Homeಕರ್ನಾಟಕಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ: ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ; ಸಿಎಂ ಸಿದ್ದರಾಮಯ್ಯ

ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ: ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ; ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ತಮಿಳುನಾಡು ಮಾದರಿಯಲ್ಲಿ ನಿಷೇಧ ಹೇರಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ, ಅದರಲ್ಲಿ ತಪ್ಪೇನಿದೆ?. ಬೆದರಿಕೆ ಕರೆಗಳು ಬರುತ್ತಿರುವುದಾಗಿ ಅವರು ಖುದ್ದಾಗಿ ತಿಳಿಸಿದ್ದಾರೆ. ಇಂತಹ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬುಧವಾರ (ಅ.15) ಮೈಸೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ, “ತಮಿಳುನಾಡಿನಲ್ಲಿ ಆರ್‌ಎಸ್‌ಎಸ್‌ ಮೇಲೆ ಯಾವ ರೀತಿಯ ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಅದನ್ನು ಪರಿಶೀಲಿಸಲಾಗುವುದು. ಪ್ರಿಯಾಂಕ್ ಖರ್ಗೆಯವರಿಗೆ ರಕ್ಷಣೆ ಒದಗಿಸಲಾಗುವುದು ಎಂದು ತಿಳಿಸಿದರು.

ಬಿಜೆಪಿಯವರು ತಾಕತ್ತಿದ್ದರೆ ಆರ್‌ಎಸ್‌ಎಸ್ ಮೇಲೆ ನಿಷೇಧ ಹೇರಲಿ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಚುನಾವಣಾ ಸಂದರ್ಭದಲ್ಲಿಯೂ ಬಿಜೆಪಿಯವರು ತಾಕತ್ತಿದ್ದರೆ ಬನ್ನಿ ಎಂದಿದ್ದರು. ಆದರೆ, ಸೋತು ಹೋದರು ಎಂದು ಕಾಳೆಲೆದರು.

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ತಡವಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಬೆಂಗಳೂರು ನಗರ ಹೊರತು, ಬೇರೆಲ್ಲಿಯೂ ಶೇಕಡವಾರು ಪ್ರಮಾಣದಲ್ಲಿ ಕಡಿಮೆಯಾಗಿಲ್ಲ ಎಂದರು.

ಶಾಸಕರಿಗೆ ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಶ್ರೀನಿವಾಸಪುರ ಶಾಸಕ ಹೈಕೋರ್ಟ್ ಮೊರೆ ಹೋಗಿರುವ ಬಗ್ಗೆ ಮಾತನಾಡಿದ ಸಿಎಂ, ಜೆಡಿಎಸ್‌ನವರು ನಮ್ಮ ಶಾಸಕರಿಗೆ ಅನುದಾನ ನೀಡಿದ್ದರೇ? ಎಂದು ಪ್ರಶ್ನಿಸಿದರು. ರಾಜ್ಯದ ಸರ್ವತೋಮುಖ ಅಭಿವೃದ್ಧಿಯಾಗಬೇಕಿದ್ದು, ಎಲ್ಲರಿಗೂ ಅನುದಾನ ಒದಗಿಸಲಾಗುತ್ತಿದೆ ಎಂದರು.

ಆರ್‌ಎಸ್‌ಎಸ್‌ ಟೀಕಿಸಿದ್ದಕ್ಕೆ ಬೆದರಿಕೆ ಕರೆ, ಅವಾಚ್ಯ ಶಬ್ಧಗಳಿಂದ ನಿಂದನೆ: ವಿಡಿಯೋ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -