Homeಮುಖಪುಟಅಕ್ಷಯ್ ಕುಮಾರ್ ನಟನೆಯ 'ಲಕ್ಷ್ಮಿ' ಚಿತ್ರ ಬ್ಯಾನ್? ಹಿಂದೂಗಳ ಭಾವನೆಗೆ ಧಕ್ಕೆ ಎಂದ ಲಕ್ಷ್ಮಿ 'ಭಕ್ತರು'

ಅಕ್ಷಯ್ ಕುಮಾರ್ ನಟನೆಯ ‘ಲಕ್ಷ್ಮಿ’ ಚಿತ್ರ ಬ್ಯಾನ್? ಹಿಂದೂಗಳ ಭಾವನೆಗೆ ಧಕ್ಕೆ ಎಂದ ಲಕ್ಷ್ಮಿ ‘ಭಕ್ತರು’

'ತಮಿಳಿನ ಕಾಂಚನಾ ಚಿತ್ರದ ಬಾಲಿವುಡ್ ರೀಮೆಕ್ ಚಿತ್ರ 'ಲಕ್ಷ್ಮಿ', ಲವ್ ಜಿಹಾದ್‌ಗೆ ಬೆಂಬಲ ನಿಡುತ್ತದೆ ಮತ್ತು ಹಿಂದೂಗಳ ಭಾವನೆಗೆ ಧಕ್ಕೆ ತರುತ್ತದೆ' ಹಾಗಾಗಿ ಇದನ್ನು ಬ್ಯಾನ್ ಮಾಡಬೇಕು ಎಂದು ಹಲವರು ಒತ್ತಾಯಿಸುತ್ತಿದ್ದಾರೆ.

- Advertisement -
- Advertisement -

ಅಕ್ಷಯ್ ಕುಮಾರ್ ನಟನೆಯ ಬಹುನಿರೀಕ್ಷಿತ ಬಾಲಿವುಡ್ ಚಿತ್ರ ‘ಲಕ್ಷ್ಮಿ’ ಚಲನಚಿತ್ರವನ್ನು ಬ್ಯಾನ್ ಮಾಡಬೇಕೆಂದು ಟ್ವಿಟ್ಟರ್‌ನಲ್ಲಿ ಹಲವರು ಒತ್ತಾಯಿಸುತ್ತಿದ್ದಾರೆ. #Ban_Laxmmi_Movie ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದೆ. ಈ ಹಿಂದೆ ಚಿತ್ರದ ಶೀರ್ಷಿಕೆಯಿಂದ ಮನನೊಂದ ಲಕ್ಷ್ಮಿ ಭಕ್ತರು ಈ ಅಭಿಯಾನವನ್ನು ಹುಟ್ಟುಹಾಕಿದ್ದರು.

ಈ ಚಿತ್ರವು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡುತ್ತದೆ ಎಂಬ ಕಾರಣಕ್ಕೆ ಬ್ಯಾನ್ ಮಾಡಬೇಕು ಎಂಬು ಕೂಗು ಕೇಳಿಬರುತ್ತಿದೆ. ಈ ಚಿತ್ರ ಇದೇ ನವೆಂಬರ್ 9 ರಂದು ಬಿಡುಗಡೆಯಾಗುತ್ತಿದೆ.

 

