Homeಸಾಹಿತ್ಯ-ಸಂಸ್ಕೃತಿಕವನಭಾಷೆಯ ರದ್ದು: ಮೂರು ಭಾಷೆಗಳನ್ನು ದಾಟಿ ಬಂದ ಕವನ

ಭಾಷೆಯ ರದ್ದು: ಮೂರು ಭಾಷೆಗಳನ್ನು ದಾಟಿ ಬಂದ ಕವನ

- Advertisement -
- Advertisement -

(“ಇತ್ತೀಚೆಗೆ ಭಾಷಾಧಿಪತ್ಯದ ಧೊರಣೆಯ ಬಗ್ಗೆ ರಹೀಂ ಪೊನ್ನಾಡ್ ಬರೆದ ಮಲೆಯಾಳಂ ಕವನಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಬಂದ ಹಿಂದೀ ಅನುವಾದವನ್ನು ನೋಡಿ ತೆಲುಗಿಗೆ ಅನುವಾದ ಮಾಡದೇ ಇರಲು ಸಾಧ್ಯವಾಗಲಿಲ್ಲ” ಎಂದು ಕವನವನ್ನು ತೆಲುಗಿಗೆ ಅನುವಾದ ಮಾಡಿದ ಮುಖಪುಟದ ಗೆಳೆಯ ಎನ್. ವೇಣುಗೋಪಾಲ್ ಬರೆದುಕೊಂಡಿದ್ದಾರೆ. ನನ್ನ ಸ್ಥಿತಿಯು ಸಹಾ ಅಂಥದ್ದೇ ಆಗಿರುವುದರಿಂದ ಕನ್ನಡಾನುವಾದ ನಮ್ಮೆಲ್ಲರಿಗಾಗಿ…)

ಒಂದು ದಿನ ಅರ್ಧ ರಾತ್ರಿ
ಆತ ಭಾಷೆಯ ಮೇಲೆ ನಿಷೇಧವೇರಿದ
‘ಇಂದಿನಿಂದ ಎಲ್ಲರದ್ದೂ ಒಂದೇ ಭಾಷೆ”
ಹಳೇ ಭಾಷಾ ಪದಗಳು ನಿಮ್ಮಲ್ಲಿದ್ದರೆ
ಅಂಚೆ ಕಚೇರಿಯಲ್ಲಿ ಬದಲಾಯಿಸಿ ಕೊಳ್ಳಬಹುದು’
ಎಂಬ ಗಂಭೀರ ಪ್ರಕಟಣೆ ಹೊರಡಿತು

ಅರ್ಧ ನಿದ್ರೆಯಲ್ಲಿದ್ದ ಜನರು
ಬೆಚ್ಚಿಬಿದ್ದು
ಓಟ ಶುರುಮಾಡಿದರು
ಪ್ರತಿಯೊಂದು ಜಾಗದಲ್ಲೂ ನಿಶ್ಶಬ್ಧ
ತಾಯಂದಿರು ಮಕ್ಕಳ ಬಾಯನ್ನು ಕೈಗಳಿಂದ ಮುಚ್ಚಿದ್ದಾರೆ
ಮುದುಕರ ಮುಖಗಳನ್ನು ಬಟ್ಟೆಯಿಂದ ಮರೆಮಾಚಿದ್ದಾರೆ
ದೇವಾಲಯಗಳಲ್ಲಿ ಹಾಡುಗಳು ನಿಂತುಹೋಗಿವೆ
ಮಸೀದಿಯಲ್ಲಿ ಅಜಾನ್ ಸಹಾ ಕೇಳಿಸುತ್ತಿಲ್ಲ
ರೇಡಿಯೋದಲ್ಲಿ ವೀಣಾ ವಾದನೆ ಬಿಟ್ಟರೆ ಮತ್ತೇನೂ ಕೇಳಿಸುತ್ತಿಲ್ಲ
ಟೀವಿ ಪರದೆಯ ಮೇಲೆ ಸನ್ನೆಯ ಭಾಷೆಯಲ್ಲೇ ವಾರ್ತೆಗಳು ಬರುತ್ತಿವೆ
ಪತ್ರಿಕೆಗಳ ಹೆಸರಲ್ಲಿ
ಸಂತೆಗೆ ಬಂದಿರುವುದು ಎಂಟು ಕಾಲಂಗಳು ಖಾಲಿ ಇರುವ ಬಿಳಿ ಕಾಗದಗಳು
ಎಲ್ಲಾ ಕೀಬೋರ್ಡ್‍ಗಳು ಮೌನತಾಳಿವೆ
ಮೊಬೈಲ್ ಸ್ಕ್ರೀನ್‍ಗಳ ಮೇಲೆ
ಗೊಂಬೆಗಳು ಮಾತ್ರ ಉಳಿದಿವೆ

