Homeಕರ್ನಾಟಕಎಂಇಎಸ್ ಮತ್ತು ಶಿವಸೇನೆ ನಿಷೇಧಿಸಿ: ರಾಜ್ಯಪಾಲರಿಗೆ ಕರವೇ ಒತ್ತಾಯ

ಎಂಇಎಸ್ ಮತ್ತು ಶಿವಸೇನೆ ನಿಷೇಧಿಸಿ: ರಾಜ್ಯಪಾಲರಿಗೆ ಕರವೇ ಒತ್ತಾಯ

- Advertisement -
- Advertisement -

ಬೆಳಗಾವಿಯಲ್ಲಿ ಪದೇ ಪದೇ ಅಶಾಂತಿ ಸೃಷ್ಟಿಸುತ್ತಿರುವ, ಕನ್ನಡಿಗರ ಮೇಲೆ ದೌರ್ಜನ್ಯ ನಡೆಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಸಂಘಟನೆಗಳನ್ನು ನಿಷೇಧಿಸುವಂತೆ ಇಂದು ಕರ್ನಾಟಕ ರಕ್ಷಣಾ ವೇದಿಕೆಯು ರಾಜ್ಯಪಾಲರನ್ನು ಭೇಟಿಯಾಗಿ ಒತ್ತಾಯಿಸಿದೆ.

ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರ ನೇತೃತ್ವದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ಮಾಧ್ಯಮ ಕಾರ್ಯದರ್ಶಿ ದಿನೇಶ್ ಕುಮಾರ್ ಎಸ್.ಸಿ, ಅರುಣ್ ಜಾವಗಲ್ ಮತ್ತಿತರನ್ನು ಒಳಗೊಂಡ ನಿಯೋಗ ರಾಜಭವನದಲ್ಲಿ ತಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

ಭಾಷಾವಾರು ಪ್ರಾಂತ್ಯ ವಿಂಗಡಣೆಯ ನಂತರ ಮಹಾರಾಷ್ಟ್ರ ರಾಜಕಾರಣಿಗಳು, ಅಲ್ಲಿನ ಸರ್ಕಾರಗಳ ಪ್ರಚೋದನೆಯಿಂದ ಬೆಳಗಾವಿಯಲ್ಲಿ ಪದೇಪದೇ ಅಶಾಂತಿಯ ವಾತಾವರಣ ನಿರ್ಮಾಣವಾಗುತ್ತ ಬಂದಿದೆ. ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಎಂಬ ಸಂಘಟನೆ/ರಾಜಕೀಯ ಪಕ್ಷವನ್ನು ಹುಟ್ಟುಹಾಕಿ, ಅದಕ್ಕೆ ಮಹಾರಾಷ್ಟ್ರದಿಂದ ಹಣಕಾಸಿನ ನೆರವು ಹರಿಸಿ ಬೆಳಗಾವಿಯ ಕನ್ನಡಿಗರ ಮೇಲೆ ಮರಾಠಿಗರನ್ನು ಎತ್ತಿಕಟ್ಟಿ ಹಲವು ದಶಕಗಳಿಂದ ದ್ವೇಷದ ವಾತಾವರಣವನ್ನು ಸೃಷ್ಟಿಸಲಾಗಿದೆ. ಎಂಇಎಸ್ ಜತೆಗೆ ಶಿವಸೇನೆ ಎಂಬ ರಾಜಕೀಯ ಪಕ್ಷದ ಘಟಕವೂ ಬೆಳಗಾವಿಯಲ್ಲಿ ಅಶಾಂತಿಯನ್ನು ಉಂಟು ಮಾಡುತ್ತಿದೆ ಎಂದು ಕರವೇ ದೂರಿದೆ.

