Homeಮುಖಪುಟ13 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

13 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

- Advertisement -
- Advertisement -

ಸಾಮಾಜಿಕ ಮಾಧ್ಯಮಗಳನ್ನು 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ಎ.ಜಿ. ಮಸಿಹ್ ಅವರ ಪೀಠವು ಅರ್ಜಿಯನ್ನು ವಜಾ ಮಾಡಿದೆ. 13 ವರ್ಷದೊಳಗಿನ ಮಕ್ಕಳಿಗೆ

ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಸರ್ಕಾರದ ವ್ಯಾಪ್ತಿಯ ವಿಚಾರವಾಗಿದ್ದು, ಈ ವಿಷಯದ ಬಗ್ಗೆ ನಿರ್ದೇಶನಗಳನ್ನು ನೀಡಲು ಪೀಠವು ನಿರಾಕರಿಸಿತು. ಕಾನೂನು ಜಾರಿಗೆ ತರಲು ಸಂಸತ್ತನ್ನು ಕೇಳುವಂತೆ ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ. ಆದಾಗ್ಯೂ, ಅರ್ಜಿಯಲ್ಲಿ ಒತ್ತಿ ಹೇಳಲಾದ ವಿಷಯಗಳ ಕುರಿತು ಕೇಂದ್ರ ಸರ್ಕಾರವನ್ನು ಸಂಪರ್ಕಿಸಲು ನ್ಯಾಯಾಲಯವು ಅರ್ಜಿದಾರರಿಗೆ ಅವಕಾಶ ನೀಡಿತು.

ಸಾಮಾಜಿಕ ಮಾಧ್ಯಮಗಳಿಗೆ ಅನಿಯಂತ್ರಿತವಾಗಿ ಪ್ರವೇಶಿಸಲು ಸಾಧ್ಯವಾಗುತ್ತಿರುವುದರಂದ ಆರೋಗ್ಯ ಮತ್ತು ಘನತೆಯ ಹಕ್ಕು ಸೇರಿದಂತೆ ಬದುಕುವ ಹಕ್ಕನ್ನು ಖಾತರಿಪಡಿಸುವ ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಮಕ್ಕಳ ಮೂಲಭೂತ ಹಕ್ಕುಗಳನ್ನು ಉಲ್ಲಂಘನೆಯಾಗುತ್ತಿದೆ ಎಂದು ಅರ್ಜಿದಾರರು ವಾದಿಸಿದ್ದರು.

“ಅರ್ಥಪೂರ್ಣ ನಿಯಂತ್ರಕ ಮೇಲ್ವಿಚಾರಣೆಯ ಕೊರತೆಯು ಸಾಮಾಜಿಕ ಮಾಧ್ಯಮವನ್ನು ಒಂದು ನಿಯಂತ್ರಣರಹಿತ ಮಾನಸಿಕ ಯುದ್ಧಭೂಮಿಯಾಗಿ ಪರಿವರ್ತಿಸಿದೆ. ಅಲ್ಲಿ ಅಪ್ರಾಪ್ತ ವಯಸ್ಸಿನವರು ದುರುಪಯೋಗಿ ಅಲ್ಗಾರಿದಮ್‌ಗಳಿಗೆ, ಅವಾಸ್ತವಿಕ ತುಲನೆಗಳಿಗೆ ಮತ್ತು ತೀವ್ರವಾಗಿ ಹಾನಿಕಾರಕ ವಿಷಯಗಳಿಗೆ ಒಡ್ಡಿಕೊಳ್ಳುತ್ತಿದ್ದಾರೆ,” ಎಂದು ಅರ್ಜಿಯ ಉಲ್ಲೇಖಿಸಿದೆ.

3 ರಿಂದ 18 ವಯಸ್ಸಿನ ಮಕ್ಕಳಿಗಾಗಿ ರಿಯಲ್-ಟೈಮ್ ಮೇಲ್ವಿಚಾರಣಾ ಸಾಧನಗಳು, ಕಠಿಣ ವಯಸ್ಸಿನ ಪರಿಶೀಲನೆ ಮತ್ತು ವಿಷಯ ನಿರ್ಬಂಧಗಳಂತಹ ಕಡ್ಡಾಯ ಪೋಷಕರ ನಿಯಂತ್ರಣ ಕ್ರಮಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಸೇರಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು. ಈ ನಿಯಮಗಳನ್ನು ಪಾಲಿಸಲು ವಿಫಲರಾದ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲೆ ಕಠಿಣ ದಂಡ ವಿಧಿಸಬೇಕೆಂದು ಸಹ ಅದು ಕೇಳಿಕೊಂಡಿತ್ತು.

ಹೆಚ್ಚುವರಿಯಾಗಿ, ಅತಿಯಾದ ಸಾಮಾಜಿಕ ಮಾಧ್ಯಮ ಬಳಕೆಯ ಅಪಾಯಗಳ ಬಗ್ಗೆ ಪೋಷಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ರಾಷ್ಟ್ರವ್ಯಾಪಿ ಡಿಜಿಟಲ್ ಸಾಕ್ಷರತಾ ಅಭಿಯಾನವನ್ನು ಪ್ರಾರಂಭಿಸಲು ಅರ್ಜಿಯು ಸರ್ಕಾರವನ್ನು ವಿನಂತಿಸಿತ್ತು.

ಜನವರಿ 3 ರಂದು, ಕೇಂದ್ರ ಸರ್ಕಾರವು ಕರಡು ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ನಿಯಮಗಳನ್ನು ಬಿಡುಗಡೆ ಮಾಡಿತ್ತು. ಇದು ಮಕ್ಕಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಖಾತೆಗಳನ್ನು ರಚಿಸಲು ಪರಿಶೀಲಿಸಬಹುದಾದ ಪೋಷಕರ ಒಪ್ಪಿಗೆಯನ್ನು ಕಡ್ಡಾಯಗೊಳಿಸುವ ಪ್ರಸ್ತಾಪವನ್ನು ಹೊಂದಿದೆ. ಸಾರ್ವಜನಿಕ ಸಮಾಲೋಚನೆಗಾಗಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಪ್ರಕಟಿಸಿದ ಕರಡು ನಿಯಮಗಳಲ್ಲಿ ಪೋಷಕರು ಅಥವಾ ಕಾನೂನುಬದ್ಧ ಪೋಷಕರು ನೀಡುವ ಒಪ್ಪಿಗೆಯನ್ನು ಸರ್ಕಾರದಿಂದ ಅನುಮೋದಿತ ಗುರುತಿನ ಪುರಾವೆಯ ಮೂಲಕ ಸ್ವಯಂಪ್ರೇರಣೆಯಿಂದ ಮೌಲ್ಯೀಕರಿಸಬೇಕು ಎಂದು ಹೇಳಿದೆ. 13 ವರ್ಷದೊಳಗಿನ ಮಕ್ಕಳಿಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕ್ಫ್‌ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಓವೈಸಿ

ವಕ್ಫ್‌ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...