Homeಮುಖಪುಟನಾವು ಮಕ್ಕಳು, ಮುಂದಿನ ಪ್ರಜೆಗಳು. ನಮಗೊಂದಿಷ್ಟು ಭೂಮಿ ಉಳಿಸಿ

ನಾವು ಮಕ್ಕಳು, ಮುಂದಿನ ಪ್ರಜೆಗಳು. ನಮಗೊಂದಿಷ್ಟು ಭೂಮಿ ಉಳಿಸಿ

- Advertisement -
- Advertisement -
ನಮ್ಮ ನಾಳೆಗಳಿಗೆ ನೀವು ಪ್ಲಾಸ್ಟಿಕ್ ಕೊಳೆಯನ್ನು ನೀಡಬೇಡಿ. ನಾಳೆಗಳು ನಮ್ಮದು. ನಮ್ಮ ನಾಳೆಗೆ ಸುಂದರ ಪರಿಸರವನ್ನು ಉಳಿಸಿಕೊಡಲು ಕೈಜೋಡಿಸಿ. ಅದಕ್ಕಾಗಿ ನಿಮ್ಮ ಕಸವನ್ನು ನೀವು ವಾಪಾಸು ಪಡೆಯಿರಿ. ಪಡೆದು ಅದನ್ನು ಪುನರ್ಬಳಕೆ ಮಾಡಿ. ಹೊಸ ಪ್ಲಾಸ್ಟಿಕ್ ಉತ್ಪಾದನೆಯನ್ನು ನಿಲ್ಲಿಸುವ ಯೋಜನೆಯನ್ನು ರೂಪಿಸಿಕೊಳ್ಳಿ, ಎಂದು ದೇಶದಲ್ಲಿ ಮಕ್ಕಳ ತಿಂಡಿಗಳನ್ನು ಉತ್ಪಾದಿಸುವ ಇಪ್ಪತ್ತಕ್ಕೂ ಹೆಚ್ಚು ಪ್ರಖ್ಯಾತ ಕಂಪೆನಿಗಳಿಗೆ ಪತ್ರಕಳಿಸಿ ಆಗ್ರಹಿಸುವ ವಿನೂತನ ಅಭಿಯಾನವನ್ನು ಹೆಗ್ಗಡಹಳ್ಳಿಯ ಮಕ್ಕಳು ಆರಂಭಿಸಲಿದ್ದಾರೆ.
ಪಠ್ಯೇತರ ಮತ್ತು ಸಮಾಜಮುಖಿ ಚಟುವಟಿಕೆಗಳಲ್ಲಿ ಸದಾ ಮುಂದಿರುವ ಹೆಗ್ಗಡಹಳ್ಳಿ ಶಾಲೆಯ ಮಕ್ಕಳು ಕೇವಲ ಜಾಣರಷ್ಟೇ ಅಲ್ಲ ಸಮಾಜಕ್ಕ ತುಡಿಯುವ ಸೂಕ್ಷ್ಮಜೀವಿಗಳು ಹೌದು. ಶಾಲೆಯಲ್ಲಿ ಅತ್ಯುತ್ತಮವಾಗಿ ಓದುವುದಲ್ಲದೇ ಸದಾ ಒಂದಿಲ್ಲೊಂದು ವಿಭಿನ್ನ ಚಟುವಟಿಕೆ ನಡೆಸುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ. ಪ್ರತಿ ವರ್ಷವೂ ಪ್ರತಿಭಾ ಕಾರಂಜಿ ಹೆಸರಿನಲ್ಲಿ ನಡೆಯುವ ಅಂತರ್‍ಶಾಲಾ ಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಈ ಶಾಲೆಗೆ ಕಡ್ಡಾಯವಾಗಿ ಬಹುಮಾನಗಳ ಸುರಿಮಳೆಯಾಗುತ್ತದೆ. ರಾಜ್ಯ ಮಟ್ಟದವರೆಗೂ ವಿದ್ಯಾರ್ಥಿಗಳು ಹೋಗಿ ಬಹುಮಾನ ಗೆದ್ದು ತಂದಿದ್ದಾರೆ.
