Homeಮುಖಪುಟಪಿಎಫ್‌ಐ ಥರದ ಸಂಘಟನೆಗಳನ್ನು ನಿಷೇಧಿಸಿ: ಸರ್ವಧರ್ಮ ಸಮ್ಮೇಳನದಲ್ಲಿ ಸೂಫಿ ಸಂಸ್ಥೆ ಒತ್ತಾಯ

ಪಿಎಫ್‌ಐ ಥರದ ಸಂಘಟನೆಗಳನ್ನು ನಿಷೇಧಿಸಿ: ಸರ್ವಧರ್ಮ ಸಮ್ಮೇಳನದಲ್ಲಿ ಸೂಫಿ ಸಂಸ್ಥೆ ಒತ್ತಾಯ

- Advertisement -
- Advertisement -

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಥರದ ಸಂಘಟನೆಗಳನ್ನು ನಿಷೇಧಿಸಬೇಕೆಂಬ ನಿರ್ಣಯವನ್ನು ಅಖಿಲ ಭಾರತ ಸೂಫಿ ಸಜ್ಜದನಾಶಿನ್ ಕೌನ್ಸಿಲ್ (ಎಐಎಸ್‌ಎಸ್‌ಸಿ) ಸೇರಿದಂತೆ ಧಾರ್ಮಿಕ ಮುಖಂಡರು ತಾಳಿದ್ದಾರೆ.

“ಪಿಎಫ್‌ಐ ಥರದ ಸಂಘಟನೆಗಳು ವಿಭಜಕ ಅಜೆಂಡಾ ಹೊಂದಿವೆ. ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿವೆ” ಎಂಬ ಅಭಿಪ್ರಾಯ ನವದೆಹಲಿಯಲ್ಲಿ ಶನಿವಾರ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ವ್ಯಕ್ತವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ, ವಿಭಜಕ ಕಾರ್ಯಸೂಚಿಯನ್ನು ಅನುಸರಿಸುವ, ನಮ್ಮ ನಾಗರಿಕರ ನಡುವೆ ವೈಷಮ್ಯವನ್ನು ಸೃಷ್ಟಿಸುವ ಪಿಎಫ್‌ಐ ಮತ್ತು ಅಂತಹ ಯಾವುದೇ ಸಂಘಟನೆಗಳನ್ನು ನಿಷೇಧಿಸಬೇಕು. ದೇಶದ ಕಾನೂನಿನ ಪ್ರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಎಐಎಸ್‌ಎಸ್‌ಸಿ ಅಭಿಪ್ರಾಯ ತಾಳಿದೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಯಾವುದಾದರೂ ಚರ್ಚೆಯ ವೇಳೆ ಯಾರಾದರೂ ಯಾವುದೇ ದೇವರುಗಳನ್ನು, ಪ್ರವಾದಿಗಳನ್ನು ಟಾರ್ಗೆಟ್ ಮಾಡಿ ಮಾತನಾಡಿದರೆ ಜನರು ಆ ಹೇಳಿಕೆಗಳನ್ನು ಖಂಡಿಸಬೇಕು ಎಂದು ಸೂಫಿಗಳು ಒತ್ತಾಯಿಸಿದ್ದಾರೆ.

ಎಐಎಸ್‌ಎಸ್‌ಸಿ ಮುಖ್ಯಸ್ಥ ಸೈಯದ್ ನಾಸಿರುದ್ದೀನ್ ಚಿಶ್ತಿ ಮಾತನಾಡಿ, “ಭಾರತದ ಜವಾಬ್ದಾರಿಯುತ ನಾಗರಿಕರಾಗಲು ತಮ್ಮ ಸಮುದಾಯವನ್ನು, ವಿಶೇಷವಾಗಿ ಯುವಜನರಿಗೆ ಮಾರ್ಗದರ್ಶನ ನೀಡುವ ಜವಾಬ್ದಾರಿಯನ್ನು ಎಲ್ಲಾ ಧಾರ್ಮಿಕ ಮುಖಂಡರು ಹೊಂದಿದ್ದಾರೆ ಎಂಬ ಸಂದೇಶವನ್ನು ನಾವು ನೀಡಲು ಬಯಸುತ್ತೇವೆ” ಎಂದಿದ್ದಾರೆ. (ಇಂಡಿಯಾ ಟುಡೇ ವರದಿ)

