Homeಮುಖಪುಟಅಕ್ಷಯ್ ಕುಮಾರ್ ನಟನೆಯ 'ಲಕ್ಷ್ಮಿ' ಚಿತ್ರ ಬ್ಯಾನ್? ಹಿಂದೂಗಳ ಭಾವನೆಗೆ ಧಕ್ಕೆ ಎಂದ ಲಕ್ಷ್ಮಿ 'ಭಕ್ತರು'

ಅಕ್ಷಯ್ ಕುಮಾರ್ ನಟನೆಯ ‘ಲಕ್ಷ್ಮಿ’ ಚಿತ್ರ ಬ್ಯಾನ್? ಹಿಂದೂಗಳ ಭಾವನೆಗೆ ಧಕ್ಕೆ ಎಂದ ಲಕ್ಷ್ಮಿ ‘ಭಕ್ತರು’

'ತಮಿಳಿನ ಕಾಂಚನಾ ಚಿತ್ರದ ಬಾಲಿವುಡ್ ರೀಮೆಕ್ ಚಿತ್ರ 'ಲಕ್ಷ್ಮಿ', ಲವ್ ಜಿಹಾದ್‌ಗೆ ಬೆಂಬಲ ನಿಡುತ್ತದೆ ಮತ್ತು ಹಿಂದೂಗಳ ಭಾವನೆಗೆ ಧಕ್ಕೆ ತರುತ್ತದೆ' ಹಾಗಾಗಿ ಇದನ್ನು ಬ್ಯಾನ್ ಮಾಡಬೇಕು ಎಂದು ಹಲವರು ಒತ್ತಾಯಿಸುತ್ತಿದ್ದಾರೆ.

- Advertisement -
- Advertisement -

ಅಕ್ಷಯ್ ಕುಮಾರ್ ನಟನೆಯ ಬಹುನಿರೀಕ್ಷಿತ ಬಾಲಿವುಡ್ ಚಿತ್ರ ‘ಲಕ್ಷ್ಮಿ’ ಚಲನಚಿತ್ರವನ್ನು ಬ್ಯಾನ್ ಮಾಡಬೇಕೆಂದು ಟ್ವಿಟ್ಟರ್‌ನಲ್ಲಿ ಹಲವರು ಒತ್ತಾಯಿಸುತ್ತಿದ್ದಾರೆ. #Ban_Laxmmi_Movie ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದೆ. ಈ ಹಿಂದೆ ಚಿತ್ರದ ಶೀರ್ಷಿಕೆಯಿಂದ ಮನನೊಂದ ಲಕ್ಷ್ಮಿ ಭಕ್ತರು ಈ ಅಭಿಯಾನವನ್ನು ಹುಟ್ಟುಹಾಕಿದ್ದರು.

ಈ ಚಿತ್ರವು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡುತ್ತದೆ ಎಂಬ ಕಾರಣಕ್ಕೆ ಬ್ಯಾನ್ ಮಾಡಬೇಕು ಎಂಬು ಕೂಗು ಕೇಳಿಬರುತ್ತಿದೆ. ಈ ಚಿತ್ರ ಇದೇ ನವೆಂಬರ್ 9 ರಂದು ಬಿಡುಗಡೆಯಾಗುತ್ತಿದೆ.

 

