು ಲೋಕಸಭೆಗೆ ತಿಳಿಸಿದ್ದರು.

ಇದಲ್ಲದೆ, “ಸಂವಿಧಾನದ 25 ನೇ ವಿಧಿಯು ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯಕ್ಕೆ ಒಳಪಟ್ಟು ಧರ್ಮವನ್ನು ಪ್ರಚಾರ ಮಾಡಲು, ಅಭ್ಯಾಸ ಮಾಡಲು ಮತ್ತು ಪ್ರಚಾರ ಮಾಡಲು ಸ್ವಾತಂತ್ರ್ಯವನ್ನು ಒದಗಿಸುತ್ತದೆ. ಕೇರಳ ಹೈಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳು ಈ ಅಭಿಪ್ರಾಯವನ್ನು ಎತ್ತಿಹಿಡಿದಿವೆ” ಎಂದು ಹೇಳಿದ್ದರು.


ಇದನ್ನೂ ಓದಿ: ಟೀಕೆಗೆ ಬೆದರಿದ ಚಿತ್ರತಂಡ: ಲಕ್ಷ್ಮೀ ಬಾಂಬ್ ಚಿತ್ರದ ಟೈಟಲ್‌ನಲ್ಲಿ ‘ಬಾಂಬ್’ ನಿಷ್ಕ್ರಿಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...