Homeಸಾಹಿತ್ಯ-ಸಂಸ್ಕೃತಿಕವನಭಾಷೆಯ ರದ್ದು: ಮೂರು ಭಾಷೆಗಳನ್ನು ದಾಟಿ ಬಂದ ಕವನ

ಭಾಷೆಯ ರದ್ದು: ಮೂರು ಭಾಷೆಗಳನ್ನು ದಾಟಿ ಬಂದ ಕವನ

- Advertisement -
- Advertisement -

(“ಇತ್ತೀಚೆಗೆ ಭಾಷಾಧಿಪತ್ಯದ ಧೊರಣೆಯ ಬಗ್ಗೆ ರಹೀಂ ಪೊನ್ನಾಡ್ ಬರೆದ ಮಲೆಯಾಳಂ ಕವನಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಬಂದ ಹಿಂದೀ ಅನುವಾದವನ್ನು ನೋಡಿ ತೆಲುಗಿಗೆ ಅನುವಾದ ಮಾಡದೇ ಇರಲು ಸಾಧ್ಯವಾಗಲಿಲ್ಲ” ಎಂದು ಕವನವನ್ನು ತೆಲುಗಿಗೆ ಅನುವಾದ ಮಾಡಿದ ಮುಖಪುಟದ ಗೆಳೆಯ ಎನ್. ವೇಣುಗೋಪಾಲ್ ಬರೆದುಕೊಂಡಿದ್ದಾರೆ. ನನ್ನ ಸ್ಥಿತಿಯು ಸಹಾ ಅಂಥದ್ದೇ ಆಗಿರುವುದರಿಂದ ಕನ್ನಡಾನುವಾದ ನಮ್ಮೆಲ್ಲರಿಗಾಗಿ…)

ಒಂದು ದಿನ ಅರ್ಧ ರಾತ್ರಿ
ಆತ ಭಾಷೆಯ ಮೇಲೆ ನಿಷೇಧವೇರಿದ
‘ಇಂದಿನಿಂದ ಎಲ್ಲರದ್ದೂ ಒಂದೇ ಭಾಷೆ”
ಹಳೇ ಭಾಷಾ ಪದಗಳು ನಿಮ್ಮಲ್ಲಿದ್ದರೆ
ಅಂಚೆ ಕಚೇರಿಯಲ್ಲಿ ಬದಲಾಯಿಸಿ ಕೊಳ್ಳಬಹುದು’
ಎಂಬ ಗಂಭೀರ ಪ್ರಕಟಣೆ ಹೊರಡಿತು

ಅರ್ಧ ನಿದ್ರೆಯಲ್ಲಿದ್ದ ಜನರು
ಬೆಚ್ಚಿಬಿದ್ದು
ಓಟ ಶುರುಮಾಡಿದರು
ಪ್ರತಿಯೊಂದು ಜಾಗದಲ್ಲೂ ನಿಶ್ಶಬ್ಧ
ತಾಯಂದಿರು ಮಕ್ಕಳ ಬಾಯನ್ನು ಕೈಗಳಿಂದ ಮುಚ್ಚಿದ್ದಾರೆ
ಮುದುಕರ ಮುಖಗಳನ್ನು ಬಟ್ಟೆಯಿಂದ ಮರೆಮಾಚಿದ್ದಾರೆ
ದೇವಾಲಯಗಳಲ್ಲಿ ಹಾಡುಗಳು ನಿಂತುಹೋಗಿವೆ
ಮಸೀದಿಯಲ್ಲಿ ಅಜಾನ್ ಸಹಾ ಕೇಳಿಸುತ್ತಿಲ್ಲ
ರೇಡಿಯೋದಲ್ಲಿ ವೀಣಾ ವಾದನೆ ಬಿಟ್ಟರೆ ಮತ್ತೇನೂ ಕೇಳಿಸುತ್ತಿಲ್ಲ
ಟೀವಿ ಪರದೆಯ ಮೇಲೆ ಸನ್ನೆಯ ಭಾಷೆಯಲ್ಲೇ ವಾರ್ತೆಗಳು ಬರುತ್ತಿವೆ
ಪತ್ರಿಕೆಗಳ ಹೆಸರಲ್ಲಿ
ಸಂತೆಗೆ ಬಂದಿರುವುದು ಎಂಟು ಕಾಲಂಗಳು ಖಾಲಿ ಇರುವ ಬಿಳಿ ಕಾಗದಗಳು
ಎಲ್ಲಾ ಕೀಬೋರ್ಡ್‍ಗಳು ಮೌನತಾಳಿವೆ
ಮೊಬೈಲ್ ಸ್ಕ್ರೀನ್‍ಗಳ ಮೇಲೆ
ಗೊಂಬೆಗಳು ಮಾತ್ರ ಉಳಿದಿವೆ

