HomeಮುಖಪುಟPFI ಮೇಲಿನ ನಿಷೇಧ: ರಾಜಕೀಯ ನಾಯಕರು ಏನಂತಾರೆ?

PFI ಮೇಲಿನ ನಿಷೇಧ: ರಾಜಕೀಯ ನಾಯಕರು ಏನಂತಾರೆ?

- Advertisement -
- Advertisement -

ಕೇಂದ್ರ ಸರ್ಕಾರವು ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಿಎಫ್‌ಐ ಮತ್ತು ಅದರ ಅಂಗಸಂಘಟನೆಗಳನ್ನು 5 ವರ್ಷ ನಿಷೇಧಿಸಿದೆ. ಈ ಕುರಿತು ಪರ-ವಿರೋಧದ ಪ್ರತಿಕ್ರಿಯಗಳು ಕೇಳಿಬಂದಿವೆ. ರಾಜಕೀಯ ನಾಯಕರು ಏನು ಹೇಳುತ್ತಾರೆ ಎಂಬುದರ ವರದಿ ಇಲ್ಲಿದೆ.

ಮೊದಲು ಆರ್‌ಎಸ್‌ಎಸ್‌ ನಿಷೇಧಿಸಿ: ಲಾಲೂ ಪ್ರಸಾದ್ ಯಾದವ್

ಪಿಎಫ್‌ಐನಂತೆ, ಆರ್‌ಎಸ್‌ಎಸ್ ಸೇರಿದಂತೆ ದ್ವೇಷ ಹರಡುವ ಎಲ್ಲಾ ಸಂಘಟನೆಗಳ ಮೇಲೆ ನಿಷೇಧ ಹೇರಬೇಕು. ಮೊದಲನೆಯದಾಗಿ ಆರ್‌ಎಸ್‌ಎಸ್ ಅನ್ನು ನಿಷೇಧಿಸಬೇಕು. ಏಕೆಂದರೆ ಅದು ಪಿಎಫ್‌ಐಗಿಂತ ಕೆಟ್ಟ ಸಂಘಟನೆಯಾಗಿದೆ ಎಂದು ಆರ್‌ಜೆಡಿಯ ಹಿರಿಯ ಮುಖಂಡ ಲಾಲೂ ಪ್ರಸಾದ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ.

ಆರ್‌ಎಸ್‌ಎಸ್ ಅನ್ನು ಈ ಹಿಂದೆ ಎರಡು ಬಾರಿ ನಿಷೇಧಿಸಲಾಗಿದೆ. ನೆನಪಿಡಿ, ಆರ್‌ಎಸ್‌ಎಸ್ ಅನ್ನು ಮೊದಲು ನಿಷೇಧಿಸಿದ್ದು ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಪಿಎಫ್‌ಐ ನಿಷೇಧವನ್ನು ಬೆಂಬಲಿಸುವುದಿಲ್ಲ- ಅಸಾದುದ್ದೀನ್ ಓವೈಸಿ

ನಾನು ಯಾವಾಗಲೂ ಪಿಎಫ್‌ನ ಕಾರ್ಯವಿಧಾನವನ್ನು ವಿರೋಧಿಸುತ್ತೇನೆ ಮತ್ತು ಪ್ರಜಾತಾಂತ್ರಿಕ ವಿಧಾನದ ನಂಬಿಕೆ ಇಟ್ಟಿದ್ದೇನೆ. ಆದರೆ PFI ಮೇಲಿನ ಈ ನಿಷೇಧವನ್ನು ಬೆಂಬಲಿಸಲಾಗುವುದಿಲ್ಲ ಎಂದು AIMIM ಪಕ್ಷದ ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚುನಾವಣಾ ತಂತ್ರ – ಸಾಗರೀಕ ಘೋಷ್

