Homeಸಾಹಿತ್ಯ-ಸಂಸ್ಕೃತಿಕವನಭಾಷೆಯ ರದ್ದು: ಮೂರು ಭಾಷೆಗಳನ್ನು ದಾಟಿ ಬಂದ ಕವನ

ಭಾಷೆಯ ರದ್ದು: ಮೂರು ಭಾಷೆಗಳನ್ನು ದಾಟಿ ಬಂದ ಕವನ

- Advertisement -
- Advertisement -

(“ಇತ್ತೀಚೆಗೆ ಭಾಷಾಧಿಪತ್ಯದ ಧೊರಣೆಯ ಬಗ್ಗೆ ರಹೀಂ ಪೊನ್ನಾಡ್ ಬರೆದ ಮಲೆಯಾಳಂ ಕವನಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಬಂದ ಹಿಂದೀ ಅನುವಾದವನ್ನು ನೋಡಿ ತೆಲುಗಿಗೆ ಅನುವಾದ ಮಾಡದೇ ಇರಲು ಸಾಧ್ಯವಾಗಲಿಲ್ಲ” ಎಂದು ಕವನವನ್ನು ತೆಲುಗಿಗೆ ಅನುವಾದ ಮಾಡಿದ ಮುಖಪುಟದ ಗೆಳೆಯ ಎನ್. ವೇಣುಗೋಪಾಲ್ ಬರೆದುಕೊಂಡಿದ್ದಾರೆ. ನನ್ನ ಸ್ಥಿತಿಯು ಸಹಾ ಅಂಥದ್ದೇ ಆಗಿರುವುದರಿಂದ ಕನ್ನಡಾನುವಾದ ನಮ್ಮೆಲ್ಲರಿಗಾಗಿ…)

ಒಂದು ದಿನ ಅರ್ಧ ರಾತ್ರಿ
ಆತ ಭಾಷೆಯ ಮೇಲೆ ನಿಷೇಧವೇರಿದ
‘ಇಂದಿನಿಂದ ಎಲ್ಲರದ್ದೂ ಒಂದೇ ಭಾಷೆ”
ಹಳೇ ಭಾಷಾ ಪದಗಳು ನಿಮ್ಮಲ್ಲಿದ್ದರೆ
ಅಂಚೆ ಕಚೇರಿಯಲ್ಲಿ ಬದಲಾಯಿಸಿ ಕೊಳ್ಳಬಹುದು’
ಎಂಬ ಗಂಭೀರ ಪ್ರಕಟಣೆ ಹೊರಡಿತು

ಅರ್ಧ ನಿದ್ರೆಯಲ್ಲಿದ್ದ ಜನರು
ಬೆಚ್ಚಿಬಿದ್ದು
ಓಟ ಶುರುಮಾಡಿದರು
ಪ್ರತಿಯೊಂದು ಜಾಗದಲ್ಲೂ ನಿಶ್ಶಬ್ಧ
ತಾಯಂದಿರು ಮಕ್ಕಳ ಬಾಯನ್ನು ಕೈಗಳಿಂದ ಮುಚ್ಚಿದ್ದಾರೆ
ಮುದುಕರ ಮುಖಗಳನ್ನು ಬಟ್ಟೆಯಿಂದ ಮರೆಮಾಚಿದ್ದಾರೆ
ದೇವಾಲಯಗಳಲ್ಲಿ ಹಾಡುಗಳು ನಿಂತುಹೋಗಿವೆ
ಮಸೀದಿಯಲ್ಲಿ ಅಜಾನ್ ಸಹಾ ಕೇಳಿಸುತ್ತಿಲ್ಲ
ರೇಡಿಯೋದಲ್ಲಿ ವೀಣಾ ವಾದನೆ ಬಿಟ್ಟರೆ ಮತ್ತೇನೂ ಕೇಳಿಸುತ್ತಿಲ್ಲ
ಟೀವಿ ಪರದೆಯ ಮೇಲೆ ಸನ್ನೆಯ ಭಾಷೆಯಲ್ಲೇ ವಾರ್ತೆಗಳು ಬರುತ್ತಿವೆ
ಪತ್ರಿಕೆಗಳ ಹೆಸರಲ್ಲಿ
ಸಂತೆಗೆ ಬಂದಿರುವುದು ಎಂಟು ಕಾಲಂಗಳು ಖಾಲಿ ಇರುವ ಬಿಳಿ ಕಾಗದಗಳು
ಎಲ್ಲಾ ಕೀಬೋರ್ಡ್‍ಗಳು ಮೌನತಾಳಿವೆ
ಮೊಬೈಲ್ ಸ್ಕ್ರೀನ್‍ಗಳ ಮೇಲೆ
ಗೊಂಬೆಗಳು ಮಾತ್ರ ಉಳಿದಿವೆ

