Homeಕರ್ನಾಟಕಎಂಇಎಸ್ ಮತ್ತು ಶಿವಸೇನೆ ನಿಷೇಧಿಸಿ: ರಾಜ್ಯಪಾಲರಿಗೆ ಕರವೇ ಒತ್ತಾಯ

ಎಂಇಎಸ್ ಮತ್ತು ಶಿವಸೇನೆ ನಿಷೇಧಿಸಿ: ರಾಜ್ಯಪಾಲರಿಗೆ ಕರವೇ ಒತ್ತಾಯ

- Advertisement -
- Advertisement -

ಬೆಳಗಾವಿಯಲ್ಲಿ ಪದೇ ಪದೇ ಅಶಾಂತಿ ಸೃಷ್ಟಿಸುತ್ತಿರುವ, ಕನ್ನಡಿಗರ ಮೇಲೆ ದೌರ್ಜನ್ಯ ನಡೆಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಸಂಘಟನೆಗಳನ್ನು ನಿಷೇಧಿಸುವಂತೆ ಇಂದು ಕರ್ನಾಟಕ ರಕ್ಷಣಾ ವೇದಿಕೆಯು ರಾಜ್ಯಪಾಲರನ್ನು ಭೇಟಿಯಾಗಿ ಒತ್ತಾಯಿಸಿದೆ.

ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರ ನೇತೃತ್ವದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ಮಾಧ್ಯಮ ಕಾರ್ಯದರ್ಶಿ ದಿನೇಶ್ ಕುಮಾರ್ ಎಸ್.ಸಿ, ಅರುಣ್ ಜಾವಗಲ್ ಮತ್ತಿತರನ್ನು ಒಳಗೊಂಡ ನಿಯೋಗ ರಾಜಭವನದಲ್ಲಿ ತಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

ಭಾಷಾವಾರು ಪ್ರಾಂತ್ಯ ವಿಂಗಡಣೆಯ ನಂತರ ಮಹಾರಾಷ್ಟ್ರ ರಾಜಕಾರಣಿಗಳು, ಅಲ್ಲಿನ ಸರ್ಕಾರಗಳ ಪ್ರಚೋದನೆಯಿಂದ ಬೆಳಗಾವಿಯಲ್ಲಿ ಪದೇಪದೇ ಅಶಾಂತಿಯ ವಾತಾವರಣ ನಿರ್ಮಾಣವಾಗುತ್ತ ಬಂದಿದೆ. ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಎಂಬ ಸಂಘಟನೆ/ರಾಜಕೀಯ ಪಕ್ಷವನ್ನು ಹುಟ್ಟುಹಾಕಿ, ಅದಕ್ಕೆ ಮಹಾರಾಷ್ಟ್ರದಿಂದ ಹಣಕಾಸಿನ ನೆರವು ಹರಿಸಿ ಬೆಳಗಾವಿಯ ಕನ್ನಡಿಗರ ಮೇಲೆ ಮರಾಠಿಗರನ್ನು ಎತ್ತಿಕಟ್ಟಿ ಹಲವು ದಶಕಗಳಿಂದ ದ್ವೇಷದ ವಾತಾವರಣವನ್ನು ಸೃಷ್ಟಿಸಲಾಗಿದೆ. ಎಂಇಎಸ್ ಜತೆಗೆ ಶಿವಸೇನೆ ಎಂಬ ರಾಜಕೀಯ ಪಕ್ಷದ ಘಟಕವೂ ಬೆಳಗಾವಿಯಲ್ಲಿ ಅಶಾಂತಿಯನ್ನು ಉಂಟು ಮಾಡುತ್ತಿದೆ ಎಂದು ಕರವೇ ದೂರಿದೆ.

