Homeಮುಖಪುಟಪಿಎಫ್‌ಐ ಥರದ ಸಂಘಟನೆಗಳನ್ನು ನಿಷೇಧಿಸಿ: ಸರ್ವಧರ್ಮ ಸಮ್ಮೇಳನದಲ್ಲಿ ಸೂಫಿ ಸಂಸ್ಥೆ ಒತ್ತಾಯ

ಪಿಎಫ್‌ಐ ಥರದ ಸಂಘಟನೆಗಳನ್ನು ನಿಷೇಧಿಸಿ: ಸರ್ವಧರ್ಮ ಸಮ್ಮೇಳನದಲ್ಲಿ ಸೂಫಿ ಸಂಸ್ಥೆ ಒತ್ತಾಯ

- Advertisement -
- Advertisement -

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಥರದ ಸಂಘಟನೆಗಳನ್ನು ನಿಷೇಧಿಸಬೇಕೆಂಬ ನಿರ್ಣಯವನ್ನು ಅಖಿಲ ಭಾರತ ಸೂಫಿ ಸಜ್ಜದನಾಶಿನ್ ಕೌನ್ಸಿಲ್ (ಎಐಎಸ್‌ಎಸ್‌ಸಿ) ಸೇರಿದಂತೆ ಧಾರ್ಮಿಕ ಮುಖಂಡರು ತಾಳಿದ್ದಾರೆ.

“ಪಿಎಫ್‌ಐ ಥರದ ಸಂಘಟನೆಗಳು ವಿಭಜಕ ಅಜೆಂಡಾ ಹೊಂದಿವೆ. ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿವೆ” ಎಂಬ ಅಭಿಪ್ರಾಯ ನವದೆಹಲಿಯಲ್ಲಿ ಶನಿವಾರ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ವ್ಯಕ್ತವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ, ವಿಭಜಕ ಕಾರ್ಯಸೂಚಿಯನ್ನು ಅನುಸರಿಸುವ, ನಮ್ಮ ನಾಗರಿಕರ ನಡುವೆ ವೈಷಮ್ಯವನ್ನು ಸೃಷ್ಟಿಸುವ ಪಿಎಫ್‌ಐ ಮತ್ತು ಅಂತಹ ಯಾವುದೇ ಸಂಘಟನೆಗಳನ್ನು ನಿಷೇಧಿಸಬೇಕು. ದೇಶದ ಕಾನೂನಿನ ಪ್ರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಎಐಎಸ್‌ಎಸ್‌ಸಿ ಅಭಿಪ್ರಾಯ ತಾಳಿದೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಯಾವುದಾದರೂ ಚರ್ಚೆಯ ವೇಳೆ ಯಾರಾದರೂ ಯಾವುದೇ ದೇವರುಗಳನ್ನು, ಪ್ರವಾದಿಗಳನ್ನು ಟಾರ್ಗೆಟ್ ಮಾಡಿ ಮಾತನಾಡಿದರೆ ಜನರು ಆ ಹೇಳಿಕೆಗಳನ್ನು ಖಂಡಿಸಬೇಕು ಎಂದು ಸೂಫಿಗಳು ಒತ್ತಾಯಿಸಿದ್ದಾರೆ.

ಎಐಎಸ್‌ಎಸ್‌ಸಿ ಮುಖ್ಯಸ್ಥ ಸೈಯದ್ ನಾಸಿರುದ್ದೀನ್ ಚಿಶ್ತಿ ಮಾತನಾಡಿ, “ಭಾರತದ ಜವಾಬ್ದಾರಿಯುತ ನಾಗರಿಕರಾಗಲು ತಮ್ಮ ಸಮುದಾಯವನ್ನು, ವಿಶೇಷವಾಗಿ ಯುವಜನರಿಗೆ ಮಾರ್ಗದರ್ಶನ ನೀಡುವ ಜವಾಬ್ದಾರಿಯನ್ನು ಎಲ್ಲಾ ಧಾರ್ಮಿಕ ಮುಖಂಡರು ಹೊಂದಿದ್ದಾರೆ ಎಂಬ ಸಂದೇಶವನ್ನು ನಾವು ನೀಡಲು ಬಯಸುತ್ತೇವೆ” ಎಂದಿದ್ದಾರೆ. (ಇಂಡಿಯಾ ಟುಡೇ ವರದಿ)

