Homeಮುಖಪುಟನಾವು ಮಕ್ಕಳು, ಮುಂದಿನ ಪ್ರಜೆಗಳು. ನಮಗೊಂದಿಷ್ಟು ಭೂಮಿ ಉಳಿಸಿ

ನಾವು ಮಕ್ಕಳು, ಮುಂದಿನ ಪ್ರಜೆಗಳು. ನಮಗೊಂದಿಷ್ಟು ಭೂಮಿ ಉಳಿಸಿ

- Advertisement -
- Advertisement -
ನಮ್ಮ ನಾಳೆಗಳಿಗೆ ನೀವು ಪ್ಲಾಸ್ಟಿಕ್ ಕೊಳೆಯನ್ನು ನೀಡಬೇಡಿ. ನಾಳೆಗಳು ನಮ್ಮದು. ನಮ್ಮ ನಾಳೆಗೆ ಸುಂದರ ಪರಿಸರವನ್ನು ಉಳಿಸಿಕೊಡಲು ಕೈಜೋಡಿಸಿ. ಅದಕ್ಕಾಗಿ ನಿಮ್ಮ ಕಸವನ್ನು ನೀವು ವಾಪಾಸು ಪಡೆಯಿರಿ. ಪಡೆದು ಅದನ್ನು ಪುನರ್ಬಳಕೆ ಮಾಡಿ. ಹೊಸ ಪ್ಲಾಸ್ಟಿಕ್ ಉತ್ಪಾದನೆಯನ್ನು ನಿಲ್ಲಿಸುವ ಯೋಜನೆಯನ್ನು ರೂಪಿಸಿಕೊಳ್ಳಿ, ಎಂದು ದೇಶದಲ್ಲಿ ಮಕ್ಕಳ ತಿಂಡಿಗಳನ್ನು ಉತ್ಪಾದಿಸುವ ಇಪ್ಪತ್ತಕ್ಕೂ ಹೆಚ್ಚು ಪ್ರಖ್ಯಾತ ಕಂಪೆನಿಗಳಿಗೆ ಪತ್ರಕಳಿಸಿ ಆಗ್ರಹಿಸುವ ವಿನೂತನ ಅಭಿಯಾನವನ್ನು ಹೆಗ್ಗಡಹಳ್ಳಿಯ ಮಕ್ಕಳು ಆರಂಭಿಸಲಿದ್ದಾರೆ.
ಪಠ್ಯೇತರ ಮತ್ತು ಸಮಾಜಮುಖಿ ಚಟುವಟಿಕೆಗಳಲ್ಲಿ ಸದಾ ಮುಂದಿರುವ ಹೆಗ್ಗಡಹಳ್ಳಿ ಶಾಲೆಯ ಮಕ್ಕಳು ಕೇವಲ ಜಾಣರಷ್ಟೇ ಅಲ್ಲ ಸಮಾಜಕ್ಕ ತುಡಿಯುವ ಸೂಕ್ಷ್ಮಜೀವಿಗಳು ಹೌದು. ಶಾಲೆಯಲ್ಲಿ ಅತ್ಯುತ್ತಮವಾಗಿ ಓದುವುದಲ್ಲದೇ ಸದಾ ಒಂದಿಲ್ಲೊಂದು ವಿಭಿನ್ನ ಚಟುವಟಿಕೆ ನಡೆಸುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ. ಪ್ರತಿ ವರ್ಷವೂ ಪ್ರತಿಭಾ ಕಾರಂಜಿ ಹೆಸರಿನಲ್ಲಿ ನಡೆಯುವ ಅಂತರ್‍ಶಾಲಾ ಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಈ ಶಾಲೆಗೆ ಕಡ್ಡಾಯವಾಗಿ ಬಹುಮಾನಗಳ ಸುರಿಮಳೆಯಾಗುತ್ತದೆ. ರಾಜ್ಯ ಮಟ್ಟದವರೆಗೂ ವಿದ್ಯಾರ್ಥಿಗಳು ಹೋಗಿ ಬಹುಮಾನ ಗೆದ್ದು ತಂದಿದ್ದಾರೆ.
