Homeಮುಖಪುಟಪಿಎಫ್‌ಐ ಥರದ ಸಂಘಟನೆಗಳನ್ನು ನಿಷೇಧಿಸಿ: ಸರ್ವಧರ್ಮ ಸಮ್ಮೇಳನದಲ್ಲಿ ಸೂಫಿ ಸಂಸ್ಥೆ ಒತ್ತಾಯ

ಪಿಎಫ್‌ಐ ಥರದ ಸಂಘಟನೆಗಳನ್ನು ನಿಷೇಧಿಸಿ: ಸರ್ವಧರ್ಮ ಸಮ್ಮೇಳನದಲ್ಲಿ ಸೂಫಿ ಸಂಸ್ಥೆ ಒತ್ತಾಯ

- Advertisement -
- Advertisement -

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಥರದ ಸಂಘಟನೆಗಳನ್ನು ನಿಷೇಧಿಸಬೇಕೆಂಬ ನಿರ್ಣಯವನ್ನು ಅಖಿಲ ಭಾರತ ಸೂಫಿ ಸಜ್ಜದನಾಶಿನ್ ಕೌನ್ಸಿಲ್ (ಎಐಎಸ್‌ಎಸ್‌ಸಿ) ಸೇರಿದಂತೆ ಧಾರ್ಮಿಕ ಮುಖಂಡರು ತಾಳಿದ್ದಾರೆ.

“ಪಿಎಫ್‌ಐ ಥರದ ಸಂಘಟನೆಗಳು ವಿಭಜಕ ಅಜೆಂಡಾ ಹೊಂದಿವೆ. ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿವೆ” ಎಂಬ ಅಭಿಪ್ರಾಯ ನವದೆಹಲಿಯಲ್ಲಿ ಶನಿವಾರ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ವ್ಯಕ್ತವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ, ವಿಭಜಕ ಕಾರ್ಯಸೂಚಿಯನ್ನು ಅನುಸರಿಸುವ, ನಮ್ಮ ನಾಗರಿಕರ ನಡುವೆ ವೈಷಮ್ಯವನ್ನು ಸೃಷ್ಟಿಸುವ ಪಿಎಫ್‌ಐ ಮತ್ತು ಅಂತಹ ಯಾವುದೇ ಸಂಘಟನೆಗಳನ್ನು ನಿಷೇಧಿಸಬೇಕು. ದೇಶದ ಕಾನೂನಿನ ಪ್ರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಎಐಎಸ್‌ಎಸ್‌ಸಿ ಅಭಿಪ್ರಾಯ ತಾಳಿದೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಯಾವುದಾದರೂ ಚರ್ಚೆಯ ವೇಳೆ ಯಾರಾದರೂ ಯಾವುದೇ ದೇವರುಗಳನ್ನು, ಪ್ರವಾದಿಗಳನ್ನು ಟಾರ್ಗೆಟ್ ಮಾಡಿ ಮಾತನಾಡಿದರೆ ಜನರು ಆ ಹೇಳಿಕೆಗಳನ್ನು ಖಂಡಿಸಬೇಕು ಎಂದು ಸೂಫಿಗಳು ಒತ್ತಾಯಿಸಿದ್ದಾರೆ.

ಎಐಎಸ್‌ಎಸ್‌ಸಿ ಮುಖ್ಯಸ್ಥ ಸೈಯದ್ ನಾಸಿರುದ್ದೀನ್ ಚಿಶ್ತಿ ಮಾತನಾಡಿ, “ಭಾರತದ ಜವಾಬ್ದಾರಿಯುತ ನಾಗರಿಕರಾಗಲು ತಮ್ಮ ಸಮುದಾಯವನ್ನು, ವಿಶೇಷವಾಗಿ ಯುವಜನರಿಗೆ ಮಾರ್ಗದರ್ಶನ ನೀಡುವ ಜವಾಬ್ದಾರಿಯನ್ನು ಎಲ್ಲಾ ಧಾರ್ಮಿಕ ಮುಖಂಡರು ಹೊಂದಿದ್ದಾರೆ ಎಂಬ ಸಂದೇಶವನ್ನು ನಾವು ನೀಡಲು ಬಯಸುತ್ತೇವೆ” ಎಂದಿದ್ದಾರೆ. (ಇಂಡಿಯಾ ಟುಡೇ ವರದಿ)

