HomeಮುಖಪುಟPFI ಮೇಲಿನ ನಿಷೇಧ: ರಾಜಕೀಯ ನಾಯಕರು ಏನಂತಾರೆ?

PFI ಮೇಲಿನ ನಿಷೇಧ: ರಾಜಕೀಯ ನಾಯಕರು ಏನಂತಾರೆ?

- Advertisement -
- Advertisement -

ಕೇಂದ್ರ ಸರ್ಕಾರವು ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಿಎಫ್‌ಐ ಮತ್ತು ಅದರ ಅಂಗಸಂಘಟನೆಗಳನ್ನು 5 ವರ್ಷ ನಿಷೇಧಿಸಿದೆ. ಈ ಕುರಿತು ಪರ-ವಿರೋಧದ ಪ್ರತಿಕ್ರಿಯಗಳು ಕೇಳಿಬಂದಿವೆ. ರಾಜಕೀಯ ನಾಯಕರು ಏನು ಹೇಳುತ್ತಾರೆ ಎಂಬುದರ ವರದಿ ಇಲ್ಲಿದೆ.

ಮೊದಲು ಆರ್‌ಎಸ್‌ಎಸ್‌ ನಿಷೇಧಿಸಿ: ಲಾಲೂ ಪ್ರಸಾದ್ ಯಾದವ್

ಪಿಎಫ್‌ಐನಂತೆ, ಆರ್‌ಎಸ್‌ಎಸ್ ಸೇರಿದಂತೆ ದ್ವೇಷ ಹರಡುವ ಎಲ್ಲಾ ಸಂಘಟನೆಗಳ ಮೇಲೆ ನಿಷೇಧ ಹೇರಬೇಕು. ಮೊದಲನೆಯದಾಗಿ ಆರ್‌ಎಸ್‌ಎಸ್ ಅನ್ನು ನಿಷೇಧಿಸಬೇಕು. ಏಕೆಂದರೆ ಅದು ಪಿಎಫ್‌ಐಗಿಂತ ಕೆಟ್ಟ ಸಂಘಟನೆಯಾಗಿದೆ ಎಂದು ಆರ್‌ಜೆಡಿಯ ಹಿರಿಯ ಮುಖಂಡ ಲಾಲೂ ಪ್ರಸಾದ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ.

ಆರ್‌ಎಸ್‌ಎಸ್ ಅನ್ನು ಈ ಹಿಂದೆ ಎರಡು ಬಾರಿ ನಿಷೇಧಿಸಲಾಗಿದೆ. ನೆನಪಿಡಿ, ಆರ್‌ಎಸ್‌ಎಸ್ ಅನ್ನು ಮೊದಲು ನಿಷೇಧಿಸಿದ್ದು ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಪಿಎಫ್‌ಐ ನಿಷೇಧವನ್ನು ಬೆಂಬಲಿಸುವುದಿಲ್ಲ- ಅಸಾದುದ್ದೀನ್ ಓವೈಸಿ

ನಾನು ಯಾವಾಗಲೂ ಪಿಎಫ್‌ನ ಕಾರ್ಯವಿಧಾನವನ್ನು ವಿರೋಧಿಸುತ್ತೇನೆ ಮತ್ತು ಪ್ರಜಾತಾಂತ್ರಿಕ ವಿಧಾನದ ನಂಬಿಕೆ ಇಟ್ಟಿದ್ದೇನೆ. ಆದರೆ PFI ಮೇಲಿನ ಈ ನಿಷೇಧವನ್ನು ಬೆಂಬಲಿಸಲಾಗುವುದಿಲ್ಲ ಎಂದು AIMIM ಪಕ್ಷದ ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚುನಾವಣಾ ತಂತ್ರ – ಸಾಗರೀಕ ಘೋಷ್