ಅಂಚೆ ಕಚೇರಿಯ ಮುಂದೆ ನಿಶ್ಶಬ್ದವಾಗಿ ನಿಂತ ಉದ್ದನೆಯ ಕ್ಯೂ
ದಿನಕ್ಕೆರಡು ಪದಗಳನ್ನು ಮಾತ್ರ ಬದಲಾಯಿಸಿಕೊಳ್ಳಲು
ಅನುಮೋದನೆ ನೀಡಲಾಗಿದೆ
ಆದರೆ ಕೆಲವರು ಚೀಲಗಳ ತುಂಬಾ ಶಬ್ದಗಳನ್ನು ತುಂಬಿಕೊಂಡು ಬಂದಿದ್ದಾರೆ
ಟಿಫಿನ್ ಬಾಕ್ಸ್‌ಗಳಲ್ಲಿ ಬ್ಯಾಗುಗಳಲ್ಲಿ ಮಾತುಗಳನ್ನು
ತುಂಬಿಕೊಂಡು ಬಂದ ಪುಟಾಣಿ ಮಕ್ಕಳು ಕೂಡಾ ಕ್ಯೂನಲ್ಲಿ ನಿಂತಿದ್ದಾರೆ

‘ಅಮ್ಮ’ ಎಂಬ ಮಾತು ಕೊಟ್ಟವರಿಗೆ
‘ಮಾ’ ಎಂಬ ಮಾತು ಸಿಕ್ಕಿದೆ
‘ಅಪ್ಪ’ ಎಂಬ ಮಾತಿಗೆ
‘ಬಾಪ್‘ ಎಂಬ ಮಾತು ಸಿಕ್ಕಿತು
ಚಾಕೊಲೇಟ್, ಗೇಮ್ ಎಂಬ ಪದಗಳನ್ನು ಬದಲಾಯಿಸಿಕೊಳ್ಳಲು ಬಂದ ಮಕ್ಕಳನ್ನು
ಕೌಂಟರ್‌ನಿಂದ ಕಳುಹಿಸೇಬಿಟ್ಟರು
ಇಲ್ಲಿ ಭಾಷೆಯನ್ನು ಮಾತ್ರ ಬದಲಾಯಿಸಿಕೊಳ್ಳಬಹುದು ಎಂದರು

ಬದಲಾಯಿಸಲು ಶಬ್ಧಗಳಿಲ್ಲ ಎಂಬ ಕಾರಣಕ್ಕಾಗಿ
‘ಅಸಂತೃಪ್ತಿ’ ಎಂಬ ಪದವನ್ನು
‘ಹೆಣದ ವಸ್ತ್ರ’ ಎಂಬ ಪದವನ್ನು ಹಿಂದಕ್ಕೆ ಕಳುಹಿಸಿದರು

