Homeಕರ್ನಾಟಕಎಂಇಎಸ್ ಮತ್ತು ಶಿವಸೇನೆ ನಿಷೇಧಿಸಿ: ರಾಜ್ಯಪಾಲರಿಗೆ ಕರವೇ ಒತ್ತಾಯ

ಎಂಇಎಸ್ ಮತ್ತು ಶಿವಸೇನೆ ನಿಷೇಧಿಸಿ: ರಾಜ್ಯಪಾಲರಿಗೆ ಕರವೇ ಒತ್ತಾಯ

- Advertisement -
- Advertisement -

ಬೆಳಗಾವಿಯಲ್ಲಿ ಪದೇ ಪದೇ ಅಶಾಂತಿ ಸೃಷ್ಟಿಸುತ್ತಿರುವ, ಕನ್ನಡಿಗರ ಮೇಲೆ ದೌರ್ಜನ್ಯ ನಡೆಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಸಂಘಟನೆಗಳನ್ನು ನಿಷೇಧಿಸುವಂತೆ ಇಂದು ಕರ್ನಾಟಕ ರಕ್ಷಣಾ ವೇದಿಕೆಯು ರಾಜ್ಯಪಾಲರನ್ನು ಭೇಟಿಯಾಗಿ ಒತ್ತಾಯಿಸಿದೆ.

ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರ ನೇತೃತ್ವದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ಮಾಧ್ಯಮ ಕಾರ್ಯದರ್ಶಿ ದಿನೇಶ್ ಕುಮಾರ್ ಎಸ್.ಸಿ, ಅರುಣ್ ಜಾವಗಲ್ ಮತ್ತಿತರನ್ನು ಒಳಗೊಂಡ ನಿಯೋಗ ರಾಜಭವನದಲ್ಲಿ ತಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

ಭಾಷಾವಾರು ಪ್ರಾಂತ್ಯ ವಿಂಗಡಣೆಯ ನಂತರ ಮಹಾರಾಷ್ಟ್ರ ರಾಜಕಾರಣಿಗಳು, ಅಲ್ಲಿನ ಸರ್ಕಾರಗಳ ಪ್ರಚೋದನೆಯಿಂದ ಬೆಳಗಾವಿಯಲ್ಲಿ ಪದೇಪದೇ ಅಶಾಂತಿಯ ವಾತಾವರಣ ನಿರ್ಮಾಣವಾಗುತ್ತ ಬಂದಿದೆ. ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಎಂಬ ಸಂಘಟನೆ/ರಾಜಕೀಯ ಪಕ್ಷವನ್ನು ಹುಟ್ಟುಹಾಕಿ, ಅದಕ್ಕೆ ಮಹಾರಾಷ್ಟ್ರದಿಂದ ಹಣಕಾಸಿನ ನೆರವು ಹರಿಸಿ ಬೆಳಗಾವಿಯ ಕನ್ನಡಿಗರ ಮೇಲೆ ಮರಾಠಿಗರನ್ನು ಎತ್ತಿಕಟ್ಟಿ ಹಲವು ದಶಕಗಳಿಂದ ದ್ವೇಷದ ವಾತಾವರಣವನ್ನು ಸೃಷ್ಟಿಸಲಾಗಿದೆ. ಎಂಇಎಸ್ ಜತೆಗೆ ಶಿವಸೇನೆ ಎಂಬ ರಾಜಕೀಯ ಪಕ್ಷದ ಘಟಕವೂ ಬೆಳಗಾವಿಯಲ್ಲಿ ಅಶಾಂತಿಯನ್ನು ಉಂಟು ಮಾಡುತ್ತಿದೆ ಎಂದು ಕರವೇ ದೂರಿದೆ.