“ಧರ್ಮಗಳು ಮತ್ತು ಅವುಗಳ ಅನುಯಾಯಿಗಳ ವಿರುದ್ಧ ದ್ವೇಷವನ್ನು ಪ್ರಚೋದಿಸಲು ಸಾಮಾಜಿಕ ಮಾಧ್ಯಮಗಳನ್ನು ಬಳಸಲಾಗುತ್ತಿದೆ ಎಂಬುದನ್ನು ಗಮನಿಸಿದ್ದೇವೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಗಳನ್ನು ಕೈಗೊಂಡು ಅಹಿತಕರ ಘಟನೆಗಳ ತಡೆಗೆ ಕ್ರಮ ಕೈಗೊಳ್ಳಬೇಕು” ಎಂದು ಅವರು ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ. “ದೇಶದ ಮೇಲೆ ಪ್ರತಿಕೂಲ ಪರಿಣಾಮ ಬೀರುವ, ಅಂತರರಾಷ್ಟ್ರೀಯ ಪರಿಣಾಮಗಳನ್ನು ಉಂಟು ಮಾಡುವ, ಧರ್ಮ ಮತ್ತು ಸಿದ್ಧಾಂತದ ಹೆಸರಿನಲ್ಲಿ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿರುವ ತೀವ್ರಗಾಮಿ ಶಕ್ತಿಗಳನ್ನು ಎದುರಿಸಲು ವಿವಿಧ ಧರ್ಮಗಳ ನಾಯಕರು ಕ್ರಮ ವಹಿಸಬೇಕು” ಎಂದು ಆಶಿಸಿದರು.

“ಕೆಲವರು ಧರ್ಮದ ಹೆಸರಿನಲ್ಲಿ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಾರೆ. ಅದು ಇಡೀ ದೇಶದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಸಹ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿರಿ: ಸುರತ್ಕಲ್‌ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು

“ಈ ಘಟನೆಗಳನ್ನು ನೋಡಿ ನಾವು ಮೂಕ ಪ್ರೇಕ್ಷಕರಾಗಲು ಸಾಧ್ಯವಿಲ್ಲ. ಧಾರ್ಮಿಕ ದ್ವೇಷವನ್ನು ಎದುರಿಸಲು, ನಾವು ಒಟ್ಟಾಗಿ ಕೆಲಸ ಮಾಡಬೇಕು. ಪ್ರತಿಯೊಂದು ಧಾರ್ಮಿಕ ಸಂಸ್ಥೆಯನ್ನು ಭಾರತದ ಭಾಗವಾಗಿ ಭಾವಿಸಬೇಕು. ಇದರಲ್ಲಿ ನಾವು ಒಟ್ಟಿಗೆ ಸಾಗಬೇಕು” ಎಂದು ದೋವಲ್ ಹೇಳಿದ್ದಾರೆ. ಭಾರತದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರ ಹೇಳಿಕೆ ಹೊರಬಿದ್ದಿದೆ.

ಹೆಚ್ಚುತ್ತಿರುವ ಧಾರ್ಮಿಕ ಅಸಹಿಷ್ಣುತೆಗೆ ಸಂಬಂಧಿಸಿದಂತೆ ಗಂಭೀರವಾದ ಚರ್ಚೆಯನ್ನು ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಸೇರಿದಂತೆ ವಿವಿಧ ಧರ್ಮಗಳ ಪ್ರತಿನಿಧಿಗಳ ನಡುವೆ ನಡೆಸುವುದು ಸಮ್ಮೇಳನದ ಉದ್ದೇಶವಾಗಿದೆ ಎಂದು ಸಂಘಟಕರು ಪಿಟಿಐಗೆ ಪ್ರತಿಕ್ರಿಯಿಸಿದ್ದಾರೆ.

ಶಾಂತಿ, ಸೌಹಾರ್ದತೆಯ ಸಂದೇಶವನ್ನು ಸಾರಲು, ಮೂಲಭೂತವಾದಿ ಶಕ್ತಿಗಳ ವಿರುದ್ಧ ಹೋರಾಡಲು ಎಲ್ಲಾ ಧರ್ಮಗಳನ್ನು ಒಳಗೊಂಡಂತೆ ಹೊಸ ಸಂಸ್ಥೆಯನ್ನು ರಚಿಸುವ ನಿರ್ಣಯವನ್ನು ಸಮ್ಮೇಳನದಲ್ಲಿ ಪ್ರಸ್ತಾಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...