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಬೇಡಿಕೆಯಲ್ಲಿ ಯಾವ ಅರ್ಥವೂ ಇಲ್ಲ. ಯಾಕೆಂದರೆ ಅದು ಕನ್ನಡಿಗರ ನೆಲ. ಬೆಳಗಾವಿಯ ಮೇಲೆ ಹಕ್ಕು ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರ ಮಾಡಿದ ಹುನ್ನಾರಗಳು ಒಂದೊಂದಲ್ಲ. ಒಕ್ಕೂಟ ಸರ್ಕಾರದ ಮೇಲೆ ಒತ್ತಡ ಹೇರಿ ಗಡಿವಿವಾದ ಇತ್ಯರ್ಥಕ್ಕೆ ಮೆಹರ್ ಚಂದ್ ಮಹಾಜನ್’ ಅವರ ನೇತೃತ್ವದ ಆಯೋಗವನ್ನು ಸ್ಥಾಪನೆ ಮಾಡಿಸಿದರು. ಅವರೇ ಬಯಸಿದ ಆಯೋಗ ತನ್ನ ಅಂತಿಮ ವರದಿಯಲ್ಲಿ ಬೆಳಗಾವಿ ಕರ್ನಾಟಕಕ್ಕೆ ಸೇರಬೇಕು ಎಂಬ ತೀರ್ಪು ನೀಡಿತು. ಮಹಾರಾಷ್ಟ್ರದ ರಾಜಕಾರಣಿಗಳು ಕುತ್ಸಿತ ನೀತಿ ಅನುಸರಿಸಿ ಮಹಾಜನ್ ಆಯೋಗದ ವರದಿ ಒಪ್ಪುವುದಿಲ್ಲ, ಅದರ ಅನುಷ್ಠಾನ ಮಾಡಲು ಬಿಡುವುದಿಲ್ಲ ಎಂದು ಹಠ ಹಿಡಿದರು. ಮಹಾರಾಷ್ಟ್ರದಲ್ಲಿ ಹಿಂಸಾಚಾರ ನಡೆಸಿ ಕನ್ನಡಿಗರ ಮೇಲೆ ದಾಳಿ ನಡೆಸಲಾಯಿತು. ಹೀಗಾಗಿ ಮಹಾಜನ್ ಆಯೋಗದ ವರದಿ ಜಾರಿಯಾಗಲಿಲ್ಲ. ಇದರ ಪರಿಣಾಮವಾಗಿ ಕರ್ನಾಟಕಕ್ಕೆ ಸೇರಬೇಕಾದ ಅಪ್ಪಟ ಕನ್ನಡದ ಜಿಲ್ಲೆ ಕಾಸರಗೋಡು ಕೈತಪ್ಪಿ, ಕೇರಳದಲ್ಲೇ ಉಳಿದುಕೊಂಡಿತು. ಮಾತ್ರವಲ್ಲದೆ ಮಹಾರಾಷ್ಟ್ರ ಸೇರಿರುವ ನೂರಾರು ಕನ್ನಡದ ಹಳ್ಳಿ, ಪಟ್ಟಣಗಳು ಕರ್ನಾಟಕಕ್ಕೆ ಸಿಗಲಿಲ್ಲ‌. ಇಷ್ಟಾದ ಮೇಲೂ ಬೆಳಗಾವಿ ತಮಗೆ ಸೇರಬೇಕು ಎಂದು ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ಮೊರೆಹೋಯಿತು. ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಎಂದು ಈಗಾಗಲೇ ಒಕ್ಕೂಟ ಸರ್ಕಾರ ಸುಪ್ರೀಂಕೋರ್ಟ್ ಗೆ ಅಫಿಡೆವಿಟ್ ಸಲ್ಲಿಸಿದ್ದು ತೀರ್ಪು ಬರುವುದು ಬಾಕಿ ಇದೆ ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.