ಪ್ರತಿ ತಿಂಗಳು ಮಕ್ಕಳು ‘ಅರಳೀಮರ’ ಹೆಸರಿನಲ್ಲಿ ಮಾಸಿಕ ಪತ್ರಿಕೆಯನ್ನು ಹೊರತರುತ್ತಿದ್ದಾರೆ. ಈಗಾಗಲೇ 15 ಬಣ್ಣ ಬಣ್ಣದ ಕೈಬರದ ಮಕ್ಕಳ ಸಂಚಿಕೆಗಳು ಹಲವರ ಕೈಸೇರಿ ಮೆಚ್ಚಿಗೆ ಗಳಿಸಿವೆ. ಚಿತ್ರಗಳು, ಕಥೆ ಕವನಗಳ ಮೂಲಕ ಮಕ್ಕಳು ತಮ್ಮ ಅಭಿವ್ಯಕ್ತಿಯನ್ನು ಸಸಕ್ತವಾಗಿ ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷವೂ ನಾಲ್ಕೈದು ಅತ್ಯುತ್ತಮ ನಾಟಕಗಳನ್ನು ಕಲಿತು ಮಕ್ಕಳು ಮನೋಜ್ಞವಾಗಿ ಅಭಿನಯಿಸಿದ್ದಾರೆ. ಹಲವು ನಾಟಕೋತ್ಸವಗಳಲ್ಲಿ ಭಾಗವಹಿಸಿ ತಮ್ಮ ನಾಟಕದ ಹುಚ್ಚನ್ನು ಜನರಿಗೂ ದಾಟಿಸಿದ್ದಾರೆ.
ಈ ರೀತಿ ಈ ಶಾಲೆಯ ಮಕ್ಕಳ ಬಗ್ಗೆ ಪುಟಗಟ್ಟಲೇ ಬರೆಯುತ್ತಲೇ ಹೋಗಬಹುದು. ಮಕ್ಕಳು ಇಷ್ಟೆಲ್ಲಾ ಗಮನಾರ್ಹವಾದ ಸಾಧನೆ ಮಾಡಲು ಕಾರಣವೆನೆಂದರೆ ಅವರೊಳಗಿನ ಪ್ರತಿಭೆಯ ಅಭಿವ್ಯಕ್ತಿಗೆ ವಾಹಕವಾಗಿ ಕೆಲಸ ಮಾಡುತ್ತಿರುವ ಅವರ ಉತ್ಸಾಹಿ ಮೇಷ್ಟ್ರು ಸಂತೋಷ್ ಗುಡ್ಡಿಯಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಗುಡ್ಡಿಯಂಗಡಿ ಗ್ರಾಮದ ಇವರು ಸಾಮಾಜಿಕ ಚಳವಳಿಗಳಲ್ಲಿ ತೊಡಗಿಕೊಂಡ ಪರಿಣಾಮ ಅಗಾಧ ಅನುಭವಗಳನ್ನು ಪಡೆದವರು. ನಂತರ ರಂಗಡಿಪ್ಲೋಮೊ ಕೋರ್ಸ್ ಮುಗಿಸಿ ನಾಟಕ ಕಲಿಸುತ್ತಿದ್ದರು. ಸರ್ಕಾರ ಒಮ್ಮೆ ಹೈಸ್ಕೂಲ್‍ಗಳಿಗೆ 46 ನಾಟಕದ ಮೇಷ್ಟ್ರುಗಳನ್ನು ಆಯ್ಕೆ ಮಾಡಿಕೊಂಡಾಗ ಇವರು ಸಹ ಆಯ್ಕೆಯಾದರು.