ಪ್ರತಿ ತಿಂಗಳು ಮಕ್ಕಳು ‘ಅರಳೀಮರ’ ಹೆಸರಿನಲ್ಲಿ ಮಾಸಿಕ ಪತ್ರಿಕೆಯನ್ನು ಹೊರತರುತ್ತಿದ್ದಾರೆ. ಈಗಾಗಲೇ 15 ಬಣ್ಣ ಬಣ್ಣದ ಕೈಬರದ ಮಕ್ಕಳ ಸಂಚಿಕೆಗಳು ಹಲವರ ಕೈಸೇರಿ ಮೆಚ್ಚಿಗೆ ಗಳಿಸಿವೆ. ಚಿತ್ರಗಳು, ಕಥೆ ಕವನಗಳ ಮೂಲಕ ಮಕ್ಕಳು ತಮ್ಮ ಅಭಿವ್ಯಕ್ತಿಯನ್ನು ಸಸಕ್ತವಾಗಿ ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷವೂ ನಾಲ್ಕೈದು ಅತ್ಯುತ್ತಮ ನಾಟಕಗಳನ್ನು ಕಲಿತು ಮಕ್ಕಳು ಮನೋಜ್ಞವಾಗಿ ಅಭಿನಯಿಸಿದ್ದಾರೆ. ಹಲವು ನಾಟಕೋತ್ಸವಗಳಲ್ಲಿ ಭಾಗವಹಿಸಿ ತಮ್ಮ ನಾಟಕದ ಹುಚ್ಚನ್ನು ಜನರಿಗೂ ದಾಟಿಸಿದ್ದಾರೆ.
ಈ ರೀತಿ ಈ ಶಾಲೆಯ ಮಕ್ಕಳ ಬಗ್ಗೆ ಪುಟಗಟ್ಟಲೇ ಬರೆಯುತ್ತಲೇ ಹೋಗಬಹುದು. ಮಕ್ಕಳು ಇಷ್ಟೆಲ್ಲಾ ಗಮನಾರ್ಹವಾದ ಸಾಧನೆ ಮಾಡಲು ಕಾರಣವೆನೆಂದರೆ ಅವರೊಳಗಿನ ಪ್ರತಿಭೆಯ ಅಭಿವ್ಯಕ್ತಿಗೆ ವಾಹಕವಾಗಿ ಕೆಲಸ ಮಾಡುತ್ತಿರುವ ಅವರ ಉತ್ಸಾಹಿ ಮೇಷ್ಟ್ರು ಸಂತೋಷ್ ಗುಡ್ಡಿಯಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಗುಡ್ಡಿಯಂಗಡಿ ಗ್ರಾಮದ ಇವರು ಸಾಮಾಜಿಕ ಚಳವಳಿಗಳಲ್ಲಿ ತೊಡಗಿಕೊಂಡ ಪರಿಣಾಮ ಅಗಾಧ ಅನುಭವಗಳನ್ನು ಪಡೆದವರು. ನಂತರ ರಂಗಡಿಪ್ಲೋಮೊ ಕೋರ್ಸ್ ಮುಗಿಸಿ ನಾಟಕ ಕಲಿಸುತ್ತಿದ್ದರು. ಸರ್ಕಾರ ಒಮ್ಮೆ ಹೈಸ್ಕೂಲ್‍ಗಳಿಗೆ 46 ನಾಟಕದ ಮೇಷ್ಟ್ರುಗಳನ್ನು ಆಯ್ಕೆ ಮಾಡಿಕೊಂಡಾಗ ಇವರು ಸಹ ಆಯ್ಕೆಯಾದರು.