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಬೇಡಿಕೆಯಲ್ಲಿ ಯಾವ ಅರ್ಥವೂ ಇಲ್ಲ. ಯಾಕೆಂದರೆ ಅದು ಕನ್ನಡಿಗರ ನೆಲ. ಬೆಳಗಾವಿಯ ಮೇಲೆ ಹಕ್ಕು ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರ ಮಾಡಿದ ಹುನ್ನಾರಗಳು ಒಂದೊಂದಲ್ಲ. ಒಕ್ಕೂಟ ಸರ್ಕಾರದ ಮೇಲೆ ಒತ್ತಡ ಹೇರಿ ಗಡಿವಿವಾದ ಇತ್ಯರ್ಥಕ್ಕೆ ಮೆಹರ್ ಚಂದ್ ಮಹಾಜನ್’ ಅವರ ನೇತೃತ್ವದ ಆಯೋಗವನ್ನು ಸ್ಥಾಪನೆ ಮಾಡಿಸಿದರು. ಅವರೇ ಬಯಸಿದ ಆಯೋಗ ತನ್ನ ಅಂತಿಮ ವರದಿಯಲ್ಲಿ ಬೆಳಗಾವಿ ಕರ್ನಾಟಕಕ್ಕೆ ಸೇರಬೇಕು ಎಂಬ ತೀರ್ಪು ನೀಡಿತು. ಮಹಾರಾಷ್ಟ್ರದ ರಾಜಕಾರಣಿಗಳು ಕುತ್ಸಿತ ನೀತಿ ಅನುಸರಿಸಿ ಮಹಾಜನ್ ಆಯೋಗದ ವರದಿ ಒಪ್ಪುವುದಿಲ್ಲ, ಅದರ ಅನುಷ್ಠಾನ ಮಾಡಲು ಬಿಡುವುದಿಲ್ಲ ಎಂದು ಹಠ ಹಿಡಿದರು. ಮಹಾರಾಷ್ಟ್ರದಲ್ಲಿ ಹಿಂಸಾಚಾರ ನಡೆಸಿ ಕನ್ನಡಿಗರ ಮೇಲೆ ದಾಳಿ ನಡೆಸಲಾಯಿತು. ಹೀಗಾಗಿ ಮಹಾಜನ್ ಆಯೋಗದ ವರದಿ ಜಾರಿಯಾಗಲಿಲ್ಲ. ಇದರ ಪರಿಣಾಮವಾಗಿ ಕರ್ನಾಟಕಕ್ಕೆ ಸೇರಬೇಕಾದ ಅಪ್ಪಟ ಕನ್ನಡದ ಜಿಲ್ಲೆ ಕಾಸರಗೋಡು ಕೈತಪ್ಪಿ, ಕೇರಳದಲ್ಲೇ ಉಳಿದುಕೊಂಡಿತು. ಮಾತ್ರವಲ್ಲದೆ ಮಹಾರಾಷ್ಟ್ರ ಸೇರಿರುವ ನೂರಾರು ಕನ್ನಡದ ಹಳ್ಳಿ, ಪಟ್ಟಣಗಳು ಕರ್ನಾಟಕಕ್ಕೆ ಸಿಗಲಿಲ್ಲ‌. ಇಷ್ಟಾದ ಮೇಲೂ ಬೆಳಗಾವಿ ತಮಗೆ ಸೇರಬೇಕು ಎಂದು ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ಮೊರೆಹೋಯಿತು. ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಎಂದು ಈಗಾಗಲೇ ಒಕ್ಕೂಟ ಸರ್ಕಾರ ಸುಪ್ರೀಂಕೋರ್ಟ್ ಗೆ ಅಫಿಡೆವಿಟ್ ಸಲ್ಲಿಸಿದ್ದು ತೀರ್ಪು ಬರುವುದು ಬಾಕಿ ಇದೆ ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.