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ಅರ್ಚನಾ ಘಾನ್ವತ್ ಎಂಬುವವರು ಟ್ವೀಟ್ ಮಾಡಿ, “#LaxmmiBomb ಅನ್ನು ಸ್ವೀಕರಿಸಲಾಗುವುದಿಲ್ಲ! ಅಥವಾ ದೇವತೆ “# ಲಕ್ಷ್ಮಿ” ಹೆಸರು ಸ್ವೀಕಾರಾರ್ಹವಲ್ಲ !!. ಈ ಚಿತ್ರವನ್ನು ಬ್ಯಾನ್ ಮಾಡಿ. ಇದು ಹಿಂದೂಗಳ ಭಾವನೆಗೆ ಧಕ್ಕೆಯುಂಟುಮಾಡುತ್ತದೆ ಮತ್ತು ಇದು ಲವ್ ಜಿಹಾದ್‌ ಅನ್ನು ಬೆಂಬಲಿಸುತ್ತದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು, “ಈ ಚಿತ್ರವು ತಮಿಳು ಆವೃತ್ತಿಯಲ್ಲಿ ‘ಕಾಂಚನಾ’, ನಾಯಕ-ರಾಘವ, ನಾಯಕಿ-ಪ್ರಿಯಾ ಆಗಿದ್ದಾರೆ. ಆದರೆ ಹಿಂದಿಯಲ್ಲಿ ನಾಯಕ-ಆಸಿಫ್, ನಾಯಕಿ-ಪ್ರಿಯಾ ಎಂದು ಬದಲಾಗಿದೆ. ಇದು ಕಾಕತಾಳೀಯವಲ್ಲ. ಇದು ಲವ್ ಜಿಹಾದ್‌ ಅನ್ನು ಪ್ರಚಾರ ಮಾಡುವ ಸ್ಪಷ್ಟ ಗುರಿಯನ್ನು ಹೊಂದಿದೆ. ಹಾಗಾಗಿ ಈ ಚಿತ್ರವನ್ನು ಬ್ಯಾನ್ ಮಾಡಿ ಎಂದು ಎಲ್ಲಾ ಹಿಂದೂಗಳಲ್ಲಿಯೂ ನಾನು ಮನವಿ ಮಾಡಿಕೊಳ್ಳುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ಸಖ ವೀರ್ ಎಂಬುವವರು ಟ್ವೀಟ್ ಮಾಡಿ, “ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ‘ಲಕ್ಷ್ಮಿ’ ಚಿತ್ರದ ವಿರುದ್ಧ ಮುಂಬೈನಲ್ಲಿ ದೂರು ದಾಖಲಿಸಲಾಗಿದೆ. ಈಗ ಹಿಂದೂಗಳು ಸಾಂವಿಧಾನಿಕವಾಗಿ ಇದನ್ನು ವಿರೋಧಿಸಲಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಈ ಹಿಂದೆಯೂ ಈ ಚಿತ್ರದ ಟೈಟಲ್‌ ಅನ್ನು ಬದಲಾಯಿಸಬೇಕು ಎಂದು ಹಲವರು ಒತ್ತಾಯಿಸಿದ್ದರು. ಇದಕ್ಕೆ ಮಣಿದ ಚಿತ್ರ ತಂಡ ‘ಲಕ್ಷ್ಮಿ ಬಾಂಬ್’ ಟೈಟಲ್‌ನಲ್ಲಿ ಬಾಂಬ್ ಅನ್ನು ಸಿಡಿಸಿ ಬರೀ ‘ಲಕ್ಷ್ಮಿ’ ಎಂದು ಮರುನಾಮಕರಣ ಮಾಡಿಕೊಂಡಿತ್ತು. ಇದೀಗ ಈ ಚಿತ್ರಕ್ಕೆ ಮತ್ತೊಂದು ಕಂಟಕ ಎದುರಾಗಿದೆ.

ನವೆಂಬರ್ 9 ರಂದು ತೆರೆಗೆ ಬರಲಿರುವ ಚಿತ್ರಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ ವಿರೋಧ ವ್ಯಕ್ತಪಡಿಸಿತ್ತು. ಈ ಚಿತ್ರ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುತ್ತದೆ ಎಂದು ರಾಜ್ಯ ಕಾರ್ಯಕಾರಿ ಅಧ್ಯಕ್ಷ ರಾಜೇಶ್ ಪವಿತ್ರನ್ ಹೇಳಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೂಗಳ ಭಾವನೆಗಳನ್ನು ಈ ಚಿತ್ರ ಅವಮಾನಿಸಿದೆ. ಈ ಚಿತ್ರದಲ್ಲಿ ನಾಯಕನ ಹೆಸರು ಆಸಿಫ್, ನಾಯಕಿಯ ಹೆಸರು ಪ್ರಿಯಾ ಯಾದವ್ ಆಗಿದೆ. ಚಿತ್ರ “ಲವ್ ಜಿಹಾದ್” ಅನ್ನು ಪ್ರಚಾರ ಪಡಿಸುತ್ತದೆ ಹಾಗಾಗಿ ಚಲನಚಿತ್ರವನ್ನು ನಿಷೇಧಿಸುವಂತೆ ಈ ಹಿಂದೆಯೇ ಸರ್ಕಾರಕ್ಕೆ ಕರೆ ನೀಡಿದ್ದರು.

