Homeಕರ್ನಾಟಕಎಂಇಎಸ್ ಮತ್ತು ಶಿವಸೇನೆ ನಿಷೇಧಿಸಿ: ರಾಜ್ಯಪಾಲರಿಗೆ ಕರವೇ ಒತ್ತಾಯ

ಎಂಇಎಸ್ ಮತ್ತು ಶಿವಸೇನೆ ನಿಷೇಧಿಸಿ: ರಾಜ್ಯಪಾಲರಿಗೆ ಕರವೇ ಒತ್ತಾಯ

- Advertisement -
- Advertisement -

ಬೆಳಗಾವಿಯಲ್ಲಿ ಪದೇ ಪದೇ ಅಶಾಂತಿ ಸೃಷ್ಟಿಸುತ್ತಿರುವ, ಕನ್ನಡಿಗರ ಮೇಲೆ ದೌರ್ಜನ್ಯ ನಡೆಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಸಂಘಟನೆಗಳನ್ನು ನಿಷೇಧಿಸುವಂತೆ ಇಂದು ಕರ್ನಾಟಕ ರಕ್ಷಣಾ ವೇದಿಕೆಯು ರಾಜ್ಯಪಾಲರನ್ನು ಭೇಟಿಯಾಗಿ ಒತ್ತಾಯಿಸಿದೆ.

ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರ ನೇತೃತ್ವದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ಮಾಧ್ಯಮ ಕಾರ್ಯದರ್ಶಿ ದಿನೇಶ್ ಕುಮಾರ್ ಎಸ್.ಸಿ, ಅರುಣ್ ಜಾವಗಲ್ ಮತ್ತಿತರನ್ನು ಒಳಗೊಂಡ ನಿಯೋಗ ರಾಜಭವನದಲ್ಲಿ ತಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

ಭಾಷಾವಾರು ಪ್ರಾಂತ್ಯ ವಿಂಗಡಣೆಯ ನಂತರ ಮಹಾರಾಷ್ಟ್ರ ರಾಜಕಾರಣಿಗಳು, ಅಲ್ಲಿನ ಸರ್ಕಾರಗಳ ಪ್ರಚೋದನೆಯಿಂದ ಬೆಳಗಾವಿಯಲ್ಲಿ ಪದೇಪದೇ ಅಶಾಂತಿಯ ವಾತಾವರಣ ನಿರ್ಮಾಣವಾಗುತ್ತ ಬಂದಿದೆ. ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಎಂಬ ಸಂಘಟನೆ/ರಾಜಕೀಯ ಪಕ್ಷವನ್ನು ಹುಟ್ಟುಹಾಕಿ, ಅದಕ್ಕೆ ಮಹಾರಾಷ್ಟ್ರದಿಂದ ಹಣಕಾಸಿನ ನೆರವು ಹರಿಸಿ ಬೆಳಗಾವಿಯ ಕನ್ನಡಿಗರ ಮೇಲೆ ಮರಾಠಿಗರನ್ನು ಎತ್ತಿಕಟ್ಟಿ ಹಲವು ದಶಕಗಳಿಂದ ದ್ವೇಷದ ವಾತಾವರಣವನ್ನು ಸೃಷ್ಟಿಸಲಾಗಿದೆ. ಎಂಇಎಸ್ ಜತೆಗೆ ಶಿವಸೇನೆ ಎಂಬ ರಾಜಕೀಯ ಪಕ್ಷದ ಘಟಕವೂ ಬೆಳಗಾವಿಯಲ್ಲಿ ಅಶಾಂತಿಯನ್ನು ಉಂಟು ಮಾಡುತ್ತಿದೆ ಎಂದು ಕರವೇ ದೂರಿದೆ.