ಅಲ್ಲಿಂದ ಅವರು ತಾನು ಕಲಿತ ವಿದ್ಯೆ ಮತ್ತು ಸಾಮಾಜಿಕ ಚಳವಳಿ ಕೊಟ್ಟಿದ್ದ ಅನುಭವಗಳನ್ನು ಮಕ್ಕಳಿಗೆ ಧಾರೆ ಎರೆಯಲು ಆರಂಭಿಸಿದರು. ಮೊದಲು ನಂಜನಗೂಡು ತಾಲ್ಲೂಕಿನ ಹೆಮ್ಮರಗಾಲ ಶಾಲೆಯಲ್ಲಿದ್ದಾಗ ಅಲ್ಲಿನ ಮಕ್ಕಳೊಡನೆ ಬೆರೆಸು ಕಲಿಸುತ್ತಾ, ತಾನು ಕಲಿಸುತ್ತಾ ಮಕ್ಕಳನ್ನು ಇನ್ನೊಂದು ಪ್ರಪಂಚಕ್ಕೆ ಕರೆದುಕೊಂಡು ಹೋದರು. ಆ ಸಂದರ್ಭದಲ್ಲಿ ‘ಹೆಮ್ಮರ’ ಹೆಸರಿನ ಮಕ್ಕಳ ಮಾಸಿಕ ಪತ್ರಿಕೆಯನ್ನು ಆರಂಭಿಸಿ ಮಕ್ಕಳು ಬರೆಯಲು ಪ್ರೋತ್ಸಾಹ ನೀಡಿದರು. ಮಕ್ಕಳ ಬರಹಕ್ಕೆ ತಮ್ಮ ಕೈಬರಹ ಮತ್ತು ಚೆಂದದ ಚಿತ್ರ ಸೇರಿಸಿ ಎಲ್ಲರ ಗಮನ ಸೆಳಯುವಂತೆ ಮಾಡಿದರು. ನಾಟಕಗಳನ್ನು ಕಲಿಸಿ ರಂಗಭೂಮಿಯ ಮಹತ್ವವನ್ನು ವಿದ್ಯಾರ್ಥಿಗಳಲ್ಲಿ ಬಿತ್ತಿದರು.
ಆಟ-ಪಾಠ ನಾಟಕದ ಜೊತೆಗೆ ತಾನಿರುವ ಸಮಾಜ – ಪರಿಸರವನ್ನು ಮಕ್ಕಳು ಅಧ್ಯಯನ ಮಾಡಬೇಕು, ಅದರೊಡನೆ ತಾದ್ಯಾತ್ಮ ಸಾಧಿಸಿ ಅದಕ್ಕೆ ಪ್ರತಿಕ್ರಿಯಿಸಬೇಕೆನ್ನುವುದು ಅವರ ಆಶಯ. ಅವರ ಕನಸನ್ನು ಮಕ್ಕಳು ಬಹುಬೇಗ ನನಸು ಮಾಡಿದರು. ತಾವು ಮಾಡುವ ಪ್ರತಿ ಕೆಲಸದಲ್ಲಿ ಹೊಸತು ಸೃಜನಶೀಲತೆಯನ್ನು ಮಕ್ಕಳು ಕಲಿತರು. ಸಮಾಜಕ್ಕೆ ಪೂರಕವಾಗಿ ಪ್ರತಿಸ್ಪಂದಿಸಿದರು. ಈ ಕುರಿತು ಹಲವಾರು ಲೇಖನಗಳು ಪತ್ರಿಕೆಗಳಲ್ಲಿ ಬಂದವು.

ಅಲ್ಲಿಂದ ಹೆಗ್ಗಡಹಳ್ಳಿ ಶಾಲೆಗೆ ವರ್ಗಾವಣೆಯಾದ ಸಂತೋಷ ಗುಡ್ಡಿಯಂಗಡಿಯವರು ಇಲ್ಲಿಯೂ ತಮ್ಮ ಕಾಯಕವನ್ನು ಮುಂದುವರೆಸಿದರು. ಇಲ್ಲಿಯ ಮಕ್ಕಳು ಸಹ ಅಷ್ಟೇ ಉತ್ಸಾಹದಿಂದ ಪ್ರತಿಕ್ರಿಯಿಸಿದರು. ಮಕ್ಕಳು ಎಲ್ಲಾ ಹೊಸತನದ ಪ್ರಯೋಗಗಳಿಗೆ ಸಿದ್ದರಾಗಿರುತ್ತಾರೆ, ಪ್ರತಿ ಮಕ್ಕಳಲ್ಲಿಯೂ ಒಂದಲ್ಲೊಂದು ಪ್ರತಿಭೆ ಅಡಗಿರುತ್ತದೆ, ಅದನ್ನು ಹೊರತೆಗೆಯಲು ಸಣ್ಣ ಸಹಾಯ ಬೇಕಾಗುತ್ತದೆ. ಅಂತಹ ಸಹಾಯ ಪೋಷಕರಿಂದಲೋ, ಅಥವಾ ಶಿಕ್ಷಕರಿಂದಲೋ ಸಿಕ್ಕಿದರೆ ಆ ಮಕ್ಕಳು ಮಹತ್ವದ್ದನ್ನು ಸಾಧಿಸುತ್ತಾರೆ ಎಂಬುದಕ್ಕೆ ಹೆಮ್ಮರಗಾಲ ಮತ್ತು ಹೆಗ್ಗಡಹಳ್ಳಿ ಮಕ್ಕಳೇ ಸಾಕ್ಷಿ.