ಕಳೆದ 8 ವರ್ಷಗಳಿಂದ PFI ತನ್ನ ಚಟುವಟಿಕೆಗಳನ್ನು ನಡೆಸುತ್ತಿದೆ. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಮಾತನಾಡಲಿಲ್ಲ. ಈಗ ಗುಜರಾತ್‌ ಮತ್ತು ಕರ್ನಾಟಕದ ಚುನಾವಣೆ ಮುಂದಿರುವಾಗ ಇದ್ದಕ್ಕಿದ್ದಂತೆ PFI ಅನ್ನು ನಿಷೇಧಿಸಲಾಗಿದೆ. ಇದರಿಂದ ಏನು ಬದಲಾಗುತ್ತದೆ ಎಂದು ಪತ್ರಕರ್ತೆ ಸಾಗರೀಕ ಘೋಷ್ ಪ್ರಶ್ನಿಸಿದ್ದಾರೆ.

ಪಿಎಫ್‌ಐ ಕಚೇರಿಗಳನ್ನು ಮುಚ್ಚಿಸುತ್ತಿದ್ದೇವೆ – ಹಿಮಂತ ಬಿಸ್ವಾ ಶರ್ಮಾ

ಅಸ್ಸಾಂ ಸರ್ಕಾರವು ಈಗಾಗಲೇ ಮುಂದಿನ ಕ್ರಮಗಳನ್ನು ಪ್ರಾರಂಭಿಸಿದೆ. ನಾವು ಕಮ್ರೂಪ್, ಬಕ್ಸಾ ಮತ್ತು ಕರೀಮ್‌ಗಂಜ್‌ನಲ್ಲಿರುವ ಪಿಎಫ್‌ಐ ಮತ್ತು ಸಿಎಫ್‌ಐ ಕಚೇರಿಗಳನ್ನು ಬಂದ್ ಮಾಡಿದ್ದೇವೆ. ಪಿಎಫ್‌ಐ ಮುಖಂಡರನ್ನು ಬಂಧಿಸುತ್ತಿದ್ದೇವೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

PFI ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗುತ್ತದೆ – ಏಕನಾಥ್ ಶಿಂಧೆ

ಪಾಕಿಸ್ತಾನ್ ಜಿಂದಾಬಾದ್’ ಎನ್ನುವ ಪಿಎಫ್‌ಐಗೆ ದೇಶದಲ್ಲಿ ಅಂತಹ ಘೋಷಣೆಗಳನ್ನು ಕೂಗುವ ಹಕ್ಕು ಇಲ್ಲ. ಈ ಬಗ್ಗೆ ಗೃಹ ಸಚಿವಾಲಯ ಕ್ರಮ ಕೈಗೊಳ್ಳಲಿದೆ. ಕೇಂದ್ರ ಸರ್ಕಾರ ಸರಿಯಾದ ನಿರ್ಧಾರ ತೆಗೆದುಕೊಂಡಿದೆ. ಇದು ದೇಶಭಕ್ತರ ದೇಶ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಪ್ರತಿಕ್ರಿಯಿಸಿದ್ದಾರೆ.

RSS ಅನ್ನೂ ನಿಷೇಧಿಸಲಾಗುವುದೇ? – ಎಂ.ವಿ ಗೋವಿಂದನ್

ಎಲ್ಲಾ ರೀತಿಯ ಕೋಮುವಾದಗಳು ಅಪಾಯಕಾರಿ. ಬಹುಸಂಖ್ಯಾತ ಕೋಮುವಾದ ಮತ್ತು ಅಲ್ಪಸಂಖ್ಯಾತ ಕೋಮುವಾದ ಸಹ ಸಮಾನವಾಗಿ ಅಪಾಯಕಾರಿಯಾಗಿವೆ. ಸಂಘಟನೆಯನ್ನು ನಿಷೇಧಿಸುವುದರಿಂದ ಅದರ ಸಿದ್ಧಾಂತ ಕೊನೆಗೊಳ್ಳುವುದಿಲ್ಲ. ಅವರು ಹೊಸ ಹೆಸರು ಅಥವಾ ಗುರುತಿನೊಂದಿಗೆ ಹಿಂತಿರುಗುತ್ತಾರೆ. ನೀವು ಎಲ್ಲಾ ಕೋಮುವಾದಿ ಸಂಘಟನೆಗಳನ್ನು ನಿಷೇಧಿಸುವ ತರ್ಕವನ್ನು ಅನುಸರಿಸಿದರೆ, RSS ಮೊದಲು ಬರುತ್ತದೆ. ಅದನ್ನೂ ನಿಷೇಧಿಸಲಾಗುವುದೇ?” ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ ಗೋವಿಂದನ್ ಪ್ರಶ್ನಿಸಿದ್ದಾರೆ.