“ಧರ್ಮಗಳು ಮತ್ತು ಅವುಗಳ ಅನುಯಾಯಿಗಳ ವಿರುದ್ಧ ದ್ವೇಷವನ್ನು ಪ್ರಚೋದಿಸಲು ಸಾಮಾಜಿಕ ಮಾಧ್ಯಮಗಳನ್ನು ಬಳಸಲಾಗುತ್ತಿದೆ ಎಂಬುದನ್ನು ಗಮನಿಸಿದ್ದೇವೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಗಳನ್ನು ಕೈಗೊಂಡು ಅಹಿತಕರ ಘಟನೆಗಳ ತಡೆಗೆ ಕ್ರಮ ಕೈಗೊಳ್ಳಬೇಕು” ಎಂದು ಅವರು ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ. “ದೇಶದ ಮೇಲೆ ಪ್ರತಿಕೂಲ ಪರಿಣಾಮ ಬೀರುವ, ಅಂತರರಾಷ್ಟ್ರೀಯ ಪರಿಣಾಮಗಳನ್ನು ಉಂಟು ಮಾಡುವ, ಧರ್ಮ ಮತ್ತು ಸಿದ್ಧಾಂತದ ಹೆಸರಿನಲ್ಲಿ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿರುವ ತೀವ್ರಗಾಮಿ ಶಕ್ತಿಗಳನ್ನು ಎದುರಿಸಲು ವಿವಿಧ ಧರ್ಮಗಳ ನಾಯಕರು ಕ್ರಮ ವಹಿಸಬೇಕು” ಎಂದು ಆಶಿಸಿದರು.

“ಕೆಲವರು ಧರ್ಮದ ಹೆಸರಿನಲ್ಲಿ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಾರೆ. ಅದು ಇಡೀ ದೇಶದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಸಹ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿರಿ: ಸುರತ್ಕಲ್‌ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು

“ಈ ಘಟನೆಗಳನ್ನು ನೋಡಿ ನಾವು ಮೂಕ ಪ್ರೇಕ್ಷಕರಾಗಲು ಸಾಧ್ಯವಿಲ್ಲ. ಧಾರ್ಮಿಕ ದ್ವೇಷವನ್ನು ಎದುರಿಸಲು, ನಾವು ಒಟ್ಟಾಗಿ ಕೆಲಸ ಮಾಡಬೇಕು. ಪ್ರತಿಯೊಂದು ಧಾರ್ಮಿಕ ಸಂಸ್ಥೆಯನ್ನು ಭಾರತದ ಭಾಗವಾಗಿ ಭಾವಿಸಬೇಕು. ಇದರಲ್ಲಿ ನಾವು ಒಟ್ಟಿಗೆ ಸಾಗಬೇಕು” ಎಂದು ದೋವಲ್ ಹೇಳಿದ್ದಾರೆ. ಭಾರತದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರ ಹೇಳಿಕೆ ಹೊರಬಿದ್ದಿದೆ.

ಹೆಚ್ಚುತ್ತಿರುವ ಧಾರ್ಮಿಕ ಅಸಹಿಷ್ಣುತೆಗೆ ಸಂಬಂಧಿಸಿದಂತೆ ಗಂಭೀರವಾದ ಚರ್ಚೆಯನ್ನು ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಸೇರಿದಂತೆ ವಿವಿಧ ಧರ್ಮಗಳ ಪ್ರತಿನಿಧಿಗಳ ನಡುವೆ ನಡೆಸುವುದು ಸಮ್ಮೇಳನದ ಉದ್ದೇಶವಾಗಿದೆ ಎಂದು ಸಂಘಟಕರು ಪಿಟಿಐಗೆ ಪ್ರತಿಕ್ರಿಯಿಸಿದ್ದಾರೆ.

ಶಾಂತಿ, ಸೌಹಾರ್ದತೆಯ ಸಂದೇಶವನ್ನು ಸಾರಲು, ಮೂಲಭೂತವಾದಿ ಶಕ್ತಿಗಳ ವಿರುದ್ಧ ಹೋರಾಡಲು ಎಲ್ಲಾ ಧರ್ಮಗಳನ್ನು ಒಳಗೊಂಡಂತೆ ಹೊಸ ಸಂಸ್ಥೆಯನ್ನು ರಚಿಸುವ ನಿರ್ಣಯವನ್ನು ಸಮ್ಮೇಳನದಲ್ಲಿ ಪ್ರಸ್ತಾಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...