ಮಕ್ಕಳೊಂದಿಗೆ ಸಂತೋಷ್ ಗುಡ್ಡಿಯಂಗಡಿ
ಈಗ ಹಗ್ಗಡಹಳ್ಳಿ ಶಾಲೆಯ ಮಕ್ಕಳು ಕಳೆದ ಐದು ದಿನಗಳಿಂದ ಬಣ್ಣದ ಮೇಳವನ್ನು ಆರಂಭಿಸಿದ್ದಾರೆ. ಪರಿಸರ ರಕ್ಷಣೆಯ ಕುರಿತು ಆ ಊರಿನ ದೊಡ್ಡವರಿಗೆ ನಾಟಕ, ಹಾಡು, ಚಿತ್ರಕಲೆ, ಪ್ರಚಾರಾಂದೋಲನದ ಮೂಲಕ ಪಾಠ ಹೇಳುತ್ತಿದ್ದಾರೆ. ಇಡೀ ಶಾಲೆಯ ಶಿಕ್ಷಕವೃಂದ ಮಕ್ಕಳ ಬೆನ್ನಿಗೆ ನಿಂತಿದೆ. ಸಂತೋಷ್ ಗುಡ್ಡಿಯಂಗಡಿಯವರು ಇದೆಲ್ಲದ ಚಾಲಕಶಕ್ತಿಯಾಗಿದ್ದಾರೆ. ನಾಗೇಶ್ ಹೆಗ್ಡೆ ತರಹದ ಜನಪರ ವಿಜ್ಞಾನಿಗಳ ಬೆಂಬಲ ಈ ಮಕ್ಕಳಿಗಿದೆ. ನಮ್ಮ ಕಾರ್ಯಕ್ಕೆ ಪ್ರೇರಣೆ ಸ್ವೀಡನ್ ದೇಶದ ಹದಿನಾರರ ಬಾಲಕಿ, ಹವಾಮಾನ ಬದಲಾವಣೆಯ ವಿರುದ್ಧ ಮಕ್ಕಳನ್ನು ಸಂಘಟಿಸುತ್ತಿರುವ GRETA THUNBERG. ಅವಳ fridayforfuture ಆಂದೋಲನವನ್ನ ನಾವು #ನಾಳೆಗಳು ನಮ್ಮದು #futureisours ಎಂದು ಅಭಿಯಾನದಲ್ಲಿ ತೊಡಗಿದ್ದೇವೆ ಎನ್ನುತ್ತಾರೆ ಹೆಗ್ಗಡಹಳ್ಳಿಯ ಮಕ್ಕಳು. ಒಬ್ಬ ನಾಟಕ ಮೇಷ್ಟ್ರು ಇಷ್ಟೆಲ್ಲಾ ಮಕ್ಕಳಿಗೆ ಸ್ಫೂರ್ತಿಯಾಗಬಹುದಾದರೆ ಎಲ್ಲಾ ಶಾಲೆಗಳಲ್ಲಿಯೂ ರಂಗಭೂಮಿ ಶಿಕ್ಷಕರಿದ್ದರೆ ಎಷ್ಟು ಚೆನ್ನ ಅಲ್ವ?
