HomeಮುಖಪುಟPFI ಮೇಲಿನ ನಿಷೇಧ: ರಾಜಕೀಯ ನಾಯಕರು ಏನಂತಾರೆ?

PFI ಮೇಲಿನ ನಿಷೇಧ: ರಾಜಕೀಯ ನಾಯಕರು ಏನಂತಾರೆ?

- Advertisement -
- Advertisement -

ಕೇಂದ್ರ ಸರ್ಕಾರವು ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಿಎಫ್‌ಐ ಮತ್ತು ಅದರ ಅಂಗಸಂಘಟನೆಗಳನ್ನು 5 ವರ್ಷ ನಿಷೇಧಿಸಿದೆ. ಈ ಕುರಿತು ಪರ-ವಿರೋಧದ ಪ್ರತಿಕ್ರಿಯಗಳು ಕೇಳಿಬಂದಿವೆ. ರಾಜಕೀಯ ನಾಯಕರು ಏನು ಹೇಳುತ್ತಾರೆ ಎಂಬುದರ ವರದಿ ಇಲ್ಲಿದೆ.

ಮೊದಲು ಆರ್‌ಎಸ್‌ಎಸ್‌ ನಿಷೇಧಿಸಿ: ಲಾಲೂ ಪ್ರಸಾದ್ ಯಾದವ್

ಪಿಎಫ್‌ಐನಂತೆ, ಆರ್‌ಎಸ್‌ಎಸ್ ಸೇರಿದಂತೆ ದ್ವೇಷ ಹರಡುವ ಎಲ್ಲಾ ಸಂಘಟನೆಗಳ ಮೇಲೆ ನಿಷೇಧ ಹೇರಬೇಕು. ಮೊದಲನೆಯದಾಗಿ ಆರ್‌ಎಸ್‌ಎಸ್ ಅನ್ನು ನಿಷೇಧಿಸಬೇಕು. ಏಕೆಂದರೆ ಅದು ಪಿಎಫ್‌ಐಗಿಂತ ಕೆಟ್ಟ ಸಂಘಟನೆಯಾಗಿದೆ ಎಂದು ಆರ್‌ಜೆಡಿಯ ಹಿರಿಯ ಮುಖಂಡ ಲಾಲೂ ಪ್ರಸಾದ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ.

ಆರ್‌ಎಸ್‌ಎಸ್ ಅನ್ನು ಈ ಹಿಂದೆ ಎರಡು ಬಾರಿ ನಿಷೇಧಿಸಲಾಗಿದೆ. ನೆನಪಿಡಿ, ಆರ್‌ಎಸ್‌ಎಸ್ ಅನ್ನು ಮೊದಲು ನಿಷೇಧಿಸಿದ್ದು ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಪಿಎಫ್‌ಐ ನಿಷೇಧವನ್ನು ಬೆಂಬಲಿಸುವುದಿಲ್ಲ- ಅಸಾದುದ್ದೀನ್ ಓವೈಸಿ

ನಾನು ಯಾವಾಗಲೂ ಪಿಎಫ್‌ನ ಕಾರ್ಯವಿಧಾನವನ್ನು ವಿರೋಧಿಸುತ್ತೇನೆ ಮತ್ತು ಪ್ರಜಾತಾಂತ್ರಿಕ ವಿಧಾನದ ನಂಬಿಕೆ ಇಟ್ಟಿದ್ದೇನೆ. ಆದರೆ PFI ಮೇಲಿನ ಈ ನಿಷೇಧವನ್ನು ಬೆಂಬಲಿಸಲಾಗುವುದಿಲ್ಲ ಎಂದು AIMIM ಪಕ್ಷದ ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚುನಾವಣಾ ತಂತ್ರ – ಸಾಗರೀಕ ಘೋಷ್