ಕಾನೂನಾತ್ಮಕವಾಗಿ ಬೆಳಗಾವಿಯನ್ನು ಪಡೆಯಲು ವಿಫಲರಾಗಿರುವ ಮಹಾರಾಷ್ಟ್ರ ರಾಜಕಾರಣಿಗಳು ವಾಮಮಾರ್ಗವನ್ನು ಆಯ್ಕೆ ಮಾಡಿಕೊಂಡು ಎಂಇಎಸ್, ಶಿವಸೇನೆ ಮೂಲಕ ಬೆಳಗಾವಿಯಲ್ಲಿ ಸದಾ ಸಂಘರ್ಷದ ವಾತಾವರಣ ನಿರ್ಮಿಸಿದ್ದಾರೆ. ಎಂಇಎಸ್ ಹೆಸರಿನಲ್ಲಿ ಸಾವಿರಾರು ಮಹಾರಾಷ್ಟ್ರೀಯನ್ನರು ಗಡಿದಾಟಿ ಬೆಳಗಾವಿಗೆ ಬಂದು ‘ಮರಾಠಿ ಮಹಾಮೇಳ’ಗಳನ್ನು ನಡೆಸುವುದು, ಕನ್ನಡಿಗರ ವಿರುದ್ಧ, ಕರ್ನಾಟಕ ಸರ್ಕಾರದ ವಿರುದ್ಧ ಮಾನಹಾನಕಾರಿ, ಪ್ರಚೋದನಾತ್ಮಕ ಭಾಷಣಗಳನ್ನು ಮಾಡುವುದು, ಮುಗ್ಧ ಮರಾಠಿಗರನ್ನು ಕನ್ನಡಿಗರ ವಿರುದ್ಧ ಎತ್ತಿಕಟ್ಟುವುದು ನಡೆಯುತ್ತಲೇ ಇದೆ. ಇದರ ಪರಿಣಾಮವಾಗಿ ಬೆಳಗಾವಿಯಲ್ಲಿ ಕನ್ನಡಿಗರು-ಮರಾಠಿಗರು ನೆಮ್ಮದಿ, ಶಾಂತಿಯಿಂದ ಬಾಳಲು ಸಾಧ್ಯವಾಗುತ್ತಿಲ್ಲ‌. ಬೆಳಗಾವಿಯಲ್ಲಿರುವ ಕನ್ನಡಿಗರು, ಮರಾಠಿಗರು ಮತ್ತು ಇನ್ನಿತರ ಭಾಷಾ ಸಮುದಾಯಗಳು ಎಂಇಎಸ್ ಮತ್ತು‌ ಶಿವಸೇನೆಗಳನ್ನು ಈಗಾಗಲೇ ತಿರಸ್ಕರಿಸಿದ್ದಾರೆ. ಹೀಗಾಗಿ ಹತಾಶೆಗೆ ಒಳಗಾದ ಈ ಸಂಘಟನೆಗಳು ಹಿಂಸಾಚಾರಕ್ಕೆ ಇಳಿದಿವೆ ಎಂದು ಕರವೇ ತಿಳಿಸಿದೆ.

ಈ ಬಾರಿ ಚಳಿಗಾಲದ ಅಧಿವೇಶನ ನಡೆಯುವ ಸಂದರ್ಭದಲ್ಲೂ ಸಹ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಕಿತಾಪತಿ ನಡೆಸಿ, ಬೆಳಗಾವಿ ಬಂದ್ ನಡೆಸಿ ಹಿಂಸಾಚಾರ ನಡೆಸಿದವು. ತಾಯ್ನೆಲಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸಲಾಯಿತು‌ ಇಡೀ ಮನುಕುಲಕ್ಕೆ ಕಾಯಕಧರ್ಮವನ್ನು ನೀಡಿದ ಮಹಾಮಾನವತಾವಾದಿ ಬಸವಣ್ಣನವರ ಭಾವಚಿತ್ರಕ್ಕೆ ಸೆಗಣಿ ಬಳಿಯಲಾಯಿತು. ಬೆಳಗಾವಿ ಮತ್ತು ಮಹಾರಾಷ್ಟ್ರಗಳಲ್ಲಿ ಕನ್ನಡಿಗರ ಆತ್ಮಾಭಿಮಾನದ ಪ್ರತೀಕವಾಗಿರುವ ಕನ್ನಡ ಧ್ಚಜಕ್ಕೆ ಬೆಂಕಿ ಇಡಲಾಯಿತು.ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಸೇರಿದ ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಈಗಲೂ ಸಹ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಕನ್ನಡಿಗರನ್ನು ಥಳಿಸಿ, ಹಲ್ಲೆ ನಡೆಸಲಾಗುತ್ತಿದೆ, ಕನ್ನಡಿಗರ ಆಸ್ತಿಪಾಸ್ತಿ, ವಾಹನಗಳನ್ನು ನಷ್ಟಗೊಳಿಸಲಾಗುತ್ತಿದೆ. ಇದಕ್ಕೆಲ್ಲ ಕಾರಣಕರ್ತರು ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಎಂಬ ಭಯೋತ್ಪಾದಕ ಸಂಘಟನೆಗಳ ಗೂಂಡಾಗಳು. ಈ ಕಾರಣಕ್ಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಈ ಎರಡೂ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸುತ್ತಿದೆ ಎಂದಿದೆ.


ಇದನ್ನೂ ಓದಿ: ಬೆಳಗಾವಿ ಅಧಿವೇಶನ; ಚರ್ಚೆಯಾಗಬೇಕಾದ್ದೇನು? ಆಗುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...