Homeಮುಖಪುಟಪಿಎಫ್‌ಐ ಥರದ ಸಂಘಟನೆಗಳನ್ನು ನಿಷೇಧಿಸಿ: ಸರ್ವಧರ್ಮ ಸಮ್ಮೇಳನದಲ್ಲಿ ಸೂಫಿ ಸಂಸ್ಥೆ ಒತ್ತಾಯ

ಪಿಎಫ್‌ಐ ಥರದ ಸಂಘಟನೆಗಳನ್ನು ನಿಷೇಧಿಸಿ: ಸರ್ವಧರ್ಮ ಸಮ್ಮೇಳನದಲ್ಲಿ ಸೂಫಿ ಸಂಸ್ಥೆ ಒತ್ತಾಯ

- Advertisement -
- Advertisement -

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಥರದ ಸಂಘಟನೆಗಳನ್ನು ನಿಷೇಧಿಸಬೇಕೆಂಬ ನಿರ್ಣಯವನ್ನು ಅಖಿಲ ಭಾರತ ಸೂಫಿ ಸಜ್ಜದನಾಶಿನ್ ಕೌನ್ಸಿಲ್ (ಎಐಎಸ್‌ಎಸ್‌ಸಿ) ಸೇರಿದಂತೆ ಧಾರ್ಮಿಕ ಮುಖಂಡರು ತಾಳಿದ್ದಾರೆ.

“ಪಿಎಫ್‌ಐ ಥರದ ಸಂಘಟನೆಗಳು ವಿಭಜಕ ಅಜೆಂಡಾ ಹೊಂದಿವೆ. ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿವೆ” ಎಂಬ ಅಭಿಪ್ರಾಯ ನವದೆಹಲಿಯಲ್ಲಿ ಶನಿವಾರ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ವ್ಯಕ್ತವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ, ವಿಭಜಕ ಕಾರ್ಯಸೂಚಿಯನ್ನು ಅನುಸರಿಸುವ, ನಮ್ಮ ನಾಗರಿಕರ ನಡುವೆ ವೈಷಮ್ಯವನ್ನು ಸೃಷ್ಟಿಸುವ ಪಿಎಫ್‌ಐ ಮತ್ತು ಅಂತಹ ಯಾವುದೇ ಸಂಘಟನೆಗಳನ್ನು ನಿಷೇಧಿಸಬೇಕು. ದೇಶದ ಕಾನೂನಿನ ಪ್ರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಎಐಎಸ್‌ಎಸ್‌ಸಿ ಅಭಿಪ್ರಾಯ ತಾಳಿದೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಯಾವುದಾದರೂ ಚರ್ಚೆಯ ವೇಳೆ ಯಾರಾದರೂ ಯಾವುದೇ ದೇವರುಗಳನ್ನು, ಪ್ರವಾದಿಗಳನ್ನು ಟಾರ್ಗೆಟ್ ಮಾಡಿ ಮಾತನಾಡಿದರೆ ಜನರು ಆ ಹೇಳಿಕೆಗಳನ್ನು ಖಂಡಿಸಬೇಕು ಎಂದು ಸೂಫಿಗಳು ಒತ್ತಾಯಿಸಿದ್ದಾರೆ.

ಎಐಎಸ್‌ಎಸ್‌ಸಿ ಮುಖ್ಯಸ್ಥ ಸೈಯದ್ ನಾಸಿರುದ್ದೀನ್ ಚಿಶ್ತಿ ಮಾತನಾಡಿ, “ಭಾರತದ ಜವಾಬ್ದಾರಿಯುತ ನಾಗರಿಕರಾಗಲು ತಮ್ಮ ಸಮುದಾಯವನ್ನು, ವಿಶೇಷವಾಗಿ ಯುವಜನರಿಗೆ ಮಾರ್ಗದರ್ಶನ ನೀಡುವ ಜವಾಬ್ದಾರಿಯನ್ನು ಎಲ್ಲಾ ಧಾರ್ಮಿಕ ಮುಖಂಡರು ಹೊಂದಿದ್ದಾರೆ ಎಂಬ ಸಂದೇಶವನ್ನು ನಾವು ನೀಡಲು ಬಯಸುತ್ತೇವೆ” ಎಂದಿದ್ದಾರೆ. (ಇಂಡಿಯಾ ಟುಡೇ ವರದಿ)