ಕಳೆದ 8 ವರ್ಷಗಳಿಂದ PFI ತನ್ನ ಚಟುವಟಿಕೆಗಳನ್ನು ನಡೆಸುತ್ತಿದೆ. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಮಾತನಾಡಲಿಲ್ಲ. ಈಗ ಗುಜರಾತ್‌ ಮತ್ತು ಕರ್ನಾಟಕದ ಚುನಾವಣೆ ಮುಂದಿರುವಾಗ ಇದ್ದಕ್ಕಿದ್ದಂತೆ PFI ಅನ್ನು ನಿಷೇಧಿಸಲಾಗಿದೆ. ಇದರಿಂದ ಏನು ಬದಲಾಗುತ್ತದೆ ಎಂದು ಪತ್ರಕರ್ತೆ ಸಾಗರೀಕ ಘೋಷ್ ಪ್ರಶ್ನಿಸಿದ್ದಾರೆ.

ಪಿಎಫ್‌ಐ ಕಚೇರಿಗಳನ್ನು ಮುಚ್ಚಿಸುತ್ತಿದ್ದೇವೆ – ಹಿಮಂತ ಬಿಸ್ವಾ ಶರ್ಮಾ

ಅಸ್ಸಾಂ ಸರ್ಕಾರವು ಈಗಾಗಲೇ ಮುಂದಿನ ಕ್ರಮಗಳನ್ನು ಪ್ರಾರಂಭಿಸಿದೆ. ನಾವು ಕಮ್ರೂಪ್, ಬಕ್ಸಾ ಮತ್ತು ಕರೀಮ್‌ಗಂಜ್‌ನಲ್ಲಿರುವ ಪಿಎಫ್‌ಐ ಮತ್ತು ಸಿಎಫ್‌ಐ ಕಚೇರಿಗಳನ್ನು ಬಂದ್ ಮಾಡಿದ್ದೇವೆ. ಪಿಎಫ್‌ಐ ಮುಖಂಡರನ್ನು ಬಂಧಿಸುತ್ತಿದ್ದೇವೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

PFI ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗುತ್ತದೆ – ಏಕನಾಥ್ ಶಿಂಧೆ

ಪಾಕಿಸ್ತಾನ್ ಜಿಂದಾಬಾದ್’ ಎನ್ನುವ ಪಿಎಫ್‌ಐಗೆ ದೇಶದಲ್ಲಿ ಅಂತಹ ಘೋಷಣೆಗಳನ್ನು ಕೂಗುವ ಹಕ್ಕು ಇಲ್ಲ. ಈ ಬಗ್ಗೆ ಗೃಹ ಸಚಿವಾಲಯ ಕ್ರಮ ಕೈಗೊಳ್ಳಲಿದೆ. ಕೇಂದ್ರ ಸರ್ಕಾರ ಸರಿಯಾದ ನಿರ್ಧಾರ ತೆಗೆದುಕೊಂಡಿದೆ. ಇದು ದೇಶಭಕ್ತರ ದೇಶ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಪ್ರತಿಕ್ರಿಯಿಸಿದ್ದಾರೆ.

RSS ಅನ್ನೂ ನಿಷೇಧಿಸಲಾಗುವುದೇ? – ಎಂ.ವಿ ಗೋವಿಂದನ್

ಎಲ್ಲಾ ರೀತಿಯ ಕೋಮುವಾದಗಳು ಅಪಾಯಕಾರಿ. ಬಹುಸಂಖ್ಯಾತ ಕೋಮುವಾದ ಮತ್ತು ಅಲ್ಪಸಂಖ್ಯಾತ ಕೋಮುವಾದ ಸಹ ಸಮಾನವಾಗಿ ಅಪಾಯಕಾರಿಯಾಗಿವೆ. ಸಂಘಟನೆಯನ್ನು ನಿಷೇಧಿಸುವುದರಿಂದ ಅದರ ಸಿದ್ಧಾಂತ ಕೊನೆಗೊಳ್ಳುವುದಿಲ್ಲ. ಅವರು ಹೊಸ ಹೆಸರು ಅಥವಾ ಗುರುತಿನೊಂದಿಗೆ ಹಿಂತಿರುಗುತ್ತಾರೆ. ನೀವು ಎಲ್ಲಾ ಕೋಮುವಾದಿ ಸಂಘಟನೆಗಳನ್ನು ನಿಷೇಧಿಸುವ ತರ್ಕವನ್ನು ಅನುಸರಿಸಿದರೆ, RSS ಮೊದಲು ಬರುತ್ತದೆ. ಅದನ್ನೂ ನಿಷೇಧಿಸಲಾಗುವುದೇ?” ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ ಗೋವಿಂದನ್ ಪ್ರಶ್ನಿಸಿದ್ದಾರೆ.