“ಧರ್ಮಗಳು ಮತ್ತು ಅವುಗಳ ಅನುಯಾಯಿಗಳ ವಿರುದ್ಧ ದ್ವೇಷವನ್ನು ಪ್ರಚೋದಿಸಲು ಸಾಮಾಜಿಕ ಮಾಧ್ಯಮಗಳನ್ನು ಬಳಸಲಾಗುತ್ತಿದೆ ಎಂಬುದನ್ನು ಗಮನಿಸಿದ್ದೇವೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಗಳನ್ನು ಕೈಗೊಂಡು ಅಹಿತಕರ ಘಟನೆಗಳ ತಡೆಗೆ ಕ್ರಮ ಕೈಗೊಳ್ಳಬೇಕು” ಎಂದು ಅವರು ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ. “ದೇಶದ ಮೇಲೆ ಪ್ರತಿಕೂಲ ಪರಿಣಾಮ ಬೀರುವ, ಅಂತರರಾಷ್ಟ್ರೀಯ ಪರಿಣಾಮಗಳನ್ನು ಉಂಟು ಮಾಡುವ, ಧರ್ಮ ಮತ್ತು ಸಿದ್ಧಾಂತದ ಹೆಸರಿನಲ್ಲಿ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿರುವ ತೀವ್ರಗಾಮಿ ಶಕ್ತಿಗಳನ್ನು ಎದುರಿಸಲು ವಿವಿಧ ಧರ್ಮಗಳ ನಾಯಕರು ಕ್ರಮ ವಹಿಸಬೇಕು” ಎಂದು ಆಶಿಸಿದರು.

“ಕೆಲವರು ಧರ್ಮದ ಹೆಸರಿನಲ್ಲಿ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಾರೆ. ಅದು ಇಡೀ ದೇಶದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಸಹ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿರಿ: ಸುರತ್ಕಲ್‌ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು

“ಈ ಘಟನೆಗಳನ್ನು ನೋಡಿ ನಾವು ಮೂಕ ಪ್ರೇಕ್ಷಕರಾಗಲು ಸಾಧ್ಯವಿಲ್ಲ. ಧಾರ್ಮಿಕ ದ್ವೇಷವನ್ನು ಎದುರಿಸಲು, ನಾವು ಒಟ್ಟಾಗಿ ಕೆಲಸ ಮಾಡಬೇಕು. ಪ್ರತಿಯೊಂದು ಧಾರ್ಮಿಕ ಸಂಸ್ಥೆಯನ್ನು ಭಾರತದ ಭಾಗವಾಗಿ ಭಾವಿಸಬೇಕು. ಇದರಲ್ಲಿ ನಾವು ಒಟ್ಟಿಗೆ ಸಾಗಬೇಕು” ಎಂದು ದೋವಲ್ ಹೇಳಿದ್ದಾರೆ. ಭಾರತದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರ ಹೇಳಿಕೆ ಹೊರಬಿದ್ದಿದೆ.

ಹೆಚ್ಚುತ್ತಿರುವ ಧಾರ್ಮಿಕ ಅಸಹಿಷ್ಣುತೆಗೆ ಸಂಬಂಧಿಸಿದಂತೆ ಗಂಭೀರವಾದ ಚರ್ಚೆಯನ್ನು ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಸೇರಿದಂತೆ ವಿವಿಧ ಧರ್ಮಗಳ ಪ್ರತಿನಿಧಿಗಳ ನಡುವೆ ನಡೆಸುವುದು ಸಮ್ಮೇಳನದ ಉದ್ದೇಶವಾಗಿದೆ ಎಂದು ಸಂಘಟಕರು ಪಿಟಿಐಗೆ ಪ್ರತಿಕ್ರಿಯಿಸಿದ್ದಾರೆ.

ಶಾಂತಿ, ಸೌಹಾರ್ದತೆಯ ಸಂದೇಶವನ್ನು ಸಾರಲು, ಮೂಲಭೂತವಾದಿ ಶಕ್ತಿಗಳ ವಿರುದ್ಧ ಹೋರಾಡಲು ಎಲ್ಲಾ ಧರ್ಮಗಳನ್ನು ಒಳಗೊಂಡಂತೆ ಹೊಸ ಸಂಸ್ಥೆಯನ್ನು ರಚಿಸುವ ನಿರ್ಣಯವನ್ನು ಸಮ್ಮೇಳನದಲ್ಲಿ ಪ್ರಸ್ತಾಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...