‘ಚೂರಿ’ ಪದವನ್ನು ಬದಲಾಯಿಸಲು ಬಂದವರನ್ನು ಓಡಿಸಿಬಿಟ್ಟರು
‘ಮದ್ದುಗುಂಡು’ ಎಂಬ ಪದ ಬದಲಾಯಿಸಿ ಎಂದರೆ
ಪೊಲೀಸರು ಸೆರೆ ಹಿಡಿದರು
ಕ್ಯೂನಲ್ಲಿ ನಿಂತು ನಿಂತು ಸುಸ್ತಾದ ಮುದುಕರು
ಕುಡಿಯಲು ನೀರು ಕೇಳಿದರೆ
ತುಪಾಕಿ ತೋಟಾಗಳಿಂದ ಬಾಯಿ ಮುಚ್ಚಿಸಿದರು

ಇದೆಲ್ಲವನ್ನೂ ನೋಡಿ ನೋಡಿ
ಸಾಕಾಗಿ ಮನೆಗೆ ಬಂದರೆ
ಮನೆ ಅಂಗಳದಲ್ಲಿ ಮಾತುಗಳ ರಾಶಿ ಬಿದ್ದಿದೆ
ಹೊಸ ಪದಗಳು, ಹಳೆ ಪದಗಳು, ಲಿಪಿ ಇಲ್ಲದ ಪದಗಳು
ಬದಲಾಯಿಸಿಕೊಂಡು ತರಬೇಕಾದ ಪದಗಳು

ಮನೆಯವರು ಎಲ್ಲವನ್ನೂ ರಾಶಿರಾಶಿಯಾಗಿ ಸುರಿದಿದ್ದಾರೆ
ಅಪ್ಪ ತನ್ನ ತಲೆದಿಂಬು ಒಳಗಿಂದ ತೆಗೆದ ಪದಗಳು
ನನಗೆ ಅರ್ಥವೇ ಆಗಲಿಲ್ಲ
ಅಮ್ಮ ತನ್ನ ಮಡಿಲಲ್ಲಿ ತುಂಬಿಕೊಂಡಿರುವ ಪದಗಳನ್ನು ನಾನೆಂದೂ ಕೇಳಲೇ ಇಲ್ಲ
ನನ್ನ ಹೆಂಡತಿ ಅಡುಗೆ ಮನೆಯಿಂದ ಎಳೆದುತಂದ ಪದಗಳನ್ನು ನೋಡಿದರೆ
ಅಷ್ಟು ಮಾತುಗಳ ಮಧ್ಯದಲ್ಲೇ ಆಕೆ ಅಡುಗೆ ಮಾಡುತ್ತಿದ್ದಳು ಅನಿಸಿತು
ನನ್ನ ಮಗಳ ಶಾಲೆಯ ಬ್ಯಾಗಿನಲ್ಲಿ ಹೋಂವರ್ಕ್ ಪದಗಳು
ನನ್ನ ಮಗನ ಪೆಟ್ಟಿಗೆಯಲ್ಲಿ ಹರಡಿರುವ ಜೋಷಿನ ಮಾತುಗಳು
ಎಷ್ಟೇ ಪದಗಳಿದ್ದರೂ ಬದಲಾಗಿ ಎರಡೇ ಎರಡು ಮಾತುಗಳು
ಮಾತ್ರ ಸಿಗುತ್ತವೆ ಎಂದು ಹೇಗೆ ಹೇಳಲಿ?

ಆ ಮಾತುಗಳ ಗಂಟಿನಲ್ಲಿ ತುಂಬಾ ಹುಡುಕಿದೆ
ಬಹಳ ಕಷ್ಟಪಟ್ಟ ಮೇಲೆ
ನನ್ನ ಕೈಗೆ ಎರಡು ಪದಗಳು ಸಿಕ್ಕವು
ಇರೋ ಬರೋ ಶಕ್ತಿ ಎಲ್ಲಾ ಬಳಸಿ
ಆ ಮಾತುಗಳನ್ನು ಹೊರಗೆ ಎಳೆದಿದೆ
ಒಂದು “ಪ್ರಜಾತಂತ್ರ” ಮತ್ತೊಂದು “ಬಹುಳ”