ಪಿಎಫ್‌ಐ ನಿಷೇಧ ಸ್ವಾಗತಾರ್ಹ – ಬಸವರಾಜ ಬೊಮ್ಮಾಯಿ

ಪಿಎಫ್‌ಐ ಸಂಘಟನೆ ಮೇಲಿನ ನಿಷೇಧವನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ವಾಗತಿಸಿದ್ದಾರೆ. “ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ” ಎಂದು ಹೇಳಿಕೆ ನೀಡಿದ್ದಾರೆ.

ಪಿ.ಎಫ್.ಐ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಸಂಸ್ಥೆ ಹಲವಾರು ವರ್ಷ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ. ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗಜ್ಜಾಹೀರಾಗಿದೆ. ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ. ವಿರೋಧಪಕ್ಷದವರೂ, ಸಿಪಿಐ, ಕಾಂಗ್ರೆಸ್, ಸಿ.ಪಿ.ಎಂ ಎಲ್ಲರೂ ಕೂಡ ಪಿ.ಎಫ್.ಐ ನಿಷೇಧಿಸಬೇಕೆಂದು ಬೇಡಿಕೆ ಇಟ್ಟಿದ್ದರು. ಹಾಗಾಗಿ ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಂಪರ್ಕ ಅಥವಾ ನಂಟನ್ನು ಇಟ್ಟುಕೊಳ್ಳಬಾರದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

RSS ಅನ್ನು ಕೂಡ ನಿಷೇಧಿಸಬೇಕು – ಕೋಡಿಕುನ್ನಿಲ್ ಸುರೇಶ್

ಕೇಂದ್ರ ಸರ್ಕಾರವು ಮಂಗಳವಾರ ಸಂಜೆ ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಅದರ ಅಂಗಸಂಘಟನೆಗಳನ್ನು 5 ವರ್ಷ ನಿಷೇಧಿಸಿರುವುದರ ಕುರಿತು ಪ್ರತಿಕ್ರಿಯಿಸಿರುವ ಕೇರಳದ ಮಲಪ್ಪುರಂ ಸಂಸದ ಕೋಡಿಕುನ್ನಿಲ್ ಸುರೇಶ್, RSS ಅನ್ನು ಕೂಡ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪಿಎಫ್‌ಐ ಒಂದನ್ನೇ ಬ್ಯಾನ್ ಮಾಡಿದರೆ ಪರಿಹಾರ ಸಿಗುವುದಿಲ್ಲ. ಆರ್‌ಎಸ್‌ಎಸ್‌ ಅನ್ನು ಸಹ ಬ್ಯಾನ್ ಮಾಡಬೇಕು. ಏಕೆಂದರೆ ಆರ್‌ಎಸ್‌ಎಸ್‌ ಸಹ ಇಡೀ ದೇಶಾದ್ಯಂತ ಹಿಂದೂ ಕೋಮುವಾದವನ್ನು ಹರಡುತ್ತಿದೆ. ಆರ್‌ಎಸ್‌ಎಸ್‌ ಮತ್ತು ಪಿಎಫ್‌ಐ ಎರಡೂ ಸಹ ಸಮಾನವಾಗಿದ್ದು ಎರಡನ್ನು ನಿಷೇಧಿಸಬೇಕು, ಆದರೆ ಕೇವಲ ಪಿಎಫ್‌ಐ ಅನ್ನು ನಿಷೇಧಿಸುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ವಿಶ್ಲೇಷಣೆ: ರಾಜ್ಯ ಕಾಂಗ್ರೆಸ್ ರಾಜಕೀಯ ತಂತ್ರಗಾರಿಕೆ ಬದಲಾಗಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...