Homeಕರ್ನಾಟಕಎಂಇಎಸ್ ಮತ್ತು ಶಿವಸೇನೆ ನಿಷೇಧಿಸಿ: ರಾಜ್ಯಪಾಲರಿಗೆ ಕರವೇ ಒತ್ತಾಯ

ಎಂಇಎಸ್ ಮತ್ತು ಶಿವಸೇನೆ ನಿಷೇಧಿಸಿ: ರಾಜ್ಯಪಾಲರಿಗೆ ಕರವೇ ಒತ್ತಾಯ

- Advertisement -
- Advertisement -

ಬೆಳಗಾವಿಯಲ್ಲಿ ಪದೇ ಪದೇ ಅಶಾಂತಿ ಸೃಷ್ಟಿಸುತ್ತಿರುವ, ಕನ್ನಡಿಗರ ಮೇಲೆ ದೌರ್ಜನ್ಯ ನಡೆಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಸಂಘಟನೆಗಳನ್ನು ನಿಷೇಧಿಸುವಂತೆ ಇಂದು ಕರ್ನಾಟಕ ರಕ್ಷಣಾ ವೇದಿಕೆಯು ರಾಜ್ಯಪಾಲರನ್ನು ಭೇಟಿಯಾಗಿ ಒತ್ತಾಯಿಸಿದೆ.

ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರ ನೇತೃತ್ವದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ಮಾಧ್ಯಮ ಕಾರ್ಯದರ್ಶಿ ದಿನೇಶ್ ಕುಮಾರ್ ಎಸ್.ಸಿ, ಅರುಣ್ ಜಾವಗಲ್ ಮತ್ತಿತರನ್ನು ಒಳಗೊಂಡ ನಿಯೋಗ ರಾಜಭವನದಲ್ಲಿ ತಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

ಭಾಷಾವಾರು ಪ್ರಾಂತ್ಯ ವಿಂಗಡಣೆಯ ನಂತರ ಮಹಾರಾಷ್ಟ್ರ ರಾಜಕಾರಣಿಗಳು, ಅಲ್ಲಿನ ಸರ್ಕಾರಗಳ ಪ್ರಚೋದನೆಯಿಂದ ಬೆಳಗಾವಿಯಲ್ಲಿ ಪದೇಪದೇ ಅಶಾಂತಿಯ ವಾತಾವರಣ ನಿರ್ಮಾಣವಾಗುತ್ತ ಬಂದಿದೆ. ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಎಂಬ ಸಂಘಟನೆ/ರಾಜಕೀಯ ಪಕ್ಷವನ್ನು ಹುಟ್ಟುಹಾಕಿ, ಅದಕ್ಕೆ ಮಹಾರಾಷ್ಟ್ರದಿಂದ ಹಣಕಾಸಿನ ನೆರವು ಹರಿಸಿ ಬೆಳಗಾವಿಯ ಕನ್ನಡಿಗರ ಮೇಲೆ ಮರಾಠಿಗರನ್ನು ಎತ್ತಿಕಟ್ಟಿ ಹಲವು ದಶಕಗಳಿಂದ ದ್ವೇಷದ ವಾತಾವರಣವನ್ನು ಸೃಷ್ಟಿಸಲಾಗಿದೆ. ಎಂಇಎಸ್ ಜತೆಗೆ ಶಿವಸೇನೆ ಎಂಬ ರಾಜಕೀಯ ಪಕ್ಷದ ಘಟಕವೂ ಬೆಳಗಾವಿಯಲ್ಲಿ ಅಶಾಂತಿಯನ್ನು ಉಂಟು ಮಾಡುತ್ತಿದೆ ಎಂದು ಕರವೇ ದೂರಿದೆ.