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಬೇಡಿಕೆಯಲ್ಲಿ ಯಾವ ಅರ್ಥವೂ ಇಲ್ಲ. ಯಾಕೆಂದರೆ ಅದು ಕನ್ನಡಿಗರ ನೆಲ. ಬೆಳಗಾವಿಯ ಮೇಲೆ ಹಕ್ಕು ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರ ಮಾಡಿದ ಹುನ್ನಾರಗಳು ಒಂದೊಂದಲ್ಲ. ಒಕ್ಕೂಟ ಸರ್ಕಾರದ ಮೇಲೆ ಒತ್ತಡ ಹೇರಿ ಗಡಿವಿವಾದ ಇತ್ಯರ್ಥಕ್ಕೆ ಮೆಹರ್ ಚಂದ್ ಮಹಾಜನ್’ ಅವರ ನೇತೃತ್ವದ ಆಯೋಗವನ್ನು ಸ್ಥಾಪನೆ ಮಾಡಿಸಿದರು. ಅವರೇ ಬಯಸಿದ ಆಯೋಗ ತನ್ನ ಅಂತಿಮ ವರದಿಯಲ್ಲಿ ಬೆಳಗಾವಿ ಕರ್ನಾಟಕಕ್ಕೆ ಸೇರಬೇಕು ಎಂಬ ತೀರ್ಪು ನೀಡಿತು. ಮಹಾರಾಷ್ಟ್ರದ ರಾಜಕಾರಣಿಗಳು ಕುತ್ಸಿತ ನೀತಿ ಅನುಸರಿಸಿ ಮಹಾಜನ್ ಆಯೋಗದ ವರದಿ ಒಪ್ಪುವುದಿಲ್ಲ, ಅದರ ಅನುಷ್ಠಾನ ಮಾಡಲು ಬಿಡುವುದಿಲ್ಲ ಎಂದು ಹಠ ಹಿಡಿದರು. ಮಹಾರಾಷ್ಟ್ರದಲ್ಲಿ ಹಿಂಸಾಚಾರ ನಡೆಸಿ ಕನ್ನಡಿಗರ ಮೇಲೆ ದಾಳಿ ನಡೆಸಲಾಯಿತು. ಹೀಗಾಗಿ ಮಹಾಜನ್ ಆಯೋಗದ ವರದಿ ಜಾರಿಯಾಗಲಿಲ್ಲ. ಇದರ ಪರಿಣಾಮವಾಗಿ ಕರ್ನಾಟಕಕ್ಕೆ ಸೇರಬೇಕಾದ ಅಪ್ಪಟ ಕನ್ನಡದ ಜಿಲ್ಲೆ ಕಾಸರಗೋಡು ಕೈತಪ್ಪಿ, ಕೇರಳದಲ್ಲೇ ಉಳಿದುಕೊಂಡಿತು. ಮಾತ್ರವಲ್ಲದೆ ಮಹಾರಾಷ್ಟ್ರ ಸೇರಿರುವ ನೂರಾರು ಕನ್ನಡದ ಹಳ್ಳಿ, ಪಟ್ಟಣಗಳು ಕರ್ನಾಟಕಕ್ಕೆ ಸಿಗಲಿಲ್ಲ‌. ಇಷ್ಟಾದ ಮೇಲೂ ಬೆಳಗಾವಿ ತಮಗೆ ಸೇರಬೇಕು ಎಂದು ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ಮೊರೆಹೋಯಿತು. ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಎಂದು ಈಗಾಗಲೇ ಒಕ್ಕೂಟ ಸರ್ಕಾರ ಸುಪ್ರೀಂಕೋರ್ಟ್ ಗೆ ಅಫಿಡೆವಿಟ್ ಸಲ್ಲಿಸಿದ್ದು ತೀರ್ಪು ಬರುವುದು ಬಾಕಿ ಇದೆ ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.

