Homeಕರ್ನಾಟಕಎಂಇಎಸ್ ಮತ್ತು ಶಿವಸೇನೆ ನಿಷೇಧಿಸಿ: ರಾಜ್ಯಪಾಲರಿಗೆ ಕರವೇ ಒತ್ತಾಯ

ಎಂಇಎಸ್ ಮತ್ತು ಶಿವಸೇನೆ ನಿಷೇಧಿಸಿ: ರಾಜ್ಯಪಾಲರಿಗೆ ಕರವೇ ಒತ್ತಾಯ

- Advertisement -
- Advertisement -

ಬೆಳಗಾವಿಯಲ್ಲಿ ಪದೇ ಪದೇ ಅಶಾಂತಿ ಸೃಷ್ಟಿಸುತ್ತಿರುವ, ಕನ್ನಡಿಗರ ಮೇಲೆ ದೌರ್ಜನ್ಯ ನಡೆಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಸಂಘಟನೆಗಳನ್ನು ನಿಷೇಧಿಸುವಂತೆ ಇಂದು ಕರ್ನಾಟಕ ರಕ್ಷಣಾ ವೇದಿಕೆಯು ರಾಜ್ಯಪಾಲರನ್ನು ಭೇಟಿಯಾಗಿ ಒತ್ತಾಯಿಸಿದೆ.

ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರ ನೇತೃತ್ವದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ಮಾಧ್ಯಮ ಕಾರ್ಯದರ್ಶಿ ದಿನೇಶ್ ಕುಮಾರ್ ಎಸ್.ಸಿ, ಅರುಣ್ ಜಾವಗಲ್ ಮತ್ತಿತರನ್ನು ಒಳಗೊಂಡ ನಿಯೋಗ ರಾಜಭವನದಲ್ಲಿ ತಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

ಭಾಷಾವಾರು ಪ್ರಾಂತ್ಯ ವಿಂಗಡಣೆಯ ನಂತರ ಮಹಾರಾಷ್ಟ್ರ ರಾಜಕಾರಣಿಗಳು, ಅಲ್ಲಿನ ಸರ್ಕಾರಗಳ ಪ್ರಚೋದನೆಯಿಂದ ಬೆಳಗಾವಿಯಲ್ಲಿ ಪದೇಪದೇ ಅಶಾಂತಿಯ ವಾತಾವರಣ ನಿರ್ಮಾಣವಾಗುತ್ತ ಬಂದಿದೆ. ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಎಂಬ ಸಂಘಟನೆ/ರಾಜಕೀಯ ಪಕ್ಷವನ್ನು ಹುಟ್ಟುಹಾಕಿ, ಅದಕ್ಕೆ ಮಹಾರಾಷ್ಟ್ರದಿಂದ ಹಣಕಾಸಿನ ನೆರವು ಹರಿಸಿ ಬೆಳಗಾವಿಯ ಕನ್ನಡಿಗರ ಮೇಲೆ ಮರಾಠಿಗರನ್ನು ಎತ್ತಿಕಟ್ಟಿ ಹಲವು ದಶಕಗಳಿಂದ ದ್ವೇಷದ ವಾತಾವರಣವನ್ನು ಸೃಷ್ಟಿಸಲಾಗಿದೆ. ಎಂಇಎಸ್ ಜತೆಗೆ ಶಿವಸೇನೆ ಎಂಬ ರಾಜಕೀಯ ಪಕ್ಷದ ಘಟಕವೂ ಬೆಳಗಾವಿಯಲ್ಲಿ ಅಶಾಂತಿಯನ್ನು ಉಂಟು ಮಾಡುತ್ತಿದೆ ಎಂದು ಕರವೇ ದೂರಿದೆ.