ಅಲ್ಲಿಂದ ಅವರು ತಾನು ಕಲಿತ ವಿದ್ಯೆ ಮತ್ತು ಸಾಮಾಜಿಕ ಚಳವಳಿ ಕೊಟ್ಟಿದ್ದ ಅನುಭವಗಳನ್ನು ಮಕ್ಕಳಿಗೆ ಧಾರೆ ಎರೆಯಲು ಆರಂಭಿಸಿದರು. ಮೊದಲು ನಂಜನಗೂಡು ತಾಲ್ಲೂಕಿನ ಹೆಮ್ಮರಗಾಲ ಶಾಲೆಯಲ್ಲಿದ್ದಾಗ ಅಲ್ಲಿನ ಮಕ್ಕಳೊಡನೆ ಬೆರೆಸು ಕಲಿಸುತ್ತಾ, ತಾನು ಕಲಿಸುತ್ತಾ ಮಕ್ಕಳನ್ನು ಇನ್ನೊಂದು ಪ್ರಪಂಚಕ್ಕೆ ಕರೆದುಕೊಂಡು ಹೋದರು. ಆ ಸಂದರ್ಭದಲ್ಲಿ ‘ಹೆಮ್ಮರ’ ಹೆಸರಿನ ಮಕ್ಕಳ ಮಾಸಿಕ ಪತ್ರಿಕೆಯನ್ನು ಆರಂಭಿಸಿ ಮಕ್ಕಳು ಬರೆಯಲು ಪ್ರೋತ್ಸಾಹ ನೀಡಿದರು. ಮಕ್ಕಳ ಬರಹಕ್ಕೆ ತಮ್ಮ ಕೈಬರಹ ಮತ್ತು ಚೆಂದದ ಚಿತ್ರ ಸೇರಿಸಿ ಎಲ್ಲರ ಗಮನ ಸೆಳಯುವಂತೆ ಮಾಡಿದರು. ನಾಟಕಗಳನ್ನು ಕಲಿಸಿ ರಂಗಭೂಮಿಯ ಮಹತ್ವವನ್ನು ವಿದ್ಯಾರ್ಥಿಗಳಲ್ಲಿ ಬಿತ್ತಿದರು.
ಆಟ-ಪಾಠ ನಾಟಕದ ಜೊತೆಗೆ ತಾನಿರುವ ಸಮಾಜ – ಪರಿಸರವನ್ನು ಮಕ್ಕಳು ಅಧ್ಯಯನ ಮಾಡಬೇಕು, ಅದರೊಡನೆ ತಾದ್ಯಾತ್ಮ ಸಾಧಿಸಿ ಅದಕ್ಕೆ ಪ್ರತಿಕ್ರಿಯಿಸಬೇಕೆನ್ನುವುದು ಅವರ ಆಶಯ. ಅವರ ಕನಸನ್ನು ಮಕ್ಕಳು ಬಹುಬೇಗ ನನಸು ಮಾಡಿದರು. ತಾವು ಮಾಡುವ ಪ್ರತಿ ಕೆಲಸದಲ್ಲಿ ಹೊಸತು ಸೃಜನಶೀಲತೆಯನ್ನು ಮಕ್ಕಳು ಕಲಿತರು. ಸಮಾಜಕ್ಕೆ ಪೂರಕವಾಗಿ ಪ್ರತಿಸ್ಪಂದಿಸಿದರು. ಈ ಕುರಿತು ಹಲವಾರು ಲೇಖನಗಳು ಪತ್ರಿಕೆಗಳಲ್ಲಿ ಬಂದವು.

ಅಲ್ಲಿಂದ ಹೆಗ್ಗಡಹಳ್ಳಿ ಶಾಲೆಗೆ ವರ್ಗಾವಣೆಯಾದ ಸಂತೋಷ ಗುಡ್ಡಿಯಂಗಡಿಯವರು ಇಲ್ಲಿಯೂ ತಮ್ಮ ಕಾಯಕವನ್ನು ಮುಂದುವರೆಸಿದರು. ಇಲ್ಲಿಯ ಮಕ್ಕಳು ಸಹ ಅಷ್ಟೇ ಉತ್ಸಾಹದಿಂದ ಪ್ರತಿಕ್ರಿಯಿಸಿದರು. ಮಕ್ಕಳು ಎಲ್ಲಾ ಹೊಸತನದ ಪ್ರಯೋಗಗಳಿಗೆ ಸಿದ್ದರಾಗಿರುತ್ತಾರೆ, ಪ್ರತಿ ಮಕ್ಕಳಲ್ಲಿಯೂ ಒಂದಲ್ಲೊಂದು ಪ್ರತಿಭೆ ಅಡಗಿರುತ್ತದೆ, ಅದನ್ನು ಹೊರತೆಗೆಯಲು ಸಣ್ಣ ಸಹಾಯ ಬೇಕಾಗುತ್ತದೆ. ಅಂತಹ ಸಹಾಯ ಪೋಷಕರಿಂದಲೋ, ಅಥವಾ ಶಿಕ್ಷಕರಿಂದಲೋ ಸಿಕ್ಕಿದರೆ ಆ ಮಕ್ಕಳು ಮಹತ್ವದ್ದನ್ನು ಸಾಧಿಸುತ್ತಾರೆ ಎಂಬುದಕ್ಕೆ ಹೆಮ್ಮರಗಾಲ ಮತ್ತು ಹೆಗ್ಗಡಹಳ್ಳಿ ಮಕ್ಕಳೇ ಸಾಕ್ಷಿ.