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ಅರ್ಚನಾ ಘಾನ್ವತ್ ಎಂಬುವವರು ಟ್ವೀಟ್ ಮಾಡಿ, “#LaxmmiBomb ಅನ್ನು ಸ್ವೀಕರಿಸಲಾಗುವುದಿಲ್ಲ! ಅಥವಾ ದೇವತೆ “# ಲಕ್ಷ್ಮಿ” ಹೆಸರು ಸ್ವೀಕಾರಾರ್ಹವಲ್ಲ !!. ಈ ಚಿತ್ರವನ್ನು ಬ್ಯಾನ್ ಮಾಡಿ. ಇದು ಹಿಂದೂಗಳ ಭಾವನೆಗೆ ಧಕ್ಕೆಯುಂಟುಮಾಡುತ್ತದೆ ಮತ್ತು ಇದು ಲವ್ ಜಿಹಾದ್‌ ಅನ್ನು ಬೆಂಬಲಿಸುತ್ತದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು, “ಈ ಚಿತ್ರವು ತಮಿಳು ಆವೃತ್ತಿಯಲ್ಲಿ ‘ಕಾಂಚನಾ’, ನಾಯಕ-ರಾಘವ, ನಾಯಕಿ-ಪ್ರಿಯಾ ಆಗಿದ್ದಾರೆ. ಆದರೆ ಹಿಂದಿಯಲ್ಲಿ ನಾಯಕ-ಆಸಿಫ್, ನಾಯಕಿ-ಪ್ರಿಯಾ ಎಂದು ಬದಲಾಗಿದೆ. ಇದು ಕಾಕತಾಳೀಯವಲ್ಲ. ಇದು ಲವ್ ಜಿಹಾದ್‌ ಅನ್ನು ಪ್ರಚಾರ ಮಾಡುವ ಸ್ಪಷ್ಟ ಗುರಿಯನ್ನು ಹೊಂದಿದೆ. ಹಾಗಾಗಿ ಈ ಚಿತ್ರವನ್ನು ಬ್ಯಾನ್ ಮಾಡಿ ಎಂದು ಎಲ್ಲಾ ಹಿಂದೂಗಳಲ್ಲಿಯೂ ನಾನು ಮನವಿ ಮಾಡಿಕೊಳ್ಳುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ಸಖ ವೀರ್ ಎಂಬುವವರು ಟ್ವೀಟ್ ಮಾಡಿ, “ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ‘ಲಕ್ಷ್ಮಿ’ ಚಿತ್ರದ ವಿರುದ್ಧ ಮುಂಬೈನಲ್ಲಿ ದೂರು ದಾಖಲಿಸಲಾಗಿದೆ. ಈಗ ಹಿಂದೂಗಳು ಸಾಂವಿಧಾನಿಕವಾಗಿ ಇದನ್ನು ವಿರೋಧಿಸಲಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಈ ಹಿಂದೆಯೂ ಈ ಚಿತ್ರದ ಟೈಟಲ್‌ ಅನ್ನು ಬದಲಾಯಿಸಬೇಕು ಎಂದು ಹಲವರು ಒತ್ತಾಯಿಸಿದ್ದರು. ಇದಕ್ಕೆ ಮಣಿದ ಚಿತ್ರ ತಂಡ ‘ಲಕ್ಷ್ಮಿ ಬಾಂಬ್’ ಟೈಟಲ್‌ನಲ್ಲಿ ಬಾಂಬ್ ಅನ್ನು ಸಿಡಿಸಿ ಬರೀ ‘ಲಕ್ಷ್ಮಿ’ ಎಂದು ಮರುನಾಮಕರಣ ಮಾಡಿಕೊಂಡಿತ್ತು. ಇದೀಗ ಈ ಚಿತ್ರಕ್ಕೆ ಮತ್ತೊಂದು ಕಂಟಕ ಎದುರಾಗಿದೆ.

ನವೆಂಬರ್ 9 ರಂದು ತೆರೆಗೆ ಬರಲಿರುವ ಚಿತ್ರಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ ವಿರೋಧ ವ್ಯಕ್ತಪಡಿಸಿತ್ತು. ಈ ಚಿತ್ರ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುತ್ತದೆ ಎಂದು ರಾಜ್ಯ ಕಾರ್ಯಕಾರಿ ಅಧ್ಯಕ್ಷ ರಾಜೇಶ್ ಪವಿತ್ರನ್ ಹೇಳಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೂಗಳ ಭಾವನೆಗಳನ್ನು ಈ ಚಿತ್ರ ಅವಮಾನಿಸಿದೆ. ಈ ಚಿತ್ರದಲ್ಲಿ ನಾಯಕನ ಹೆಸರು ಆಸಿಫ್, ನಾಯಕಿಯ ಹೆಸರು ಪ್ರಿಯಾ ಯಾದವ್ ಆಗಿದೆ. ಚಿತ್ರ “ಲವ್ ಜಿಹಾದ್” ಅನ್ನು ಪ್ರಚಾರ ಪಡಿಸುತ್ತದೆ ಹಾಗಾಗಿ ಚಲನಚಿತ್ರವನ್ನು ನಿಷೇಧಿಸುವಂತೆ ಈ ಹಿಂದೆಯೇ ಸರ್ಕಾರಕ್ಕೆ ಕರೆ ನೀಡಿದ್ದರು.

