Homeಮುಖಪುಟನಿರ್ದಿಷ್ಟ ಸಮುದಾಯವಷ್ಟೇ ಭಯೋತ್ಪಾದಕರೆಂದು ಅಣಕು ಪ್ರದರ್ಶನ ಮಾಡುವಂತಿಲ್ಲ; ಮುಂಬೈ ಹೈಕೋರ್ಟ್ ಆದೇಶ

ನಿರ್ದಿಷ್ಟ ಸಮುದಾಯವಷ್ಟೇ ಭಯೋತ್ಪಾದಕರೆಂದು ಅಣಕು ಪ್ರದರ್ಶನ ಮಾಡುವಂತಿಲ್ಲ; ಮುಂಬೈ ಹೈಕೋರ್ಟ್ ಆದೇಶ

- Advertisement -
- Advertisement -

ಪೊಲೀಸ್ ಸಿಬ್ಬಂದಿ ಅಣಕು ಡ್ರಿಲ್‌ ಪ್ರದರ್ಶಿಸುವಾಗ ಭಯೋತ್ಪಾದಕರ ಪಾತ್ರವನ್ನು ನಿರ್ವಹಿಸುವವರನ್ನು ನಿರ್ದಿಷ್ಟ ಸಮುದಾಯಕ್ಕೆ ಸೇರಿದವರಂತೆ ತೋರಿಸುವುದಕ್ಕೆ ನಿರ್ಬಂಧಸಿ ಮುಂಬೈ ಹೈಕೋರ್ಟ್‌ನ ಔರಂಗಾಬಾದ್ ಪೀಠವು ಮಧ್ಯಂತರ ಆದೇಶ ಹೊರಡಿಸಿದೆ.

ಭದ್ರತಾ ಪಡೆಯ ದಕ್ಷತೆಯನ್ನು ಹೆಚ್ಚಿಸಲು ಮತ್ತು ಭಯೋತ್ಪಾದನಾ ದಾಳಿ ಸೇರಿದಂತೆ ತುರ್ತು ಪರಿಸ್ಥಿತಿಗಳಿಗೆ ಉತ್ತಮವಾಗಿ ಸಿದ್ಧರಾಗಲು ಜಿಲ್ಲಾ ಮಟ್ಟದಲ್ಲಿ ಪೊಲೀಸರು ಅಣಕು ಡ್ರಿಲ್‌ಗಳನ್ನು ನಡೆಸುತ್ತಾರೆ.

ಇಂತಹ ಅಣಕು ಕಸರತ್ತುಗಳು ಮುಸ್ಲಿಂ ಸಮುದಾಯದ ವಿರುದ್ಧ ಪಕ್ಷಪಾತ ಮತ್ತು ಪೂರ್ವಾಗ್ರಹವನ್ನು ತೋರಿಸುತ್ತವೆ ಮತ್ತು ಭಯೋತ್ಪಾದಕರು ನಿರ್ದಿಷ್ಟ ಧರ್ಮಕ್ಕೆ ಮಾತ್ರ ಸೇರಿದವರು ಎಂಬ ಸಂದೇಶವನ್ನು ಹೇಳುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಸಯದ್ ಉಸಾಮಾ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಯನ್ನು ಹೈಕೋರ್ಟ್ ನಡೆಸುತ್ತಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್ ಮುಸ್ಲಿಂ ಪಕ್ಷಪಾತಿಯಾಗಿದೆ: ದ್ವೇಷಭಾಷಣಕಾರ ಚವ್ಹಾಂಕೆ ಬೆಂಬಲಿಗರ ಆರೋಪ

ನ್ಯಾಯಮೂರ್ತಿಗಳಾದ ಮಂಗೇಶ್ ಪಾಟೀಲ್ ಮತ್ತು ಎ ಎಸ್ ಚಾಪಲ್ಗಾಂವ್ಕರ್ ಅವರ ವಿಭಾಗೀಯ ಪೀಠವು ಫೆಬ್ರುವರಿ 3 ರಂದು ಅಣಕು ಡ್ರಿಲ್‌ಗಳನ್ನು ನಡೆಸುವ ಮಾರ್ಗಸೂಚಿಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಸುವಂತೆ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಸೂಚಿಸಿದೆ.

