Homeಮುಖಪುಟಶಾಂತಿ ಕದಡಿದರೆ RSS ಅಥವಾ ಇನ್ನಾವುದೇ ಸಂಘಟನೆಯಾದರೂ ನಿಷೇಧ: ಪ್ರಿಯಾಂಕ್ ಖರ್ಗೆ

ಶಾಂತಿ ಕದಡಿದರೆ RSS ಅಥವಾ ಇನ್ನಾವುದೇ ಸಂಘಟನೆಯಾದರೂ ನಿಷೇಧ: ಪ್ರಿಯಾಂಕ್ ಖರ್ಗೆ

ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಹಿಜಾಬ್ ಬ್ಯಾನ್ ಆದೇಶ, ಗೋಹತ್ಯೆ ನಿಷೇಧ ಕಾಯ್ದೆ, ಕೃಷಿ ಕಾಯ್ದೆಗಳನ್ನು ಮರು ಪರಿಶೀಲಿಸುವುದಾಗಿ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

- Advertisement -
- Advertisement -

ಯಾವುದೇ ಧಾರ್ಮಿಕ ಅಥವಾ ರಾಜಕೀಯ ಸಂಘಟನೆಗಳು ಶಾಂತಿ ಕದಡಲು, ಕೋಮು ದ್ವೇಷವನ್ನು ಹರಡಲು ಮತ್ತು ಕರ್ನಾಟಕಕ್ಕೆ ಅಪಖ್ಯಾತಿ ತರಲು ಪ್ರಯತ್ನಿಸಿದರೆ, ನಮ್ಮ ಸರ್ಕಾರವು ಅವುಗಳನ್ನು ಕಾನೂನುಬದ್ಧವಾಗಿ ಎದುರಿಸಲು ಅಥವಾ ನಿಷೇಧಿಸಲು ಹಿಂಜರಿಯುವುದಿಲ್ಲ. ಅದು ಆರ್‌ಎಸ್‌ಎಸ್ ಅಥವಾ ಇನ್ನಾವುದೇ ಸಂಘಟನೆಯಾಗಿದ್ದರೂ ಸರಿಯೇ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಹಿಜಾಬ್ ಬ್ಯಾನ್ ಆದೇಶ, ಗೋಹತ್ಯೆ ನಿಷೇಧ ಕಾಯ್ದೆ, ಮತಾಂತರ ನಿಷೇಧ ಕಾಯ್ದೆ ಮತ್ತು ಕೃಷಿ ಕಾಯ್ದೆಗಳನ್ನು ಮರು ಪರಿಶೀಲಿಸುವುದಾಗಿ ಅವರು ಹೇಳಿದ್ದಾರೆ.

ಕರ್ನಾಟಕದ ಹಿರಿಮೆಗೆ ಹಿನ್ನಡೆ ತರುವ ಎಲ್ಲಾ ಕಾರ್ಯಕಾರಿ ಆದೇಶಗಳು, ಸರ್ಕಾರಿ ಆದೇಶಗಳು ಮತ್ತು ಮಸೂದೆಗಳನ್ನು ನಾವು ಪರಿಶೀಲಿಸುತ್ತೇವೆ. ರಾಜ್ಯದ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಕಾಂಗ್ರೆಸ್ ಚಿಂತಿಸುತ್ತಿದೆ ಎಂದು ಅವರು ಹೇಳಿದ್ದಾರೆ.

“ಕರ್ನಾಟಕದಲ್ಲಿ ಅಶಾಂತಿ ಮತ್ತು ವೈಷಮ್ಯದ ಬೀಜಗಳನ್ನು ಬಿತ್ತಲು ಹೊರಟಿರುವ ಯಾವುದೇ ಧಾರ್ಮಿಕ, ರಾಜಕೀಯ ಅಥವಾ ಸಾಮಾಜಿಕ ಸಂಘಟನೆಯನ್ನು ಸಹಿಸಲಾಗುವುದಿಲ್ಲ. ನಾವು ಅವುಗಳನ್ನು ಕಾನೂನು ಮತ್ತು ಸಾಂವಿಧಾನಿಕವಾಗಿ ಎದುರಿಸುತ್ತೇವೆ. ಅದು ಬಜರಂಗದಳ, ಪಿಎಫ್‌ಐ ಅಥವಾ ಯಾವುದೇ ಇತರ ಸಂಘಟನೆಯಾಗಿರಲಿ. ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತಂದರೆ ಅವುಗಳನ್ನು ನಿಷೇಧಿಸಲು ಹಿಂಜರಿಯುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಅಶ್ವಥ್ ನಾರಾಯಣ್‌ರವರ ಮೇಲಿನ ಎಫ್‌ಐಆರ್‌ ಬಗ್ಗೆ ಮಾತನಾಡಿರುವ ಅವರು, “ಬಿಜೆಪಿಯು ಲೂಸ್ ಫಿರಂಗಿಗಳಾಗಿ ಮಾರ್ಪಟ್ಟಿದೆ. ಅವರು ತಮ್ಮ ನಾಲಿಗೆ ಮತ್ತು ಮೆದುಳಿನ ನಡುವಿನ ಸಂಪರ್ಕವನ್ನು ಕಳೆದುಕೊಂಡಿದ್ದಾರೆ. ಅವರು ಮಾತನಾಡುವ ಮೊದಲು ಯೋಚಿಸುವುದಿಲ್ಲ. ತಾವು ಏನು ಮಾತನಾಡಿದರೂ ತಪ್ಪಿಸಿಕೊಳ್ಳಬಹುದು ಎಂದು ಅವರು ಭಾವಿಸುತ್ತಾರೆ. ಕರ್ನಾಟಕದಲ್ಲಿ ಅದು ಇನ್ನು ಮುಂದೆ ನಡೆಯುವುದಿಲ್ಲ. ಬಿಜೆಪಿಯವರು ಏನು ಮಾತನಾಡುತ್ತಾರೆ ಎಂಬುದರ ಬಗ್ಗೆ ಜನರು ಬಹಳ ಜಾಗರೂಕರಾಗಿರಬೇಕು. ಅವರ ಮಾತನಾಡುವ ಹಕ್ಕಿನ ಬಗ್ಗೆ ನಮಗೆ ಯಾವುದೇ ಸಮಸ್ಯೆಗಳಿಲ್ಲ. ಆದರೆ ನೀವು ಸಿಎಂ ಅಥವಾ ಸಿಎಂ ಕಚೇರಿಯನ್ನು ಕೀಳಾಗಿಸಿ ಮಾತನಾಡಿದರೆ ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಹತ್ಯೆಗೆ ಕರೆ: ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...