ಪಿಎಫ್‌ಐ ನಿಷೇಧ ಸ್ವಾಗತಾರ್ಹ – ಬಸವರಾಜ ಬೊಮ್ಮಾಯಿ

ಪಿಎಫ್‌ಐ ಸಂಘಟನೆ ಮೇಲಿನ ನಿಷೇಧವನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ವಾಗತಿಸಿದ್ದಾರೆ. “ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ” ಎಂದು ಹೇಳಿಕೆ ನೀಡಿದ್ದಾರೆ.

ಪಿ.ಎಫ್.ಐ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಸಂಸ್ಥೆ ಹಲವಾರು ವರ್ಷ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ. ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗಜ್ಜಾಹೀರಾಗಿದೆ. ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ. ವಿರೋಧಪಕ್ಷದವರೂ, ಸಿಪಿಐ, ಕಾಂಗ್ರೆಸ್, ಸಿ.ಪಿ.ಎಂ ಎಲ್ಲರೂ ಕೂಡ ಪಿ.ಎಫ್.ಐ ನಿಷೇಧಿಸಬೇಕೆಂದು ಬೇಡಿಕೆ ಇಟ್ಟಿದ್ದರು. ಹಾಗಾಗಿ ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಂಪರ್ಕ ಅಥವಾ ನಂಟನ್ನು ಇಟ್ಟುಕೊಳ್ಳಬಾರದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

RSS ಅನ್ನು ಕೂಡ ನಿಷೇಧಿಸಬೇಕು – ಕೋಡಿಕುನ್ನಿಲ್ ಸುರೇಶ್

ಕೇಂದ್ರ ಸರ್ಕಾರವು ಮಂಗಳವಾರ ಸಂಜೆ ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಅದರ ಅಂಗಸಂಘಟನೆಗಳನ್ನು 5 ವರ್ಷ ನಿಷೇಧಿಸಿರುವುದರ ಕುರಿತು ಪ್ರತಿಕ್ರಿಯಿಸಿರುವ ಕೇರಳದ ಮಲಪ್ಪುರಂ ಸಂಸದ ಕೋಡಿಕುನ್ನಿಲ್ ಸುರೇಶ್, RSS ಅನ್ನು ಕೂಡ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪಿಎಫ್‌ಐ ಒಂದನ್ನೇ ಬ್ಯಾನ್ ಮಾಡಿದರೆ ಪರಿಹಾರ ಸಿಗುವುದಿಲ್ಲ. ಆರ್‌ಎಸ್‌ಎಸ್‌ ಅನ್ನು ಸಹ ಬ್ಯಾನ್ ಮಾಡಬೇಕು. ಏಕೆಂದರೆ ಆರ್‌ಎಸ್‌ಎಸ್‌ ಸಹ ಇಡೀ ದೇಶಾದ್ಯಂತ ಹಿಂದೂ ಕೋಮುವಾದವನ್ನು ಹರಡುತ್ತಿದೆ. ಆರ್‌ಎಸ್‌ಎಸ್‌ ಮತ್ತು ಪಿಎಫ್‌ಐ ಎರಡೂ ಸಹ ಸಮಾನವಾಗಿದ್ದು ಎರಡನ್ನು ನಿಷೇಧಿಸಬೇಕು, ಆದರೆ ಕೇವಲ ಪಿಎಫ್‌ಐ ಅನ್ನು ನಿಷೇಧಿಸುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ವಿಶ್ಲೇಷಣೆ: ರಾಜ್ಯ ಕಾಂಗ್ರೆಸ್ ರಾಜಕೀಯ ತಂತ್ರಗಾರಿಕೆ ಬದಲಾಗಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...