ಅಂಚೆ ಕಚೇರಿಯ ಮುಂದೆ ನಿಶ್ಶಬ್ದವಾಗಿ ನಿಂತ ಉದ್ದನೆಯ ಕ್ಯೂ
ದಿನಕ್ಕೆರಡು ಪದಗಳನ್ನು ಮಾತ್ರ ಬದಲಾಯಿಸಿಕೊಳ್ಳಲು
ಅನುಮೋದನೆ ನೀಡಲಾಗಿದೆ
ಆದರೆ ಕೆಲವರು ಚೀಲಗಳ ತುಂಬಾ ಶಬ್ದಗಳನ್ನು ತುಂಬಿಕೊಂಡು ಬಂದಿದ್ದಾರೆ
ಟಿಫಿನ್ ಬಾಕ್ಸ್‌ಗಳಲ್ಲಿ ಬ್ಯಾಗುಗಳಲ್ಲಿ ಮಾತುಗಳನ್ನು
ತುಂಬಿಕೊಂಡು ಬಂದ ಪುಟಾಣಿ ಮಕ್ಕಳು ಕೂಡಾ ಕ್ಯೂನಲ್ಲಿ ನಿಂತಿದ್ದಾರೆ

‘ಅಮ್ಮ’ ಎಂಬ ಮಾತು ಕೊಟ್ಟವರಿಗೆ
‘ಮಾ’ ಎಂಬ ಮಾತು ಸಿಕ್ಕಿದೆ
‘ಅಪ್ಪ’ ಎಂಬ ಮಾತಿಗೆ
‘ಬಾಪ್‘ ಎಂಬ ಮಾತು ಸಿಕ್ಕಿತು
ಚಾಕೊಲೇಟ್, ಗೇಮ್ ಎಂಬ ಪದಗಳನ್ನು ಬದಲಾಯಿಸಿಕೊಳ್ಳಲು ಬಂದ ಮಕ್ಕಳನ್ನು
ಕೌಂಟರ್‌ನಿಂದ ಕಳುಹಿಸೇಬಿಟ್ಟರು
ಇಲ್ಲಿ ಭಾಷೆಯನ್ನು ಮಾತ್ರ ಬದಲಾಯಿಸಿಕೊಳ್ಳಬಹುದು ಎಂದರು

ಬದಲಾಯಿಸಲು ಶಬ್ಧಗಳಿಲ್ಲ ಎಂಬ ಕಾರಣಕ್ಕಾಗಿ
‘ಅಸಂತೃಪ್ತಿ’ ಎಂಬ ಪದವನ್ನು
‘ಹೆಣದ ವಸ್ತ್ರ’ ಎಂಬ ಪದವನ್ನು ಹಿಂದಕ್ಕೆ ಕಳುಹಿಸಿದರು

