Homeಮುಖಪುಟಅಕ್ಷಯ್ ಕುಮಾರ್ ನಟನೆಯ 'ಲಕ್ಷ್ಮಿ' ಚಿತ್ರ ಬ್ಯಾನ್? ಹಿಂದೂಗಳ ಭಾವನೆಗೆ ಧಕ್ಕೆ ಎಂದ ಲಕ್ಷ್ಮಿ 'ಭಕ್ತರು'

ಅಕ್ಷಯ್ ಕುಮಾರ್ ನಟನೆಯ ‘ಲಕ್ಷ್ಮಿ’ ಚಿತ್ರ ಬ್ಯಾನ್? ಹಿಂದೂಗಳ ಭಾವನೆಗೆ ಧಕ್ಕೆ ಎಂದ ಲಕ್ಷ್ಮಿ ‘ಭಕ್ತರು’

'ತಮಿಳಿನ ಕಾಂಚನಾ ಚಿತ್ರದ ಬಾಲಿವುಡ್ ರೀಮೆಕ್ ಚಿತ್ರ 'ಲಕ್ಷ್ಮಿ', ಲವ್ ಜಿಹಾದ್‌ಗೆ ಬೆಂಬಲ ನಿಡುತ್ತದೆ ಮತ್ತು ಹಿಂದೂಗಳ ಭಾವನೆಗೆ ಧಕ್ಕೆ ತರುತ್ತದೆ' ಹಾಗಾಗಿ ಇದನ್ನು ಬ್ಯಾನ್ ಮಾಡಬೇಕು ಎಂದು ಹಲವರು ಒತ್ತಾಯಿಸುತ್ತಿದ್ದಾರೆ.

- Advertisement -
- Advertisement -

ಅಕ್ಷಯ್ ಕುಮಾರ್ ನಟನೆಯ ಬಹುನಿರೀಕ್ಷಿತ ಬಾಲಿವುಡ್ ಚಿತ್ರ ‘ಲಕ್ಷ್ಮಿ’ ಚಲನಚಿತ್ರವನ್ನು ಬ್ಯಾನ್ ಮಾಡಬೇಕೆಂದು ಟ್ವಿಟ್ಟರ್‌ನಲ್ಲಿ ಹಲವರು ಒತ್ತಾಯಿಸುತ್ತಿದ್ದಾರೆ. #Ban_Laxmmi_Movie ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದೆ. ಈ ಹಿಂದೆ ಚಿತ್ರದ ಶೀರ್ಷಿಕೆಯಿಂದ ಮನನೊಂದ ಲಕ್ಷ್ಮಿ ಭಕ್ತರು ಈ ಅಭಿಯಾನವನ್ನು ಹುಟ್ಟುಹಾಕಿದ್ದರು.

ಈ ಚಿತ್ರವು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡುತ್ತದೆ ಎಂಬ ಕಾರಣಕ್ಕೆ ಬ್ಯಾನ್ ಮಾಡಬೇಕು ಎಂಬು ಕೂಗು ಕೇಳಿಬರುತ್ತಿದೆ. ಈ ಚಿತ್ರ ಇದೇ ನವೆಂಬರ್ 9 ರಂದು ಬಿಡುಗಡೆಯಾಗುತ್ತಿದೆ.

 