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಬೇಡಿಕೆಯಲ್ಲಿ ಯಾವ ಅರ್ಥವೂ ಇಲ್ಲ. ಯಾಕೆಂದರೆ ಅದು ಕನ್ನಡಿಗರ ನೆಲ. ಬೆಳಗಾವಿಯ ಮೇಲೆ ಹಕ್ಕು ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರ ಮಾಡಿದ ಹುನ್ನಾರಗಳು ಒಂದೊಂದಲ್ಲ. ಒಕ್ಕೂಟ ಸರ್ಕಾರದ ಮೇಲೆ ಒತ್ತಡ ಹೇರಿ ಗಡಿವಿವಾದ ಇತ್ಯರ್ಥಕ್ಕೆ ಮೆಹರ್ ಚಂದ್ ಮಹಾಜನ್’ ಅವರ ನೇತೃತ್ವದ ಆಯೋಗವನ್ನು ಸ್ಥಾಪನೆ ಮಾಡಿಸಿದರು. ಅವರೇ ಬಯಸಿದ ಆಯೋಗ ತನ್ನ ಅಂತಿಮ ವರದಿಯಲ್ಲಿ ಬೆಳಗಾವಿ ಕರ್ನಾಟಕಕ್ಕೆ ಸೇರಬೇಕು ಎಂಬ ತೀರ್ಪು ನೀಡಿತು. ಮಹಾರಾಷ್ಟ್ರದ ರಾಜಕಾರಣಿಗಳು ಕುತ್ಸಿತ ನೀತಿ ಅನುಸರಿಸಿ ಮಹಾಜನ್ ಆಯೋಗದ ವರದಿ ಒಪ್ಪುವುದಿಲ್ಲ, ಅದರ ಅನುಷ್ಠಾನ ಮಾಡಲು ಬಿಡುವುದಿಲ್ಲ ಎಂದು ಹಠ ಹಿಡಿದರು. ಮಹಾರಾಷ್ಟ್ರದಲ್ಲಿ ಹಿಂಸಾಚಾರ ನಡೆಸಿ ಕನ್ನಡಿಗರ ಮೇಲೆ ದಾಳಿ ನಡೆಸಲಾಯಿತು. ಹೀಗಾಗಿ ಮಹಾಜನ್ ಆಯೋಗದ ವರದಿ ಜಾರಿಯಾಗಲಿಲ್ಲ. ಇದರ ಪರಿಣಾಮವಾಗಿ ಕರ್ನಾಟಕಕ್ಕೆ ಸೇರಬೇಕಾದ ಅಪ್ಪಟ ಕನ್ನಡದ ಜಿಲ್ಲೆ ಕಾಸರಗೋಡು ಕೈತಪ್ಪಿ, ಕೇರಳದಲ್ಲೇ ಉಳಿದುಕೊಂಡಿತು. ಮಾತ್ರವಲ್ಲದೆ ಮಹಾರಾಷ್ಟ್ರ ಸೇರಿರುವ ನೂರಾರು ಕನ್ನಡದ ಹಳ್ಳಿ, ಪಟ್ಟಣಗಳು ಕರ್ನಾಟಕಕ್ಕೆ ಸಿಗಲಿಲ್ಲ‌. ಇಷ್ಟಾದ ಮೇಲೂ ಬೆಳಗಾವಿ ತಮಗೆ ಸೇರಬೇಕು ಎಂದು ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ಮೊರೆಹೋಯಿತು. ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಎಂದು ಈಗಾಗಲೇ ಒಕ್ಕೂಟ ಸರ್ಕಾರ ಸುಪ್ರೀಂಕೋರ್ಟ್ ಗೆ ಅಫಿಡೆವಿಟ್ ಸಲ್ಲಿಸಿದ್ದು ತೀರ್ಪು ಬರುವುದು ಬಾಕಿ ಇದೆ ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.