‘ಚೂರಿ’ ಪದವನ್ನು ಬದಲಾಯಿಸಲು ಬಂದವರನ್ನು ಓಡಿಸಿಬಿಟ್ಟರು
‘ಮದ್ದುಗುಂಡು’ ಎಂಬ ಪದ ಬದಲಾಯಿಸಿ ಎಂದರೆ
ಪೊಲೀಸರು ಸೆರೆ ಹಿಡಿದರು
ಕ್ಯೂನಲ್ಲಿ ನಿಂತು ನಿಂತು ಸುಸ್ತಾದ ಮುದುಕರು
ಕುಡಿಯಲು ನೀರು ಕೇಳಿದರೆ
ತುಪಾಕಿ ತೋಟಾಗಳಿಂದ ಬಾಯಿ ಮುಚ್ಚಿಸಿದರು

ಇದೆಲ್ಲವನ್ನೂ ನೋಡಿ ನೋಡಿ
ಸಾಕಾಗಿ ಮನೆಗೆ ಬಂದರೆ
ಮನೆ ಅಂಗಳದಲ್ಲಿ ಮಾತುಗಳ ರಾಶಿ ಬಿದ್ದಿದೆ
ಹೊಸ ಪದಗಳು, ಹಳೆ ಪದಗಳು, ಲಿಪಿ ಇಲ್ಲದ ಪದಗಳು
ಬದಲಾಯಿಸಿಕೊಂಡು ತರಬೇಕಾದ ಪದಗಳು

ಮನೆಯವರು ಎಲ್ಲವನ್ನೂ ರಾಶಿರಾಶಿಯಾಗಿ ಸುರಿದಿದ್ದಾರೆ
ಅಪ್ಪ ತನ್ನ ತಲೆದಿಂಬು ಒಳಗಿಂದ ತೆಗೆದ ಪದಗಳು
ನನಗೆ ಅರ್ಥವೇ ಆಗಲಿಲ್ಲ
ಅಮ್ಮ ತನ್ನ ಮಡಿಲಲ್ಲಿ ತುಂಬಿಕೊಂಡಿರುವ ಪದಗಳನ್ನು ನಾನೆಂದೂ ಕೇಳಲೇ ಇಲ್ಲ
ನನ್ನ ಹೆಂಡತಿ ಅಡುಗೆ ಮನೆಯಿಂದ ಎಳೆದುತಂದ ಪದಗಳನ್ನು ನೋಡಿದರೆ
ಅಷ್ಟು ಮಾತುಗಳ ಮಧ್ಯದಲ್ಲೇ ಆಕೆ ಅಡುಗೆ ಮಾಡುತ್ತಿದ್ದಳು ಅನಿಸಿತು
ನನ್ನ ಮಗಳ ಶಾಲೆಯ ಬ್ಯಾಗಿನಲ್ಲಿ ಹೋಂವರ್ಕ್ ಪದಗಳು
ನನ್ನ ಮಗನ ಪೆಟ್ಟಿಗೆಯಲ್ಲಿ ಹರಡಿರುವ ಜೋಷಿನ ಮಾತುಗಳು
ಎಷ್ಟೇ ಪದಗಳಿದ್ದರೂ ಬದಲಾಗಿ ಎರಡೇ ಎರಡು ಮಾತುಗಳು
ಮಾತ್ರ ಸಿಗುತ್ತವೆ ಎಂದು ಹೇಗೆ ಹೇಳಲಿ?

ಆ ಮಾತುಗಳ ಗಂಟಿನಲ್ಲಿ ತುಂಬಾ ಹುಡುಕಿದೆ
ಬಹಳ ಕಷ್ಟಪಟ್ಟ ಮೇಲೆ
ನನ್ನ ಕೈಗೆ ಎರಡು ಪದಗಳು ಸಿಕ್ಕವು
ಇರೋ ಬರೋ ಶಕ್ತಿ ಎಲ್ಲಾ ಬಳಸಿ
ಆ ಮಾತುಗಳನ್ನು ಹೊರಗೆ ಎಳೆದಿದೆ
ಒಂದು “ಪ್ರಜಾತಂತ್ರ” ಮತ್ತೊಂದು “ಬಹುಳ”