“ಧರ್ಮಗಳು ಮತ್ತು ಅವುಗಳ ಅನುಯಾಯಿಗಳ ವಿರುದ್ಧ ದ್ವೇಷವನ್ನು ಪ್ರಚೋದಿಸಲು ಸಾಮಾಜಿಕ ಮಾಧ್ಯಮಗಳನ್ನು ಬಳಸಲಾಗುತ್ತಿದೆ ಎಂಬುದನ್ನು ಗಮನಿಸಿದ್ದೇವೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಗಳನ್ನು ಕೈಗೊಂಡು ಅಹಿತಕರ ಘಟನೆಗಳ ತಡೆಗೆ ಕ್ರಮ ಕೈಗೊಳ್ಳಬೇಕು” ಎಂದು ಅವರು ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ. “ದೇಶದ ಮೇಲೆ ಪ್ರತಿಕೂಲ ಪರಿಣಾಮ ಬೀರುವ, ಅಂತರರಾಷ್ಟ್ರೀಯ ಪರಿಣಾಮಗಳನ್ನು ಉಂಟು ಮಾಡುವ, ಧರ್ಮ ಮತ್ತು ಸಿದ್ಧಾಂತದ ಹೆಸರಿನಲ್ಲಿ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿರುವ ತೀವ್ರಗಾಮಿ ಶಕ್ತಿಗಳನ್ನು ಎದುರಿಸಲು ವಿವಿಧ ಧರ್ಮಗಳ ನಾಯಕರು ಕ್ರಮ ವಹಿಸಬೇಕು” ಎಂದು ಆಶಿಸಿದರು.

“ಕೆಲವರು ಧರ್ಮದ ಹೆಸರಿನಲ್ಲಿ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಾರೆ. ಅದು ಇಡೀ ದೇಶದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಸಹ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿರಿ: ಸುರತ್ಕಲ್‌ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು

“ಈ ಘಟನೆಗಳನ್ನು ನೋಡಿ ನಾವು ಮೂಕ ಪ್ರೇಕ್ಷಕರಾಗಲು ಸಾಧ್ಯವಿಲ್ಲ. ಧಾರ್ಮಿಕ ದ್ವೇಷವನ್ನು ಎದುರಿಸಲು, ನಾವು ಒಟ್ಟಾಗಿ ಕೆಲಸ ಮಾಡಬೇಕು. ಪ್ರತಿಯೊಂದು ಧಾರ್ಮಿಕ ಸಂಸ್ಥೆಯನ್ನು ಭಾರತದ ಭಾಗವಾಗಿ ಭಾವಿಸಬೇಕು. ಇದರಲ್ಲಿ ನಾವು ಒಟ್ಟಿಗೆ ಸಾಗಬೇಕು” ಎಂದು ದೋವಲ್ ಹೇಳಿದ್ದಾರೆ. ಭಾರತದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರ ಹೇಳಿಕೆ ಹೊರಬಿದ್ದಿದೆ.

ಹೆಚ್ಚುತ್ತಿರುವ ಧಾರ್ಮಿಕ ಅಸಹಿಷ್ಣುತೆಗೆ ಸಂಬಂಧಿಸಿದಂತೆ ಗಂಭೀರವಾದ ಚರ್ಚೆಯನ್ನು ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಸೇರಿದಂತೆ ವಿವಿಧ ಧರ್ಮಗಳ ಪ್ರತಿನಿಧಿಗಳ ನಡುವೆ ನಡೆಸುವುದು ಸಮ್ಮೇಳನದ ಉದ್ದೇಶವಾಗಿದೆ ಎಂದು ಸಂಘಟಕರು ಪಿಟಿಐಗೆ ಪ್ರತಿಕ್ರಿಯಿಸಿದ್ದಾರೆ.

ಶಾಂತಿ, ಸೌಹಾರ್ದತೆಯ ಸಂದೇಶವನ್ನು ಸಾರಲು, ಮೂಲಭೂತವಾದಿ ಶಕ್ತಿಗಳ ವಿರುದ್ಧ ಹೋರಾಡಲು ಎಲ್ಲಾ ಧರ್ಮಗಳನ್ನು ಒಳಗೊಂಡಂತೆ ಹೊಸ ಸಂಸ್ಥೆಯನ್ನು ರಚಿಸುವ ನಿರ್ಣಯವನ್ನು ಸಮ್ಮೇಳನದಲ್ಲಿ ಪ್ರಸ್ತಾಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...