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ಅರ್ಚನಾ ಘಾನ್ವತ್ ಎಂಬುವವರು ಟ್ವೀಟ್ ಮಾಡಿ, “#LaxmmiBomb ಅನ್ನು ಸ್ವೀಕರಿಸಲಾಗುವುದಿಲ್ಲ! ಅಥವಾ ದೇವತೆ “# ಲಕ್ಷ್ಮಿ” ಹೆಸರು ಸ್ವೀಕಾರಾರ್ಹವಲ್ಲ !!. ಈ ಚಿತ್ರವನ್ನು ಬ್ಯಾನ್ ಮಾಡಿ. ಇದು ಹಿಂದೂಗಳ ಭಾವನೆಗೆ ಧಕ್ಕೆಯುಂಟುಮಾಡುತ್ತದೆ ಮತ್ತು ಇದು ಲವ್ ಜಿಹಾದ್‌ ಅನ್ನು ಬೆಂಬಲಿಸುತ್ತದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು, “ಈ ಚಿತ್ರವು ತಮಿಳು ಆವೃತ್ತಿಯಲ್ಲಿ ‘ಕಾಂಚನಾ’, ನಾಯಕ-ರಾಘವ, ನಾಯಕಿ-ಪ್ರಿಯಾ ಆಗಿದ್ದಾರೆ. ಆದರೆ ಹಿಂದಿಯಲ್ಲಿ ನಾಯಕ-ಆಸಿಫ್, ನಾಯಕಿ-ಪ್ರಿಯಾ ಎಂದು ಬದಲಾಗಿದೆ. ಇದು ಕಾಕತಾಳೀಯವಲ್ಲ. ಇದು ಲವ್ ಜಿಹಾದ್‌ ಅನ್ನು ಪ್ರಚಾರ ಮಾಡುವ ಸ್ಪಷ್ಟ ಗುರಿಯನ್ನು ಹೊಂದಿದೆ. ಹಾಗಾಗಿ ಈ ಚಿತ್ರವನ್ನು ಬ್ಯಾನ್ ಮಾಡಿ ಎಂದು ಎಲ್ಲಾ ಹಿಂದೂಗಳಲ್ಲಿಯೂ ನಾನು ಮನವಿ ಮಾಡಿಕೊಳ್ಳುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ಸಖ ವೀರ್ ಎಂಬುವವರು ಟ್ವೀಟ್ ಮಾಡಿ, “ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ‘ಲಕ್ಷ್ಮಿ’ ಚಿತ್ರದ ವಿರುದ್ಧ ಮುಂಬೈನಲ್ಲಿ ದೂರು ದಾಖಲಿಸಲಾಗಿದೆ. ಈಗ ಹಿಂದೂಗಳು ಸಾಂವಿಧಾನಿಕವಾಗಿ ಇದನ್ನು ವಿರೋಧಿಸಲಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಈ ಹಿಂದೆಯೂ ಈ ಚಿತ್ರದ ಟೈಟಲ್‌ ಅನ್ನು ಬದಲಾಯಿಸಬೇಕು ಎಂದು ಹಲವರು ಒತ್ತಾಯಿಸಿದ್ದರು. ಇದಕ್ಕೆ ಮಣಿದ ಚಿತ್ರ ತಂಡ ‘ಲಕ್ಷ್ಮಿ ಬಾಂಬ್’ ಟೈಟಲ್‌ನಲ್ಲಿ ಬಾಂಬ್ ಅನ್ನು ಸಿಡಿಸಿ ಬರೀ ‘ಲಕ್ಷ್ಮಿ’ ಎಂದು ಮರುನಾಮಕರಣ ಮಾಡಿಕೊಂಡಿತ್ತು. ಇದೀಗ ಈ ಚಿತ್ರಕ್ಕೆ ಮತ್ತೊಂದು ಕಂಟಕ ಎದುರಾಗಿದೆ.

ನವೆಂಬರ್ 9 ರಂದು ತೆರೆಗೆ ಬರಲಿರುವ ಚಿತ್ರಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ ವಿರೋಧ ವ್ಯಕ್ತಪಡಿಸಿತ್ತು. ಈ ಚಿತ್ರ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುತ್ತದೆ ಎಂದು ರಾಜ್ಯ ಕಾರ್ಯಕಾರಿ ಅಧ್ಯಕ್ಷ ರಾಜೇಶ್ ಪವಿತ್ರನ್ ಹೇಳಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೂಗಳ ಭಾವನೆಗಳನ್ನು ಈ ಚಿತ್ರ ಅವಮಾನಿಸಿದೆ. ಈ ಚಿತ್ರದಲ್ಲಿ ನಾಯಕನ ಹೆಸರು ಆಸಿಫ್, ನಾಯಕಿಯ ಹೆಸರು ಪ್ರಿಯಾ ಯಾದವ್ ಆಗಿದೆ. ಚಿತ್ರ “ಲವ್ ಜಿಹಾದ್” ಅನ್ನು ಪ್ರಚಾರ ಪಡಿಸುತ್ತದೆ ಹಾಗಾಗಿ ಚಲನಚಿತ್ರವನ್ನು ನಿಷೇಧಿಸುವಂತೆ ಈ ಹಿಂದೆಯೇ ಸರ್ಕಾರಕ್ಕೆ ಕರೆ ನೀಡಿದ್ದರು.