ಕಳೆದ 8 ವರ್ಷಗಳಿಂದ PFI ತನ್ನ ಚಟುವಟಿಕೆಗಳನ್ನು ನಡೆಸುತ್ತಿದೆ. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಮಾತನಾಡಲಿಲ್ಲ. ಈಗ ಗುಜರಾತ್‌ ಮತ್ತು ಕರ್ನಾಟಕದ ಚುನಾವಣೆ ಮುಂದಿರುವಾಗ ಇದ್ದಕ್ಕಿದ್ದಂತೆ PFI ಅನ್ನು ನಿಷೇಧಿಸಲಾಗಿದೆ. ಇದರಿಂದ ಏನು ಬದಲಾಗುತ್ತದೆ ಎಂದು ಪತ್ರಕರ್ತೆ ಸಾಗರೀಕ ಘೋಷ್ ಪ್ರಶ್ನಿಸಿದ್ದಾರೆ.

ಪಿಎಫ್‌ಐ ಕಚೇರಿಗಳನ್ನು ಮುಚ್ಚಿಸುತ್ತಿದ್ದೇವೆ – ಹಿಮಂತ ಬಿಸ್ವಾ ಶರ್ಮಾ

ಅಸ್ಸಾಂ ಸರ್ಕಾರವು ಈಗಾಗಲೇ ಮುಂದಿನ ಕ್ರಮಗಳನ್ನು ಪ್ರಾರಂಭಿಸಿದೆ. ನಾವು ಕಮ್ರೂಪ್, ಬಕ್ಸಾ ಮತ್ತು ಕರೀಮ್‌ಗಂಜ್‌ನಲ್ಲಿರುವ ಪಿಎಫ್‌ಐ ಮತ್ತು ಸಿಎಫ್‌ಐ ಕಚೇರಿಗಳನ್ನು ಬಂದ್ ಮಾಡಿದ್ದೇವೆ. ಪಿಎಫ್‌ಐ ಮುಖಂಡರನ್ನು ಬಂಧಿಸುತ್ತಿದ್ದೇವೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

PFI ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗುತ್ತದೆ – ಏಕನಾಥ್ ಶಿಂಧೆ

ಪಾಕಿಸ್ತಾನ್ ಜಿಂದಾಬಾದ್’ ಎನ್ನುವ ಪಿಎಫ್‌ಐಗೆ ದೇಶದಲ್ಲಿ ಅಂತಹ ಘೋಷಣೆಗಳನ್ನು ಕೂಗುವ ಹಕ್ಕು ಇಲ್ಲ. ಈ ಬಗ್ಗೆ ಗೃಹ ಸಚಿವಾಲಯ ಕ್ರಮ ಕೈಗೊಳ್ಳಲಿದೆ. ಕೇಂದ್ರ ಸರ್ಕಾರ ಸರಿಯಾದ ನಿರ್ಧಾರ ತೆಗೆದುಕೊಂಡಿದೆ. ಇದು ದೇಶಭಕ್ತರ ದೇಶ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಪ್ರತಿಕ್ರಿಯಿಸಿದ್ದಾರೆ.

RSS ಅನ್ನೂ ನಿಷೇಧಿಸಲಾಗುವುದೇ? – ಎಂ.ವಿ ಗೋವಿಂದನ್

ಎಲ್ಲಾ ರೀತಿಯ ಕೋಮುವಾದಗಳು ಅಪಾಯಕಾರಿ. ಬಹುಸಂಖ್ಯಾತ ಕೋಮುವಾದ ಮತ್ತು ಅಲ್ಪಸಂಖ್ಯಾತ ಕೋಮುವಾದ ಸಹ ಸಮಾನವಾಗಿ ಅಪಾಯಕಾರಿಯಾಗಿವೆ. ಸಂಘಟನೆಯನ್ನು ನಿಷೇಧಿಸುವುದರಿಂದ ಅದರ ಸಿದ್ಧಾಂತ ಕೊನೆಗೊಳ್ಳುವುದಿಲ್ಲ. ಅವರು ಹೊಸ ಹೆಸರು ಅಥವಾ ಗುರುತಿನೊಂದಿಗೆ ಹಿಂತಿರುಗುತ್ತಾರೆ. ನೀವು ಎಲ್ಲಾ ಕೋಮುವಾದಿ ಸಂಘಟನೆಗಳನ್ನು ನಿಷೇಧಿಸುವ ತರ್ಕವನ್ನು ಅನುಸರಿಸಿದರೆ, RSS ಮೊದಲು ಬರುತ್ತದೆ. ಅದನ್ನೂ ನಿಷೇಧಿಸಲಾಗುವುದೇ?” ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ ಗೋವಿಂದನ್ ಪ್ರಶ್ನಿಸಿದ್ದಾರೆ.