ಬೇಗ ಬೇಗ ಓಡಿಹೋಗಿ ಅಂಚೆ ಕಚೇರಿಗೆ ತಲುಪುವ ವೇಳೆಗೆ
ಮುಸ್ಸಂಜೆ ಕತ್ತಲಾಗುತ್ತಿತ್ತು
ನನ್ನ ಕೈಯಲ್ಲಿರುವ ಮಾತುಗಳನ್ನು ನೋಡಿ
ಬೆಚ್ಚಿಬಿದ್ದು ಎದ್ದು ನಿಂತರು
ಕೌಂಟರಿನ ಉದ್ಯೋಗಿಗಳು
ನನ್ನ ಕೈಯಲ್ಲಿನ ಮಾತುಗಳು ಜಾರಿ ಕೆಳಗೆ ಬಿದ್ದವು
ತುಂಬಾ ಜನ ಓಡಿ ಬಂದು ಸುತ್ತುವರೆಯುತ್ತಿರುವಂತೆ ಬೂಟು ಹೆಜ್ಜೆಗಳ ಸದ್ದು ಕೇಳಿಸಿತು
ಪ್ರಜ್ಞೆ ತಪ್ಪಿ ಬೀಳುತ್ತಿರುವ ನನಗೆ
ಎರಡೇ ಎರಡು ‘ಮಾತು’ಗಳು ಕೇಳಿಸಿತು
“ಸಾಯಿಸಿಬಿಡಿ” – “ದೇಶದ್ರೋಹಿಯನ್ನ”

ಮಲೆಯಾಳಂ ಮೂಲ : ರಹೀಮ್ ಪೊನ್ನಾಡ್
ಹಿಂದಿ : ಎ. ಆರ್. ಸಿಂಧು, ವೀಣಾ ಗುಪ್ತ
ತೆಲುಗು : ಎನ್.ವೇಣುಗೋಪಾಲ್
ಕನ್ನಡಾನುವಾದ : ಪದ್ಮಾ ಕೆ ರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಶಾನ್ಯ ಭಾರತದಲ್ಲಿ ಕೇವಲ ನೂರು ವರ್ಷಗಳಲ್ಲಿ ಚರ್ಚ್ 60ಕ್ಕೂ ಅಧಿಕ ಭಾಷೆಗಳನ್ನು ಕೊಂದು ಇಂಗ್ಲಿಷ್ ಅನ್ನು ಸ್ಥಾಪಿಸಿದಾಗ, ಕೇರಳ ಸರಕಾರ ಕಾಸರಗೋಡಿನಲ್ಲಿ ಸಾವಿರಾರು ತುಳು, ಕನ್ನಡ, ಕೊಂಕಣಿ ಸಂಸಾರಗಳನ್ನು ಓಡಿಸಿದಾಗ ರಹೀಮರು ಕವನ ಬರೆಯಲಿಲ್ಲ!! ಮಂಗಳೂರು, ಚೆನ್ನೈ, ಮುಂಬಯಿ ಮುಂತಾದೆಡೆ ಕನ್ನಡ, ತುಳು, ತಮಿಳು, ಮರಾಠಿ ಭಾಷೆಗಳನ್ನು ಬಿಟ್ಟು ಹಿಡಿದದ್ದು ಹಿಂದಿಯನ್ನಲ್ಲ, ಇಂಗ್ಲಿಷನ್ನು!!! ಅವರ ಸಂಖ್ಯೆ ಈಗ ಶೇಕಡಾ 40 ದಾಟಿದೆ!!! ರಹೀಮರ ಪದ್ಯವನ್ನು ಅವರ ಮುಂದೆ ಓದಿದರೆ ಬಿದ್ದು ಬಿದ್ದು ನಗುತ್ತಾರೆ!!!

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...