ಮಕ್ಕಳೊಂದಿಗೆ ಸಂತೋಷ್ ಗುಡ್ಡಿಯಂಗಡಿ
ಈಗ ಹಗ್ಗಡಹಳ್ಳಿ ಶಾಲೆಯ ಮಕ್ಕಳು ಕಳೆದ ಐದು ದಿನಗಳಿಂದ ಬಣ್ಣದ ಮೇಳವನ್ನು ಆರಂಭಿಸಿದ್ದಾರೆ. ಪರಿಸರ ರಕ್ಷಣೆಯ ಕುರಿತು ಆ ಊರಿನ ದೊಡ್ಡವರಿಗೆ ನಾಟಕ, ಹಾಡು, ಚಿತ್ರಕಲೆ, ಪ್ರಚಾರಾಂದೋಲನದ ಮೂಲಕ ಪಾಠ ಹೇಳುತ್ತಿದ್ದಾರೆ. ಇಡೀ ಶಾಲೆಯ ಶಿಕ್ಷಕವೃಂದ ಮಕ್ಕಳ ಬೆನ್ನಿಗೆ ನಿಂತಿದೆ. ಸಂತೋಷ್ ಗುಡ್ಡಿಯಂಗಡಿಯವರು ಇದೆಲ್ಲದ ಚಾಲಕಶಕ್ತಿಯಾಗಿದ್ದಾರೆ. ನಾಗೇಶ್ ಹೆಗ್ಡೆ ತರಹದ ಜನಪರ ವಿಜ್ಞಾನಿಗಳ ಬೆಂಬಲ ಈ ಮಕ್ಕಳಿಗಿದೆ. ನಮ್ಮ ಕಾರ್ಯಕ್ಕೆ ಪ್ರೇರಣೆ ಸ್ವೀಡನ್ ದೇಶದ ಹದಿನಾರರ ಬಾಲಕಿ, ಹವಾಮಾನ ಬದಲಾವಣೆಯ ವಿರುದ್ಧ ಮಕ್ಕಳನ್ನು ಸಂಘಟಿಸುತ್ತಿರುವ GRETA THUNBERG. ಅವಳ fridayforfuture ಆಂದೋಲನವನ್ನ ನಾವು #ನಾಳೆಗಳು ನಮ್ಮದು #futureisours ಎಂದು ಅಭಿಯಾನದಲ್ಲಿ ತೊಡಗಿದ್ದೇವೆ ಎನ್ನುತ್ತಾರೆ ಹೆಗ್ಗಡಹಳ್ಳಿಯ ಮಕ್ಕಳು. ಒಬ್ಬ ನಾಟಕ ಮೇಷ್ಟ್ರು ಇಷ್ಟೆಲ್ಲಾ ಮಕ್ಕಳಿಗೆ ಸ್ಫೂರ್ತಿಯಾಗಬಹುದಾದರೆ ಎಲ್ಲಾ ಶಾಲೆಗಳಲ್ಲಿಯೂ ರಂಗಭೂಮಿ ಶಿಕ್ಷಕರಿದ್ದರೆ ಎಷ್ಟು ಚೆನ್ನ ಅಲ್ವ?