ಕಾನೂನಾತ್ಮಕವಾಗಿ ಬೆಳಗಾವಿಯನ್ನು ಪಡೆಯಲು ವಿಫಲರಾಗಿರುವ ಮಹಾರಾಷ್ಟ್ರ ರಾಜಕಾರಣಿಗಳು ವಾಮಮಾರ್ಗವನ್ನು ಆಯ್ಕೆ ಮಾಡಿಕೊಂಡು ಎಂಇಎಸ್, ಶಿವಸೇನೆ ಮೂಲಕ ಬೆಳಗಾವಿಯಲ್ಲಿ ಸದಾ ಸಂಘರ್ಷದ ವಾತಾವರಣ ನಿರ್ಮಿಸಿದ್ದಾರೆ. ಎಂಇಎಸ್ ಹೆಸರಿನಲ್ಲಿ ಸಾವಿರಾರು ಮಹಾರಾಷ್ಟ್ರೀಯನ್ನರು ಗಡಿದಾಟಿ ಬೆಳಗಾವಿಗೆ ಬಂದು ‘ಮರಾಠಿ ಮಹಾಮೇಳ’ಗಳನ್ನು ನಡೆಸುವುದು, ಕನ್ನಡಿಗರ ವಿರುದ್ಧ, ಕರ್ನಾಟಕ ಸರ್ಕಾರದ ವಿರುದ್ಧ ಮಾನಹಾನಕಾರಿ, ಪ್ರಚೋದನಾತ್ಮಕ ಭಾಷಣಗಳನ್ನು ಮಾಡುವುದು, ಮುಗ್ಧ ಮರಾಠಿಗರನ್ನು ಕನ್ನಡಿಗರ ವಿರುದ್ಧ ಎತ್ತಿಕಟ್ಟುವುದು ನಡೆಯುತ್ತಲೇ ಇದೆ. ಇದರ ಪರಿಣಾಮವಾಗಿ ಬೆಳಗಾವಿಯಲ್ಲಿ ಕನ್ನಡಿಗರು-ಮರಾಠಿಗರು ನೆಮ್ಮದಿ, ಶಾಂತಿಯಿಂದ ಬಾಳಲು ಸಾಧ್ಯವಾಗುತ್ತಿಲ್ಲ‌. ಬೆಳಗಾವಿಯಲ್ಲಿರುವ ಕನ್ನಡಿಗರು, ಮರಾಠಿಗರು ಮತ್ತು ಇನ್ನಿತರ ಭಾಷಾ ಸಮುದಾಯಗಳು ಎಂಇಎಸ್ ಮತ್ತು‌ ಶಿವಸೇನೆಗಳನ್ನು ಈಗಾಗಲೇ ತಿರಸ್ಕರಿಸಿದ್ದಾರೆ. ಹೀಗಾಗಿ ಹತಾಶೆಗೆ ಒಳಗಾದ ಈ ಸಂಘಟನೆಗಳು ಹಿಂಸಾಚಾರಕ್ಕೆ ಇಳಿದಿವೆ ಎಂದು ಕರವೇ ತಿಳಿಸಿದೆ.

ಈ ಬಾರಿ ಚಳಿಗಾಲದ ಅಧಿವೇಶನ ನಡೆಯುವ ಸಂದರ್ಭದಲ್ಲೂ ಸಹ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಕಿತಾಪತಿ ನಡೆಸಿ, ಬೆಳಗಾವಿ ಬಂದ್ ನಡೆಸಿ ಹಿಂಸಾಚಾರ ನಡೆಸಿದವು. ತಾಯ್ನೆಲಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸಲಾಯಿತು‌ ಇಡೀ ಮನುಕುಲಕ್ಕೆ ಕಾಯಕಧರ್ಮವನ್ನು ನೀಡಿದ ಮಹಾಮಾನವತಾವಾದಿ ಬಸವಣ್ಣನವರ ಭಾವಚಿತ್ರಕ್ಕೆ ಸೆಗಣಿ ಬಳಿಯಲಾಯಿತು. ಬೆಳಗಾವಿ ಮತ್ತು ಮಹಾರಾಷ್ಟ್ರಗಳಲ್ಲಿ ಕನ್ನಡಿಗರ ಆತ್ಮಾಭಿಮಾನದ ಪ್ರತೀಕವಾಗಿರುವ ಕನ್ನಡ ಧ್ಚಜಕ್ಕೆ ಬೆಂಕಿ ಇಡಲಾಯಿತು.ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಸೇರಿದ ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಈಗಲೂ ಸಹ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಕನ್ನಡಿಗರನ್ನು ಥಳಿಸಿ, ಹಲ್ಲೆ ನಡೆಸಲಾಗುತ್ತಿದೆ, ಕನ್ನಡಿಗರ ಆಸ್ತಿಪಾಸ್ತಿ, ವಾಹನಗಳನ್ನು ನಷ್ಟಗೊಳಿಸಲಾಗುತ್ತಿದೆ. ಇದಕ್ಕೆಲ್ಲ ಕಾರಣಕರ್ತರು ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಎಂಬ ಭಯೋತ್ಪಾದಕ ಸಂಘಟನೆಗಳ ಗೂಂಡಾಗಳು. ಈ ಕಾರಣಕ್ಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಈ ಎರಡೂ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸುತ್ತಿದೆ ಎಂದಿದೆ.


ಇದನ್ನೂ ಓದಿ: ಬೆಳಗಾವಿ ಅಧಿವೇಶನ; ಚರ್ಚೆಯಾಗಬೇಕಾದ್ದೇನು? ಆಗುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...