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಬೇಡಿಕೆಯಲ್ಲಿ ಯಾವ ಅರ್ಥವೂ ಇಲ್ಲ. ಯಾಕೆಂದರೆ ಅದು ಕನ್ನಡಿಗರ ನೆಲ. ಬೆಳಗಾವಿಯ ಮೇಲೆ ಹಕ್ಕು ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರ ಮಾಡಿದ ಹುನ್ನಾರಗಳು ಒಂದೊಂದಲ್ಲ. ಒಕ್ಕೂಟ ಸರ್ಕಾರದ ಮೇಲೆ ಒತ್ತಡ ಹೇರಿ ಗಡಿವಿವಾದ ಇತ್ಯರ್ಥಕ್ಕೆ ಮೆಹರ್ ಚಂದ್ ಮಹಾಜನ್’ ಅವರ ನೇತೃತ್ವದ ಆಯೋಗವನ್ನು ಸ್ಥಾಪನೆ ಮಾಡಿಸಿದರು. ಅವರೇ ಬಯಸಿದ ಆಯೋಗ ತನ್ನ ಅಂತಿಮ ವರದಿಯಲ್ಲಿ ಬೆಳಗಾವಿ ಕರ್ನಾಟಕಕ್ಕೆ ಸೇರಬೇಕು ಎಂಬ ತೀರ್ಪು ನೀಡಿತು. ಮಹಾರಾಷ್ಟ್ರದ ರಾಜಕಾರಣಿಗಳು ಕುತ್ಸಿತ ನೀತಿ ಅನುಸರಿಸಿ ಮಹಾಜನ್ ಆಯೋಗದ ವರದಿ ಒಪ್ಪುವುದಿಲ್ಲ, ಅದರ ಅನುಷ್ಠಾನ ಮಾಡಲು ಬಿಡುವುದಿಲ್ಲ ಎಂದು ಹಠ ಹಿಡಿದರು. ಮಹಾರಾಷ್ಟ್ರದಲ್ಲಿ ಹಿಂಸಾಚಾರ ನಡೆಸಿ ಕನ್ನಡಿಗರ ಮೇಲೆ ದಾಳಿ ನಡೆಸಲಾಯಿತು. ಹೀಗಾಗಿ ಮಹಾಜನ್ ಆಯೋಗದ ವರದಿ ಜಾರಿಯಾಗಲಿಲ್ಲ. ಇದರ ಪರಿಣಾಮವಾಗಿ ಕರ್ನಾಟಕಕ್ಕೆ ಸೇರಬೇಕಾದ ಅಪ್ಪಟ ಕನ್ನಡದ ಜಿಲ್ಲೆ ಕಾಸರಗೋಡು ಕೈತಪ್ಪಿ, ಕೇರಳದಲ್ಲೇ ಉಳಿದುಕೊಂಡಿತು. ಮಾತ್ರವಲ್ಲದೆ ಮಹಾರಾಷ್ಟ್ರ ಸೇರಿರುವ ನೂರಾರು ಕನ್ನಡದ ಹಳ್ಳಿ, ಪಟ್ಟಣಗಳು ಕರ್ನಾಟಕಕ್ಕೆ ಸಿಗಲಿಲ್ಲ‌. ಇಷ್ಟಾದ ಮೇಲೂ ಬೆಳಗಾವಿ ತಮಗೆ ಸೇರಬೇಕು ಎಂದು ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ಮೊರೆಹೋಯಿತು. ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಎಂದು ಈಗಾಗಲೇ ಒಕ್ಕೂಟ ಸರ್ಕಾರ ಸುಪ್ರೀಂಕೋರ್ಟ್ ಗೆ ಅಫಿಡೆವಿಟ್ ಸಲ್ಲಿಸಿದ್ದು ತೀರ್ಪು ಬರುವುದು ಬಾಕಿ ಇದೆ ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.