ಬೇಗ ಬೇಗ ಓಡಿಹೋಗಿ ಅಂಚೆ ಕಚೇರಿಗೆ ತಲುಪುವ ವೇಳೆಗೆ
ಮುಸ್ಸಂಜೆ ಕತ್ತಲಾಗುತ್ತಿತ್ತು
ನನ್ನ ಕೈಯಲ್ಲಿರುವ ಮಾತುಗಳನ್ನು ನೋಡಿ
ಬೆಚ್ಚಿಬಿದ್ದು ಎದ್ದು ನಿಂತರು
ಕೌಂಟರಿನ ಉದ್ಯೋಗಿಗಳು
ನನ್ನ ಕೈಯಲ್ಲಿನ ಮಾತುಗಳು ಜಾರಿ ಕೆಳಗೆ ಬಿದ್ದವು
ತುಂಬಾ ಜನ ಓಡಿ ಬಂದು ಸುತ್ತುವರೆಯುತ್ತಿರುವಂತೆ ಬೂಟು ಹೆಜ್ಜೆಗಳ ಸದ್ದು ಕೇಳಿಸಿತು
ಪ್ರಜ್ಞೆ ತಪ್ಪಿ ಬೀಳುತ್ತಿರುವ ನನಗೆ
ಎರಡೇ ಎರಡು ‘ಮಾತು’ಗಳು ಕೇಳಿಸಿತು
“ಸಾಯಿಸಿಬಿಡಿ” – “ದೇಶದ್ರೋಹಿಯನ್ನ”

ಮಲೆಯಾಳಂ ಮೂಲ : ರಹೀಮ್ ಪೊನ್ನಾಡ್
ಹಿಂದಿ : ಎ. ಆರ್. ಸಿಂಧು, ವೀಣಾ ಗುಪ್ತ
ತೆಲುಗು : ಎನ್.ವೇಣುಗೋಪಾಲ್
ಕನ್ನಡಾನುವಾದ : ಪದ್ಮಾ ಕೆ ರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಶಾನ್ಯ ಭಾರತದಲ್ಲಿ ಕೇವಲ ನೂರು ವರ್ಷಗಳಲ್ಲಿ ಚರ್ಚ್ 60ಕ್ಕೂ ಅಧಿಕ ಭಾಷೆಗಳನ್ನು ಕೊಂದು ಇಂಗ್ಲಿಷ್ ಅನ್ನು ಸ್ಥಾಪಿಸಿದಾಗ, ಕೇರಳ ಸರಕಾರ ಕಾಸರಗೋಡಿನಲ್ಲಿ ಸಾವಿರಾರು ತುಳು, ಕನ್ನಡ, ಕೊಂಕಣಿ ಸಂಸಾರಗಳನ್ನು ಓಡಿಸಿದಾಗ ರಹೀಮರು ಕವನ ಬರೆಯಲಿಲ್ಲ!! ಮಂಗಳೂರು, ಚೆನ್ನೈ, ಮುಂಬಯಿ ಮುಂತಾದೆಡೆ ಕನ್ನಡ, ತುಳು, ತಮಿಳು, ಮರಾಠಿ ಭಾಷೆಗಳನ್ನು ಬಿಟ್ಟು ಹಿಡಿದದ್ದು ಹಿಂದಿಯನ್ನಲ್ಲ, ಇಂಗ್ಲಿಷನ್ನು!!! ಅವರ ಸಂಖ್ಯೆ ಈಗ ಶೇಕಡಾ 40 ದಾಟಿದೆ!!! ರಹೀಮರ ಪದ್ಯವನ್ನು ಅವರ ಮುಂದೆ ಓದಿದರೆ ಬಿದ್ದು ಬಿದ್ದು ನಗುತ್ತಾರೆ!!!

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...