ಅಂಚೆ ಕಚೇರಿಯ ಮುಂದೆ ನಿಶ್ಶಬ್ದವಾಗಿ ನಿಂತ ಉದ್ದನೆಯ ಕ್ಯೂ
ದಿನಕ್ಕೆರಡು ಪದಗಳನ್ನು ಮಾತ್ರ ಬದಲಾಯಿಸಿಕೊಳ್ಳಲು
ಅನುಮೋದನೆ ನೀಡಲಾಗಿದೆ
ಆದರೆ ಕೆಲವರು ಚೀಲಗಳ ತುಂಬಾ ಶಬ್ದಗಳನ್ನು ತುಂಬಿಕೊಂಡು ಬಂದಿದ್ದಾರೆ
ಟಿಫಿನ್ ಬಾಕ್ಸ್‌ಗಳಲ್ಲಿ ಬ್ಯಾಗುಗಳಲ್ಲಿ ಮಾತುಗಳನ್ನು
ತುಂಬಿಕೊಂಡು ಬಂದ ಪುಟಾಣಿ ಮಕ್ಕಳು ಕೂಡಾ ಕ್ಯೂನಲ್ಲಿ ನಿಂತಿದ್ದಾರೆ

‘ಅಮ್ಮ’ ಎಂಬ ಮಾತು ಕೊಟ್ಟವರಿಗೆ
‘ಮಾ’ ಎಂಬ ಮಾತು ಸಿಕ್ಕಿದೆ
‘ಅಪ್ಪ’ ಎಂಬ ಮಾತಿಗೆ
‘ಬಾಪ್‘ ಎಂಬ ಮಾತು ಸಿಕ್ಕಿತು
ಚಾಕೊಲೇಟ್, ಗೇಮ್ ಎಂಬ ಪದಗಳನ್ನು ಬದಲಾಯಿಸಿಕೊಳ್ಳಲು ಬಂದ ಮಕ್ಕಳನ್ನು
ಕೌಂಟರ್‌ನಿಂದ ಕಳುಹಿಸೇಬಿಟ್ಟರು
ಇಲ್ಲಿ ಭಾಷೆಯನ್ನು ಮಾತ್ರ ಬದಲಾಯಿಸಿಕೊಳ್ಳಬಹುದು ಎಂದರು

ಬದಲಾಯಿಸಲು ಶಬ್ಧಗಳಿಲ್ಲ ಎಂಬ ಕಾರಣಕ್ಕಾಗಿ
‘ಅಸಂತೃಪ್ತಿ’ ಎಂಬ ಪದವನ್ನು
‘ಹೆಣದ ವಸ್ತ್ರ’ ಎಂಬ ಪದವನ್ನು ಹಿಂದಕ್ಕೆ ಕಳುಹಿಸಿದರು