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಬೇಡಿಕೆಯಲ್ಲಿ ಯಾವ ಅರ್ಥವೂ ಇಲ್ಲ. ಯಾಕೆಂದರೆ ಅದು ಕನ್ನಡಿಗರ ನೆಲ. ಬೆಳಗಾವಿಯ ಮೇಲೆ ಹಕ್ಕು ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರ ಮಾಡಿದ ಹುನ್ನಾರಗಳು ಒಂದೊಂದಲ್ಲ. ಒಕ್ಕೂಟ ಸರ್ಕಾರದ ಮೇಲೆ ಒತ್ತಡ ಹೇರಿ ಗಡಿವಿವಾದ ಇತ್ಯರ್ಥಕ್ಕೆ ಮೆಹರ್ ಚಂದ್ ಮಹಾಜನ್’ ಅವರ ನೇತೃತ್ವದ ಆಯೋಗವನ್ನು ಸ್ಥಾಪನೆ ಮಾಡಿಸಿದರು. ಅವರೇ ಬಯಸಿದ ಆಯೋಗ ತನ್ನ ಅಂತಿಮ ವರದಿಯಲ್ಲಿ ಬೆಳಗಾವಿ ಕರ್ನಾಟಕಕ್ಕೆ ಸೇರಬೇಕು ಎಂಬ ತೀರ್ಪು ನೀಡಿತು. ಮಹಾರಾಷ್ಟ್ರದ ರಾಜಕಾರಣಿಗಳು ಕುತ್ಸಿತ ನೀತಿ ಅನುಸರಿಸಿ ಮಹಾಜನ್ ಆಯೋಗದ ವರದಿ ಒಪ್ಪುವುದಿಲ್ಲ, ಅದರ ಅನುಷ್ಠಾನ ಮಾಡಲು ಬಿಡುವುದಿಲ್ಲ ಎಂದು ಹಠ ಹಿಡಿದರು. ಮಹಾರಾಷ್ಟ್ರದಲ್ಲಿ ಹಿಂಸಾಚಾರ ನಡೆಸಿ ಕನ್ನಡಿಗರ ಮೇಲೆ ದಾಳಿ ನಡೆಸಲಾಯಿತು. ಹೀಗಾಗಿ ಮಹಾಜನ್ ಆಯೋಗದ ವರದಿ ಜಾರಿಯಾಗಲಿಲ್ಲ. ಇದರ ಪರಿಣಾಮವಾಗಿ ಕರ್ನಾಟಕಕ್ಕೆ ಸೇರಬೇಕಾದ ಅಪ್ಪಟ ಕನ್ನಡದ ಜಿಲ್ಲೆ ಕಾಸರಗೋಡು ಕೈತಪ್ಪಿ, ಕೇರಳದಲ್ಲೇ ಉಳಿದುಕೊಂಡಿತು. ಮಾತ್ರವಲ್ಲದೆ ಮಹಾರಾಷ್ಟ್ರ ಸೇರಿರುವ ನೂರಾರು ಕನ್ನಡದ ಹಳ್ಳಿ, ಪಟ್ಟಣಗಳು ಕರ್ನಾಟಕಕ್ಕೆ ಸಿಗಲಿಲ್ಲ‌. ಇಷ್ಟಾದ ಮೇಲೂ ಬೆಳಗಾವಿ ತಮಗೆ ಸೇರಬೇಕು ಎಂದು ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ಮೊರೆಹೋಯಿತು. ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಎಂದು ಈಗಾಗಲೇ ಒಕ್ಕೂಟ ಸರ್ಕಾರ ಸುಪ್ರೀಂಕೋರ್ಟ್ ಗೆ ಅಫಿಡೆವಿಟ್ ಸಲ್ಲಿಸಿದ್ದು ತೀರ್ಪು ಬರುವುದು ಬಾಕಿ ಇದೆ ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.