ಸಂತೋಷ್ ಗುಡ್ಡಿಯಂಗಡಿಯವರ ಮುಖಪುಟಕ್ಕೆ ಹೋಗಿ ನೋಡಿ, ಓದಿ ಅವರನ್ನು ಬೆಂಬಲಿಸುವುದು, ಆ ಕೆಲಸಗಳನ್ನು ನಮ್ಮ ಊರಿನಲ್ಲಿಯೂ ಮಾಡಲು ಮುಂದಾಗುವುದು ನಾವು ಅವರಿಗೆ ಸಲ್ಲಿಸುವ ಗೌರವವಾಗುತ್ತದೆ. ಆ ನಿಟ್ಟಿನಲ್ಲಿ ನೀವೆಲ್ಲರೂ ಮುಂದಾಗುತ್ತೀರಿ ಎಂಬುದು ಪತ್ರಿಕೆಯ ಆಶಯ. ಹೆಗ್ಗಡಹಳ್ಳಿ ಶಾಲಾ ಮಕ್ಕಳಿಗೆ, ಅವರ ಶಿಕ್ಷಕರಿಗೆ ನಾನು ಗೌರಿ ಪತ್ರಿಕೆ ಬಳಗದಿಂದ ಶುಭಾಶಯಗಳು.
ಈಗ ಮುಂದಿನದು ಆ ಮಕ್ಕಳು ಹೊರತಂದಿರುವ ಬಣ್ಣದ ಪತ್ರವನ್ನು ಯಥಾವತ್ತು ಪ್ರಕಟಿಸುತ್ತಿದ್ದೇವೆ. ನೀವೆಲ್ಲರೂ ತಪ್ಪದೇ ಓದಬೇಕೆಂದು ಮನವಿ.
ನಮ್ಮದು ಹೆಗ್ಗಡಹಳ್ಳಿ ಎಂಬ ಪುಟ್ಟ ಊರು. ಇದು ಕರ್ನಾಟಕ ರಾಜ್ಯದ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಹೋಬಳಿಯಲ್ಲಿದೆ. ನಮ್ಮ ಊರಿನಲ್ಲಿ ಹತ್ತಿಪ್ಪತ್ತು ಚಿಕ್ಕ ಚಿಕ್ಕ ಅಂಗಡಿಗಳಿವೆ. ಎಲ್ಲಾ ಅಂಗಡಿಯಲ್ಲಿಯೂ ನೀವು ಉತ್ಪಾದಿಸುವ ತಿಂಡಿ ಸಿಗುತ್ತದೆ. ನಾವೂ ತಿನ್ನುತ್ತೇವೆ.
ನಮ್ಮ ಊರನ್ನ ನಾವು ಗಮನವಿಟ್ಟು ನೋಡಿದಾಗ, ಊರಿನ ಬೀದಿ, ಮೋರಿಗಳಲ್ಲೆಲ್ಲಾ ಪ್ಲಾಸ್ಟಿಕ್ ಕಸದ್ದೇ ರಾಶಿ. ನಾವೇ ತಿಂದು ಬಿಸಾಕಿದ ನಿಮ್ಮ ಕಂಪೆನಿಯ ಪ್ಯಾಕೇಟುಗಳು ಎಲ್ಲಿ ನೋಡಿದರೂ ಕಾಣಸಿಗುತ್ತಿವೆ. ನಮಗೆ ಕೆಲವೊಂದು ಪ್ರಶ್ನೆಗಳಿವೆ.
• ನೀವು ಭಾರತದ ಮಕ್ಕಳಿಗಾಗಿ ದಿನವೊಂದಕ್ಕೆ ಇಂತಹ ಎಷ್ಟು ಪ್ಯಾಕೇಟುಗಳನ್ನು ಉತ್ಪಾದಿಸುತ್ತೀರಿ?
• ಪ್ಯಾಕೇಟುಗಳ ತಯಾರಿಕೆಗೆ ಪ್ಲಾಸ್ಟಿಕ್ ಪುನರ್ಬಳಕೆ ಮಾಡುತ್ತೀರಾ?