ಪಿಎಫ್‌ಐ ನಿಷೇಧ ಸ್ವಾಗತಾರ್ಹ – ಬಸವರಾಜ ಬೊಮ್ಮಾಯಿ

ಪಿಎಫ್‌ಐ ಸಂಘಟನೆ ಮೇಲಿನ ನಿಷೇಧವನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ವಾಗತಿಸಿದ್ದಾರೆ. “ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ” ಎಂದು ಹೇಳಿಕೆ ನೀಡಿದ್ದಾರೆ.

ಪಿ.ಎಫ್.ಐ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಸಂಸ್ಥೆ ಹಲವಾರು ವರ್ಷ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ. ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗಜ್ಜಾಹೀರಾಗಿದೆ. ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ. ವಿರೋಧಪಕ್ಷದವರೂ, ಸಿಪಿಐ, ಕಾಂಗ್ರೆಸ್, ಸಿ.ಪಿ.ಎಂ ಎಲ್ಲರೂ ಕೂಡ ಪಿ.ಎಫ್.ಐ ನಿಷೇಧಿಸಬೇಕೆಂದು ಬೇಡಿಕೆ ಇಟ್ಟಿದ್ದರು. ಹಾಗಾಗಿ ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಂಪರ್ಕ ಅಥವಾ ನಂಟನ್ನು ಇಟ್ಟುಕೊಳ್ಳಬಾರದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

RSS ಅನ್ನು ಕೂಡ ನಿಷೇಧಿಸಬೇಕು – ಕೋಡಿಕುನ್ನಿಲ್ ಸುರೇಶ್

ಕೇಂದ್ರ ಸರ್ಕಾರವು ಮಂಗಳವಾರ ಸಂಜೆ ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಅದರ ಅಂಗಸಂಘಟನೆಗಳನ್ನು 5 ವರ್ಷ ನಿಷೇಧಿಸಿರುವುದರ ಕುರಿತು ಪ್ರತಿಕ್ರಿಯಿಸಿರುವ ಕೇರಳದ ಮಲಪ್ಪುರಂ ಸಂಸದ ಕೋಡಿಕುನ್ನಿಲ್ ಸುರೇಶ್, RSS ಅನ್ನು ಕೂಡ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪಿಎಫ್‌ಐ ಒಂದನ್ನೇ ಬ್ಯಾನ್ ಮಾಡಿದರೆ ಪರಿಹಾರ ಸಿಗುವುದಿಲ್ಲ. ಆರ್‌ಎಸ್‌ಎಸ್‌ ಅನ್ನು ಸಹ ಬ್ಯಾನ್ ಮಾಡಬೇಕು. ಏಕೆಂದರೆ ಆರ್‌ಎಸ್‌ಎಸ್‌ ಸಹ ಇಡೀ ದೇಶಾದ್ಯಂತ ಹಿಂದೂ ಕೋಮುವಾದವನ್ನು ಹರಡುತ್ತಿದೆ. ಆರ್‌ಎಸ್‌ಎಸ್‌ ಮತ್ತು ಪಿಎಫ್‌ಐ ಎರಡೂ ಸಹ ಸಮಾನವಾಗಿದ್ದು ಎರಡನ್ನು ನಿಷೇಧಿಸಬೇಕು, ಆದರೆ ಕೇವಲ ಪಿಎಫ್‌ಐ ಅನ್ನು ನಿಷೇಧಿಸುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ವಿಶ್ಲೇಷಣೆ: ರಾಜ್ಯ ಕಾಂಗ್ರೆಸ್ ರಾಜಕೀಯ ತಂತ್ರಗಾರಿಕೆ ಬದಲಾಗಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...