‘ಚೂರಿ’ ಪದವನ್ನು ಬದಲಾಯಿಸಲು ಬಂದವರನ್ನು ಓಡಿಸಿಬಿಟ್ಟರು
‘ಮದ್ದುಗುಂಡು’ ಎಂಬ ಪದ ಬದಲಾಯಿಸಿ ಎಂದರೆ
ಪೊಲೀಸರು ಸೆರೆ ಹಿಡಿದರು
ಕ್ಯೂನಲ್ಲಿ ನಿಂತು ನಿಂತು ಸುಸ್ತಾದ ಮುದುಕರು
ಕುಡಿಯಲು ನೀರು ಕೇಳಿದರೆ
ತುಪಾಕಿ ತೋಟಾಗಳಿಂದ ಬಾಯಿ ಮುಚ್ಚಿಸಿದರು

ಇದೆಲ್ಲವನ್ನೂ ನೋಡಿ ನೋಡಿ
ಸಾಕಾಗಿ ಮನೆಗೆ ಬಂದರೆ
ಮನೆ ಅಂಗಳದಲ್ಲಿ ಮಾತುಗಳ ರಾಶಿ ಬಿದ್ದಿದೆ
ಹೊಸ ಪದಗಳು, ಹಳೆ ಪದಗಳು, ಲಿಪಿ ಇಲ್ಲದ ಪದಗಳು
ಬದಲಾಯಿಸಿಕೊಂಡು ತರಬೇಕಾದ ಪದಗಳು

ಮನೆಯವರು ಎಲ್ಲವನ್ನೂ ರಾಶಿರಾಶಿಯಾಗಿ ಸುರಿದಿದ್ದಾರೆ
ಅಪ್ಪ ತನ್ನ ತಲೆದಿಂಬು ಒಳಗಿಂದ ತೆಗೆದ ಪದಗಳು
ನನಗೆ ಅರ್ಥವೇ ಆಗಲಿಲ್ಲ
ಅಮ್ಮ ತನ್ನ ಮಡಿಲಲ್ಲಿ ತುಂಬಿಕೊಂಡಿರುವ ಪದಗಳನ್ನು ನಾನೆಂದೂ ಕೇಳಲೇ ಇಲ್ಲ
ನನ್ನ ಹೆಂಡತಿ ಅಡುಗೆ ಮನೆಯಿಂದ ಎಳೆದುತಂದ ಪದಗಳನ್ನು ನೋಡಿದರೆ
ಅಷ್ಟು ಮಾತುಗಳ ಮಧ್ಯದಲ್ಲೇ ಆಕೆ ಅಡುಗೆ ಮಾಡುತ್ತಿದ್ದಳು ಅನಿಸಿತು
ನನ್ನ ಮಗಳ ಶಾಲೆಯ ಬ್ಯಾಗಿನಲ್ಲಿ ಹೋಂವರ್ಕ್ ಪದಗಳು
ನನ್ನ ಮಗನ ಪೆಟ್ಟಿಗೆಯಲ್ಲಿ ಹರಡಿರುವ ಜೋಷಿನ ಮಾತುಗಳು
ಎಷ್ಟೇ ಪದಗಳಿದ್ದರೂ ಬದಲಾಗಿ ಎರಡೇ ಎರಡು ಮಾತುಗಳು
ಮಾತ್ರ ಸಿಗುತ್ತವೆ ಎಂದು ಹೇಗೆ ಹೇಳಲಿ?

ಆ ಮಾತುಗಳ ಗಂಟಿನಲ್ಲಿ ತುಂಬಾ ಹುಡುಕಿದೆ
ಬಹಳ ಕಷ್ಟಪಟ್ಟ ಮೇಲೆ
ನನ್ನ ಕೈಗೆ ಎರಡು ಪದಗಳು ಸಿಕ್ಕವು
ಇರೋ ಬರೋ ಶಕ್ತಿ ಎಲ್ಲಾ ಬಳಸಿ
ಆ ಮಾತುಗಳನ್ನು ಹೊರಗೆ ಎಳೆದಿದೆ
ಒಂದು “ಪ್ರಜಾತಂತ್ರ” ಮತ್ತೊಂದು “ಬಹುಳ”