• ನಿಮ್ಮ ಫ್ಯಾಕ್ಟರಿಯಿಂದ ನಮ್ಮ ಊರಿಗೆ ತಿಂಡಿ ಕಳಿಸಿ ಮಾರಾಟ ಮಾಡುವ ಬದ್ಧತೆಯುಳ್ಳ ನಿಮಗೆ, ನೀವೇ ಉತ್ಪಾದಿಸಿದ ಪ್ಲಾಸ್ಟಿಕ್ ಕೊಳೆಯನ್ನು ಮರಳಿ ಪಡೆದು ಪುನರ್ಬಳಕೆ ಮಾಡಬೇಕೆಂಬ ಸಣ್ಣ ಕಾಳಜಿಯೂ ಇಲ್ಲವಲ್ಲ ಯಾಕೆ?
• ನಿಮಗೆ ದುಡ್ಡು ಕೊಟ್ಟು ತಿಂಡಿಯ ಜೊತೆಗೆ, ನಮ್ಮ ನಾಳೆಗಳಿಗೆ ಮಾರಕವಾದ ಪ್ಲಾಸ್ಟಿಕ್ ಕೊಳೆಯನ್ನು ಕೊಂಡುಕೊಳ್ಳಬೇಕೆ?
• ಮಕ್ಕಳಿಗಾಗಿ ರುಚಿರುಚಿಯಾದ ತಿಂಡಿಯನ್ನು ಉತ್ಪಾದಿಸುವ ನಿಮಗೆ, ಮಕ್ಕಳ ನಾಳೆಗಳು ಸುಂದರವಾಗಿರಬೇಕೆಂದು ಎಂದಾದರೂ ಅನಿಸಿದೆಯೇ?
ಹಾಗೆ ಅನಿಸಿದರೆ, ನಿಮ್ಮ ಪ್ಲಾಸ್ಟಿಕ್ ಕೊಳೆಗೆ ನೀವು ಉತ್ತರದಾಯಿಯಾಗಲೇಬೇಕು. ನಾವು ಹೆಗ್ಗಡಹಳ್ಳಿಯ ಮಕ್ಕಳು ನಿಮ್ಮ ಬಳಿ ಹೇಳುವ ಪಿಸುಮಾತಿದು:
• ನಾಳೆಗಳು ನಮ್ಮದು
• ನಿಮ್ಮ ತಿಂಡಿ ಸಾಕು, ಪ್ಲಾಸ್ಟಿಕ್ ಕೊಳೆ ಬೇಡ.
• ನಮಗೆ ಆರೋಗ್ಯಕರವಾದ ನಾಳೆಗಳನ್ನು ಉಳಿಸಿಕೊಡಿ
• ನೀವು ತಿಂಡಿ ಸುತ್ತಿ ಕಳಿಸಿದ ಪ್ಯಾಕೇಟನ್ನು ನೀವು ವಾಪಾಸು ಪಡೆಯಲೇಬೇಕು. ಇಡೀ ದೇಶಕ್ಕೆ ನೀವು ಈಗಾಗಲೇ ಹಲವು ಟನ್ ಪ್ಲಾಸ್ಟಿಕ್‍ನ್ನು ನೀಡಿರಬಹುದು. ಇನ್ನು ಮುಂದೆಯಾದರೂ ನಿಮ್ಮ ಪ್ಯಾಕೇಟುಗಳನ್ನು ವಾಪಾಸು ಪಡೆದು ಅದನ್ನೇ ಮರುಬಳಕೆ ಮಾಡಿ. ಹೊಸ ಉತ್ಪಾದನೆಯನ್ನು ನಿಲ್ಲಿಸಿ. ನಮ್ಮ ಆರೋಗ್ಯಕರ ನಾಳೆಗಾಗಿ ಕೈಜೋಡಿಸಿ.
ಮಕ್ಕಳ ಮೇಲೆ ಪ್ರೀತಿಯಿಂದ ತಿಂಡಿ ಕೊಡಿಸುತ್ತೀರಲ್ಲ;
ಆ ಮಕ್ಕಳು ಬದುಕಲು ಯೋಗ್ಯವಾದ ಪರಿಸರವನ್ನೂ ಉಳಿಸಿಕೊಡಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...