“ಚಲನಚಿತ್ರ ನಿರ್ಮಾಪಕರು ಕೋಮು ಗಲಭೆಗಳನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಲಕ್ಷ್ಮೀ ಬಾಂಬ್ ಎಂಬ ಚಲನಚಿತ್ರವನ್ನು ನಿರ್ಮಿಸುವವರು ಎಂದಾದರೂ ತಸ್ಲೀಮಾ ಬಾಂಬ್ ಎಂಬ ಚಿತ್ರ ಮಾಡಲು ಧೈರ್ಯ ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದರು.

ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರವನ್ನು ಬ್ಯಾನ್ ಮಾಡಬೇಕು ಎನ್ನುವ ಅಭಿಯಾನವನ್ನು ಆರಂಭಿಸಲಾಗಿದೆ. ಈ ಚಿತ್ರವನ್ನು ಒಪ್ಪಿಕೊಂಡಿರುವುದಕ್ಕೆ ಅಕ್ಷಯ್ ಕುಮಾರ್ ವಿರುದ್ಧವೂ ಹಲವರು ತಿರುಗಿಬಿದ್ದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ಇತ್ತೀಚೆಗೆ ಲವ್ ಜಿಹಾದ್ ಎನ್ನುವ ಪದ ಬಹಳಷ್ಟು ಚಾಲ್ತಿಯಲ್ಲಿದ್ದು, ಈ ಹಿಂದೆ ಇದೇ ಕಾರಣ ನೀಡಿ ತನಿಷ್ಕ್ ಜಾಹೀರಾತನ್ನು ನಿಷೇಧಿಸಲಾಗಿತ್ತು.

ಆದರೆ ಕೇಂದ್ರ ಸರ್ಕಾರ ‘ಲವ್ ಜಿಹಾದ್’ ಎಂಬುದು ಎಲ್ಲಿಯೂ ವರದಿಯಾಗಿಲ್ಲ ಎಂದು ಹೇಳಿತ್ತು. ಬಿಜೆಪಿ ಮುಖಂಡ ಮತ್ತು ಗೃಹ ವ್ಯವಹಾರಗಳ ಸಚಿವ ಜಿ. ಕಿಶನ್ ರೆಡ್ಡಿ ಅವರು ‘ಲವ್ ಜಿಹಾದ್ ’ಎಂಬ ಪದವನ್ನು ಈಗಿರುವ ಯಾವುದೇ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ಅಲ್ಲದೇ ಇದುವರೆಗೂ ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ” ಎಂದು ಲೋಕಸಭೆಗೆ ತಿಳಿಸಿದ್ದರು.

ಇದಲ್ಲದೆ, “ಸಂವಿಧಾನದ 25 ನೇ ವಿಧಿಯು ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯಕ್ಕೆ ಒಳಪಟ್ಟು ಧರ್ಮವನ್ನು ಪ್ರಚಾರ ಮಾಡಲು, ಅಭ್ಯಾಸ ಮಾಡಲು ಮತ್ತು ಪ್ರಚಾರ ಮಾಡಲು ಸ್ವಾತಂತ್ರ್ಯವನ್ನು ಒದಗಿಸುತ್ತದೆ. ಕೇರಳ ಹೈಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳು ಈ ಅಭಿಪ್ರಾಯವನ್ನು ಎತ್ತಿಹಿಡಿದಿವೆ” ಎಂದು ಹೇಳಿದ್ದರು.


ಇದನ್ನೂ ಓದಿ: ಟೀಕೆಗೆ ಬೆದರಿದ ಚಿತ್ರತಂಡ: ಲಕ್ಷ್ಮೀ ಬಾಂಬ್ ಚಿತ್ರದ ಟೈಟಲ್‌ನಲ್ಲಿ ‘ಬಾಂಬ್’ ನಿಷ್ಕ್ರಿಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...