ಕಾನೂನಾತ್ಮಕವಾಗಿ ಬೆಳಗಾವಿಯನ್ನು ಪಡೆಯಲು ವಿಫಲರಾಗಿರುವ ಮಹಾರಾಷ್ಟ್ರ ರಾಜಕಾರಣಿಗಳು ವಾಮಮಾರ್ಗವನ್ನು ಆಯ್ಕೆ ಮಾಡಿಕೊಂಡು ಎಂಇಎಸ್, ಶಿವಸೇನೆ ಮೂಲಕ ಬೆಳಗಾವಿಯಲ್ಲಿ ಸದಾ ಸಂಘರ್ಷದ ವಾತಾವರಣ ನಿರ್ಮಿಸಿದ್ದಾರೆ. ಎಂಇಎಸ್ ಹೆಸರಿನಲ್ಲಿ ಸಾವಿರಾರು ಮಹಾರಾಷ್ಟ್ರೀಯನ್ನರು ಗಡಿದಾಟಿ ಬೆಳಗಾವಿಗೆ ಬಂದು ‘ಮರಾಠಿ ಮಹಾಮೇಳ’ಗಳನ್ನು ನಡೆಸುವುದು, ಕನ್ನಡಿಗರ ವಿರುದ್ಧ, ಕರ್ನಾಟಕ ಸರ್ಕಾರದ ವಿರುದ್ಧ ಮಾನಹಾನಕಾರಿ, ಪ್ರಚೋದನಾತ್ಮಕ ಭಾಷಣಗಳನ್ನು ಮಾಡುವುದು, ಮುಗ್ಧ ಮರಾಠಿಗರನ್ನು ಕನ್ನಡಿಗರ ವಿರುದ್ಧ ಎತ್ತಿಕಟ್ಟುವುದು ನಡೆಯುತ್ತಲೇ ಇದೆ. ಇದರ ಪರಿಣಾಮವಾಗಿ ಬೆಳಗಾವಿಯಲ್ಲಿ ಕನ್ನಡಿಗರು-ಮರಾಠಿಗರು ನೆಮ್ಮದಿ, ಶಾಂತಿಯಿಂದ ಬಾಳಲು ಸಾಧ್ಯವಾಗುತ್ತಿಲ್ಲ‌. ಬೆಳಗಾವಿಯಲ್ಲಿರುವ ಕನ್ನಡಿಗರು, ಮರಾಠಿಗರು ಮತ್ತು ಇನ್ನಿತರ ಭಾಷಾ ಸಮುದಾಯಗಳು ಎಂಇಎಸ್ ಮತ್ತು‌ ಶಿವಸೇನೆಗಳನ್ನು ಈಗಾಗಲೇ ತಿರಸ್ಕರಿಸಿದ್ದಾರೆ. ಹೀಗಾಗಿ ಹತಾಶೆಗೆ ಒಳಗಾದ ಈ ಸಂಘಟನೆಗಳು ಹಿಂಸಾಚಾರಕ್ಕೆ ಇಳಿದಿವೆ ಎಂದು ಕರವೇ ತಿಳಿಸಿದೆ.

ಈ ಬಾರಿ ಚಳಿಗಾಲದ ಅಧಿವೇಶನ ನಡೆಯುವ ಸಂದರ್ಭದಲ್ಲೂ ಸಹ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಕಿತಾಪತಿ ನಡೆಸಿ, ಬೆಳಗಾವಿ ಬಂದ್ ನಡೆಸಿ ಹಿಂಸಾಚಾರ ನಡೆಸಿದವು. ತಾಯ್ನೆಲಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸಲಾಯಿತು‌ ಇಡೀ ಮನುಕುಲಕ್ಕೆ ಕಾಯಕಧರ್ಮವನ್ನು ನೀಡಿದ ಮಹಾಮಾನವತಾವಾದಿ ಬಸವಣ್ಣನವರ ಭಾವಚಿತ್ರಕ್ಕೆ ಸೆಗಣಿ ಬಳಿಯಲಾಯಿತು. ಬೆಳಗಾವಿ ಮತ್ತು ಮಹಾರಾಷ್ಟ್ರಗಳಲ್ಲಿ ಕನ್ನಡಿಗರ ಆತ್ಮಾಭಿಮಾನದ ಪ್ರತೀಕವಾಗಿರುವ ಕನ್ನಡ ಧ್ಚಜಕ್ಕೆ ಬೆಂಕಿ ಇಡಲಾಯಿತು.ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಸೇರಿದ ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಈಗಲೂ ಸಹ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಕನ್ನಡಿಗರನ್ನು ಥಳಿಸಿ, ಹಲ್ಲೆ ನಡೆಸಲಾಗುತ್ತಿದೆ, ಕನ್ನಡಿಗರ ಆಸ್ತಿಪಾಸ್ತಿ, ವಾಹನಗಳನ್ನು ನಷ್ಟಗೊಳಿಸಲಾಗುತ್ತಿದೆ. ಇದಕ್ಕೆಲ್ಲ ಕಾರಣಕರ್ತರು ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಎಂಬ ಭಯೋತ್ಪಾದಕ ಸಂಘಟನೆಗಳ ಗೂಂಡಾಗಳು. ಈ ಕಾರಣಕ್ಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಈ ಎರಡೂ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸುತ್ತಿದೆ ಎಂದಿದೆ.


ಇದನ್ನೂ ಓದಿ: ಬೆಳಗಾವಿ ಅಧಿವೇಶನ; ಚರ್ಚೆಯಾಗಬೇಕಾದ್ದೇನು? ಆಗುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...