ಕಾನೂನಾತ್ಮಕವಾಗಿ ಬೆಳಗಾವಿಯನ್ನು ಪಡೆಯಲು ವಿಫಲರಾಗಿರುವ ಮಹಾರಾಷ್ಟ್ರ ರಾಜಕಾರಣಿಗಳು ವಾಮಮಾರ್ಗವನ್ನು ಆಯ್ಕೆ ಮಾಡಿಕೊಂಡು ಎಂಇಎಸ್, ಶಿವಸೇನೆ ಮೂಲಕ ಬೆಳಗಾವಿಯಲ್ಲಿ ಸದಾ ಸಂಘರ್ಷದ ವಾತಾವರಣ ನಿರ್ಮಿಸಿದ್ದಾರೆ. ಎಂಇಎಸ್ ಹೆಸರಿನಲ್ಲಿ ಸಾವಿರಾರು ಮಹಾರಾಷ್ಟ್ರೀಯನ್ನರು ಗಡಿದಾಟಿ ಬೆಳಗಾವಿಗೆ ಬಂದು ‘ಮರಾಠಿ ಮಹಾಮೇಳ’ಗಳನ್ನು ನಡೆಸುವುದು, ಕನ್ನಡಿಗರ ವಿರುದ್ಧ, ಕರ್ನಾಟಕ ಸರ್ಕಾರದ ವಿರುದ್ಧ ಮಾನಹಾನಕಾರಿ, ಪ್ರಚೋದನಾತ್ಮಕ ಭಾಷಣಗಳನ್ನು ಮಾಡುವುದು, ಮುಗ್ಧ ಮರಾಠಿಗರನ್ನು ಕನ್ನಡಿಗರ ವಿರುದ್ಧ ಎತ್ತಿಕಟ್ಟುವುದು ನಡೆಯುತ್ತಲೇ ಇದೆ. ಇದರ ಪರಿಣಾಮವಾಗಿ ಬೆಳಗಾವಿಯಲ್ಲಿ ಕನ್ನಡಿಗರು-ಮರಾಠಿಗರು ನೆಮ್ಮದಿ, ಶಾಂತಿಯಿಂದ ಬಾಳಲು ಸಾಧ್ಯವಾಗುತ್ತಿಲ್ಲ‌. ಬೆಳಗಾವಿಯಲ್ಲಿರುವ ಕನ್ನಡಿಗರು, ಮರಾಠಿಗರು ಮತ್ತು ಇನ್ನಿತರ ಭಾಷಾ ಸಮುದಾಯಗಳು ಎಂಇಎಸ್ ಮತ್ತು‌ ಶಿವಸೇನೆಗಳನ್ನು ಈಗಾಗಲೇ ತಿರಸ್ಕರಿಸಿದ್ದಾರೆ. ಹೀಗಾಗಿ ಹತಾಶೆಗೆ ಒಳಗಾದ ಈ ಸಂಘಟನೆಗಳು ಹಿಂಸಾಚಾರಕ್ಕೆ ಇಳಿದಿವೆ ಎಂದು ಕರವೇ ತಿಳಿಸಿದೆ.

ಈ ಬಾರಿ ಚಳಿಗಾಲದ ಅಧಿವೇಶನ ನಡೆಯುವ ಸಂದರ್ಭದಲ್ಲೂ ಸಹ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಕಿತಾಪತಿ ನಡೆಸಿ, ಬೆಳಗಾವಿ ಬಂದ್ ನಡೆಸಿ ಹಿಂಸಾಚಾರ ನಡೆಸಿದವು. ತಾಯ್ನೆಲಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸಲಾಯಿತು‌ ಇಡೀ ಮನುಕುಲಕ್ಕೆ ಕಾಯಕಧರ್ಮವನ್ನು ನೀಡಿದ ಮಹಾಮಾನವತಾವಾದಿ ಬಸವಣ್ಣನವರ ಭಾವಚಿತ್ರಕ್ಕೆ ಸೆಗಣಿ ಬಳಿಯಲಾಯಿತು. ಬೆಳಗಾವಿ ಮತ್ತು ಮಹಾರಾಷ್ಟ್ರಗಳಲ್ಲಿ ಕನ್ನಡಿಗರ ಆತ್ಮಾಭಿಮಾನದ ಪ್ರತೀಕವಾಗಿರುವ ಕನ್ನಡ ಧ್ಚಜಕ್ಕೆ ಬೆಂಕಿ ಇಡಲಾಯಿತು.ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಸೇರಿದ ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಈಗಲೂ ಸಹ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಕನ್ನಡಿಗರನ್ನು ಥಳಿಸಿ, ಹಲ್ಲೆ ನಡೆಸಲಾಗುತ್ತಿದೆ, ಕನ್ನಡಿಗರ ಆಸ್ತಿಪಾಸ್ತಿ, ವಾಹನಗಳನ್ನು ನಷ್ಟಗೊಳಿಸಲಾಗುತ್ತಿದೆ. ಇದಕ್ಕೆಲ್ಲ ಕಾರಣಕರ್ತರು ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಎಂಬ ಭಯೋತ್ಪಾದಕ ಸಂಘಟನೆಗಳ ಗೂಂಡಾಗಳು. ಈ ಕಾರಣಕ್ಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಈ ಎರಡೂ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸುತ್ತಿದೆ ಎಂದಿದೆ.


ಇದನ್ನೂ ಓದಿ: ಬೆಳಗಾವಿ ಅಧಿವೇಶನ; ಚರ್ಚೆಯಾಗಬೇಕಾದ್ದೇನು? ಆಗುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...