ಸಂತೋಷ್ ಗುಡ್ಡಿಯಂಗಡಿಯವರ ಮುಖಪುಟಕ್ಕೆ ಹೋಗಿ ನೋಡಿ, ಓದಿ ಅವರನ್ನು ಬೆಂಬಲಿಸುವುದು, ಆ ಕೆಲಸಗಳನ್ನು ನಮ್ಮ ಊರಿನಲ್ಲಿಯೂ ಮಾಡಲು ಮುಂದಾಗುವುದು ನಾವು ಅವರಿಗೆ ಸಲ್ಲಿಸುವ ಗೌರವವಾಗುತ್ತದೆ. ಆ ನಿಟ್ಟಿನಲ್ಲಿ ನೀವೆಲ್ಲರೂ ಮುಂದಾಗುತ್ತೀರಿ ಎಂಬುದು ಪತ್ರಿಕೆಯ ಆಶಯ. ಹೆಗ್ಗಡಹಳ್ಳಿ ಶಾಲಾ ಮಕ್ಕಳಿಗೆ, ಅವರ ಶಿಕ್ಷಕರಿಗೆ ನಾನು ಗೌರಿ ಪತ್ರಿಕೆ ಬಳಗದಿಂದ ಶುಭಾಶಯಗಳು.
ಈಗ ಮುಂದಿನದು ಆ ಮಕ್ಕಳು ಹೊರತಂದಿರುವ ಬಣ್ಣದ ಪತ್ರವನ್ನು ಯಥಾವತ್ತು ಪ್ರಕಟಿಸುತ್ತಿದ್ದೇವೆ. ನೀವೆಲ್ಲರೂ ತಪ್ಪದೇ ಓದಬೇಕೆಂದು ಮನವಿ.
ನಮ್ಮದು ಹೆಗ್ಗಡಹಳ್ಳಿ ಎಂಬ ಪುಟ್ಟ ಊರು. ಇದು ಕರ್ನಾಟಕ ರಾಜ್ಯದ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಹೋಬಳಿಯಲ್ಲಿದೆ. ನಮ್ಮ ಊರಿನಲ್ಲಿ ಹತ್ತಿಪ್ಪತ್ತು ಚಿಕ್ಕ ಚಿಕ್ಕ ಅಂಗಡಿಗಳಿವೆ. ಎಲ್ಲಾ ಅಂಗಡಿಯಲ್ಲಿಯೂ ನೀವು ಉತ್ಪಾದಿಸುವ ತಿಂಡಿ ಸಿಗುತ್ತದೆ. ನಾವೂ ತಿನ್ನುತ್ತೇವೆ.
ನಮ್ಮ ಊರನ್ನ ನಾವು ಗಮನವಿಟ್ಟು ನೋಡಿದಾಗ, ಊರಿನ ಬೀದಿ, ಮೋರಿಗಳಲ್ಲೆಲ್ಲಾ ಪ್ಲಾಸ್ಟಿಕ್ ಕಸದ್ದೇ ರಾಶಿ. ನಾವೇ ತಿಂದು ಬಿಸಾಕಿದ ನಿಮ್ಮ ಕಂಪೆನಿಯ ಪ್ಯಾಕೇಟುಗಳು ಎಲ್ಲಿ ನೋಡಿದರೂ ಕಾಣಸಿಗುತ್ತಿವೆ. ನಮಗೆ ಕೆಲವೊಂದು ಪ್ರಶ್ನೆಗಳಿವೆ.
• ನೀವು ಭಾರತದ ಮಕ್ಕಳಿಗಾಗಿ ದಿನವೊಂದಕ್ಕೆ ಇಂತಹ ಎಷ್ಟು ಪ್ಯಾಕೇಟುಗಳನ್ನು ಉತ್ಪಾದಿಸುತ್ತೀರಿ?
• ಪ್ಯಾಕೇಟುಗಳ ತಯಾರಿಕೆಗೆ ಪ್ಲಾಸ್ಟಿಕ್ ಪುನರ್ಬಳಕೆ ಮಾಡುತ್ತೀರಾ?