”ಇಂತಹ ಅಣಕು ಕಸರತ್ತುಗಳು ಮುಸ್ಲಿಂ ಸಮುದಾಯದ ವಿರುದ್ಧ ಪಕ್ಷಪಾತ ಮತ್ತು ಪೂರ್ವಾಗ್ರಹವನ್ನು ತೋರಿಸುತ್ತವೆ. ಭಯೋತ್ಪಾದಕರು ನಿರ್ದಿಷ್ಟ ಧರ್ಮಕ್ಕೆ ಮಾತ್ರ ಸೇರಿದವರು ಎಂಬ ಸಂದೇಶವನ್ನು ಹೇಳುತ್ತದೆ” ಎಂದು ಅರ್ಜಿದಾರರು ಹೇಳಿದ್ದಾರೆ.

ಅಹಮದ್‌ನಗರ, ಚಂದ್ರಾಪುರ್ ಮತ್ತು ಔರಂಗಾಬಾದ್ ಜಿಲ್ಲೆಗಳಲ್ಲಿ ನಡೆದ ಮೂರು ಅಣಕು ಡ್ರಿಲ್‌ಗಳಲ್ಲಿ ಅಣಕು ಡ್ರಿಲ್‌ನಲ್ಲಿ ಭಯೋತ್ಪಾದಕರ ಪಾತ್ರವನ್ನು ವಹಿಸಿದ ಪೊಲೀಸರು ಮುಸ್ಲಿಂ ಸಮುದಾಯದ ಪುರುಷರಂತೆ ಬಟ್ಟೆ ಧರಿಸಿರುವುದನ್ನು ಪಿಐಎಲ್ ಅರ್ಜಿಯಲ್ಲಿ ಉಲ್ಲೇಖಿಸಿದೆ.

“ಅರ್ಜಿದಾರರು ಮೇಲ್ನೋಟಕ್ಕೆ ಮುಸ್ಲಿಂ ಆಗಿದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಈ ಸಮಸ್ಯೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಭಯೋತ್ಪಾದಕನು ಮುಸ್ಲಿಂ ಎಂದು ಸೂಚಿಸುವ ರೀತಿಯಲ್ಲಿ ಪೋಲೀಸ್ ಇಲಾಖೆಯು ಅಣಕು ಡ್ರಿಲ್‌ಗಳನ್ನು ನಡೆಸುವುದು ಮತ್ತು ಘೋಷಣೆಗಳನ್ನು ಕೂಗುವುದನ್ನು ತಪ್ಪು” ಎಂದು ನ್ಯಾಯಾಲಯ ಹೇಳಿದೆ.

ಈ ಬಗ್ಗೆ ಹೆಚ್ಚಿನ ವಿಚಾರಣೆಯನ್ನು ಫೆಬ್ರುವರಿ 10 ರಂದು ನಡೆಸುವುದಾಗಿ ಪೀಠ ಮುಂದೂಡಿದೆ. ”ಮುಂದಿನ ದಿನಾಂಕದವರೆಗೆ, ನಿರ್ದಿಷ್ಟ ಸಮುದಾಯದ ವ್ಯಕ್ತಿಗಳನ್ನು ಭಯೋತ್ಪಾದಕರು ಎಂದು ಬಿಂಬಿಸುವ ಯಾವುದೇ ಅಣಕು ಡ್ರಿಲ್ ಅನ್ನು ನಡೆಸಬಾರದು” ಎಂದು ಮಧ್ಯಂತರ ಆದೇಶವಾಗಿ ಹೇಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...