ಕಾನೂನಾತ್ಮಕವಾಗಿ ಬೆಳಗಾವಿಯನ್ನು ಪಡೆಯಲು ವಿಫಲರಾಗಿರುವ ಮಹಾರಾಷ್ಟ್ರ ರಾಜಕಾರಣಿಗಳು ವಾಮಮಾರ್ಗವನ್ನು ಆಯ್ಕೆ ಮಾಡಿಕೊಂಡು ಎಂಇಎಸ್, ಶಿವಸೇನೆ ಮೂಲಕ ಬೆಳಗಾವಿಯಲ್ಲಿ ಸದಾ ಸಂಘರ್ಷದ ವಾತಾವರಣ ನಿರ್ಮಿಸಿದ್ದಾರೆ. ಎಂಇಎಸ್ ಹೆಸರಿನಲ್ಲಿ ಸಾವಿರಾರು ಮಹಾರಾಷ್ಟ್ರೀಯನ್ನರು ಗಡಿದಾಟಿ ಬೆಳಗಾವಿಗೆ ಬಂದು ‘ಮರಾಠಿ ಮಹಾಮೇಳ’ಗಳನ್ನು ನಡೆಸುವುದು, ಕನ್ನಡಿಗರ ವಿರುದ್ಧ, ಕರ್ನಾಟಕ ಸರ್ಕಾರದ ವಿರುದ್ಧ ಮಾನಹಾನಕಾರಿ, ಪ್ರಚೋದನಾತ್ಮಕ ಭಾಷಣಗಳನ್ನು ಮಾಡುವುದು, ಮುಗ್ಧ ಮರಾಠಿಗರನ್ನು ಕನ್ನಡಿಗರ ವಿರುದ್ಧ ಎತ್ತಿಕಟ್ಟುವುದು ನಡೆಯುತ್ತಲೇ ಇದೆ. ಇದರ ಪರಿಣಾಮವಾಗಿ ಬೆಳಗಾವಿಯಲ್ಲಿ ಕನ್ನಡಿಗರು-ಮರಾಠಿಗರು ನೆಮ್ಮದಿ, ಶಾಂತಿಯಿಂದ ಬಾಳಲು ಸಾಧ್ಯವಾಗುತ್ತಿಲ್ಲ‌. ಬೆಳಗಾವಿಯಲ್ಲಿರುವ ಕನ್ನಡಿಗರು, ಮರಾಠಿಗರು ಮತ್ತು ಇನ್ನಿತರ ಭಾಷಾ ಸಮುದಾಯಗಳು ಎಂಇಎಸ್ ಮತ್ತು‌ ಶಿವಸೇನೆಗಳನ್ನು ಈಗಾಗಲೇ ತಿರಸ್ಕರಿಸಿದ್ದಾರೆ. ಹೀಗಾಗಿ ಹತಾಶೆಗೆ ಒಳಗಾದ ಈ ಸಂಘಟನೆಗಳು ಹಿಂಸಾಚಾರಕ್ಕೆ ಇಳಿದಿವೆ ಎಂದು ಕರವೇ ತಿಳಿಸಿದೆ.

ಈ ಬಾರಿ ಚಳಿಗಾಲದ ಅಧಿವೇಶನ ನಡೆಯುವ ಸಂದರ್ಭದಲ್ಲೂ ಸಹ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಕಿತಾಪತಿ ನಡೆಸಿ, ಬೆಳಗಾವಿ ಬಂದ್ ನಡೆಸಿ ಹಿಂಸಾಚಾರ ನಡೆಸಿದವು. ತಾಯ್ನೆಲಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸಲಾಯಿತು‌ ಇಡೀ ಮನುಕುಲಕ್ಕೆ ಕಾಯಕಧರ್ಮವನ್ನು ನೀಡಿದ ಮಹಾಮಾನವತಾವಾದಿ ಬಸವಣ್ಣನವರ ಭಾವಚಿತ್ರಕ್ಕೆ ಸೆಗಣಿ ಬಳಿಯಲಾಯಿತು. ಬೆಳಗಾವಿ ಮತ್ತು ಮಹಾರಾಷ್ಟ್ರಗಳಲ್ಲಿ ಕನ್ನಡಿಗರ ಆತ್ಮಾಭಿಮಾನದ ಪ್ರತೀಕವಾಗಿರುವ ಕನ್ನಡ ಧ್ಚಜಕ್ಕೆ ಬೆಂಕಿ ಇಡಲಾಯಿತು.ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಸೇರಿದ ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಈಗಲೂ ಸಹ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಕನ್ನಡಿಗರನ್ನು ಥಳಿಸಿ, ಹಲ್ಲೆ ನಡೆಸಲಾಗುತ್ತಿದೆ, ಕನ್ನಡಿಗರ ಆಸ್ತಿಪಾಸ್ತಿ, ವಾಹನಗಳನ್ನು ನಷ್ಟಗೊಳಿಸಲಾಗುತ್ತಿದೆ. ಇದಕ್ಕೆಲ್ಲ ಕಾರಣಕರ್ತರು ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಎಂಬ ಭಯೋತ್ಪಾದಕ ಸಂಘಟನೆಗಳ ಗೂಂಡಾಗಳು. ಈ ಕಾರಣಕ್ಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಈ ಎರಡೂ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸುತ್ತಿದೆ ಎಂದಿದೆ.


ಇದನ್ನೂ ಓದಿ: ಬೆಳಗಾವಿ ಅಧಿವೇಶನ; ಚರ್ಚೆಯಾಗಬೇಕಾದ್ದೇನು? ಆಗುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...