“ಚಲನಚಿತ್ರ ನಿರ್ಮಾಪಕರು ಕೋಮು ಗಲಭೆಗಳನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಲಕ್ಷ್ಮೀ ಬಾಂಬ್ ಎಂಬ ಚಲನಚಿತ್ರವನ್ನು ನಿರ್ಮಿಸುವವರು ಎಂದಾದರೂ ತಸ್ಲೀಮಾ ಬಾಂಬ್ ಎಂಬ ಚಿತ್ರ ಮಾಡಲು ಧೈರ್ಯ ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದರು.

ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರವನ್ನು ಬ್ಯಾನ್ ಮಾಡಬೇಕು ಎನ್ನುವ ಅಭಿಯಾನವನ್ನು ಆರಂಭಿಸಲಾಗಿದೆ. ಈ ಚಿತ್ರವನ್ನು ಒಪ್ಪಿಕೊಂಡಿರುವುದಕ್ಕೆ ಅಕ್ಷಯ್ ಕುಮಾರ್ ವಿರುದ್ಧವೂ ಹಲವರು ತಿರುಗಿಬಿದ್ದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ಇತ್ತೀಚೆಗೆ ಲವ್ ಜಿಹಾದ್ ಎನ್ನುವ ಪದ ಬಹಳಷ್ಟು ಚಾಲ್ತಿಯಲ್ಲಿದ್ದು, ಈ ಹಿಂದೆ ಇದೇ ಕಾರಣ ನೀಡಿ ತನಿಷ್ಕ್ ಜಾಹೀರಾತನ್ನು ನಿಷೇಧಿಸಲಾಗಿತ್ತು.

ಆದರೆ ಕೇಂದ್ರ ಸರ್ಕಾರ ‘ಲವ್ ಜಿಹಾದ್’ ಎಂಬುದು ಎಲ್ಲಿಯೂ ವರದಿಯಾಗಿಲ್ಲ ಎಂದು ಹೇಳಿತ್ತು. ಬಿಜೆಪಿ ಮುಖಂಡ ಮತ್ತು ಗೃಹ ವ್ಯವಹಾರಗಳ ಸಚಿವ ಜಿ. ಕಿಶನ್ ರೆಡ್ಡಿ ಅವರು ‘ಲವ್ ಜಿಹಾದ್ ’ಎಂಬ ಪದವನ್ನು ಈಗಿರುವ ಯಾವುದೇ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ಅಲ್ಲದೇ ಇದುವರೆಗೂ ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ” ಎಂದು ಲೋಕಸಭೆಗೆ ತಿಳಿಸಿದ್ದರು.

ಇದಲ್ಲದೆ, “ಸಂವಿಧಾನದ 25 ನೇ ವಿಧಿಯು ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯಕ್ಕೆ ಒಳಪಟ್ಟು ಧರ್ಮವನ್ನು ಪ್ರಚಾರ ಮಾಡಲು, ಅಭ್ಯಾಸ ಮಾಡಲು ಮತ್ತು ಪ್ರಚಾರ ಮಾಡಲು ಸ್ವಾತಂತ್ರ್ಯವನ್ನು ಒದಗಿಸುತ್ತದೆ. ಕೇರಳ ಹೈಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳು ಈ ಅಭಿಪ್ರಾಯವನ್ನು ಎತ್ತಿಹಿಡಿದಿವೆ” ಎಂದು ಹೇಳಿದ್ದರು.


ಇದನ್ನೂ ಓದಿ: ಟೀಕೆಗೆ ಬೆದರಿದ ಚಿತ್ರತಂಡ: ಲಕ್ಷ್ಮೀ ಬಾಂಬ್ ಚಿತ್ರದ ಟೈಟಲ್‌ನಲ್ಲಿ ‘ಬಾಂಬ್’ ನಿಷ್ಕ್ರಿಯ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಕೇಜ್ರಿವಾಲ್ ಚುನಾವಣಾ ಪ್ರಚಾರ ಮಾಡಬಾರದೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ’;...

0
ಎಎಪಿ ಎನ್‌ಜಿಒ ಅಲ್ಲ, ಅದು ರಾಷ್ಟ್ರೀಯ ಪಕ್ಷ, ಕೇಜ್ರಿವಾಲ್ ಅವರು ಚುನಾವಣಾ ಪ್ರಚಾರದಿಂದ ದೂರವಿರಬೇಕೆಂದು ಬಿಜೆಪಿ ಬಯಸುತ್ತದೆ, ನಾನು ಅವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಪಂಜಾಬ್‌ ಸಿಎಂ ಭಗವಂತ್ ಸಿಂಗ್ ಮಾನ್...