• ನಿಮ್ಮ ಫ್ಯಾಕ್ಟರಿಯಿಂದ ನಮ್ಮ ಊರಿಗೆ ತಿಂಡಿ ಕಳಿಸಿ ಮಾರಾಟ ಮಾಡುವ ಬದ್ಧತೆಯುಳ್ಳ ನಿಮಗೆ, ನೀವೇ ಉತ್ಪಾದಿಸಿದ ಪ್ಲಾಸ್ಟಿಕ್ ಕೊಳೆಯನ್ನು ಮರಳಿ ಪಡೆದು ಪುನರ್ಬಳಕೆ ಮಾಡಬೇಕೆಂಬ ಸಣ್ಣ ಕಾಳಜಿಯೂ ಇಲ್ಲವಲ್ಲ ಯಾಕೆ?
• ನಿಮಗೆ ದುಡ್ಡು ಕೊಟ್ಟು ತಿಂಡಿಯ ಜೊತೆಗೆ, ನಮ್ಮ ನಾಳೆಗಳಿಗೆ ಮಾರಕವಾದ ಪ್ಲಾಸ್ಟಿಕ್ ಕೊಳೆಯನ್ನು ಕೊಂಡುಕೊಳ್ಳಬೇಕೆ?
• ಮಕ್ಕಳಿಗಾಗಿ ರುಚಿರುಚಿಯಾದ ತಿಂಡಿಯನ್ನು ಉತ್ಪಾದಿಸುವ ನಿಮಗೆ, ಮಕ್ಕಳ ನಾಳೆಗಳು ಸುಂದರವಾಗಿರಬೇಕೆಂದು ಎಂದಾದರೂ ಅನಿಸಿದೆಯೇ?
ಹಾಗೆ ಅನಿಸಿದರೆ, ನಿಮ್ಮ ಪ್ಲಾಸ್ಟಿಕ್ ಕೊಳೆಗೆ ನೀವು ಉತ್ತರದಾಯಿಯಾಗಲೇಬೇಕು. ನಾವು ಹೆಗ್ಗಡಹಳ್ಳಿಯ ಮಕ್ಕಳು ನಿಮ್ಮ ಬಳಿ ಹೇಳುವ ಪಿಸುಮಾತಿದು:
• ನಾಳೆಗಳು ನಮ್ಮದು
• ನಿಮ್ಮ ತಿಂಡಿ ಸಾಕು, ಪ್ಲಾಸ್ಟಿಕ್ ಕೊಳೆ ಬೇಡ.
• ನಮಗೆ ಆರೋಗ್ಯಕರವಾದ ನಾಳೆಗಳನ್ನು ಉಳಿಸಿಕೊಡಿ
• ನೀವು ತಿಂಡಿ ಸುತ್ತಿ ಕಳಿಸಿದ ಪ್ಯಾಕೇಟನ್ನು ನೀವು ವಾಪಾಸು ಪಡೆಯಲೇಬೇಕು. ಇಡೀ ದೇಶಕ್ಕೆ ನೀವು ಈಗಾಗಲೇ ಹಲವು ಟನ್ ಪ್ಲಾಸ್ಟಿಕ್‍ನ್ನು ನೀಡಿರಬಹುದು. ಇನ್ನು ಮುಂದೆಯಾದರೂ ನಿಮ್ಮ ಪ್ಯಾಕೇಟುಗಳನ್ನು ವಾಪಾಸು ಪಡೆದು ಅದನ್ನೇ ಮರುಬಳಕೆ ಮಾಡಿ. ಹೊಸ ಉತ್ಪಾದನೆಯನ್ನು ನಿಲ್ಲಿಸಿ. ನಮ್ಮ ಆರೋಗ್ಯಕರ ನಾಳೆಗಾಗಿ ಕೈಜೋಡಿಸಿ.
ಮಕ್ಕಳ ಮೇಲೆ ಪ್ರೀತಿಯಿಂದ ತಿಂಡಿ ಕೊಡಿಸುತ್ತೀರಲ್ಲ;
ಆ ಮಕ್ಕಳು ಬದುಕಲು ಯೋಗ್ಯವಾದ ಪರಿಸರವನ್ನೂ ಉಳಿಸಿಕೊಡಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...