ಬೇಗ ಬೇಗ ಓಡಿಹೋಗಿ ಅಂಚೆ ಕಚೇರಿಗೆ ತಲುಪುವ ವೇಳೆಗೆ
ಮುಸ್ಸಂಜೆ ಕತ್ತಲಾಗುತ್ತಿತ್ತು
ನನ್ನ ಕೈಯಲ್ಲಿರುವ ಮಾತುಗಳನ್ನು ನೋಡಿ
ಬೆಚ್ಚಿಬಿದ್ದು ಎದ್ದು ನಿಂತರು
ಕೌಂಟರಿನ ಉದ್ಯೋಗಿಗಳು
ನನ್ನ ಕೈಯಲ್ಲಿನ ಮಾತುಗಳು ಜಾರಿ ಕೆಳಗೆ ಬಿದ್ದವು
ತುಂಬಾ ಜನ ಓಡಿ ಬಂದು ಸುತ್ತುವರೆಯುತ್ತಿರುವಂತೆ ಬೂಟು ಹೆಜ್ಜೆಗಳ ಸದ್ದು ಕೇಳಿಸಿತು
ಪ್ರಜ್ಞೆ ತಪ್ಪಿ ಬೀಳುತ್ತಿರುವ ನನಗೆ
ಎರಡೇ ಎರಡು ‘ಮಾತು’ಗಳು ಕೇಳಿಸಿತು
“ಸಾಯಿಸಿಬಿಡಿ” – “ದೇಶದ್ರೋಹಿಯನ್ನ”

ಮಲೆಯಾಳಂ ಮೂಲ : ರಹೀಮ್ ಪೊನ್ನಾಡ್
ಹಿಂದಿ : ಎ. ಆರ್. ಸಿಂಧು, ವೀಣಾ ಗುಪ್ತ
ತೆಲುಗು : ಎನ್.ವೇಣುಗೋಪಾಲ್
ಕನ್ನಡಾನುವಾದ : ಪದ್ಮಾ ಕೆ ರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಶಾನ್ಯ ಭಾರತದಲ್ಲಿ ಕೇವಲ ನೂರು ವರ್ಷಗಳಲ್ಲಿ ಚರ್ಚ್ 60ಕ್ಕೂ ಅಧಿಕ ಭಾಷೆಗಳನ್ನು ಕೊಂದು ಇಂಗ್ಲಿಷ್ ಅನ್ನು ಸ್ಥಾಪಿಸಿದಾಗ, ಕೇರಳ ಸರಕಾರ ಕಾಸರಗೋಡಿನಲ್ಲಿ ಸಾವಿರಾರು ತುಳು, ಕನ್ನಡ, ಕೊಂಕಣಿ ಸಂಸಾರಗಳನ್ನು ಓಡಿಸಿದಾಗ ರಹೀಮರು ಕವನ ಬರೆಯಲಿಲ್ಲ!! ಮಂಗಳೂರು, ಚೆನ್ನೈ, ಮುಂಬಯಿ ಮುಂತಾದೆಡೆ ಕನ್ನಡ, ತುಳು, ತಮಿಳು, ಮರಾಠಿ ಭಾಷೆಗಳನ್ನು ಬಿಟ್ಟು ಹಿಡಿದದ್ದು ಹಿಂದಿಯನ್ನಲ್ಲ, ಇಂಗ್ಲಿಷನ್ನು!!! ಅವರ ಸಂಖ್ಯೆ ಈಗ ಶೇಕಡಾ 40 ದಾಟಿದೆ!!! ರಹೀಮರ ಪದ್ಯವನ್ನು ಅವರ ಮುಂದೆ ಓದಿದರೆ ಬಿದ್ದು ಬಿದ್ದು ನಗುತ್ತಾರೆ!!!

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...