“ಚಲನಚಿತ್ರ ನಿರ್ಮಾಪಕರು ಕೋಮು ಗಲಭೆಗಳನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಲಕ್ಷ್ಮೀ ಬಾಂಬ್ ಎಂಬ ಚಲನಚಿತ್ರವನ್ನು ನಿರ್ಮಿಸುವವರು ಎಂದಾದರೂ ತಸ್ಲೀಮಾ ಬಾಂಬ್ ಎಂಬ ಚಿತ್ರ ಮಾಡಲು ಧೈರ್ಯ ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದರು.

ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರವನ್ನು ಬ್ಯಾನ್ ಮಾಡಬೇಕು ಎನ್ನುವ ಅಭಿಯಾನವನ್ನು ಆರಂಭಿಸಲಾಗಿದೆ. ಈ ಚಿತ್ರವನ್ನು ಒಪ್ಪಿಕೊಂಡಿರುವುದಕ್ಕೆ ಅಕ್ಷಯ್ ಕುಮಾರ್ ವಿರುದ್ಧವೂ ಹಲವರು ತಿರುಗಿಬಿದ್ದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ಇತ್ತೀಚೆಗೆ ಲವ್ ಜಿಹಾದ್ ಎನ್ನುವ ಪದ ಬಹಳಷ್ಟು ಚಾಲ್ತಿಯಲ್ಲಿದ್ದು, ಈ ಹಿಂದೆ ಇದೇ ಕಾರಣ ನೀಡಿ ತನಿಷ್ಕ್ ಜಾಹೀರಾತನ್ನು ನಿಷೇಧಿಸಲಾಗಿತ್ತು.

ಆದರೆ ಕೇಂದ್ರ ಸರ್ಕಾರ ‘ಲವ್ ಜಿಹಾದ್’ ಎಂಬುದು ಎಲ್ಲಿಯೂ ವರದಿಯಾಗಿಲ್ಲ ಎಂದು ಹೇಳಿತ್ತು. ಬಿಜೆಪಿ ಮುಖಂಡ ಮತ್ತು ಗೃಹ ವ್ಯವಹಾರಗಳ ಸಚಿವ ಜಿ. ಕಿಶನ್ ರೆಡ್ಡಿ ಅವರು ‘ಲವ್ ಜಿಹಾದ್ ’ಎಂಬ ಪದವನ್ನು ಈಗಿರುವ ಯಾವುದೇ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ಅಲ್ಲದೇ ಇದುವರೆಗೂ ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ” ಎಂದು ಲೋಕಸಭೆಗೆ ತಿಳಿಸಿದ್ದರು.

ಇದಲ್ಲದೆ, “ಸಂವಿಧಾನದ 25 ನೇ ವಿಧಿಯು ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯಕ್ಕೆ ಒಳಪಟ್ಟು ಧರ್ಮವನ್ನು ಪ್ರಚಾರ ಮಾಡಲು, ಅಭ್ಯಾಸ ಮಾಡಲು ಮತ್ತು ಪ್ರಚಾರ ಮಾಡಲು ಸ್ವಾತಂತ್ರ್ಯವನ್ನು ಒದಗಿಸುತ್ತದೆ. ಕೇರಳ ಹೈಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳು ಈ ಅಭಿಪ್ರಾಯವನ್ನು ಎತ್ತಿಹಿಡಿದಿವೆ” ಎಂದು ಹೇಳಿದ್ದರು.


ಇದನ್ನೂ ಓದಿ: ಟೀಕೆಗೆ ಬೆದರಿದ ಚಿತ್ರತಂಡ: ಲಕ್ಷ್ಮೀ ಬಾಂಬ್ ಚಿತ್ರದ ಟೈಟಲ್‌ನಲ್ಲಿ ‘ಬಾಂಬ್’ ನಿಷ್ಕ್ರಿಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....