ಕಾನೂನಾತ್ಮಕವಾಗಿ ಬೆಳಗಾವಿಯನ್ನು ಪಡೆಯಲು ವಿಫಲರಾಗಿರುವ ಮಹಾರಾಷ್ಟ್ರ ರಾಜಕಾರಣಿಗಳು ವಾಮಮಾರ್ಗವನ್ನು ಆಯ್ಕೆ ಮಾಡಿಕೊಂಡು ಎಂಇಎಸ್, ಶಿವಸೇನೆ ಮೂಲಕ ಬೆಳಗಾವಿಯಲ್ಲಿ ಸದಾ ಸಂಘರ್ಷದ ವಾತಾವರಣ ನಿರ್ಮಿಸಿದ್ದಾರೆ. ಎಂಇಎಸ್ ಹೆಸರಿನಲ್ಲಿ ಸಾವಿರಾರು ಮಹಾರಾಷ್ಟ್ರೀಯನ್ನರು ಗಡಿದಾಟಿ ಬೆಳಗಾವಿಗೆ ಬಂದು ‘ಮರಾಠಿ ಮಹಾಮೇಳ’ಗಳನ್ನು ನಡೆಸುವುದು, ಕನ್ನಡಿಗರ ವಿರುದ್ಧ, ಕರ್ನಾಟಕ ಸರ್ಕಾರದ ವಿರುದ್ಧ ಮಾನಹಾನಕಾರಿ, ಪ್ರಚೋದನಾತ್ಮಕ ಭಾಷಣಗಳನ್ನು ಮಾಡುವುದು, ಮುಗ್ಧ ಮರಾಠಿಗರನ್ನು ಕನ್ನಡಿಗರ ವಿರುದ್ಧ ಎತ್ತಿಕಟ್ಟುವುದು ನಡೆಯುತ್ತಲೇ ಇದೆ. ಇದರ ಪರಿಣಾಮವಾಗಿ ಬೆಳಗಾವಿಯಲ್ಲಿ ಕನ್ನಡಿಗರು-ಮರಾಠಿಗರು ನೆಮ್ಮದಿ, ಶಾಂತಿಯಿಂದ ಬಾಳಲು ಸಾಧ್ಯವಾಗುತ್ತಿಲ್ಲ‌. ಬೆಳಗಾವಿಯಲ್ಲಿರುವ ಕನ್ನಡಿಗರು, ಮರಾಠಿಗರು ಮತ್ತು ಇನ್ನಿತರ ಭಾಷಾ ಸಮುದಾಯಗಳು ಎಂಇಎಸ್ ಮತ್ತು‌ ಶಿವಸೇನೆಗಳನ್ನು ಈಗಾಗಲೇ ತಿರಸ್ಕರಿಸಿದ್ದಾರೆ. ಹೀಗಾಗಿ ಹತಾಶೆಗೆ ಒಳಗಾದ ಈ ಸಂಘಟನೆಗಳು ಹಿಂಸಾಚಾರಕ್ಕೆ ಇಳಿದಿವೆ ಎಂದು ಕರವೇ ತಿಳಿಸಿದೆ.

ಈ ಬಾರಿ ಚಳಿಗಾಲದ ಅಧಿವೇಶನ ನಡೆಯುವ ಸಂದರ್ಭದಲ್ಲೂ ಸಹ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಕಿತಾಪತಿ ನಡೆಸಿ, ಬೆಳಗಾವಿ ಬಂದ್ ನಡೆಸಿ ಹಿಂಸಾಚಾರ ನಡೆಸಿದವು. ತಾಯ್ನೆಲಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸಲಾಯಿತು‌ ಇಡೀ ಮನುಕುಲಕ್ಕೆ ಕಾಯಕಧರ್ಮವನ್ನು ನೀಡಿದ ಮಹಾಮಾನವತಾವಾದಿ ಬಸವಣ್ಣನವರ ಭಾವಚಿತ್ರಕ್ಕೆ ಸೆಗಣಿ ಬಳಿಯಲಾಯಿತು. ಬೆಳಗಾವಿ ಮತ್ತು ಮಹಾರಾಷ್ಟ್ರಗಳಲ್ಲಿ ಕನ್ನಡಿಗರ ಆತ್ಮಾಭಿಮಾನದ ಪ್ರತೀಕವಾಗಿರುವ ಕನ್ನಡ ಧ್ಚಜಕ್ಕೆ ಬೆಂಕಿ ಇಡಲಾಯಿತು.ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಸೇರಿದ ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಈಗಲೂ ಸಹ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಕನ್ನಡಿಗರನ್ನು ಥಳಿಸಿ, ಹಲ್ಲೆ ನಡೆಸಲಾಗುತ್ತಿದೆ, ಕನ್ನಡಿಗರ ಆಸ್ತಿಪಾಸ್ತಿ, ವಾಹನಗಳನ್ನು ನಷ್ಟಗೊಳಿಸಲಾಗುತ್ತಿದೆ. ಇದಕ್ಕೆಲ್ಲ ಕಾರಣಕರ್ತರು ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಎಂಬ ಭಯೋತ್ಪಾದಕ ಸಂಘಟನೆಗಳ ಗೂಂಡಾಗಳು. ಈ ಕಾರಣಕ್ಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಈ ಎರಡೂ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸುತ್ತಿದೆ ಎಂದಿದೆ.


ಇದನ್ನೂ ಓದಿ: ಬೆಳಗಾವಿ ಅಧಿವೇಶನ; ಚರ್ಚೆಯಾಗಬೇಕಾದ್ದೇನು? ಆಗುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...