Homeಕರ್ನಾಟಕನಾಳೆ ಬೆಂಗಳೂರಿನಲ್ಲಿ ಮದ್ಯ ನಿಷೇಧಕ್ಕಾಗಿ ಬಡ ತಾಯಂದಿರ ಸತ್ಯಾಗ್ರಹ...

ನಾಳೆ ಬೆಂಗಳೂರಿನಲ್ಲಿ ಮದ್ಯ ನಿಷೇಧಕ್ಕಾಗಿ ಬಡ ತಾಯಂದಿರ ಸತ್ಯಾಗ್ರಹ…

- Advertisement -
- Advertisement -

ಮದ್ಯನಿಷೇದದ ಕುರಿತು ಸರ್ಕಾರ ತನ್ನ ನೀತಿ ಪ್ರಕಟಿಸುವಂತೆ ಒತ್ತಾಯಿಸಿ ’ಮದ್ಯ ನಿಷೇಧ ಆಂದೋಲನ ಕರ್ನಾಟಕ’ ನೇತೃತ್ವದಲ್ಲಿ ನಾಳೆ ಬೆಂಗಳೂರಿನ ರೈಲ್ವೈ ನಿಲ್ದಾಣದ ಎದುರು ನೂರಾರು ತಾಯಂದಿರು ಸತ್ಯಾಗ್ರಹ ನಡೆಸಲಿದ್ದಾರೆ…

ಕರ್ನಾಟಕದಲ್ಲಿ ಮದ್ಯ ನಿಷೇಧಿಸುವಂತೆ ಒತ್ತಾಯಿಸಿ ದಿನಾಂಕ 12/11/2019 ರಂದು ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾದ ನಂತರ ಚುನಾವಣಾ ನೀತಿ ಸಂಹಿತೆ ಜಾರಿಯಾಗುತ್ತದೆ. ಆದರೆ ಈ ಹೋರಾಟ ನಿಲ್ಲಿಸಲು ನಾವು ಸಿದ್ದರಿಲ್ಲ. ಹಾಗಾಗಿ 07/11/2019ರ ಗುರುವಾರ ನಮ್ಮ ಹಕ್ಕೊತ್ತಾಯಗಳನ್ನು ಸತ್ಯಾಗ್ರಹದ ಮೂಲಕ ಮುಖ್ಯಮಂತ್ರಿಯವರಿಗೆ ಸಲ್ಲಿಸಬೇಕಾಗಿದೆ ಹಾಗಾಗಿ ಸತ್ಯಾಗ್ರಹ ನಡೆಸಲಿದ್ದೆವೆ ಎಂದು ಮದ್ಯ ನಿಷೇಧ ಆಂದೋಲನದ ಸ್ವರ್ಣ ಭಟ್, ವಿರುಪಮ್ಮ, ಮೋಕ್ಷಮ್ಮ, ಅಭಯ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಸರಕಾರ ಇದರ ಮೇಲೆ ಯಾವುದು ಕ್ರಮ ಜರುಗಿಸದಿದ್ದಲ್ಲಿ ಡಿಸೆಂಬರ್ ತಿಂಗಳಲ್ಲಿ ಮುಂದಿನ ಭಾರೀ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದೇವೆ ಎಂದೂ ಸಹ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್ 25 ರಿಂದ ಪೋಲಿಸ್ ಇಲಾಖೆಯ ಅನುಮತಿ ಪಡೆಯಲು ಪ್ರಯತ್ನಿಸಲಾಗಿದೆ. ಈ ಕ್ಷಣಕ್ಕೂ ಪೋಲಿಸ್ ಇಲಾಖೆ ಈ ಹೋರಾಟ ಹತ್ತಿಕ್ಕಲು ಇನ್ನೂ ಅನುಮತಿ ನೀಡಿರುವುದಿಲ್ಲ. ಆದ್ದರಿಂದ ಮದ್ಯ ನಿಷೇಧ ಆಂದೋಲನ ದಿನಾಂಕ ನವೆಂಬರ್ 07ರ ಗುರುವಾರದಂದು ಬೆಂಗಳೂರಿನಲ್ಲಿ ಸತ್ಯಾಗ್ರಹ ಮಾಡಲು ತೀರ್ಮಾನಿಸಲಾಗಿದೆ. ಆದ್ದರಿಂದ ರೈಲ್ವೆ ನಿಲ್ದಾಣದಲ್ಲಿ ಸೇರಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ನಮ್ಮ ಹಕ್ಕೊತ್ತಾಯಗಳು
ಸಂವಿಧಾನದ 73ನೇ ತಿದ್ದುಪಡಿಯ ಆಶಯದಂತೆ ಅನುಷ್ಠಾನಗೊಳಿಸುವುದು (ಗ್ರಾಮಗಳ ಭವಿಷ್ಯವನ್ನು ನಿರ್ಧರಿಸುವ ಅಧಿಕಾರವನ್ನ ಗ್ರಾಮ ಸಭೆಗೆ ನೀಡುವುದು) ಉದಾ: ಗ್ರಾಮ ಪಂಚಾಯತಿಗಳು ಗ್ರಾಮ ಸಭೆಯ ಮೂಲಕ ಪಂಚಾಯತಿ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳು ಇರಬಾರದೆಂದು ನಿರ್ಧಾರ ತೆಗೆದುಕೊಳ್ಳಬಹುದು. (ಕಾನೂನು ಬಾಹಿರ, ಖಾಸಗಿ ಅಥವಾ ಸರಕಾರಿ ಮಳಿಗೆಗಳಾಗಿರಬಹುದು) ಈಗಾಗಲೇ ಗ್ರಾಮಸಭೆಗಳಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಗ್ರಾಮ ಪಂಚಾಯತಿಗಳಲ್ಲಿ ತಕ್ಷಣ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಬೇಕು.

ರಾಜ್ಯಗಳಲ್ಲಿ ಮದ್ಯ ಸೇವನೆ ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತದ ಸಂವಿಧಾನದ ಅನುಚ್ಛೇದ 47ರಲ್ಲಿ ರಾಜ್ಯಗಳಿಗೆ ನೀಡಲಾದ ನಿರ್ದೇಶನದಂತೆ “ಮದ್ಯ ಮುಕ್ತ ಕರ್ನಾಟಕ ನೀತಿಯತ್ತ” ಸಾಗುವ ಸಲುವಾಗಿ ಮೂರು ತಿಂಗಳೊಳಗೆ ಸಮಿತಿ ರಚಿಸಿ ಸರಕಾರದ ನೀತಿಯನ್ನು ಜಾರಿಗೊಳಿಸಬೇಕು.

ಈ ಕುರಿತು ಚರ್ಚಿಸಲು ಮಾನ್ಯ ಮುಖ್ಯಮಂತ್ರಿಗಳು ಮದ್ಯ ನಿಷೇಧ ಆಂದೋಲನದ ಸಂಘಟಕರೊಂದಿಗೆ ಕೂಡಲೇ ಸಭೆ ಕರೆಯಬೇಕು.

ಹಾಗಾಗಿ ಬಡಜನರು ತಮ್ಮ ಜೀವನ ಉಳಿಸಿಕೊಳ್ಳಲು ನಡೆಸುತ್ತಿರುವ ಈ ಹೋರಾಟಕ್ಕೆ ಬಂದು ನಮ್ಮ ದನಿ ಸರ್ಕಾರಕ್ಕೆ ಕೇಳುವಂತಾಗಲು ಸಹಕರಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...